No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
  • Advertise With Us
  • Grievances
  • About Us
  • Contact Us
Wednesday, September 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಜೈನಧರ್ಮ ಪ್ರಭಾವಕಿ, ಬಹುಮುಖ ಪ್ರತಿಭಾ ಸಾಧಕಿ ಡಾ. ನೀರಜಾ ನಾಗೇಂದ್ರಕುಮಾರ್

kalpa News by kalpa News
December 15, 2019
in Special Articles
0
ಜೈನಧರ್ಮ ಪ್ರಭಾವಕಿ, ಬಹುಮುಖ ಪ್ರತಿಭಾ ಸಾಧಕಿ ಡಾ. ನೀರಜಾ ನಾಗೇಂದ್ರಕುಮಾರ್
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನಮ್ಮ ಮಾತೃಭೂಮಿಗೆ ತನ್ನದೇ ಆದ ರೀತಿಯಲ್ಲಿ ಕೊಡುಗೆ ನೀಡಿರುವ ಜೈನಧರ್ಮದಲ್ಲಿ ಹಲವು ಸಾಧಕರು ಬೆಳಕಿಗೆ ಬಾರದೇ ಎಲೆಮರೆಯ ಕಾಯಿಯಂತೆ ತಮ್ಮ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಂತಹ ಜೈನ ಸಮುದಾಯದ ಓರ್ವ ಸಾಧಕಿಯೇ ನಮ್ಮ ಇಂದಿನ ಲೇಖನದ ಕೇಂದ್ರ ಬಿಂದು.

ಹೌದು… ಯಾವುದೇ ಪ್ರತಿಫಲಾಪೇಕ್ಷೆಯಿಲ್ಲದೆ ಕಾಯಾ-ವಾಚಾ-ಮನಸಾ ನಿಷ್ಕಲ್ಮಶ ಮನಃಸ್ಥಿತಿಯಿಂದ ಸದ್ದಿಲ್ಲದೆ ಸೇವಾ ಸಾಧನೆ ಮಾಡುತ್ತಿರುವ ಡಾ. ನೀರಜಾರವರು ಬಹುಮುಖ ಪ್ರತಿಭೆಯ ಗಣಿ ಎಂದರೂ ತಪ್ಪಾಗಲಾರದು.

ಈ ಸಾಧಕಿ ತಮ್ಮ ಪರಿಮಿತಿಯಲ್ಲಿ ಎಲ್ಲಾ ಧಾರ್ಮಿಕ ಸಾಮಾಜಿಕ ಕೆಲಸಗಳಿಗೆ ತಮ್ಮಿಂದಾದ ಸಹಕಾರ ಪ್ರೋತ್ಸಾಹ ನೀಡುವ ಇವರು ಜೈನ ಸಮುದಾಯದ ಮುಖ್ಯವಾಹಿನಿಯಲ್ಲಿ ಗುರುತಿಸಲ್ಪಡುವ ಮಹಿಳಾ ಸಾಧಕರಲ್ಲಿ ಇವರೂ ಒಬ್ಬರು.


ಜೈನ ಧಾರ್ಮಿಕ ವಿಚಾರಗಳಲ್ಲಿ ಯಾವ ವಿಷಯವನ್ನು ಕೊಟ್ಟರೂ ನಿರರ್ಗಳವಾಗಿ ಮಾತನಾಡುವ ಇವರು, ಜೈನಧರ್ಮವನ್ನು ಆಳವಾಗಿ ಅಧ್ಯಯನ ಮಾಡಿದವರು. ವೃತ್ತಿಯಲ್ಲಿ ವೈದ್ಯರಾಗಿ ಕೆಲಸ ನಿರ್ವಹಿಸುವುದರ ಜೊತೆಗೆ ಪ್ರವೃತ್ತಿಯಲ್ಲಿ ಉತ್ತಮ ಸಾಹಿತಿಯೂ ಹೌದು. ಕರ್ನಾಟಕ ವಿಶ್ವವಿದ್ಯಾನಿಲಯ ಧಾರವಾಡದ ಮನಃಶಾಸ್ತ್ರ ಪ್ರಾಧ್ಯಾಪಕರಾಗಿದ್ದ ಇವರ ತಂದೆ ಡಾ.ಧರಣೇಂದ್ರಯ್ಯ ಹಾಗೂ ತಾಯಿ ಧರ್ಮಕಾರ್ಯಗಳಲ್ಲಿ ಅತ್ಯಂತ ಉನ್ನತ ಮಟ್ಟದ ಕೆಲಸ ಮಾಡಿದ ಶ್ರೀಮತಿ ಕೌಶಲ್ಯ ಧರಣೆಂದ್ರ. ಪತಿ ನಾಗೇಂದ್ರಕುಮಾರ್ ಪತ್ನಿಯ ಎಲ್ಲಾ ಕೆಲಸಗಳಿಗೆ ಬೆಂಗಾವಲಾಗಿ ನಿಲ್ಲುತ್ತಾ ವೈದ್ಯರಾಗಿ ಬೆಂಗಳೂರಿನಲ್ಲಿ ಸ್ವಂತ ಚಿಕಿತ್ಸಾಲಯ ನಿರ್ವಹಿಸುತ್ತಿದ್ದಾರೆ.

ಡಾ. ನೀರಜಾರವರು ಉತ್ತಮ ಸಾಹಿತಿಯೂ ಹೌದು. ಜಿನದತ್ತರಾಯ ಚರಿತ್ರೆ ನೇಮಿನಾಥ ಪುರಾಣ ಎಂಬ ಎರಡು ಶ್ರೇಷ್ಠ ಅರ್ಥಪೂರ್ಣ ಕೃತಿಗಳನ್ನು ಕನ್ನಡಕ್ಕೆ ಅನುವಾದಿಸಿದ್ದಾರೆ. ಸಚ್ಚಾಯಿ ಜೀವನ್ ಕಿ ಎಂಬ ಮುನಿಶ್ರೀ ಚಿನ್ಮಯ ಸಾಗರ ಕವನವನ್ನು ಇಂಗ್ಲೀಷ್’ಗೆ ಭಾಷಾಂತರಿಸಿದ್ದಾರೆ. ದಿಗಂಬರ ಹಾಗೂ ದಿಗಂಬರತ್ವ ಕೃತಿಯನ್ನು ಹಿಂದಿ ಇಂಗ್ಲಿಷ್ ಬೇರೆ ಬೇರೆ ಭಾಷೆಗಳಿಗೆ ಭಾಷಾಂತರಿಸಿ ಭಾಷಾಂತರದಲ್ಲೂ ಪರಿಣಿತಿ ಪಡೆದುಕೊಂಡಿದ್ದಾರೆ. ಅದಷ್ಟೇ ಅಲ್ಲದೆ ಮುನಿಶ್ರೀ ಚಿನ್ಮಯಸಾಗರರ ಹಿಂದಿ ಕೃತಿಗಳನ್ನು ಪ್ರೇಮ ವಿವಾಹ ಮತ್ತು ಪರಿತಾಪಗಳು ಎನ್ನುವುದನ್ನೂ, ಮುನಿಶ್ರೀ ಆದಿತ್ಯಸಾಗರ ಮಹಾರಾಜರ ಝಾಣಜ್ಝಯಣ ಎಂಬ ಹಿಂದಿ ಕೃತಿಯನ್ನು ಕನ್ನಡಕ್ಕೆ ಭಾಷಾಂತರಿಸಿದ್ದಾರೆ.

ವೃತ್ತಿಯಲ್ಲಿ ವೈದ್ಯೆಯಾಗಿರುವ ಇವರು ವೈದ್ಯಕೀಯ ಮಾಹಿತಿಗೆ ಸಂಬಂಧಿಸಿದಂತೆ ಲೇಖನಗಳನ್ನು ಬರೆಯುದರ ಜೊತೆಗೆ ಇವರ ಆಧ್ಯಾತ್ಮಿಕ ವೈದ್ಯಕೀಯ ಭಾಷಣ ಆಕಾಶವಾಣಿ ಬೆಂಗಳೂರಿನಿಂದ ಬಿತ್ತರಗೊಂಡು ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.


ದೂರದರ್ಶನದ ಚಂದನ ವಾಹಿನಿಯಲ್ಲಿ ಇವರ ಉಪನ್ಯಾಸಗಳು ಪ್ರಸಾರಗೊಳ್ಳುದರ ಜೊತೆಗೆ ವಿಮಾನಪುರದ ಭ. ಮಹಾವೀರ ಜಿನಮಂದಿರದ ಮಹಾವೀರ ಸಂಘದ ಸಹಯೋಗದೊಂದಿಗೆ ಧಾರ್ಮಿಕ ಶಿಬಿರಗಳನ್ನು ನಡೆಸಿಕೊಟ್ಟಿದ್ದಾರೆ. ಜೈನ ಧರ್ಮದ ಪವಿತ್ರ ಪರ್ವ ದಶಲಕ್ಷಣ ಕಾಯಕ್ರಮಗಳಲ್ಲಿ ರಾಜ್ಯದಾದ್ಯಂತ ನೀಡಿದ ಉಪನ್ಯಾಸದಿಂದ ಬಹಳಷ್ಟು ಮಂದಿ ಪ್ರಭಾವಿತರಾಗಿದ್ದಾರೆ.

ಪಂಚಕಲ್ಯಾಣ ಮಹೋತ್ಸವಗಳಲ್ಲಿ ಇವರು ರಾಜ್ಯದ ವಿವಿಧ ಕಡೆ ಮತ್ತು ವೈನಾಡು,ಶಿಖರಜೀಯಲ್ಲಿ ಉಪನ್ಯಾಸ ನೀಡಿದ್ದು, 2015 ರ ಸೆಪ್ಟೆಂಬರ್’ನಲ್ಲಿ ನಡೆದ ಕರ್ನಾಟಕ ಜೈನ್ ಅಸೋಸಿಯೇಷನ್ ಕಾರ್ಯಕಾರಿ ಸಮಿತಿಗೆ ನಡೆದ ಚುನಾವಣೆಯಲ್ಲಿ ಸ್ಪರ್ಧಿಸಿ ಚುನಾಯಿತರಾಗಿದಷ್ಟೇ ಅಲ್ಲದೆ ಅಲ್ಲೂ ಧಾರ್ಮಿಕ ಕೆಲಸವನ್ನು ಶ್ರದ್ಧೆ ಮತ್ತು ನಿಷ್ಠೆಯಿಂದ ಮಾಡಿ ಸೈ ಎನಿಸಿಕೊಂಡಿದ್ದಾರೆ.

ವೈದ್ಯಕೀಯ ಸೇವಾ ಕೆಲಸದಲ್ಲೂ ಪತಿ ಡಾ. ನಾಗೇಂದ್ರ ಕುಮಾರ್ ಅವರೊಡನೆ ಅನೇಕ ಉಚಿತ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಶಿಬಿರಗಳನ್ನು ಏರ್ಪಡಿಸಿ ಜನ ಮೆಚ್ಚುಗೆ ಪಡೆದಿದ್ದಾರೆ.


ಭಾರತದ ವಿಶೇಷ ಭೂಮಿ ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಮಹಾಮಸ್ತಕಾಭಿಷೇಕದ ಪ್ರಯುಕ್ತವಾಗಿ ನಡೆದ ಜಿನಭಜನಾ ಸ್ಪರ್ಧೆ ಗೊಮ್ಮಟ ಜಿನ ಭಕ್ತಿ ಗೀತಾಂಜಲಿಯ ಕನ್ವೀನರ್ ಆಗಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸಿದ್ದಾರೆ.

ನೀರಜಾರವರ ಕೆಲಸಗಳು ಇಲ್ಲಿಗೆ ಮುಗಿದಿಲ್ಲ.ಈಗಾಗಲೇ ಜನರ ಮೆಚ್ಚುಗೆಗೆ ಪಾತ್ರವಾಗಿರುವ ಇವರು, ಪ್ರತಿ ರವಿವಾರ ಬೆಳಗ್ಗೆ 7.15 ರಿಂದ 7.45 ರ ವರೆಗೆ ಚಂದನ ಟಿವಿಯಲ್ಲಿ ಬರುವ ರತ್ನತ್ರಯ ಎಂಬ ಧಾರ್ಮಿಕ ಧಾರಾವಾಹಿ ನಿರ್ಮಿಸುತ್ತಿರುವ ಪ್ರಥಮ ಜೈನ ಮಹಿಳಾ ನಿರ್ಮಾಪಕಿಯಾಗಿ ಕೆಲಸ ಮಾಡುತ್ತಿರುವ ಇವರು ಜೈನ ಧರ್ಮದ ಹೆಮ್ಮೆ.

ಪ್ರತಿಯೊಂದು ಕ್ಷೇತ್ರದಲ್ಲೂ ಆಡಂಬರವಿಲ್ಲದೆ ಸೇವಾ ಕೆಲಸ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಇವರು, ವೈದ್ಯಕೀಯ, ಧಾರ್ಮಿಕ, ಸಾಹಿತ್ಯ ಮತ್ತು ಸಮಾಜ ಸೇವೆಯಲ್ಲಿ ನಿರಂತರಾಗಿ ಸಮರ್ಪಣಾ ಭಾವದಿಂದ ಮಾಡುತ್ತಾ ಬಂದಿರುವುದು ವಿಶೇಷ.

ಸಂಘ ಸಂಸ್ಥೆಗಳಲ್ಲಿ ಇವರು ಮಾಡಿದ ಕೆಲಸಗಳು ಕಡಿಮೆಯೇನಿಲ್ಲ. ಸಾಲಿಗ್ರಾಮ ಜೈನ ಮಿತ್ರ ಮಂಡಳಿಯ ಉಪಾಧ್ಯಕ್ಷರಾಗಿ, ಸುಮೇರು ಜೈನ ಫೌಂಡೇಶನ್ ಅದರ ನಿಕಟ ಪೂರ್ವ ಉಪಾಧ್ಯಕ್ಷರಾಗಿ, ಜೈನ ಮಿಲನ್ ಈಸ್ಟ್‌ ಪೂರ್ವ ಅಧ್ಯಕ್ಷರಾಗಿ, ಕರ್ನಾಟಕ ಜೈನ್ ಅಸೋಸಿಯೇಷನ್’ನ ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ತಮ್ಮ ಸೇವೆಯನ್ನು ಸಲ್ಲಿಸುತ್ತಾ ಉತ್ತಮ ಕಾರ್ಯ ನಿರ್ವಹಿಸಿ ಎಲ್ಲರ ಪ್ರಶಂಸೆ ಗಳಿಸಿದ್ದಾರೆ. ಉತ್ತಮ ಲೇಖಕಿಯಾದ ಇವರು ಬ್ಭೂ ಮಾತು ಎಂಬ ಆನ್’ಲೈನ್ ಪತ್ರಿಕೆಯಲ್ಲಿ ಇವರ ಲೇಖನಗಳು ಪ್ರಕಟವಾಗಿ ಮಾಹಿತಿಯ ಕಣಜವಾಗಿವೆ. ಅಂತರ್ಜಾಲದ ಸ್ಪೀಕಿಂಗ್ ಟ್ರೀ ವೆಬ್’ಸೈಟ್’ನಲ್ಲಿ ಬರೆಯುತ್ತಿದ್ದಾರೆ.


ಇವರ ಈ ಎಲ್ಲ ಸೇವೆಗಳನ್ನು ಗುರುತಿಸಿ ಹಲವಾರು ಪ್ರಶಸ್ತಿಗಳು ಇವರನ್ನು ಹುಡುಕಿಕೊಂಡು ಬಂದಿವೆ. ಅದರಲ್ಲೂ ಪ್ರಮುಖವಾದವು ಕರ್ನಾಟಕ ಲೇಖಕಿಯರ ಸಂಘದ ಉದಯೋನ್ಮುಖ ಕವಿಯಿತ್ರಿ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ತಿನ ಕನ್ನಡ ಸೇವಾ ರತ್ನ ಪ್ರಶಸ್ತಿ, ಬುದ್ಧ ಶಾಂತಿ ಪ್ರಶಸ್ತಿ, ವಿಶ್ವೇಶ್ವರಯ್ಯ ಪ್ರಶಸ್ತಿಗಳು ಸಂದಿವೆ.

ಡಾ. ನೀರಜಾ ಜೈನಧರ್ಮದ ವಿಶೇಷ ಮಹಿಳಾ ಶಕ್ತಿ ಎಂದರೂ ತಪ್ಪಾಗಲಾರದು. ಸಾಮಾಜಿಕ, ಧಾರ್ಮಿಕ, ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಛಾಪು ಮೂಡಿಸಿ ನಿರಂತರವಾಗಿ ಕೆಲಸ ಮಾಡುತ್ತಾ ಬಂದಿರುವ ಇವರು ಸದಾ ಇನ್ನೊಬ್ಬರ ಕೆಲಸಗಳಿಗೆ ನಿಷ್ಕಲ್ಮಶ ಮನಸ್ಸಿನಿಂದ ಬೆಂಗಾವಲಾಗಿ ನಿಂತು ಸಹಕಾರ ನೀಡುತ್ತಿರುವ ಇವರ ಎಲ್ಲಾ ಕನಸುಗಳು ಸಾಕಾರಗೊಳ್ಳಲಿ. ದೂರದರ್ಶನ ಚಂದನ ವಾಹಿನಿಯಲ್ಲಿ ಇವರ ನೇತೃತ್ವದಲ್ಲಿ ಮೂಡಿಬರುತ್ತಿರುವ ರತ್ನತ್ರಯ ಧಾರಾವಾಹಿ ಸಾವಿರಾರು ಸಂಚಿಕೆಯನ್ನು ದಾಟಲಿ ಎನ್ನುವ ಆಶಯದೊಂದಿಗೆ…

Get in Touch With Us info@kalpa.news Whatsapp: 9481252093

Tags: Chandana channelDoctorDr. Neeraja NagendrakumarNeminath PuranaSpecial Articleಚಂದನ ವಾಹಿನಿಜೈನ ಧರ್ಮಡಾ. ನೀರಜಾ ನಾಗೇಂದ್ರಕುಮಾರ್ನೇಮಿನಾಥ ಪುರಾಣಭಾಷಾಂತರಮಹಾವೀರಮುನಿಶ್ರೀ ಚಿನ್ಮಯಸಾಗರ
Share220Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಹ ಪ್ರಾಧ್ಯಾಪಕ ರಘುನಾಥರ ಸಾಹಿತ್ಯ, ಶೈಕ್ಷಣಿಕ ಸಾಧನೆಗೆ ಒಲಿದ ಹಂಪಿ ವಿವಿ ಸಿಂಡಿಕೇಟ್ ಸದಸ್ಯ ಸ್ಥಾನ

Next Post

ದಾವಣಗೆರೆ ಜಿಲ್ಲೆಯಾದ್ಯಂತ ಮಿನುಗುತ್ತಿರುವ ಈ ಎರಡು ನಕ್ಷತ್ರಗಳು ಇಡಿಯ ದೇಶದ ಅಧಿಕಾರಿಗಳಿಗೆ ಮಾದರಿ

kalpa News

kalpa News

Next Post
ದಾವಣಗೆರೆ ಜಿಲ್ಲೆಯಾದ್ಯಂತ ಮಿನುಗುತ್ತಿರುವ ಈ ಎರಡು ನಕ್ಷತ್ರಗಳು ಇಡಿಯ ದೇಶದ ಅಧಿಕಾರಿಗಳಿಗೆ ಮಾದರಿ

ದಾವಣಗೆರೆ ಜಿಲ್ಲೆಯಾದ್ಯಂತ ಮಿನುಗುತ್ತಿರುವ ಈ ಎರಡು ನಕ್ಷತ್ರಗಳು ಇಡಿಯ ದೇಶದ ಅಧಿಕಾರಿಗಳಿಗೆ ಮಾದರಿ

Leave a Reply Cancel reply

Your email address will not be published. Required fields are marked *

No Result
View All Result
Indian Railways Nepalganj Bahraich Line Upgrade 730 Crore
English Articles

Indian Railways Boosts Nepal Border Connectivity With ₹730 Crore Bahraich Rail Project

by kalpa News
September 1, 2026
0

Kalpa Media House  |  Bahraich(Uttar Pradesh)  |  Indian Railways : Uttar Pradesh Chief Minister Yogi Adityanath, along with Union Minister...

Read moreDetails
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
SWR food-safety-drive in Karnataka Railway Stations

SWR Intensifies Food Safety Checks Across Karnataka Railway Stations

August 28, 2026
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL