No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
  • Advertise With Us
  • Grievances
  • About Us
  • Contact Us
Friday, September 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಐಟಿ ವೃತ್ತಿಪರರ ವರ್ಕ್‌ ಫ್ರಮ್‌ ಹೋಮ್‌ ಜುಲೈ 31ರವರೆಗೆ ವಿಸ್ತರಣೆ

kalpa News by kalpa News
April 28, 2020
in ರಾಷ್ಟ್ರೀಯ
0
Share on FacebookShare on TwitterShare on WhatsApp

ಬೆಂಗಳೂರು: ಕೊವಿಡ್‌ ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೊರೊನಾ ಲಾಕ್ ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್​ ಪ್ರಸಾದ್​ ಅವರು ಈ ವಿಷಯ ಪ್ರಕಟಿಸಿದ್ದಾರೆ.

ಲಾಕ್ ಡೌನ್ ಬಳಿಕ ರಾಜ್ಯ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು, ಕಂಡುಕೊಂಡಿರುವ ಪರಿಹಾರಗಳು ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಸಿ.ಎನ್ ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್‌ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸದ್ಯ ಜುಲೈ 31ರ ವರೆಗೆ ವರ್ಕ್‌ ಫ್ರಮ್‌ ಹೋಂ ಸೌಲಭ್ಯ ವಿಸ್ತರಣೆ ಮಾಡಲಾಗುವುದು. ಪರಿಸ್ಥಿತಿ ನೋಡಿಕೊಂಡು ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಐಟಿ ವಲಯ ಸದ್ಯ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ರಾಜ್ಯದ ಐಟಿ ವೃತ್ತಿಪರರ ಜತೆ ಪ್ರತ್ಯೇಕ ವೀಡಿಯೋ ಕಾನ್ಫರೆನ್ಸ್‌ ನಡೆಸಬೇಕೆಂಬ ಡಾ. ಅಶ್ವತ್ಥನಾರಾಯಣ ಅವರ ಕೋರಿಕೆಗೂ ಸಕಾರಾತ್ಮಕವಾಗಿ ಸ್ಪಂದಿಸಿದ ರವಿ ಶಂಕರ್‌ ಪ್ರಸಾದ್‌, ಶೀಘ್ರದಲ್ಲೇ ವೀಡಿಯೋ ಕಾನ್ಫರೆನ್ಸ್‌ ನಡೆಸುವ ಭರವಸೆ ನೀಡಿದರು.

ಕಾರ್ಯ ತಂತ್ರ ಸಮಿತಿ
“ಕೊವಿಡ್‌ನಂಥ ಪರಿಸ್ಥಿತಿ ಎದುರಾದಾಗ ಐಟಿ ಹಾಗೂ ಸಂಬಂಧಿತ ವಲಯಗಳು ಯಾವ ರೀತಿ ಕಾರ್ಯ ನಿರ್ವಹಿಸಬೇಕು. ವಿಪತ್ತಿನ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ, ಪರಿಹಾರ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ರಾಷ್ಟ್ರ ಮಟ್ಟದ ಕಾರ್ಯತಂತ್ರ ಸಮಿತಿ ರಚಿಸಲಾಗುವುದು,” ಎಂದು ಕೆಂದ್ರ ಸಚಿವರು ತಿಳಿಸಿದರು.

“ಐಟಿ ವಲಯ ಮಾತ್ರವಲ್ಲದೆ, ಎಲ್ಲ ರಾಜ್ಯಗಳು ಅನ್ವೇಷಣೆ, ಸ್ಟಾರ್ಟ್‌ಅಪ್‌ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇ-ಆಡಳಿತ, ಇ-ಪಾಸ್‌ಗಳ ಪರಿಣಾಮಕಾರಿ ಜಾರಿಗೆ ಗಮನ ಹರಿಸಲಾಗುವುದು. ಜತೆಗೆ, ಕೊವಿಡ್‌ ಸಮಸ್ಯೆ ಎದುರಾದಾಗಿನಿಂದ ಬಹುತೇಕ ಎಲ್ಲ ವಲಯಗಳ ಕೆಲಸದ ರೀತಿ ನೀತಿ ಬದಲಾಗಿದ್ದು, ಶೇ. 80ರಷ್ಟು ಐಟಿ ವೃತ್ತಿಪರರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಎಲ್ಲ ಕೆಲಸ ಕಾರ್ಯಗಳು ಆನ್‌ಲೈನ್‌ ಮೂಲಕವೇ ನಡೆಯುತ್ತಿದೆ. ಇದಕ್ಕೆ ಅನುಕೂಲವಾಗುವಂತೆ ಭಾರತ್‌ ನೆಟ್‌ ಯೋಜನೆ ಮೂಲಕ ದೇಶದ ಮೂಲೆಮೂಲೆಗೂ ಇಂಟರ್ನೆಟ್‌ ಸಂಪರ್ಕ ಜಾಲ ಬಲಪಡಿಸಲಾಗುತ್ತದೆ ,” ಎಂದು ರವಿ ಶಂಕರ್‌ ಪ್ರಸಾದ್‌ ಹೇಳಿದರು.

ಮೇಕ್‌ ಇನ್‌ ಇಂಡಿಯಾ
“ಮೇಕ್‌ ಇನ್‌ ಇಂಡಿಯಾ ಯೋಜನೆಗಳ ಕಾರ್ಯರೂಪಕ್ಕೆ ಇದು ಸಕಾಲ. ಕೊವಿಡ್‌ ನಂತರದಲ್ಲಿ ದೇಶದ ಆರ್ಥಿಕತೆಯ ಪುನಶ್ಚೇತನಕ್ಕೆ ಮೇಕ್‌ ಇನ್‌ ಇಂಡಿಯಾ ಯೋಜನೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ನಾವು ತಕ್ಕ ಮಟ್ಟಿನ ಯಶಸ್ಸು ಪಡೆದಿದ್ದರೂ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವುದಕ್ಕೂ ಮೊದಲು ದೇಶದಲ್ಲಿ ಇದ್ದ ಮೊಬೈಲ್‌ ಉತ್ಪಾದಕ ಸಂಸ್ಥೆಗಳ ಸಂಖ್ಯೆ 2 ರಿಂದ 268ಕ್ಕೆ ಏರಿದೆ. ಮೇಕ್‌ ಇನ್‌ ಇಂಡಿಯಾ ಯೋಜನೆ ಯಶಸ್ಸಿಗೆ ಇದು ಅತ್ಯುತ್ತಮ ಉದಾಹರಣೆ,” ಎಂದು ವಿವರಿಸಿದರು.

ಆನ್‌ಲೈನ್‌ ಆರೋಗ್ಯ ಸೇವೆ
“ಕೊವಿಡ್‌ ನಂತರ ಆರೋಗ್ಯ ಸೇವೆಯಲ್ಲೂ ತಂತ್ರಜ್ಞಾನದ ಬಳಕೆ ಹೆಚ್ಚಿದ್ದು ಆನ್‌ಲೈನ್ ಆರೋಗ್ಯ ವ್ಯವಸ್ಥೆಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕ ಸೇರಿಂದಂತೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಆನ್‌ಲೈನ್‌ ಆರೋಗ್ಯ ಸೇವೆ ಉತ್ತಮವಾಗಿದ್ದು, ಇತರ ರಾಜ್ಯಗಳಲ್ಲೂ ಇದು ವಿಸ್ತರಣೆ ಆಗಬೇಕು,” ಎಂದರು.

ಆಪ್ತ ಮಿತ್ರ ಹೆಲ್ಪ್‌ಲೈನ್‌
ಶಿಕ್ಷಣ, ಅಗತ್ಯ ವಸ್ತುಗಳ ಪೂರೈಕೆ ಮುಂತಾದ ಹಲವು ಕಾರ್ಯಗಳಲ್ಲಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂಬುದನ್ನು ಡಾ. ಅಶ್ವತ್ಥನಾರಾಯಣ ವೀಡಿಯೋ ಕಾನ್ಫರೆನ್ಸ್‌ನಲ್ಲಿ ವಿವರಿಸಿದರು.

“500ಕ್ಕೂ ಹೆಚ್ಚು ವೃತ್ತಿಪರರು ‘ಆಪ್ತ ಮಿತ್ರ ಹೆಲ್ಪ್‌ಲೈನ್‌’ನ ಕಾಲ್‌ ಸೆಂಟರ್‌ನಲ್ಲಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ನಿತ್ಯ ಸುಮಾರು 50 ಸಾವಿರ ಕರೆಗಳನ್ನು ಸ್ವೀಕರಿಸಿ, ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಇ-ಕಾಮರ್ಸ್‌ಗೆ ಪರ್ಯಾಯವಾದ ವ್ಯವಸ್ಥೆ ಕಂಡುಕೊಂಡಿದ್ದು, ರೆಡ್‌ಜೋನ್‌ನಲ್ಲಿರುವ ಜನ ಮನೆಯಿಂದ ಹೊರ ಬರುವ ಅಗತ್ಯ ಬಾರದಂತೆ ಎಲ್ಲ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಆಗುತ್ತಿದೆ. ದಿನಸಿ, ಹಾಲು, ಔಷಧ, ತರಕಾರಿ ಮುಂತಾದ ವಸ್ತುಗಳನ್ನು ಮನೆಗೆ ತಲುಪಿಸಲು ವಿಧಿಸುತ್ತಿರುವ ದರ ಕೇವಲ 10 ರೂಪಾಯಿ. ಒಂದೇ ರೀತಿಯ ಸೇವೆ (ಪರಿಹಾರ ಸಾಮಗ್ರಿಗಳು) ಬೇರೆ ಬೇರೆ ಇಲಾಖೆಗಳಿಂದ ಪುನರಾವರ್ತನೆ ಆಗದಂತೆ ತಡೆಯಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ,” ಎಂದು ಉಪಮುಖ್ಯಮಂತ್ರಿ ತಿಳಿಸಿದರು.

(ವರದಿ: ಡಿ.ಎಲ್. ಹರೀಶ್, ಬೆಂಗಳೂರು)

Get in Touch With Us info@kalpa.news Whatsapp: 9481252093

Tags: CoronavirusCovid19IndiaIndiaLockDownInformation TechnologyIT ProfessionalKannadaNewsWebsiteLatestNewsKannadaMinister Ravishankar Prasadಐಟಿ ವಲಯಐಟಿ ವೃತ್ತಿಪರ
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಲಾಕ್’ಡೌನ್ ವೇಳೆಯಲ್ಲಿ ಮೊಮ್ಮಗಳೊಂದಿಗೆ ಆಡುತ್ತಿರುವ ಚಿರಂಜೀವಿಯನ್ನು ಮಗು ಕೇಳಿದ್ದೇನು ಗೊತ್ತಾ?

Next Post

ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆಗೆ ವಿನಾಯಿತಿ ನೀಡಲು ಡಿಸಿಎಂ ಸವದಿ ಕೇಂದ್ರಕ್ಕೆ ಮನವಿ

kalpa News

kalpa News

Next Post

ಟೋಲ್ ಗಳಲ್ಲಿ ಸರ್ಕಾರಿ ಸಾರಿಗೆಗೆ ವಿನಾಯಿತಿ ನೀಡಲು ಡಿಸಿಎಂ ಸವದಿ ಕೇಂದ್ರಕ್ಕೆ ಮನವಿ

Leave a Reply Cancel reply

Your email address will not be published. Required fields are marked *

No Result
View All Result
SWR hubballi-railway-fire-safety-training-emergency
English Articles

Fire Safety Training Held for Railway Officials and Staff in Hubballi

by kalpa News
September 10, 2026
0

Kalpa Media House  |  Hubballi | A practical training programme on Fire Safety and Emergency Management was organised for railway...

Read moreDetails
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL