Sunday, January 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಪ್ರಕಾಶ್ ಅಮ್ಮಣ್ಣಾಯ

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ನಿಶ್ಚಿತ? ಪ್ರಕಾಶ್ ಅಮ್ಮಣ್ಣಾಯ ಏನೆನ್ನುತ್ತಾರೆ ಗೊತ್ತಾ?

July 18, 2019
in ಪ್ರಕಾಶ್ ಅಮ್ಮಣ್ಣಾಯ
0 0
0
Share on facebookShare on TwitterWhatsapp
Read - 2 minutes

ರಾಜ್ಯ ಸಮ್ಮಿಶ್ರ ಸರ್ಕಾರ ಅವಸಾನದ ಹಂತಕ್ಕೆ ಬಂದು ನಿಂತಿರುವಂತೆಯೇ, ಈ ಹಂತದಲ್ಲಿ ರಾಜ್ಯಪಾಲರ ಮಧ್ಯಪ್ರವೇಶ ಭಾರೀ ಕುತೂಹಲವನ್ನು ಕೆರಳಿಸಿದ್ದು, ಬಹುತೇಕ ನಾಳೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದರೂ ಅಚ್ಚರಿಯಿಲ್ಲ ಎಂಬ ಅನುಮಾನ ಹಾಗೂ ಅಭಿಪ್ರಾಯಗಳು ವ್ಯಕ್ತವಾಗಿವೆ.

ವಿಶ್ವಾಸ ಮತಯಾಚನೆಗೆ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಎಂಬ ವಿಚಾರದಲ್ಲಿ ಸದನದಲ್ಲಿ ಭಾರೀ ಕೋಲಾಹಲ ಏರ್ಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರು ಗುರುವಾರವೇ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ಸ್ಪೀಕರ್’ಗೆ ಸಂದೇಶ ರವಾನಿಸಿದ್ದರು. ಆದರೆ ಅದಾಗಲೇ ಸ್ಪೀಕರ್ ರಮೇಶ್ ಕುಮಾರ್ ತಾವು ಎಜೆ ಉದಯ್ ಹೊಳ್ಳ ಜತೆ ವಿಪ್ ಜಾರಿ ಸಂಬಂಧ ಚರ್ಚೆಗೆ ತೆರಳಿದ್ದ ಕಾರಣ ಸದನವನ್ನು ಉಪಸಭಾಪತಿಗಳು ಮುನ್ನಡೆಸಿದ್ದರು.

ಈ ಬೆಳವಣಿಗೆಯ ನಡುವೆಯೇ, ಶುಕ್ರವಾರ ಮಧ್ಯಾಹ್ನ 1.30ರ ಒಳಗಾಗಿ ಬಹುಮತ ಸಾಬೀತು ಮಾಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜುಭಾಯಿವಾಲಾ ನಿರ್ದೇಶನ ನೀಡಿದ್ದಾರೆ.

ರಾಜ್ಯ ರಾಜಕೀಯ ಬೆಳವಣಿಗೆಯ ನಾಟಕ ಸದನದಲ್ಲಿ ಆರಂಭವಾಗಿದ್ದು, ಇದು ಅಲ್ಲೋಲ ಕಲ್ಲೋಲ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರೂ ಈ ಸ್ಪಷ್ಟ ನಿರ್ದೇಶನ ನೀಡಿರುವ ಅವಧಿಯೊಳಗೆ ಬಹುಮತ ಸಾಬೀತು ಮಾಡುವ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಬಹುಮತ ಸಾಬೀತು ಮಾಡದೇ ಇದ್ದರೆ, ಅಥವಾ ಕಲಾಪವನ್ನು ಮುಂದೂಡುವ ಪ್ರಹಸನವನ್ನು ನಡೆಸಿದರೆ ರಾಜ್ಯಪಾಲರು ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸುವ ಸಾಧ್ಯತೆಗಳಿವೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ. ಅಂದರೆ, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇದೆ ಎಂದು ಸಾಬೀತು ಮಾಡದೇ ಇದ್ದರೆ, ರಾಜ್ಯದಲ್ಲಿ ಆಡಳಿತ ವೈಫಲ್ಯ ಎಂದು ಪರಿಗಣಿಸಿ ಸಂವಿಧಾನದ ಆರ್ಟಿಕಲ್ 256ರ ಅನ್ವಯ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸ್ಸು ಮಾಡುವ ಸಾಧ್ಯತೆ ಹೆಚ್ಚಿದೆ.

ಖ್ಯಾತ ಜ್ಯೋತಿಷಿ ಶ್ರೀ ಪ್ರಕಾಶ್ ಅಮ್ಮಣ್ಣಾಯ ಏನನ್ನುತ್ತಾರೆ?
ನಿಖರ ಜ್ಯೋತಿಷ್ಯ ನುಡಿಯುವಲ್ಲಿ ರಾಷ್ಟ್ರಮಟ್ಟದಲ್ಲಿ ಖ್ಯಾತರಾಗಿರುವ ಶ್ರೀ ಪ್ರಕಾಶ್ ಅಮ್ಮಣ್ಣಾಯ ಅವರೊಂದಿಗೆ ಇಂದಿನ ಬೆಳವಣಿಗೆ ಹಿನ್ನೆಲೆ ಕುರಿತಂತೆ ಚರ್ಚೆ ನಡೆಸಿದಾಗ ಅವರು ಜ್ಯೋತಿಷ್ಯದ ಆಯಾಮದಲ್ಲಿ ವಿಶ್ಲೇಷಣೆ ಮಾಡಿದ್ದು ಹೀಗಿದೆ:

ಯಾರಿಗೆ ವೃಶ್ಚಿಕ ರಾಶಿಯಲ್ಲಿ ಗುರು ಇದ್ದಾನೋ ಅವರಿಗೆ ಖಿನ್ನತೆಯಲ್ಲಿ ದುಖ ಬರಬಹುದು. ಈ ದಿನದ ವಿಚಾರ ನೋಡಿದಾಗ ವೃಶ್ಚಿಕ ರಾಶಿಗೆ ಚಂದ್ರ ಬಲವೂ ಇದ್ದು, ಗುರುವಿನಿಂದ ದುಃಖವು ಲಭಿಸುತ್ತದೆ.
ಮುಖ್ಯಮಂತ್ರಿಗಳಿಗೆ ಮಿಥುನ ರಾಶಿಯೂ ಆಗಿದ್ದು ಆರರಲ್ಲಿ(ವೃಶ್ಚಿಕ) ಗುರುವು ಅನನುಕೂಲವಾಗಿದ್ದಾನೆ, ಚಂದ್ರನೂ ಅಷ್ಟಮದಲ್ಲಿದ್ದು ಅನಿಷ್ಟನಾಗಿ ಪಥನ ಲಕ್ಷಣವನ್ನು ಸೂಚಿಸುತ್ತಾನೆ. ಅದೂ ಅಲ್ಲದೆ ಗುರುವು ಈಗ ನವಾಂಶದಲ್ಲೂ ಮಕರ ನವಾಂಶದಲ್ಲಿದ್ದು ಅಲ್ಲಿಯೂ ರೋಗ ಲಕ್ಷಣ ನೀಡುತ್ತಾನೆ. ಇಂತಹ ದಿನದಲ್ಲಿ ಈ ಮಿಥುನ ರಾಶಿ ಜನಿತರಿಗೆ ಯಾವುದಾದರೂ ನಿರ್ಣಯಕ್ಕೆ ಹೊರಟರೆ ಅವರೇ ಸ್ಥಾನ ಚ್ಯುತಿಯನ್ನು ಅನುಭವಿಸಬೇಕಾಗುತ್ತದೆ.

ಯಾರಿಗೆ(ಸಿದ್ಧರಾಮಯ್ಯ) ಕನ್ಯಾ ಲಗ್ನವಾಗಿ ವೃಶ್ಚಿಕ ರಾಶಿ ಇರುತ್ತದೋ ಅವರಿಗೆ ಈ ನಿರ್ಣಯವು ಲಾಭವಾಗಬಹುದು. ಇವಿಷ್ಟು ದಿನದ ವಿಶೇಷ. ಇದರ ಪರಿಣಾಮವಾಗಿ ಆದರೆ ಅತಿಯಾದ ಮತ್ಸರದಿಂದ ನನಗೆ ಲಭಿಸದ್ದು ಇತರರಿಗೂ ಲಭಿಸಬಾರದು ಎಂದು ಮೇಲಧಿಕಾರಿಯ(ರಾಜ್ಯಪಾಲರು) ಆದೇಶವನ್ನೂ ಪಾಲಿಸದೆ ರಾಷ್ಟ್ರಪತಿ ಆಡಳಿತವೇ ಬರಲಿ ಎಂದು ಮುಂದುವರೆಯುವ ಸಾಧ್ಯತೆ ಕಾಣುತ್ತದೆ. ಇದನ್ನು ಈ ಹಿಂದೆ ಅನೇಕ ಬಾರಿ ಮೀಡ್ಯಾಗಳಲ್ಲಿ (ಚುನಾವಣಾತ್ಪೂರ್ವವೇ) ನಾನು ಹೇಳಿದ್ದೆ.

ಇನ್ನೊಂದಡೆ ಒಂದು ಅಪಶಕುನವನ್ನೂ ಹೇಳಬೇಕಾಗುತ್ತದೆ. ವಿಜಯನಗರ ಸಾಮ್ರಾಜ್ಯದ ಪರಮಗುರುಗಳಾದ ವ್ಯಾಸರಾಜರ ಮೂಲ ವೃಂದಾವನವನ್ನು ಧ್ವಂಸಗೊಳಿಸಿದ್ದೂ ಇದೇ ಸಂದರ್ಭವಾಗಿರುವುದು ಇದು ಸರಕಾರದ ಫಥನ ಲಕ್ಷಣವೇ ಆಗಿರುತ್ತದೆ. ಅಂದರೆ ರಾಜ್ಯದವರಲ್ಲದವರ ಆಡಳಿತ. (ರಾಷ್ಟ್ರಪತಿ ಆಡಳಿತ). ಇದು ದೇಶದವರೇ ಆಗಿದ್ದರೂ ಇದನ್ನು ಹಿಂದಿನ ಕಾಲದಲ್ಲಿ ಪರಕೀಯರ ಆಡಳಿತ, ಆಕ್ರಮಣ ಎಂದಾಗುತ್ತಿತ್ತು.

ರಾಷ್ಟ್ರಪತಿ ಆಡಳಿತ ಎಂದರೇನು?
ದೇಶದ ಯಾವುದೇ ರಾಜ್ಯದಲ್ಲಿ ಸರ್ಕಾರ ಬಹುಮತ ಕಳೆದುಕೊಂಡರೆ ರಾಜ್ಯಪಾಲರು ವಿಧಾನಸಭೆಯನ್ನು ಸಂವಿಧಾನದ 256ನೆಯ ವಿಧಿಯಂತೆ ಅಮಾನತಿನಲ್ಲಿಡುತ್ತಾರೆ. ಇದರ ಅವಧಿ ಆರು ತಿಂಗಳಾಗಿದ್ದು, ಈ ಅವಧಿಯೊಳಗೆ ಯಾವ ಪಕ್ಷವೂ ಬಹುಮತ ಸಾಬೀತುಪಡಿಸದಿದ್ದರೆ ವಿಧಾನಸಭೆಗೆ ಮತ್ತೆ ಚುನಾವಣೆ ನಡೆಸಲಾಗುತ್ತದೆ.

ಈ ಅವಧಿಯಲ್ಲಿ ರಾಜ್ಯದ ಕಾರ್ಯನಿರ್ವಹಣೆ ಅಧಿಕಾರ ಚುನಾಯಿತ ಮುಖ್ಯಮಂತ್ರಿ ಬದಲಾಗಿ ರಾಷ್ಟ್ರಪತಿ ಕೈಗೆ ಹೋಗುವುದರಿಂದ ಇದನ್ನು ರಾಷ್ಟ್ರಪತಿ ಆಳ್ವಿಕೆ ಎನ್ನಲಾಗುತ್ತದೆ. ರಾಜ್ಯಗಳಲ್ಲಿ ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿದ್ದು, ಅವರು ಸಲಹೆಗಾರರನ್ನು ನೇಮಿಸಿಕೊಳ್ಳುವ ಮೂಲಕ ರಾಜ್ಯದ ದೈನಂದಿನ ಆಡಳಿತವನ್ನು ನೋಡಿಕೊಳ್ಳುತ್ತಾರೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಕೇಂದ್ರ ಸರ್ಕಾರದ ನೀತಿಗಳೇ ಇಂತಹ ರಾಜ್ಯದಲ್ಲಿ ಅನುಸರಿಸಲ್ಪಡುತ್ತವೆ.


ಈ ಸಂದರ್ಭದಲ್ಲಿ ರಾಷ್ಟ್ರಪತಿ ಆಡಳಿತ ಹೇರಬಹುದು:

  1. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದರೆ
  2. ರಾಜ್ಯ ಸರ್ಕಾರ ಸಂವಿಧಾನದ ವಿರುದ್ಧವಾಗಿ ಕಾರ್ಯನಿರ್ವಹಿಸಿದರೆ
  3. ಸರ್ಕಾರದ ಮೈತ್ರಿಕೂಟಗಳು ಭಂಗವಾದರೆ
  4. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಎದುರಾದರೆ
  5. ಯಾವುದೇ ಕಾರಣಗಳಿಂದ ಚುನಾವಣೆ ಮುಂದೂಡಿದರೆ
Tags: AstrologyBJPcongressGovernor of KarnatakaJDSPrakash AmmannayaPresident RuleVajubhai Valaಪ್ರಕಾಶ್ ಅಮ್ಮಣ್ಣಾಯರಾಜ್ಯಪಾಲರಾಜ್ಯಪಾಲ ವಜುಭಾಯಿವಾಲಾರಾಷ್ಟ್ರಪತಿ ಆಡಳಿತ
Previous Post

ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಇಲ್ಲಿವೆ ಹಲವು ಪರಿಣಾಮಕಾರಿ ಮಾರ್ಗಗಳು

Next Post

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

kalpa

kalpa

Next Post

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023

ರಥಸಪ್ತಮಿಯಂದು ಸಾಮೂಹಿಕ 108 ಸೂರ್ಯ ನಮಸ್ಕಾರ ಸಂಪನ್ನ

January 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!