ಶ್ರೀನಗರ: ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಬಿಜೆಪಿ ಹಾಗೂ ಪಿಡಿಪಿ ಮೈತ್ರಿ ಮುರಿದುಬಿದ್ದಿದ್ದು, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಮುಫ್ತಿ ಮೆಹಬೂಬಾ ರಾಜೀನಾಮೆ ಸಲ್ಲಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಸ್ವತಃ ಈ ವಿಚಾರವನ್ನು ತಿಳಿಸಿರುವ ಮುಫ್ತಿ, ರಾಜ್ಯಪಾಲರಿಗೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ. ಅಲ್ಲದೇ ಇನ್ನು ಸದ್ಯ ಯಾವುದೇ ಪಕ್ಷದೊಂದಿಗೂ ಸಹ ಮೈತ್ರಿ ಚಿಂತನೆಯೂ ನಮ್ಮಲ್ಲಿಲ್ಲ ಎಂಬ ಮಾಹಿತಿಯನ್ನೂ ಸಹ ನೀಡಿದ್ದೇನೆ ಎಂದರು.
#WATCH LIVE from Srinagar: Mehbooba Mufti addresses a Press Conference #JammuAndKashmir https://t.co/oHY3JLHHu2
— ANI (@ANI) June 19, 2018
ನಾವು ಅಧಿಕಾರಕ್ಕಾಗಿ ಈ ಮೈತ್ರಿ ಮಾಡಿಕೊಂಡಿರಲಿಲ್ಲ. ಅಪ್ರಚೋದಿತ ದಾಳಿಗಳನ್ನು ತಡೆದು, ಶಾಂತಿ ಕಾಪಾಡುವುದು ನಮ್ಮ ಉದ್ದೇಶವಾಗಿತ್ತು. ಈ ಕಾರಣಕ್ಕಾಗಿಯೇ ಮೈತ್ರಿ ಏರ್ಪಟ್ಟಿತ್ತು. ಆದರೆ, ನನಗೇನೂ ಈ ಬೆಳವಣಿಗೆ ಆಶ್ಚರ್ಯ ತಂದಿಲ್ಲ ಎಂದು ಮಾರ್ಮಿಕವಾಗಿ ನುಡಿದರು.
ಮೈತ್ರಿ ಮುರಿದು, ಸರ್ಕಾರ ಕೊನೆಗೊಂಡ ಹಿನ್ನೆಲೆಯಲ್ಲಿ ಕಣಿವೆ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಾಗುವ ಸಾಧ್ಯತೆಯಿದೆ.
ಇನ್ನು, ಈ ಕುರಿತಂತೆ ಇಂದು ಬೆಳಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಬಿಜೆಪಿ ಮುಖಂಡ ರಾಮ್ ಮಾಧವ್, ಪಿಡಿಪಿ ಜೊತೆಯಲ್ಲಿ ಕಣಿವೆ ರಾಜ್ಯದಲ್ಲಿ ಮೈತ್ರಿ ಮುಂದುವರೆಸುವ ಸನ್ನಿವೇಶಗಳು ಇಲ್ಲ. ಈ ಹಿನ್ನೆಲೆಯಲ್ಲಿ ಮೈತ್ರಿಯನ್ನು ಅಂತ್ಯ ಮಾಡಲು ನಿರ್ಧರಿಸಿದ್ದೇವೆ ಎಂದಿದ್ದರು.
ರಂಜಾನ್ ಮುಗಿದೊಡನೆಯೇ ಜಮ್ಮು ಕಾಶ್ಮೀರದಲ್ಲಿ ಉಗ್ರರನ್ನು ಬೇಟೆಯಾಡುವ ಸೇನಾ ಕಾರ್ಯಾಚರಣೆಯನ್ನು ಪುನರಾರಂಭಿಸುವ ಕೇಂದ್ರ ಸರ್ಕಾರದ ನಿರ್ಧಾರ ಪಿಡಿಪಿ ಮುಖ್ಯಸ್ಥೆ ಮತ್ತು ಸಿಎಂ ಮೆಹಬೂಬ ಮುಫ್ತಿ ಅವರ ಅಸಮಾಧಾನಕ್ಕೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಬಿಜೆಪಿ ಇಂತಹ ನಿರ್ಧಾರಕ್ಕೆ ಬಂದಿದೆ.
Discussion about this post