ಶಿವಮೊಗ್ಗ: ಶರಾವತಿ ನದಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ರಾಜ್ಯ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಜುಲೈ 10ರಂದು ಕರೆ ನೀಡಲಾಗಿರುವ ಶಿವಮೊಗ್ಗ ಬಂದ್’ಗೆ ಸಿಹಿಮೊಗೆ ಸಂಯುಕ್ತ ವಿಶ್ರಾಂತ ನೌಕರರ ಸಂಘ ಬೆಂಬಲ ವ್ಯಕ್ತಪಡಿಸಿದೆ.
ಈ ಕುರಿತಂತೆ ಕಲ್ಪ ನ್ಯೂಸ್ ಜೊತೆಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಪಿ.ಒ. ಶಿವಕುಮಾರ್ ಅವರು, ಶರಾವತಿ ನದಿಯ ನೀರನ್ನು ಬೆಂಗಳೂರು ಜನತೆಗೆ ಕುಡಿಯುವ ನೀರಿನ ವ್ಯವಸ್ಥೆಗೆ ಸರಬರಾಜು ಮಾಡುವ ಪ್ರಸ್ತಾವನೆಯನ್ನು ನಮ್ಮ ಸಂಘಟನೆ ವಿರೋಧಿಸುತ್ತದೆ ಎಂದಿದ್ದಾರೆ.
ಅಲ್ಲದೇ, ಶರಾವತಿ ಉಳಿಸಿ ಮತ್ತು ಬೆಂಗಳೂರಿಗೆ ಶರಾವತಿ ನೀರು ಸರಬರಾಜು ಪ್ರಸ್ತಾವನೆಯನ್ನು ಕೈಗೊಳ್ಳದಂತೆ ಜುಲೈ 3ರಂದು ಜಿಲ್ಲಾಧಿಕಾರಿಗಳಿಗೆ ನಮ್ಮ ಸಂಘದ ವತಿಯಿಂದ ಮನವಿ ಸಲ್ಲಿಸಲಾಗುವುದು ಎಂದಿದ್ದಾರೆ.
ಶರಾವತಿ ನೀರನ್ನು ಬೆಂಗಳೂರಿಗೆ ಕೊಂಡೊಯ್ಯುವ ಯೋಜನೆಯ ಪ್ರಸ್ತಾವನೆ ವಿರೋಧಿಸಿ ಸ್ಥಳೀಯ ಪರಿಸರಾಸಕ್ತ ಸಂಘಟನೆಗಳು ಜುಲೈ 10ರಂದು ಕರೆ ನೀಡಿರುವ ಬಂದ್’ಗೆ ನಮ್ಮ ಸಂಘಟನೆ ನೈತಿಕ ಬೆಂಬಲ ನೀಡಲಿದೆ ಎಂದಿದ್ದಾರೆ.
Discussion about this post