No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ನಿಶ್ಚಿತ? ಪ್ರಕಾಶ್ ಅಮ್ಮಣ್ಣಾಯ ಏನೆನ್ನುತ್ತಾರೆ ಗೊತ್ತಾ?

kalpa News by kalpa News
July 18, 2019
in Army
0
ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ನಿಶ್ಚಿತ? ಪ್ರಕಾಶ್ ಅಮ್ಮಣ್ಣಾಯ ಏನೆನ್ನುತ್ತಾರೆ ಗೊತ್ತಾ?
Share on FacebookShare on TwitterShare on WhatsApp

ರಾಜ್ಯ ಸಮ್ಮಿಶ್ರ ಸರ್ಕಾರ ಅವಸಾನದ ಹಂತಕ್ಕೆ ಬಂದು ನಿಂತಿರುವಂತೆಯೇ, ಈ ಹಂತದಲ್ಲಿ ರಾಜ್ಯಪಾಲರ ಮಧ್ಯಪ್ರವೇಶ ಭಾರೀ ಕುತೂಹಲವನ್ನು ಕೆರಳಿಸಿದ್ದು, ಬಹುತೇಕ ನಾಳೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಗೆ ಬಂದರೂ ಅಚ್ಚರಿಯಿಲ್ಲ ಎಂಬ ಅನುಮಾನ ಹಾಗೂ ಅಭಿಪ್ರಾಯಗಳು ವ್ಯಕ್ತವಾಗಿವೆ.

ವಿಶ್ವಾಸ ಮತಯಾಚನೆಗೆ ಸ್ಪೀಕರ್ ವಿಳಂಬ ಮಾಡುತ್ತಿದ್ದಾರೆ ಎಂಬ ವಿಚಾರದಲ್ಲಿ ಸದನದಲ್ಲಿ ಭಾರೀ ಕೋಲಾಹಲ ಏರ್ಪಟ್ಟ ಹಿನ್ನೆಲೆಯಲ್ಲಿ ರಾಜ್ಯಪಾಲರು ಗುರುವಾರವೇ ವಿಶ್ವಾಸಮತ ಪ್ರಕ್ರಿಯೆ ಮುಗಿಸುವಂತೆ ಸ್ಪೀಕರ್’ಗೆ ಸಂದೇಶ ರವಾನಿಸಿದ್ದರು. ಆದರೆ ಅದಾಗಲೇ ಸ್ಪೀಕರ್ ರಮೇಶ್ ಕುಮಾರ್ ತಾವು ಎಜೆ ಉದಯ್ ಹೊಳ್ಳ ಜತೆ ವಿಪ್ ಜಾರಿ ಸಂಬಂಧ ಚರ್ಚೆಗೆ ತೆರಳಿದ್ದ ಕಾರಣ ಸದನವನ್ನು ಉಪಸಭಾಪತಿಗಳು ಮುನ್ನಡೆಸಿದ್ದರು.

ಈ ಬೆಳವಣಿಗೆಯ ನಡುವೆಯೇ, ಶುಕ್ರವಾರ ಮಧ್ಯಾಹ್ನ 1.30ರ ಒಳಗಾಗಿ ಬಹುಮತ ಸಾಬೀತು ಮಾಡಬೇಕು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ರಾಜ್ಯಪಾಲ ವಜುಭಾಯಿವಾಲಾ ನಿರ್ದೇಶನ ನೀಡಿದ್ದಾರೆ.

ರಾಜ್ಯ ರಾಜಕೀಯ ಬೆಳವಣಿಗೆಯ ನಾಟಕ ಸದನದಲ್ಲಿ ಆರಂಭವಾಗಿದ್ದು, ಇದು ಅಲ್ಲೋಲ ಕಲ್ಲೋಲ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯಪಾಲರೂ ಈ ಸ್ಪಷ್ಟ ನಿರ್ದೇಶನ ನೀಡಿರುವ ಅವಧಿಯೊಳಗೆ ಬಹುಮತ ಸಾಬೀತು ಮಾಡುವ ಅನಿವಾರ್ಯತೆ ಎದುರಾಗಿದೆ. ಒಂದು ವೇಳೆ ಈ ಅವಧಿಯೊಳಗೆ ಬಹುಮತ ಸಾಬೀತು ಮಾಡದೇ ಇದ್ದರೆ, ಅಥವಾ ಕಲಾಪವನ್ನು ಮುಂದೂಡುವ ಪ್ರಹಸನವನ್ನು ನಡೆಸಿದರೆ ರಾಜ್ಯಪಾಲರು ಸಾಂವಿಧಾನಿಕ ಅಧಿಕಾರವನ್ನು ಚಲಾಯಿಸುವ ಸಾಧ್ಯತೆಗಳಿವೆ ಎಂಬುದು ರಾಜಕೀಯ ವಿಶ್ಲೇಷಕರ ಅಭಿಪ್ರಾಯವಾಗಿದೆ. ಅಂದರೆ, ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರಕ್ಕೆ ಬಹುಮತ ಇದೆ ಎಂದು ಸಾಬೀತು ಮಾಡದೇ ಇದ್ದರೆ, ರಾಜ್ಯದಲ್ಲಿ ಆಡಳಿತ ವೈಫಲ್ಯ ಎಂದು ಪರಿಗಣಿಸಿ ಸಂವಿಧಾನದ ಆರ್ಟಿಕಲ್ 256ರ ಅನ್ವಯ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲರು ಶಿಫಾರಸ್ಸು ಮಾಡುವ ಸಾಧ್ಯತೆ ಹೆಚ್ಚಿದೆ.

ಖ್ಯಾತ ಜ್ಯೋತಿಷಿ ಶ್ರೀ ಪ್ರಕಾಶ್ ಅಮ್ಮಣ್ಣಾಯ ಏನನ್ನುತ್ತಾರೆ?
ನಿಖರ ಜ್ಯೋತಿಷ್ಯ ನುಡಿಯುವಲ್ಲಿ ರಾಷ್ಟ್ರಮಟ್ಟದಲ್ಲಿ ಖ್ಯಾತರಾಗಿರುವ ಶ್ರೀ ಪ್ರಕಾಶ್ ಅಮ್ಮಣ್ಣಾಯ ಅವರೊಂದಿಗೆ ಇಂದಿನ ಬೆಳವಣಿಗೆ ಹಿನ್ನೆಲೆ ಕುರಿತಂತೆ ಚರ್ಚೆ ನಡೆಸಿದಾಗ ಅವರು ಜ್ಯೋತಿಷ್ಯದ ಆಯಾಮದಲ್ಲಿ ವಿಶ್ಲೇಷಣೆ ಮಾಡಿದ್ದು ಹೀಗಿದೆ:

ಯಾರಿಗೆ ವೃಶ್ಚಿಕ ರಾಶಿಯಲ್ಲಿ ಗುರು ಇದ್ದಾನೋ ಅವರಿಗೆ ಖಿನ್ನತೆಯಲ್ಲಿ ದುಖ ಬರಬಹುದು. ಈ ದಿನದ ವಿಚಾರ ನೋಡಿದಾಗ ವೃಶ್ಚಿಕ ರಾಶಿಗೆ ಚಂದ್ರ ಬಲವೂ ಇದ್ದು, ಗುರುವಿನಿಂದ ದುಃಖವು ಲಭಿಸುತ್ತದೆ.
ಮುಖ್ಯಮಂತ್ರಿಗಳಿಗೆ ಮಿಥುನ ರಾಶಿಯೂ ಆಗಿದ್ದು ಆರರಲ್ಲಿ(ವೃಶ್ಚಿಕ) ಗುರುವು ಅನನುಕೂಲವಾಗಿದ್ದಾನೆ, ಚಂದ್ರನೂ ಅಷ್ಟಮದಲ್ಲಿದ್ದು ಅನಿಷ್ಟನಾಗಿ ಪಥನ ಲಕ್ಷಣವನ್ನು ಸೂಚಿಸುತ್ತಾನೆ. ಅದೂ ಅಲ್ಲದೆ ಗುರುವು ಈಗ ನವಾಂಶದಲ್ಲೂ ಮಕರ ನವಾಂಶದಲ್ಲಿದ್ದು ಅಲ್ಲಿಯೂ ರೋಗ ಲಕ್ಷಣ ನೀಡುತ್ತಾನೆ. ಇಂತಹ ದಿನದಲ್ಲಿ ಈ ಮಿಥುನ ರಾಶಿ ಜನಿತರಿಗೆ ಯಾವುದಾದರೂ ನಿರ್ಣಯಕ್ಕೆ ಹೊರಟರೆ ಅವರೇ ಸ್ಥಾನ ಚ್ಯುತಿಯನ್ನು ಅನುಭವಿಸಬೇಕಾಗುತ್ತದೆ.

ಯಾರಿಗೆ(ಸಿದ್ಧರಾಮಯ್ಯ) ಕನ್ಯಾ ಲಗ್ನವಾಗಿ ವೃಶ್ಚಿಕ ರಾಶಿ ಇರುತ್ತದೋ ಅವರಿಗೆ ಈ ನಿರ್ಣಯವು ಲಾಭವಾಗಬಹುದು. ಇವಿಷ್ಟು ದಿನದ ವಿಶೇಷ. ಇದರ ಪರಿಣಾಮವಾಗಿ ಆದರೆ ಅತಿಯಾದ ಮತ್ಸರದಿಂದ ನನಗೆ ಲಭಿಸದ್ದು ಇತರರಿಗೂ ಲಭಿಸಬಾರದು ಎಂದು ಮೇಲಧಿಕಾರಿಯ(ರಾಜ್ಯಪಾಲರು) ಆದೇಶವನ್ನೂ ಪಾಲಿಸದೆ ರಾಷ್ಟ್ರಪತಿ ಆಡಳಿತವೇ ಬರಲಿ ಎಂದು ಮುಂದುವರೆಯುವ ಸಾಧ್ಯತೆ ಕಾಣುತ್ತದೆ. ಇದನ್ನು ಈ ಹಿಂದೆ ಅನೇಕ ಬಾರಿ ಮೀಡ್ಯಾಗಳಲ್ಲಿ (ಚುನಾವಣಾತ್ಪೂರ್ವವೇ) ನಾನು ಹೇಳಿದ್ದೆ.

ಇನ್ನೊಂದಡೆ ಒಂದು ಅಪಶಕುನವನ್ನೂ ಹೇಳಬೇಕಾಗುತ್ತದೆ. ವಿಜಯನಗರ ಸಾಮ್ರಾಜ್ಯದ ಪರಮಗುರುಗಳಾದ ವ್ಯಾಸರಾಜರ ಮೂಲ ವೃಂದಾವನವನ್ನು ಧ್ವಂಸಗೊಳಿಸಿದ್ದೂ ಇದೇ ಸಂದರ್ಭವಾಗಿರುವುದು ಇದು ಸರಕಾರದ ಫಥನ ಲಕ್ಷಣವೇ ಆಗಿರುತ್ತದೆ. ಅಂದರೆ ರಾಜ್ಯದವರಲ್ಲದವರ ಆಡಳಿತ. (ರಾಷ್ಟ್ರಪತಿ ಆಡಳಿತ). ಇದು ದೇಶದವರೇ ಆಗಿದ್ದರೂ ಇದನ್ನು ಹಿಂದಿನ ಕಾಲದಲ್ಲಿ ಪರಕೀಯರ ಆಡಳಿತ, ಆಕ್ರಮಣ ಎಂದಾಗುತ್ತಿತ್ತು.

ರಾಷ್ಟ್ರಪತಿ ಆಡಳಿತ ಎಂದರೇನು?
ದೇಶದ ಯಾವುದೇ ರಾಜ್ಯದಲ್ಲಿ ಸರ್ಕಾರ ಬಹುಮತ ಕಳೆದುಕೊಂಡರೆ ರಾಜ್ಯಪಾಲರು ವಿಧಾನಸಭೆಯನ್ನು ಸಂವಿಧಾನದ 256ನೆಯ ವಿಧಿಯಂತೆ ಅಮಾನತಿನಲ್ಲಿಡುತ್ತಾರೆ. ಇದರ ಅವಧಿ ಆರು ತಿಂಗಳಾಗಿದ್ದು, ಈ ಅವಧಿಯೊಳಗೆ ಯಾವ ಪಕ್ಷವೂ ಬಹುಮತ ಸಾಬೀತುಪಡಿಸದಿದ್ದರೆ ವಿಧಾನಸಭೆಗೆ ಮತ್ತೆ ಚುನಾವಣೆ ನಡೆಸಲಾಗುತ್ತದೆ.

ಈ ಅವಧಿಯಲ್ಲಿ ರಾಜ್ಯದ ಕಾರ್ಯನಿರ್ವಹಣೆ ಅಧಿಕಾರ ಚುನಾಯಿತ ಮುಖ್ಯಮಂತ್ರಿ ಬದಲಾಗಿ ರಾಷ್ಟ್ರಪತಿ ಕೈಗೆ ಹೋಗುವುದರಿಂದ ಇದನ್ನು ರಾಷ್ಟ್ರಪತಿ ಆಳ್ವಿಕೆ ಎನ್ನಲಾಗುತ್ತದೆ. ರಾಜ್ಯಗಳಲ್ಲಿ ರಾಜ್ಯಪಾಲರು ರಾಷ್ಟ್ರಪತಿಗಳ ಪ್ರತಿನಿಧಿಯಾಗಿದ್ದು, ಅವರು ಸಲಹೆಗಾರರನ್ನು ನೇಮಿಸಿಕೊಳ್ಳುವ ಮೂಲಕ ರಾಜ್ಯದ ದೈನಂದಿನ ಆಡಳಿತವನ್ನು ನೋಡಿಕೊಳ್ಳುತ್ತಾರೆ. ಸಾಮಾನ್ಯವಾಗಿ ಈ ಅವಧಿಯಲ್ಲಿ ಕೇಂದ್ರ ಸರ್ಕಾರದ ನೀತಿಗಳೇ ಇಂತಹ ರಾಜ್ಯದಲ್ಲಿ ಅನುಸರಿಸಲ್ಪಡುತ್ತವೆ.


ಈ ಸಂದರ್ಭದಲ್ಲಿ ರಾಷ್ಟ್ರಪತಿ ಆಡಳಿತ ಹೇರಬಹುದು:

  1. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದರೆ
  2. ರಾಜ್ಯ ಸರ್ಕಾರ ಸಂವಿಧಾನದ ವಿರುದ್ಧವಾಗಿ ಕಾರ್ಯನಿರ್ವಹಿಸಿದರೆ
  3. ಸರ್ಕಾರದ ಮೈತ್ರಿಕೂಟಗಳು ಭಂಗವಾದರೆ
  4. ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಎದುರಾದರೆ
  5. ಯಾವುದೇ ಕಾರಣಗಳಿಂದ ಚುನಾವಣೆ ಮುಂದೂಡಿದರೆ
Tags: AstrologyBJPcongressGovernor of KarnatakaJDSPrakash AmmannayaPresident RuleVajubhai Valaಪ್ರಕಾಶ್ ಅಮ್ಮಣ್ಣಾಯರಾಜ್ಯಪಾಲರಾಜ್ಯಪಾಲ ವಜುಭಾಯಿವಾಲಾರಾಷ್ಟ್ರಪತಿ ಆಡಳಿತ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ಲಾಸ್ಟಿಕ್ ಮುಕ್ತ ಅರಣ್ಯಕ್ಕೆ ಇಲ್ಲಿವೆ ಹಲವು ಪರಿಣಾಮಕಾರಿ ಮಾರ್ಗಗಳು

Next Post

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

kalpa News

kalpa News

Next Post
ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

ಸ್ಪೀಕರ್ ವಿಳಂಬ ನೀತಿ ವಿರೋಧಿಸಿ ಸದನದಲ್ಲಿ ಬಿಜೆಪಿ ಅಹೋರಾತ್ರಿ ಧರಣಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL