No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ನಿಮ್ಮ ಮಗುವಿಗೆ ನಾಲಿಗೆ ಒತ್ತಡದ ಸಮಸ್ಯೆ ಬಾಧಿಸುತ್ತಿದೆಯೇ? ಇಲ್ಲಿದೆ ಪರಿಹಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 17, 2022
in Special Articles
0
ನಿಮ್ಮ ಮಗುವಿಗೆ ನಾಲಿಗೆ ಒತ್ತಡದ ಸಮಸ್ಯೆ ಬಾಧಿಸುತ್ತಿದೆಯೇ? ಇಲ್ಲಿದೆ ಪರಿಹಾರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ಸುಂದರವಾಗಿ ಕಾಣಲು ಯಾರಿಗೆ ತಾನೆ ಇಷ್ಟವಿರುವುದಿಲ್ಲ ಹೇಳಿ? ಆದರೆ, ಸುಂದರವಾಗಿ ಕಾಣಲು ಮುಖ್ಯವಾಗಿ ಅಂದವಾದ ದಂತಪಂಕ್ತಿಗಳಿರಬೇಕು. ಹಾಗಾಗಿಯೇ ಇಂದಿನ ಬಹುತೇಕ ಹದಿ ಹರೆಯದ ಮಕ್ಕಳು ಸಮರ್ಪಕವಾದ ದಂತಪಂಕ್ತಿಗಳಿಗಾಗಿ ಹಲ್ಲುಗಳ ಮೇಲೆ ಲೋಹದ ತಂತಿಗಳನ್ನು ಹಾಕಿಸಿಕೊಂಡಿರುವುದನ್ನು ನಾವು ಎಲ್ಲೆಡೆ ಕಾಣುತ್ತೇವೆ.

ಮಕ್ಕಳು ದೊಡ್ಡವರಾಗುತ್ತಾ ಯಾವ ಹಂತದಲ್ಲಿ ಈ ಬಗೆಯ ದೋಷಪೂರಿತ ದಂತಪಂಕ್ತಿಗಳಿಗೆ ಗುರಿಯಾಗುತ್ತಾರೆ ಎಂಬುದು ಹೆಚ್ಚಿನ ಪೋಷಕರಿಗೆ ತಿಳಿಯುವುದಿಲ್ಲ. ಸಮಸ್ಯೆ ಗೊತ್ತಾಗುವ ಹೊತ್ತಿಗೆ ಅದು ತೀವ್ರ ಸ್ವರೂಪದ್ದಾಗಿರುತ್ತದೆ. ಸಮಸ್ಯೆ ತೀವ್ರ ಸ್ವರೂಪದ್ದಾದಾಗ ಅದನ್ನು ಸರಿಪಡಿಸಲು ದೀರ್ಘಾವಧಿಯ ಚಿಕಿತ್ಸೆಯೇ ಬೇಕಾಗುತ್ತದೆ. ಕೆಲವೊಮ್ಮೆ ಮುಂದಕ್ಕೆ ಉಬ್ಬಿರುವ ದವಡೆಯನ್ನು ಸರಿ ಪಡಿಸಲು ದವಡೆಯ ಶಸ್ತ್ರಚಿಕಿತ್ಸೆಯನ್ನೇ ಮಾಡಬೇಕಾಗುತ್ತದೆ. ಆದರೆ, ದೋಷವನ್ನು ಮೊದಲೇ ಗುರುತಿಸಿದರೆ ಚಿಕಿತ್ಸೆಯು ಸರಳ ಹಾಗೂ ಅಲ್ಪಾವಧಿಯದಾಗಿರುತ್ತದೆ.
ಹುಟ್ಟಿದ ಮಕ್ಕಳು ತಾಯಿಯ ಹಾಲನ್ನು ನುಂಗುವಾಗ ಸ್ವಲ್ಪ ಮಟ್ಟಿಗೆ ನಾಲಿಗೆಯನ್ನು ಮುಂಚಾಚಿ, ಮೇಲ್ದವಡೆಯ ಮೇಲೆ ಒತ್ತಡವನ್ನು ಹಾಕುವುದು ಸಾಮಾನ್ಯ. ಆರು ತಿಂಗಳು ತುಂಬುವ ಹೊತ್ತಿಗೆ ಶೇಕಡ ಮೂವತ್ತರಿಂದ ನಲವತ್ತರಷ್ಟು ಮಕ್ಕಳಲ್ಲಿ ಈ ಅಭ್ಯಾಸವು ಕ್ರಮೇಣ ಕಡಿಮೆಯಾಗುತ್ತಾ ಹೋಗುತ್ತದೆ. ಆದರೆ, ಕೆಲವು ಮಕ್ಕಳಲ್ಲಿ ಈ ಅಭ್ಯಾಸವು ಇನ್ನೂ ಹಲವಾರು ವರ್ಷಗಳವರೆಗೆ ಮುಂದುವರೆಯಬಹುದು. ಕೆಲವು ಮಕ್ಕಳು ನುಂಗುವಾಗ ಮಾತ್ರ ನಾಲಿಗೆಯನ್ನು ಮುಂಚಾಚಿದರೆ, ಇನ್ನು ಕೆಲವು ಮಕ್ಕಳು ಮಾತನಾಡುವಾಗ ಹಾಗೂ ಸುಮ್ಮನೆ ಇದ್ದಾಗಲೂ ನಾಲಿಗೆಯಿಂದ ಮೇಲ್ದವಡೆಯ ಮೇಲೆ ಒತ್ತಡವನ್ನು ಹಾಕುವ ಅಭ್ಯಾಸವನ್ನು ಮಾಡಿಕೊಂಡಿರುತ್ತಾರೆ.

ಮಗು ಈ ರೀತಿಯ ಅಭ್ಯಾಸವನ್ನು ರೂಢಿಸಿಕೊಳ್ಳಲು ಕಾರಣಗಳೇನು ?

  • ಮಗುವಿಗೆ ಎರಡು ವರ್ಷ ತುಂಬಿದ ಬಳಿಕವೂ ಎದೆ ಹಾಲುಣಿಸಿದಾಗ
  • ಮಕ್ಕಳಿಗೆ ಸದಾ ಹೆಬ್ಬೆರಳು ಚೀಪುವ ಅಭ್ಯಾಸವಿದ್ದಾಗ
  • ಮಗುವಿನ ನಾಲಿಗೆಯು ಗಾತ್ರದಲ್ಲಿ ಸಾಮಾನ್ಯಕ್ಕಿಂತಲೂ ದೊಡ್ಡದಿದ್ದಾಗ
  • ಗಂಟಲಿನ ಒಳಭಾಗಲ್ಲಿರುವ ಟಾನ್ಸಿಲ್/ಅಡೆನಾಯ್ಡ್ ಗ್ರಂಥಿಗಳು ಗಾತ್ರದಲ್ಲಿ ದೊಡ್ಡದಾಗಿದ್ದಾಗ
  • ಮಗುವಿನ ಬಾಯಿ ಹಾಗೂ ಮುಖದ ಮಾಂಸಖಂಡಗಳ ನಡುವೆ ಅಸಮತೋಲನವಿದ್ದಾಗ
  • ಮಗುವಿನ ಬಾಯಿಯನ್ನು ಪೂರ್ತಿಯಾಗಿ ಮುಚ್ಚುವುದರಲ್ಲಿ ದೋಷವಿದ್ದಾಗ
  • ಮಗುವಿಗೆ ಬಾಯಿಯಲ್ಲಿ ಉಸಿರಾಡುವ ಅಭ್ಯಾಸವಿದ್ದಾಗ
  • ಅಲರ್ಜಿ, ಮತ್ತಿತರ ಕಾರಣಗಳಿಂದಾಗಿ ಮೂಗಿನ ಒಳಭಾಗದಲ್ಲಿ ಉರಿಯೂತವಿದ್ದಾಗ

ಆದರೆ ಮಗುವಿಗೆ ನಾಲ್ಕು ವರ್ಷ ತುಂಬಿದ ಮೇಲೆಯೂ ಮುಂದುವರೆಯುವ ಈ ಅಭ್ಯಾಸವು ಮುಂದೆ ಹಲವಾರು ಬಗೆಯ ದಂತ ದೋಷಗಳಿಗೆ ಕಾರಣವಾಗಬಹುದು. ಏಕೆಂದರೆ, ಜೀವಿಯು ಪ್ರತಿ ದಿನಕ್ಕೆ ಸುಮಾರು 1200 ರಿಂದ 2000 ಬಾರಿ ನುಂಗುವ ಪ್ರಕ್ರಿಯೆಯಲ್ಲಿ ತೊಡಗುತ್ತದೆ. ಪ್ರತಿ ಬಾರಿ ನುಂಗುವಾಗ ನಾಲಿಗೆಯನ್ನು ಕೊಂಚ ಮುಂದೆ ಚಾಚುವುದರಿಂದ ಅದು ಹಲ್ಲು ಹಾಗೂ ದವಡೆಗಳ ಮೇಲೆ ಪ್ರಬಲವಾದ ಒತ್ತಡವನ್ನು ಬೀರುತ್ತದೆ. ಹೀಗಾದಾಗ ಹಲ್ಲುಗಳು ಮುಂದೂಡಲ್ಪಡುತ್ತವೆ. ಅಷ್ಟೇ ಅಲ್ಲ, ಹುಟ್ಟುವ ಶಾಶ್ವತ ಹಲ್ಲುಗಳ ಗಾತ್ರ ಹಾಗೂ ಜೋಡಣೆಯಲ್ಲೂ ವ್ಯತ್ಯಾಸವಾಗುತ್ತದೆ.
ಪ್ರಾಥಮಿಕ ಹಂತಗಳಲ್ಲಿಯೇ, ಅಂದರೆ ಮಗು ಆರೇಳು ವರ್ಷದ್ದಿರಬೇಕಾದರೆ, ಅಂದರೆ ಶಾಶ್ವತ ಹಲ್ಲುಗಳು ಹುಟ್ಟುವ ಮೊದಲೇ ಈ ಅಭ್ಯಾಸವನ್ನು ಗುರುತಿಸಿ, ನಿಯಂತ್ರಿಸದೇ ಇದ್ದಲ್ಲಿ ಮುಂದೆ ಮಗುವಿನಲ್ಲಿ ವಿವಿಧ ಬಗೆಯ ದಂತ ದೋಷಗಳು ಕಾಣಿಸಿಕೊಳ್ಳಬಹುದು.

ಕಾಣಿಸಿಕೊಳ್ಳಬಹುದಾದ ದಂತ ದೋಷಗಳು ಯಾವುವು?

  • ಮಧ್ಯದ ಬಾಚಿ ಹಲ್ಲುಗಳು ಸಾಮಾನ್ಯಕ್ಕಿಂತಲೂ ಹೆಚ್ಚು ಅಗಲವಾಗಿ ಹುಟ್ಟಬಹುದು
  • ಮೇಲ್ದವಡೆ/ಕೆಳದವಡೆಯ ಮಧ್ಯ ಅಂತರ ಉಂಟಾದಾಗ
  • ಇದರಿಂದ ಬಾಯಿಯನ್ನು ಪೂರ್ಣ ಮುಚ್ಚಲು ಸಾಧ್ಯವಾಗದೆ ಇರಬಹುದು
  • ಹಲ್ಲುಗಳು ಮುಂದಕ್ಕೆ ಬಂದಂತಾಗಬಹುದು
  • ಪರಸ್ಪರ ಹಲ್ಲುಗಳ ನಡುವೆ ಅಂತರ ಹೆಚ್ಚಾಗಬಹುದು
  • ಅಸಮರ್ಪಕವಾದ ಹಲ್ಲುಗಳ ಜೋಡಣೆ
  • ಸಣ್ಣದಾದ ಹಾಗೂ ಜೋತು ಬಿದ್ದಿರುವ ಮೇಲ್ದುಟಿ
  • ಮಾತನಾಡಲು ತೊದಲಬಹುದು, ಕೆಲವು ಅಕ್ಷರ ಉಚ್ಛರಿಸಲು ಮಗು ಕಷ್ಟ ಪಡಬಹುದು

ಈ ರೀತಿಯ ತೊಂದರೆಯನ್ನು ಸರಿಪಡಿಸಲು ದಂತ ಮೂಳೆ ತಜ್ಞರು ಸಹಾಯ ಮಾಡುತ್ತಾರೆ. ಆದರೆ, ಈ ರೀತಿಯ ಚಿಕಿತ್ಸೆಯು ಸಾಮಾನ್ಯವಾಗಿ ದೀರ್ಘಾವಧಿಯದ್ದಾಗಿರುತ್ತದೆ.
ಆದರೆ ಮಕ್ಕಳ ನಾಲಿಗೆ ಒತ್ತಡದ ಅಭ್ಯಾಸವನ್ನು ಮೊದಲ ಹಂತಗಳಲ್ಲಿಯೇ ಗುರುತಿಸಿದರೆ ಮುಂದಾಗುವ ದಂತ ದೋಷಗಳನ್ನು ತಡೆಯಬಹುದು. ಹಾಗಾಗಿಯೇ, ನಿಮ್ಮ ಮಕ್ಕಳಿಗೆ ಐದರಿಂದ ಆರು ವರ್ಷ ತುಂಬುವಾಗ ಅವರನ್ನು ಸೂಕ್ಷ್ಮವಾಗಿ ಗಮನಿಸಿ. ಮಕ್ಕಳು ನುಂಗುವಾಗ ಅಥವಾ ಮಾತನಾಡುವಾಗ ಅಥವಾ ಸಾಮಾನ್ಯ ಸ್ಥಿತಿಯಲ್ಲಿಯೂ ನಾಲಿಗೆಯನ್ನು ಮುಂಚಾಚಿ, ದವಡೆಯ ಮೇಲೆ ಒತ್ತಡ ಹಾಕುತ್ತಿದ್ದರೆ, ಕೂಡಲೇ ಹತ್ತಿರದ ದಂತ ವೈದ್ಯರಲ್ಲಿ ಸಲಹೆ ಪಡೆಯಿರಿ. ಮಕ್ಕಳ ದಂತ ವೈದ್ಯರು ಹಲವು ತಪಾಸಣೆಗಳ ಮೂಲಕ ಮಗುವಿನ ಸಮಸ್ಯೆಯ ಬಗೆ, ತೀವ್ರತೆ ಹಾಗೂ ಜೊತೆಯಲ್ಲಿಯೇ ಇರಬಹುದಾದ ಇತರ ದೋಷಗಳನ್ನು ಕಂಡು ಹಿಡಿದು ಧೃಡ ಪಡಿಸಿಕೊಳ್ಳುತ್ತಾರೆ ಹಾಗೂ ಸೂಕ್ತ ಚಿಕಿತ್ಸೆಯನ್ನು ಸೂಚಿಸುತ್ತಾರೆ.

ಸೂಚಿಸಬಹುದಾದ ಚಿಕಿತ್ಸೆಗಳು ಯಾವುವು ?

  • ಮಕ್ಕಳಿಗೆ ಸರಿಯಾದ ನುಂಗುವ ಕ್ರಮವನ್ನು ತಿಳಿ ಹೇಳಿ ಅದನ್ನು ರೂಢಿ ಮಾಡಿಸುವುದು
  • ಕೆಳ ದವಡೆಯ ಮಾಂಸ ಖಂಡಗಳು ಬಲಗೊಳ್ಳಲು ಕೆಲ ಬಗೆಯ ಸರಳ ವ್ಯಾಯಾಮಗಳನ್ನು ಹೇಳಿ ಮಾಡಿಸುವುದು
  • ನಾಲಿಗೆಯ ಸಮರ್ಪಕ ಚಲನೆಗಾಗಿ ಕೆಲವು ಸರಳ ವ್ಯಾಯಾಮಗಳನ್ನು ರೂಢಿಸುವುದು

ಬಾಯಿಯ ಒಳಗೆ ಇರಿಸಬಹುದಾದ ಸರಳ ಸಾಧನಗಳ ಬಳಕೆ: ಈ ಸಾಧನಗಳು ನುಂಗುವ ಸಂದರ್ಭದಲ್ಲಿ ನಾಲಿಗೆಯು ಮುಂದೆ ಚಾಚದಂತೆ ತಡೆಯುತ್ತವೆ. ಇವುಗಳಲ್ಲಿ ಕೆಲವು ಸಾಧನಗಳನ್ನು ಕೇವಲ ರಾತ್ರಿ ವೇಳೆಯೂ, ಇನ್ನು ಕೆಲವನ್ನು ದಂತ ವೈದ್ಯರ ಸಲಹೆಯ ಮೇರೆಗೆ ಸಮಸ್ಯೆ ಸರಿ ಹೋಗುವವರೆಗೆ ಶಾಶ್ವತವಾಗಿ ಬಾಯಿಯಲ್ಲಿಯೇ ಇರಿಸಬಹುದು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Adenoid glandBrush teethDr. Vinaya SrinivasHealth ArticleJawKannada News WebsiteLatest News KannadaShimogaShivamoggaShivamogga NewsShivamogga Subbaiah Medical CollegeSpecial ArticleTonsilಅಡೆನಾಯ್ಡ್ ಗ್ರಂಥಿಟಾನ್ಸಿಲ್ದಂತಪಂಕ್ತಿದವಡೆಬಾಚಿ ಹಲ್ಲುವಿಶೇಷ ಲೇಖನಶಿವಮೊಗ್ಗ
Share197Tweet123Send
Previous Post

ಗಮನಿಸಿ! ಈ ಎರಡು ದಿನ ಶಿವಮೊಗ್ಗ ನಗರದಲ್ಲಿ ನೀರು ಸರಬರಾಜು ಇರುವುದಿಲ್ಲ

Next Post

ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರದಿಂದ ಬರಲಿದೆ 7 ತಜ್ಞರ ತಂಡ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭ್ರಷ್ಟರ ರಕ್ಷಣೆಗೆ ಕಾಂಗ್ರೆಸ್ ನಾಯಕರ ಪ್ರಯತ್ನ: ಗೃಹ ಸಚಿವ ಆರಗ ಜ್ಞಾನೇಂದ್ರ ವಾಗ್ದಾಳಿ

ಎಲೆಚುಕ್ಕೆ ರೋಗದ ಅಧ್ಯಯನಕ್ಕೆ ಕೇಂದ್ರದಿಂದ ಬರಲಿದೆ 7 ತಜ್ಞರ ತಂಡ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

March 25, 2026
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

March 25, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

March 25, 2026
ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

ಡಾ. ಸಮೀಕ್ಷಾ ರೆಡ್ಡಿ ಸಾವು | ಉನ್ನತ ಮಟ್ಟದ ತನಿಖೆಗೆ ಶಾಸಕ ಚನ್ನಬಸಪ್ಪ ಆಗ್ರಹ 

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL