No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Wednesday, March 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಸ್ಯವನ್ಯ, ಸೂಕ್ಷ್ಮಾತಿಸೂಕ್ಷ್ಮ ಜೀವಿಗಳ ಉಳಿವಿಗಿಂತಲೂ ಯೋಜನೆಯೇ ಮುಖ್ಯವೇ?

ಭೂ ಅಂತರ್ಗತ ಶರಾವತಿ ವಿದ್ಯುತ್ ಯೋಜನೆ ಕಾರ್ಯ ಸದ್ದಿಲ್ಲದೇ ಆರಂಭ, ಮಲೆನಾಡ ಅರಣ್ಯಕ್ಕೆ ಕಾದಿದೆ ಅಪಾಯ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 8, 2020
in Special Articles
0
ಸಸ್ಯವನ್ಯ, ಸೂಕ್ಷ್ಮಾತಿಸೂಕ್ಷ್ಮ ಜೀವಿಗಳ ಉಳಿವಿಗಿಂತಲೂ ಯೋಜನೆಯೇ ಮುಖ್ಯವೇ?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಯೋಜನೆಗಳ ಕಡತಗಳು, ಅಭಿವೃದ್ಧಿಯ ಗುಂಡುಪಿನ್ನು ಹಚ್ಚಿಕೊಂಡೇ ಇರುತ್ತವೆ ನಿಜ. ಆದರೆ ಅವುಗಳ ರೂಪಿಸುವ ಮುನ್ನ ಸ್ಥಳೀಯವಾಗಿ ಪರಿಸರ, ಜನಜೀವನ ವಿರೂಪಗೊಳ್ಳುವುದೂ ಅಪಾರ ಹಾನಿಯೆಂದು ಉನ್ನತ ಅಧಿಕಾರದ ಪಂಡಿತರಿಗೆ ಹೊಳೆಯುವುದೇ ಇಲ್ಲ. ಇದು ಸಾರಾಸಗಟಾಗಿ ಹೇಳುವ ಹಾಗೂ ಇಲ್ಲ. ಅಲ್ಲಲ್ಲಿ ಕೆಲವೆಡೆ ಪರಿಸರಪ್ರಿಯ ಅಧಿಕಾರಿಗಳೂ ಇದ್ದಾರೆ.

ಈಗಾಗಲೇ ನಮಗೆಲ್ಲ ತಿಳಿದಿರುವಂತೆ ಬೆಂಗಳೂರಿನ ಜನರ ಬಾಯಾರಿಕೆ ನೀಗಲು, ಸರ್ಕಾರದ ಯೋಜನೆಯ ನಾಲಗೆ ಶರಾವತಿಯತ್ತ ಚಾಚಿತ್ತು. ಸುದ್ದಿ ಹಳೆಯದಾದರೂ ಯಾವ ಹೊತ್ತಿಗೆ ಯಾವ ರೀತಿ ಜೆಸಿಬಿಗಳು ಬಂದು ಶರಾವತಿ ವ್ಯಾಪ್ತಿಯ ದಟ್ಟ ಹಸಿರು ಮೈಗೆ ಮುಳ್ಳು ಬಕೆಟನ್ನು ನೆಡುವುದೋ ಗೊತ್ತಿಲ್ಲ. ಇದು ಸುದ್ದಿಯಾಗುತ್ತಿದಂತೆಯೇ ಜೋಗದ ಜಲಪಾತದಿಂದ ಧುಮುಕಿ ಮುಂದೆ ಸಾಗರ ಸೇರುವ ಶರಾವತಿಯ ಕುತ್ತಿಗೆ ಹಿಡಿದು ಗೇರುಸೊಪ್ಪೆಯಿಂದ ಮತ್ತೆ ತಲಕಳಲೆ ಜಲ ಸಂಗ್ರಹಾಲಯಕ್ಕೆ ಗುರುತ್ವಾಕರ್ಷಣೆ ವಿರುದ್ಧ ಪಂಪ್ ಮಾಡಿ ಒಂದು ಹೆಚ್ಚುವರಿ ವಿದ್ಯುತ್ ಉತ್ಪಾದನಾ ಯೋಜನೆಯೂ ತಯಾರಾಗಿದೆ. ಅದರ ತಿದಿ ಒತ್ತುತ್ತಿರುವ ಸದ್ದು ಪರಿಸರ ಪ್ರಿಯರ ನಿದ್ದೆಗೆಡಿಸಿದೆ. ಜೋಗದ ನೀರು ವ್ಯರ್ಥವಾಗುತ್ತಿರುವ ಬಗ್ಗೆ ಹಿಂದೆಯೇ ವಿಶ್ವೇಶ್ವರಯ್ಯನವರು ಉದ್ಗರಿಸಿದ್ದು ಜಲವಿದ್ಯುತ್ ಉತ್ಪಾದನೆಗೆ ಪ್ರೇರೇಪಣೆ ಸಿಕ್ಕಿತು. ನಾಡಿಗೆ ಬೆಳಕು ಸಿಕ್ಕಿತು ಅಂತ ಅದನ್ನ ಸ್ವಾಗತಿಸಲಾಯಿತು. ಆದರೀಗ ಪರಿಸರ ಆಸಕ್ತರು ಹೊಸ ಯೋಜನೆಯ ಬಗ್ಗೆ ಈ ರೀತಿ ಆಲೋಚಿಸುತ್ತಿಲ್ಲ. ಸರ್ಕಾರದ ಹಣ ದೋಚಲು ಒಂದು ಹುನ್ನಾರು ಎಂದು ಅಭಿಪ್ರಾಯಪಡುತ್ತಾರೆ.

ಏಕೆಂದರೆ ಅವರ ಪ್ರಕಾರ ಎರಡು ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಎರಡೂವರೆ ಸಾವಿರ ಮೆಗಾವ್ಯಾಟ್ ವಿದ್ಯುತ್ತನ್ನು ಅಪವ್ಯಯ ಮಾಡುವ ಮೂರ್ಖತನದ ಸಾಹಸ.

ಬೆಂಗಳೂರಿಗೆ ಕುಡಿಯುವ ನೀರಿನ ಸರಬರಾಜು ಮಾಡುವ ಈ ಬಗ್ಗೆ ಹಿಂದಿನ ಸಮ್ಮಿಶ್ರ ಸರ್ಕಾರ ಹೇಳಿಕೆ ನೀಡಿತ್ತು. ಈ ಬಗ್ಗೆ ವಿವಾದವೆದ್ದಾಗ ಈಗಿನ ಮುಖ್ಯಮಂತ್ರಿ ಶ್ರೀ ಯಡಿಯೂರಪ್ಪನವರು ಪ್ರಸ್ತಾವನೆ ಕುರಿತು ’ನೋ’ ಎಂದಿದ್ದಾರೆ.

ಆದರೆ ಸದ್ಯ ಈಗ ವ್ಯರ್ಥವಾಗಿ ಹರಿದುಹೋಗುವ ನೀರನ್ನು ಪುನರ್ವಿದ್ಯುತ್ ಉತ್ಪಾದನೆಗೆ ಬಳಸುವ ಯೋಜನೆ ಸದ್ದು ಮಾಡುತ್ತಿದೆ. ಸಿದ್ಧರಾಮಯ್ಯನವರ ಸರ್ಕಾರವಿದ್ದಾಗ ಇದು ರೂಪಿತವಾಗಿತ್ತು. ಪ್ರಸ್ತುತ ಸರ್ಕಾರ ಅದಕ್ಕೆ ಪೂರಕ ಏರ್ಪಾಡುಗಳನ್ನು ಕೈಗೆತ್ತಿಕೊಂಡಿದೆ. ಈಗಾಗಲೇ ಭೂಗರ್ಭದೊಳಗೇ ಸುರಂಗದ ಮೂಲಕ ನೀರನ್ನು ಮರು ಎತ್ತುವ ಮತ್ತು ಬೆಟ್ಟದೊಳಗೇ ಭೂಅಂತರ್ಗತ ವಿದ್ಯುತ್ ಉತ್ಪಾದನಾ ಕೇಂದ್ರದ ಪ್ಲಾನ್ ಶುರುವಾಗಿದೆ.

ಏನಿದು ಯೋಜನೆ?
ಜಲಪಾತದಿಂದ ಬಿದ್ದ ನೀರು ಸಮುದ್ರ ಸೇರುತ್ತಿದೆ. ಗೇರುಸೊಪ್ಪ ಜಲಸಂಗ್ರಹಾಲಯದಲ್ಲಿ ಮುಂಚೆ ನಿಂತು ಅಲ್ಲಿಂದ ಕಾಫರ್ ಡ್ಯಾಂ ನಿರ್ಮಿಸಿ ಮತ್ತೆ ತಲಕಳಲೆ ಜಲಾಗಾರಕ್ಕೆ ಪಂಪ್ ಮಾಡಿ ಸುರಂಗ ಕೊಳವೆಗಳ ಮೂಲಕ ಪಂಪ್ ಮಾಡಿ ವಾಪಸ್ ಕಳಿಸುವುದು. ಅಲ್ಲಿಂದ ಪೈಪ್ ಮೂಲಕ ಹೊಸ ಪವರ್ ಹೌಸ್ ನಲ್ಲಿ ಟರ್ಬೈನ್’ಗಳ ಮೂಲಕ ನೀರಿ ಹಾಯಿಸುವುದು ಎಂದು ಸರಳವಾಗಿ ಹೇಳಬಹುದು.

ಇಂತಹ ಎರಡು ಪ್ರಾಜೆಕ್ಟುಗಳು ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯದಲ್ಲಿವೆ. ಅವುಗಳ ಸಂರಚನೆಯ ರೂಪುರೇಷೆಗಳೇ ಶರಾವತಿ ಪಂಪ್ಡ್‌ ವಾಟರ್ ಪ್ರಾಜೆಕ್ಟ್‌’ಗೆ ಮಾದರಿ. ಇದರ ಅಂದಾಜು ಐದು ಸಾವಿರ ಕೋಟಿ ರೂಪಾಯಿಗಳು. ಈಗಿನ ಮಹಾತ್ಮಗಾಂಧಿ ಪವರ್ ಜನರೇಷನ್ ಕೇಂದ್ರಕ್ಕಿಂತ ಬೇರೆಯೇ ವ್ಯವಸ್ಥೆ. ತಲಕಳಲೆ ಡ್ಯಾಂ ಮೇಲ್ಮಟ್ಟದ ಜಲಾಗಾರವಾಗಿ ಮತ್ತು ಗೇರುಸೊಪ್ಪ ಡ್ಯಾಮ್ ಕೆಳಮಟ್ಟದ ಜಲಾಗಾರವಾಗಿಯೇ ಇದ್ದು ಅವುಗಳ ಸ್ವರೂಪದಲ್ಲೇನೂ ಬದಲಾವಣೆ ಮಾಡುವುದಿಲ್ಲ. ತಲಕಳಲೆ ಡ್ಯಾಮಿನ ನೀರನ್ನ ಟರ್ಬೈನ್’ಗಳ ಮೂಲಕ ಹಾಯಿಸಿ ವಿದ್ಯುತ್ ಉತ್ಪಾದನೆ ಮಾಡುವುದಾಗಿದೆ. ಮತ್ತೆ ಅದೇ ನೀರು ಗೇರುಸೊಪ್ಪ ಜಲಾಗಾರದಲ್ಲೇ ಸಂಗ್ರಹವಾಗುತ್ತದೆ. ಇಲ್ಲಿ ನಡುವೆ ಸಂಪೂರ್ಣ ಸುರಂಗದಲ್ಲಿಯೇ ಪವರ್ ಹೌಸ್ ನಿರ್ಮಿಸುವ ಯೋಜನೆ.

ಮಾಧ್ಯಮಗಳಲ್ಲಿ ವರದಿಯಾದಂತೆ 2021ಕ್ಕೆ ಈ ಯೋಜನೆ ಪೂರ್ಣವಾಗಲಿದೆ. ಅದೀಗ ಅನುಮಾನವೇ. ಇದಕ್ಕೆ ಅಲ್ಲಿರುವ ಸಿಂಹಬಾಲದ ಸಿಂಗಳಿಕ ಪ್ರಾಣಿ ಅಭಯಾರಣ್ಯ ಅಡ್ಡವಿದೆ. ಆದರೆ ಅದರ ಆಸುಪಾಸು ಈ ಯೋಜನೆ ಹಾದು ಹೋಗುತ್ತದೆ ಎಂಬ ನಿಲುವನ್ನೂ ಹೇಳಲಾಗಿದೆ.

ಆದರೆ ಅಭಯಾರಣ್ಯದ ನಡುವಿನ 902 ಚ. ಕಿಮೀ ವ್ಯಾಪ್ತಿ ಆವರಿಸಲಿದೆ ಎಂಬುದು ಮಾಧ್ಯಮಗಳಲ್ಲಿ ಬಂದ ಇನ್ನೊಂದು ಅಂಶ. ಸರ್ಕಾರದ ದಾಖಲೆಗಳಲ್ಲಿ ಕೇವಲ 153 ಹೆ.ಭೂಮಿ ಸಾಕು ಎಂದಿದೆ. ಯೋಜನೆಯ ಸ್ಥಳ ಶರಾವತಿ ಅಭಯಾರಣ್ಯದಿಂದ 3.4 ಕಿಮೀ ದೂರದಲ್ಲಿದೆ. ಅದಕ್ಕಾಗಿಯೇ ರಾಷ್ಟ್ರೀಯ ವನ್ಯಜೀವಿ ಮಂಡಳಿ ಅನುಮೋದನೆಯೂ ಬೇಕಿದೆ.

ಪರಿಸರ ಆಸಕ್ತರು ಹೇಳುವಂತೆ ಮುಂದೆ ಬರಲಿರುವ ಐವತ್ತೆಂಟನೇ ಮಂಡಳಿ ಸಭೆಯಲ್ಲಿ ಚರ್ಚೆಗೆ ಬಂದು ಅನುಮತಿ ಬಗ್ಗೆ ತೀರ್ಮಾನವಾಗಲಿದೆ. ಯೋಜನೆ ಶುರುವಾದಂತೆ ಮತ್ತೇನು ವ್ಯತ್ಯಾಸಗಳಾಗುವವೋ ಗೊತ್ತಿಲ್ಲ.

ಪ್ರಸ್ತುತ ಯೋಜನೆಯ ಭೌ-ತಾಂತ್ರಿಕ (Geotechnical) ಅಧ್ಯಯನದ ಅಗತ್ಯವಿದೆ. ಸಾಗರ ಮತ್ತು ಹೊನ್ನಾವರ ಅರಣ್ಯ ವಿಭಾಗಗಳಿಗೆ ಸೇರಿರುವ ಸುಮಾರು 877.507 ಹೆಕ್ಟೇರ್ ವ್ಯಾಪ್ತಿಯ ಅರಣ್ಯ ಪ್ರದೇಶವಿದೆ. 2019 ಅಕ್ಟೋಬರ್ ತನಕವೂ ಇದಕ್ಕೆ ಕೇಂದ್ರ ಸರ್ಕಾರದ ಇಲಾಖಾ ಅನುಮತಿ ಸಿಕ್ಕಿರಲಿಲ್ಲ.(ದಿ ನ್ಯೂ ಇಂಡಿಯನ್ ಎಕ್ಸ್‌’ಪ್ರೆಸ್ 23-10-2019ರ ವರದಿ)

ಈ ಯೋಜನೆ ಬಗ್ಗೆ ರಾಜ್ಯ ವನ್ಯಜೀವಿ ಮಂಡಳಿ ಈಗಿನ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ಸದರಿ ಪ್ರಸ್ತಾವನೆಯನ್ನು ಅಮೂಲಾಗ್ರ ಚರ್ಚಿಸದೇ ಅನುಮೋದಿಸಿದೆಯೆಂದೂ ಆಗ ಪತ್ರಿಕಾ ಮಾಧ್ಯಮಗಳಲ್ಲಿ ಪ್ರಕಟವಾಗಿದೆ.

ವನ್ಯಜೀವಿ ಸಂರಕ್ಷಣೆ 19 ಸೆಕ್ಷನ್ ಪ್ರಕಾರ ವನ್ಯಜೀವಿಗಳ ಅಸ್ತಿತ್ವ ಉತ್ತಮ ಪಡಿಸಲು ಯೋಜನೆಗಳನ್ನು ಅರಣ್ಯದಲ್ಲಿ ಕೈಗೊಳ್ಳಬಹುದಷ್ಟೆ. ಆದರೆ ಅಲ್ಲಿರುವ ಸಿಂಹಬಾಲದ ಸಿಂಗಳಿಕ ಪ್ರಾಣಿಯ ಅಭಯಾರಣ್ಯದಲ್ಲಿ ಅವುಗಳ ಸಂರಕ್ಷಣೆಗೆ ಚ್ಯುತಿ ಬರುತ್ತದೆಯೆ? ಎಂಬ ಸಂದೇಹಕ್ಕೆ ಸ್ಪಷ್ಟೀಕರಣವಿಲ್ಲ. ರಾಜ್ಯ ಅರಣ್ಯ ಇಲಾಖೆಯ ಸ್ಥಳೀಯ ಅಧಿಕಾರಿಗಳ ಪ್ರಕಾರ ಈ ಯೋಜನೆ ಜಾರಿಯಾದರೆ ಕಾರ್ಗಲ್ ಮತ್ತು ಗೇರುಸೊಪ್ಪ ವಲಯದಲ್ಲಿನ ಸರ್ವಋತು ಹಸಿರಡವಿಯ ವನ್ಯಜೀವಿಗಳಿಗೆ ಮಾರಕವಾಗುತ್ತದೆ.

ಅಲ್ಲಿರುವ ಅರಣ್ಯ ವಿಶಿಷ್ಟ ಬಗೆಯದ್ದು. ಬಿಳಿಬಾಲದ ಸಿಂಗಳೀಕ, ದೊಡ್ಡ ಮಂಗಟ್ಟೆ ಹಕ್ಕಿ ಮುಂತಾದವು ನೆಲಕ್ಕಿಳಿಯದೇ ಮರದಲ್ಲೇ ಇರುವುವು. ಅವುಗಳ ಆಹಾರಕ್ಕೆ ಅಲ್ಲಿ ವರುಷ ಪೂರ್ತಿ ಹಣ್ಣು ಬಿಡುವ ನಾನಾ ಜಾತಿಯ ವೃಕ್ಷ ಸಂಪತ್ತಿದೆ. ನಡುಮಧ್ಯಾಹ್ನದ ಬಿಸಿಲೂ ಕೂಡ ನೆಲಕ್ಕೆ ಬೀಳದಂತೆ ದಟ್ಟ ಹರಡಿರುವ ಹೆಮ್ಮರಗಳ ಬೀಡು. ಆನೆಯೊಂದನ್ನು ಹೊರತುಪಡಿಸಿ ಮಿಕ್ಕ ಎಲ್ಲ ಮೃಗಪಕ್ಷಿಗಳ ಆವಾಸ ಶರಾವತಿಯ ಇಳಿಜಾರಿನ ಕಾನನ. ಅದೊಂದು ಪಶ್ಚಿಮಘಟ್ಟಗಳ ವನದೇವಿ ರಾರಾಜಿಸುವ ನಿಸರ್ಗ ತಾಣ. ಅಲ್ಲಿಯೇ ಒಂದು ಜೈವಿಕ ಸರಪಳಿಯ ಸೃಷ್ಟಿಯಿದೆ.

ಮಾಹಿತಿಗಾಗಿ ಶರಾವತಿ ಉಳಿಸಿ ಹೋರಾಟ ಒಕ್ಕೂಟದ SWAN & Man ವೇದಿಕೆಯ ಶ್ರೀ ಅಖಿಲೇಶ್ ಚಿಪ್ಳಿ ಅವರನ್ನು ತಕ್ಷಣದ ಮಾಹಿತಿಗೆ ಸಂಪರ್ಕಿಸಿದಾಗ ಶರಾವತಿ ಮೈಗೆ ನೆಲಕಿಂಡಿ (ಡ್ರಿಲ್ಲ್‌ ಹೋಲ್) ಮಾಡುವ ಘನ ಕಾರ್ಯ ಶುರುವಾಗಿಬಿಟ್ಟಿದೆ ಎಂಬ ಸಂಗತಿ ತಿಳಿಯಿತು. ಅದಕ್ಕೂ ಈಗ ಸದ್ಯಕ್ಕೆ ನೆಲಕಿಂಡಿ ಚಟುವಟಿಕೆ ನಿಲ್ಲಿಸುವಂತೆ ಮನವಿಯನ್ನೂ ಒಕ್ಕೂಟ ಅರಣ್ಯ ಇಲಾಖೆಗೆ ಸಲ್ಲಿಸಿದೆ.

ಅಲ್ಲದೇ ಸಾಗರದ ಪವರ್ ಪಾಲಿಸಿ ಅನಾಲಿಸ್ಟ್‌ ಶ್ರೀಶಂಕರ್ ಶರ್ಮಾ ಅವರೂ ಪರಿಸರ ಉಳಿವಿನ ಕಾರ್ಯಕರ್ತರ ಪಡೆಯಲ್ಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿಗಳಿಗೆ, ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಮನವಿಯಲ್ಲಿ ಏನಿದೆ?
ರಾಜ್ಯದ ಹಾಗೂ ಸ್ಥಳೀಯ ಪರಿಸರವಾದಿಗಳಿಗೆ ಮತ್ತು ವನ್ಯಜೀವಿ ಸಂರಕ್ಷಣಾ ಪ್ರಿಯರಿಗೆ ಸದ್ಯದ ಭೌತಾಂತ್ರಿಕ ಅನ್ವೇಷಣೆ ಕೈಗೊಂಡಿರುವ ಬಗ್ಗೆ ನಿರಾಶೆಯಾಗಿದೆ. ನಾಗರಿಕ ಸಮಾಜವು ವ್ಯಕ್ತಪಡಿಸಿರುವ ಅನೇಕ ಗಂಭೀರ ಸಮಸ್ಯೆಗಳಿಗೆ ಸಮಾಧಾನಕರವಾಗಿ ಪರಿಹಾರ ನೀಡದೇ ಅಭಯಾರಣ್ಯ ಪ್ರದೇಶದಲ್ಲಿ ಪಂಪ್ ಮಾಡಿ ಜಲವಿದ್ಯುತ್ ಯೋಜನೆ ಆರಂಭಕ್ಕೆ ಅನುಮತಿ ನೀಡಿರುವುದು ಈ ನಿರಾಶೆಗೆ ಕಾರಣ.

ಸದ್ಯ ಈಗ ಕೋವಿಡ್ 19 ರ ವ್ಯಾಪಕವಾಗಿ ಹಬ್ಬಿರುವ ವಾತಾವರಣವಿದೆ. ಅಲ್ಲಿಗೆ ನಿಯುಕ್ತವಾಗಿರುವ ಸಿಬ್ಬಂದಿಗಳು ಬೇರೆ ಬೇರೆ ರಾಜ್ಯಗಳ ಪ್ರದೇಶದಿಂದ ಬಂದವರಾಗಿರುತ್ತಾರೆ. ವನ್ಯಜೀವಿಗಳೂ ಇದರಿಂದ ಬಾಧಕವಾಗಬಹುದು. ಕೋವಿಡ್ 19 ಸೋಂಕಿನ ಬಗ್ಗೆಯೂ ಪರಿಶೀಲನೆಯಾಗಿಲ್ಲ. ಸೋಂಕು ಇದೆಯೋ ಇಲ್ಲವೋ ಆರೋಗ್ಯ ಸಚಿವಾಲಯದ ಪ್ರಕಾರ 14 ದಿನಗಳ ಕ್ವಾರಂಟೈನ್ ಆಗಲೇಬೇಕು. ಅಭಯಾರಣ್ಯ ಪ್ರದೇಶದೊಳಕ್ಕೆ ಕಾಲಿಡುವ ಮೊದಲು ಈ ಬಗ್ಗೆ ಈ ಉಪಕ್ರಮ ಅತ್ಯವಶ್ಯವಾಗಿದೆ.

ಮಳೆಗಾಲ ಆರಂಭವಾಗಿದೆ. ವನ್ಯಜೀವಿಗಳ ಮತ್ತು ಸಸ್ಯ ಸಂಕುಲಗಳ ಜೈವಿಕ ಕ್ರಿಯೆ ನಡೆಯುವ ಸೂಕ್ತ ಕಾಲವಾಗಿದೆ. ಇಂತಹ ಸನ್ನಿವೇಶದಲ್ಲಿ ಭೌಗೋಳಿಕ ತಾಂತ್ರಿಕ ಚಟುವಟಿಕೆ ಶುರು ಮಾಡುವುದು ನಿಲ್ಲಿಸಬೇಕೆಂದು ಕೋರಿದ್ದಾರೆ. ಮತ್ತೋರ್ವ ಜೈವಿಕ ಶಾಸ್ತ್ರಜ್ಞ ಪ್ರೊ.ಮೇವಾಸಿಂಗ್ ಕೂಡ ಹೀಗೆಯೇ ದನಿಗೂಡಿಸಿದ್ದಾರೆ.

ಪ್ರೊ. ಸಿಂಗ್ ಅವರ ಅಪಾರ ಅಧ್ಯಯನ ಮತ್ತು ಸಂಶೋಧನೆಗಳ ಫಲವಾಗಿ ಆ ಅರಣ್ಯ ಪ್ರದೇಶವು ಸಿಂಹಬಾಲದ ಸಿಂಗಳಿಕಗಳ ಅಭಯಾರಣ್ಯವಾಗಿ ಇತ್ತೀಚೆಗೆ ಘೋಷಿಸಲ್ಪಟ್ಟಿದೆ. ಕೇವಲ 360 ಹೆಕ್ಟೇರ್ ಅರಣ್ಯ ಮಾತ್ರ ಬಳಕೆಯಾಗುತ್ತದೆ ಎಂಬುದನ್ನು ನೋಡಿದರೆ ಪ್ರಸ್ತುತ ಯೋಜನೆಯ ವಿವಿಧ ಕಾಮಗಾರಿಗಳಿಗೆ ಇನ್ನೂ ಹೆಚ್ಚಿನ ಪ್ರದೇಶ ಕಬಳಿಸಲ್ಪಡುತ್ತದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.

ಈಗ ಯೋಜನೆಯ ಸಮೀಕ್ಷೆಗಾಗಿ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ ಅಷ್ಟೆ. ಅದೂ ಮರಗಳನ್ನ ಕತ್ತರಿಸದೇ ವನ್ಯಜೀವಿಗಳ ದೈನಿಕ ಚಲನವಲನ ಚಟುವಟಿಕೆಗೆ ಭಂಗತಾರದೇ ಕೊರೆಯುವ ಯಂತ್ರಗಳನ್ನ ನಿರ್ವಹಿಸಬೇಕು. ಬೆಳಿಗ್ಗೆ ಒಂಭತ್ತಕ್ಕೆ ಶುರುಮಾಡಿ ಸಂಜೆ ಆರಕ್ಕೆ ಪೂರೈಸಬೇಕು. ಸ್ಥಳದಲ್ಲಿ ಯಾರೂ ವಾಸ್ತವ್ಯದ ಟೆಂಟ್ ಹಾಕುವಂತಿಲ್ಲ. ಮಳೆಗಾಲದಲ್ಲಿ ಸಮೀಕ್ಷೆ ನಿಲ್ಲಿಸಬೇಕು. ಶಿರಸಿಯ ಜೀವಶಾಸ್ತ್ರ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ದಿ ಕೇಂದ್ರದ ನಿರ್ದೇಶಕ ಡಾ.ಕೇಶವ ಕೊರ್ಸೆ ಅವರೇ ಹೇಳುವಂತೆ.

Anyway, I can only say that it is suicidal project… According to IISc experts, this region is landslide vulnerable. And ecologists say that this lower reaches is the home of rare Wildlife. So digging earth in such a fragile zone is ecologically disastrous and economically illogical endeavour. May better sense prevail upon the govt to drop this project.

ನೋಡುವುದಕ್ಕೆ ಬಹಳ ಸರಳ ಮತ್ತು ಹೌದಲ್ಲ ವ್ಯರ್ಥವಾಗಿ ಸಮುದ್ರ ಸೇರುವ ನೀರನ್ನು ವಿದ್ಯುತ್ ಉತ್ಪಾದನೆಗೆ ಬಳಸಬಹುದಲ್ಲ? ಎಂದು ಕುಶಲಮತಿಗಳಂತೆ ಸರಿ ಎನ್ನಬಹುದು. ಆದರೆ ಅಷ್ಟು ಹಸಿರುಹೊದ್ದು ನಿಸರ್ಗವೇ ನಿರ್ಮಿಸಿದ ಅರಣ್ಯದ ಮೇಲ್ಮೈ ಮತ್ತೆ ನೈಜವಾಗಿ ಬೆಳೆದೀತೆ? ಮತ್ತೆ ಮನುಷ್ಯರ ಹಾವಳಿಯಿಂದ ಅಲ್ಲಿನ ಸಸ್ಯ ವನ್ಯ ಸೂಕ್ಷ್ಮಾತಿಸೂಕ್ಷ್ಮ ಜೀವಿಗಳ ಉಳಿವು ಅಳಿವಿನ ಪ್ರಶ್ನೆಯೂ ಆಗಿದೆ.

(ಲೇಖನ ಸಿದ್ಧಪಡಿಸುವಲ್ಲಿ ಆಕರ ಮಾಹಿತಿ ನೀಡಿದ ಮಿತ್ರರಿಗೆಲ್ಲ ಕೃತಜ್ಞತೆಗಳು)


Get In Touch With Us info@kalpa.news Whatsapp: 9481252093

Tags: JogKannadaNewsWebsiteLatestNewsKannadaPower GenerationSanctuarySharavathi RiverShivamoggaTalakalale Damಅಭಯಾರಣ್ಯಗೇರುಸೊಪ್ಪ ಜಲಸಂಗ್ರಹಾಲಯತಲಕಳಲೆ ಡ್ಯಾಂವಿದ್ಯುತ್ ಉತ್ಪಾದನೆಶರಾವತಿಸಸ್ಯವನ್ಯ
Share207Tweet123Send
Previous Post

ಬೈಕ್’ಗಳ ನಡುವೆ ಭೀಕರ ಅಪಘಾತ: ತಂದೆ ಮಗಳು ಸಾವು

Next Post

ನೆಲಗುಳಿ ಫಾರಂ ಹೌಸ್’ನಲ್ಲಿ ನಟ ಚಿರಂಜೀವಿ ಸರ್ಜಾ ಅಂತ್ಯಸಂಸ್ಕಾರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನೆಲಗುಳಿ ಫಾರಂ ಹೌಸ್’ನಲ್ಲಿ ನಟ ಚಿರಂಜೀವಿ ಸರ್ಜಾ ಅಂತ್ಯಸಂಸ್ಕಾರ

ನೆಲಗುಳಿ ಫಾರಂ ಹೌಸ್’ನಲ್ಲಿ ನಟ ಚಿರಂಜೀವಿ ಸರ್ಜಾ ಅಂತ್ಯಸಂಸ್ಕಾರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

ಯುವತಿಗೆ ಉಪಟಳ | ಅಕ್ಕ ಪಡೆ ಸಿಬ್ಬಂದಿಯಿಂದ ಆರೋಪಿ ವಶಕ್ಕೆ | ಪ್ರಕರಣ ದಾಖಲು

March 4, 2026
​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

​ಹುಬ್ಬಳ್ಳಿ | ಬಂಜಾರ ಕಾಲೋನಿಯಲ್ಲಿ ಸಡಗರದ ಹೋಳಿ ಆಚರಣೆ

March 4, 2026
ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

ಬಿಜೆಪಿ ಮುಖಂಡ ಸತೀಶ್ ಪ್ರಭು ನಿಧನಕ್ಕೆ ಸಂಸದ ಕ್ಯಾ. ಚೌಟ ಸಂತಾಪ

March 4, 2026
ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

ಡಿಸೆಂಬರ್ ನಲ್ಲಿ ಡಾ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣ ಲೋಕಾರ್ಪಣೆ: ಐಕಳ ಹರೀಶ್ ಶೆಟ್ಟಿ

March 4, 2026
ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರದೊಂದಿಗೆ ಮಾತುಕತೆ: ವಿಜಯೇಂದ್ರ ಭರವಸೆ

March 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL