Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬೆಂಗಳೂರು ನಗರ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಹಿರಿಯ ಸಾಹಿತಿ ಗಿರೀಶ್ ಕಾರ್ನಾಡ್ ವಿಧಿವಶ

June 10, 2019
in ಬೆಂಗಳೂರು ನಗರ
0 0
0
Share on facebookShare on TwitterWhatsapp
Read - 2 minutes

ಬೆಂಗಳೂರು: ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತಿ ಗಿರೀಶ್ ಕಾರ್ನಾಡ್(81) ಇಂದು ಮುಂಜಾನೆ ವಿಧಿವಶರಾಗಿದ್ದಾರೆ.

ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾರ್ನಾಡ್ ಅವರು ಲ್ಯಾವೆಲ್ಲೆ ರಸ್ತೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

1938 ಮೇ 19ರಂದು ಮಹಾರಾಷ್ಟ್ರದ ಮಾಥೇರಾನದಲ್ಲಿ ಜನಿಸಿದ ಕಾರ್ನಾಡರ ತಂದೆ ಡಾ. ರಘುನಾಥ್ ಕಾರ್ನಾಡ್, ತಾಯಿ ಕೃಷ್ಣಾ ಬಾಯಿ. ಪ್ರಗತಿಶೀಲ ಮನೋಭಾವದ ರಘುನಾಥ ಕಾರ್ನಾಡರು ಮದುವೆಯಾದ ಹೊಸತರಲ್ಲೇ ಪತ್ನಿಯನ್ನು ಕಳೆದು ಕೊಂಡರು. ಬಾಲ್ಯದಲ್ಲೇ ಮದುವೆಯಾಗಿ ಪತಿಯನ್ನು ಕಳೆದುಕೊಂಡಿದ್ದ 5 ವರ್ಷದ ಮಗ ವಸಂತನ ತಾಯಿ ಕೃಷ್ಣಾಬಾಯಿಯನ್ನು, ಸಮಾಜದ ವಿರೋಧದ ನಡುವೆಯೂ ದಿಟ್ಟತನದಿಂದ ಕೈ ಹಿಡಿದರು. ಸಮಾಜ ಏನೆನ್ನುತ್ತದೆ ಅನ್ನುವುದಕ್ಕಿಂತ ಆದರ್ಶ ಹಾಗೂ ಪ್ರಗತಿಪರತೆ ರಘುನಾಥ್ ಕಾರ್ನಾಡರಲ್ಲಿ ಕಂಡು ಬರುತ್ತದೆ. ಮುಂದೆ ಕಾರ್ನಾಡರಿಗೆ ಇಂಥ ಪ್ರಗತಿಪರ ವಾತಾವರಣವೇ ಅವರ ಬೆಳವಣಿಗೆಯಲ್ಲಿ ಸಹಾಯಕವಾಯಿತು.

ಗಿರೀಶರ ಪ್ರಾಥಮಿಕ ಶಿಕ್ಷಣ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ, ಪ್ರೌಢಶಿಕ್ಷಣ ಧಾರವಾಡದ ಬಾಸೆಲ್ ಮಿಷನ್ ಹೈಸ್ಕೂಲಿನಲ್ಲಿ ಹಾಗೂ ಪದವಿ ಶಿಕ್ಷಣ ಕರ್ನಾಟಕ ಕಾಲೇಜಿನಲ್ಲಿ ಆಯಿತು. ಆ ಬಳಿಕ ಹೊರ್ಡ್ಸ್‌ ಸ್ಕಾಲರ್’ಶಿಪ್ ಪಡೆದುಕೊಂಡು ಆಕ್ಸ್‌ಫರ್ಡ್‌ನಲ್ಲಿ ಹೆಚ್ಚಿನ ವ್ಯಾಸಂಗಕ್ಕೆ ತೆರಳಿದರು. ಗಿರೀಶ ಕಾರ್ನಾಡರು ಆಕ್ಸ್‌ಫರ್ಡ್ ಡಿಬೇಟ ಕ್ಲಬ್’ಗೆ ಅಧ್ಯಕ್ಷರಾಗಿ ಆಯ್ಕೆಯಾದ ಪ್ರಥಮ ಏಷಿಯನ್ ಆಗಿದ್ದರು.

ತಮ್ಮ ಓದು, ಚರ್ಚೆಯನ್ನು ದೇಶ ವಿದೇಶದಲ್ಲೂ ಹರಡಿ ವಿದ್ವಾಂಸರ ಸಖ್ಯದಲ್ಲಿ, ಕಲಾಸೇವಕರ ಸಹವಾಸದಲ್ಲಿ ಗುರ್ತಿಸಿಕೊಂಡ ಕಾರ್ನಾಡ್ ಬುದ್ಧಿಜೀವಿ ಎನಿಸಿಕೊಂಡರು. ಬಹುಭಾಷಾ ಪಂಡಿತರೆಂಬ ಹಿರಿಮೆಗೆ ಪಾತ್ರರಾಗಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಸಂದರ್ಶನ ಪ್ರಾಧ್ಯಾಪಕರಾಗಿ ಕಾರ್ನಾಡ್ ಸೇವೆ ಸಲ್ಲಿಸಿದರು. ವಿದೇಶದಲ್ಲಿದ್ದಾಗಲೇ ಕನ್ನಡ ನಾಟಕಗಳನ್ನು ಬರೆದು ಇಲ್ಲಿಗೆ ಬಂದು ಹೊಸ ನಾಟಕಗಳ ಓದು, ಪ್ರದರ್ಶನಕ್ಕೆ ದಾರಿ ಮಾಡಿಕೊಂಡರು.

ಇವರು ಕನ್ನಡವಲ್ಲದೆ ಹಿಂದಿ, ಪಂಜಾಬಿ, ಮರಾಠಿ ಹಾಗೂ ಭಾರತೀಯ ಹಲವು ಭಾಷೆಗಳಿಗೆ ತಮ್ಮ ನಾಟಕಗಳು ಅನುವಾದಗೊಂಡು, ಪ್ರದರ್ಶನಗೊಂಡವು.

ಆಕ್ಸ್‌ಫರ್ಡ್‌ನಿಂದ ಬಂದ ನಂತರ ಮದ್ರಾಸ್‌ನಲ್ಲಿ ಆಕ್ಸ್‌’ಫರ್ಡ್ ಯೂನಿವರ್ಸಿಟಿ ಪ್ರೆಸ್’ನಲ್ಲಿ ಸಂಪಾದಕರಾಗಿ ನೌಕರಿಯಲ್ಲಿದ್ದು, ಅದನ್ನು ತೊರೆದು ಧಾರವಾಡಕ್ಕೆ ವಾಪಾಸಾಗಿ ನಾಟಕ ಕ್ಷೇತ್ರದಲ್ಲಿ ಕೃಷಿ ನಡೆಸಿದರು.

ಇಂಗ್ಲೆಂಡಿಗೆ ತೆರಳುವ ಮೊದಲೆ ಗಿರೀಶ ಕಾರ್ನಾಡರ ಮೊದಲ ಸಾಹಿತ್ಯ ಕೃತಿ ಯಯಾತಿ ನಾಟಕ ಧಾರವಾಡದ ಮನೋಹರ ಗ್ರಂಥಮಾಲೆಯಲ್ಲಿ ಪ್ರಕಟವಾಯಿತು. ಇಂಗ್ಲೆಂಡಿನಿಂದ ಮರಳಿದ ಬಳಿಕ ತುಘಲಕ್ ಹಾಗೂ ಹಯವದನ ಪ್ರಕಟವಾದವು. ಈ ನಡುವೆ ಪುಣೆ ಫಿಲ್ಮ್ ಇನ್ಸ್ಟಿಟ್ಯೂಟ್‌ನ ನಿರ್ದೇಶಕರಾಗಿದ್ದು, ಮತ್ತೆ ಅದನ್ನು ಬಿಟ್ಟು ಮುಂಬೈಗೆ ಬಂದ ಕಾರ್ನಾಡರು ಕೆಲವು ಚಲನಚಿತ್ರಗಳಲ್ಲಿ ನಟಿಸಿದರು. ಆ ರಂಗವನ್ನೂ ತ್ಯಜಿಸಿ ಮತ್ತೆ ಬೆಂಗಳೂರಿಗೆ ಬಂದರು. ಅಲ್ಲಿಂದ ರಚಿತವಾದ ಅವರ ನಾಟಕಗಳು-ಅಂಜುಮಲ್ಲಿಗೆ, ನಾಗಮಂಡಲ, ತಲೆದಂಡ ಹಾಗೂ ಅಗ್ನಿ ಮತ್ತು ಮಳೆ.

ಕಾರ್ನಾಡರ ನಾಟಕಗಳು
1. ಮಾ ನಿಷಾಧ – ಏಕಾಂಕ ನಾಟಕ
2. ಯಯಾತಿ – 1961
3. ತುಘಲಕ್ – 1964
4. ಹಯವದನ – 1972
5. ಅಂಜುಮಲ್ಲಿಗೆ – 1977
6. ಹಿಟ್ಟಿನ ಹುಂಜ ಅಥವಾ ಬಲಿ – 1980
7. ನಾಗಮಂಡಲ – 1990
8. ತಲೆದಂಡ – 1990
9. ಅಗ್ನಿ ಮತ್ತು ಮಳೆ – 1995
10. ಟಿಪ್ಪುವಿನ ಕನಸುಗಳು – 1997
11. ಒಡಕಲು ಬಿಂಬ – 2005
12. ಮದುವೆ ಅಲ್ಬಮ್
13. ಫ್ಲಾವರ್ಸ – 2012
14. ಬೆಂದ ಕಾಳು ಆನ್ ಟೋಸ್ಟ್‌- 2012

ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಶನ್ ಗಾಗಿ ಭಾರತದ ಸ್ವಾತಂತ್ರೋತ್ಸವದ 50 ವರ್ಷದ ನೆನಪಿನ ಕಾರ್ಯಕ್ರಮಕ್ಕಾಗಿ ಬರೆದುಕೊಟ್ಟ ನಾಟಕ-ಟಿಪ್ಪುವಿನ ಕನಸುಗಳು.

ಯು.ಆರ್.ಅನಂತಮೂರ್ತಿಯವರ ಕಾದಂಬರಿಯನ್ನು ಆಧರಿಸಿದ ಸಂಸ್ಕಾರ ಚಲನಚಿತ್ರದಲ್ಲಿ ಗಿರೀಶ್ ಕಾರ್ನಾಡರದು ಪ್ರಮುಖ ಪಾತ್ರ ಪ್ರಾಣೇಶಾಚಾರ್ಯರದು. ಪಿ. ಲಂಕೇಶ್ ಅವರದು ವಿರುದ್ಧ ವ್ಯಕ್ತಿತ್ವದ ಪಾತ್ರ. ಈ ಚಿತ್ರದ ನಿರ್ದೇಶಕರು ಪಟ್ಟಾಭಿರಾಮ ರೆಡ್ಡಿ ಅವರು. ಇದು ಕನ್ನಡಕ್ಕೆ ಪ್ರಥಮ ಸ್ವರ್ಣಕಮಲವನ್ನು ತಂದು ಕೊಟ್ಟ ಚಿತ್ರ.

ಆ ನಂತರ ಎಸ್.ಎಲ್. ಭೈರಪ್ಪನವರ ವಂಶವೃಕ್ಷ ಕಾದಂಬರಿಯನ್ನು ಆಧರಿಸಿ, ಬಿ.ವಿ. ಕಾರಂತರ ಜೊತೆಗೂಡಿ ವಂಶವೃಕ್ಷ ಚಿತ್ರವನ್ನು ನಿರ್ದೇಶನ ಮಾಡಿದರು. ಇದು ಹಲವಾರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಪುರಸ್ಕಾರ ಪಡೆಯಿತು.

ಮುಂದೆ ತಬ್ಬಲಿಯು ನೀನಾದೆ ಮಗನೆ, ಕಾಡು, ಒಂದಾನೊಂದು ಕಾಲದಲ್ಲಿ ಚಿತ್ರಗಳನ್ನು ನಿರ್ದೇಶಿಸಿದರು.ಕಾಡು ಹಲವಾರು ಪ್ರಶಸ್ತಿ ಪುರಸ್ಕಾರ ಪಡೆಯಿತು.

ನಂತರ ಉತ್ಸವ, ಗೋಧೂಳಿಎಂಬ ಹಿಂದಿ ಚಿತ್ರಗಳನ್ನು ನಿರ್ದೇಶಿಸಿದರು. ಬಳಿಕ ರಾಷ್ಟ್ರಕವಿ ಕುವೆಂಪು ಅವರ ಕಾನೂರು ಸುಬ್ಬಮ್ಮ ಹೆಗ್ಗಡತಿ ಕಾದಂಬರಿಯನ್ನು ಆಧರಿಸಿ ಕಾನೂರು ಹೆಗ್ಗಡಿತಿ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈ ಚಿತ್ರವು ರಾಜ್ಯ ಪ್ರಶಸ್ತಿ, ರಾಷ್ಟ್ರೀಯ ಪುರಸ್ಕಾರ ಪಡೆದು, ಪನೋರಮಕ್ಕೂ ಆಯ್ಕೆಯಾಯಿತು. ಇದಲ್ಲದೆ ಕನಕ ಪುರಂದರ, ದ.ರಾ. ಬೇಂದ್ರೆ ಹಾಗೂ ಸೂಫಿ ಪಂಥ ಸಾಕ್ಷ್ಯಚಿತ್ರಗಳನ್ನು ನಿರ್ದೇಶಿಸಿದರು. ಪರಿಸರ ವಿನಾಶ ಕುರಿತು ಚೆಲುವಿ ಎಂಬ ಕಿರುಚಿತ್ರವನ್ನು ನಿರ್ದೇಶಿಸಿದರು. 2007 ರಲ್ಲಿ ತೆರೆಕಂಡ ಆ ದಿನಗಳು ಚಿತ್ರಕ್ಕೆ ಅಗ್ನಿ ಶ್ರೀಧರ್ ಅವರ ಜೊತೆಗೂಡಿ ಚಿತ್ರಕಥೆಯನ್ನು ಬರೆದಿದ್ದಾರೆ. ಸಿನಿಮಾ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ. ಕಾರ್ನಾಡರು ವಸ್ತುವನ್ನು ಗ್ರಹಿಸುವ ಕ್ರಮದಲ್ಲೇ ಅವರ ಅನನ್ಯತೆ ಇದೆ. ಈ ಗ್ರಹಿಕೆಗೆ ಪೂರಕವಾದ ರಚನಾಕ್ರಮವನ್ನು ಅವರು ಕಂಡುಕೊಂಡಿದ್ದಾರೆ.

ಪ್ರಶಸ್ತಿಗಳು:

  • ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ
  • ಗುಬ್ಬಿ ವೀರಣ್ಣ ಪ್ರಶಸ್ತಿ
  • ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ
  • ಪದ್ಮಶ್ರೀ -1974
  • ಪದ್ಮಭೂಷಣ -1992
  • ಜ್ಞಾನಪೀಠ -1998
  • ಕಾಳಿದಾಸ ಸಮ್ಮಾನ್ – 1998
Tags: DeathDramaGirish KarnadKannada Newsಗಿರೀಶ್ ಕಾರ್ನಾಡ್ಜ್ಞಾನಪೀಠ ಪ್ರಶಸ್ತಿನಿಧನವಿಧಿವಶಸಾವು
Previous Post

ವಿ ಮಿಸ್ ಯೂ ಸುಷ್ಮಾ ತಾಯಿ

Next Post

ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಂದು ಮಧ್ಯಾಹ್ನ ಕಾನಾರ್ಡ್ ಧಾರ್ಮಿಕ ವಿಧಿಯಿಲ್ಲದೇ ಅಂತ್ಯಕ್ರಿಯೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!