ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಸ್ಪರ್ಧೆಯಲ್ಲಿ ಪಾಲುಗೊಳ್ಳುವುದು ಮುಖ್ಯ. ಇಂತಹ ಸ್ಪರ್ಧೆಗಳನ್ನು ಸದುಪಯೋಗವನ್ನು ಪಡೆದುಕೊಳ್ಳಬೇಕು, ಇಂತಹ ವೇದಿಕೆಗಳನ್ನು ಬಳಸಿಕೊಂಡು ತಮ್ಮ ಜ್ಞಾನವನ್ನು ಹೆಚ್ಚಿಕೊಳ್ಳಬೇಕು ಎಂದು ಪಿಇಎಸ್ ಸಂಸ್ಥೆಯ ಆಡಳಿತಾಧಿಕಾರಿ ಡಾ. ವೀಣಾ ಹೇಳಿದರು.
ಸಹ್ಯಾದ್ರಿ ಸಹೋದಯ ಶಾಲಾ ಸಂಘಟನೆ ವತಿಯಿಂದ ಇಂದು ನಗರದ ಪಿಇಎಸ್ ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಕಿರಿಯ ಸಾಹಿತ್ಯ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ, ಮಕ್ಕಳನ್ನು ಉದ್ದೇಶಿಸಿ ಅವರು ಮಾತನಾಡಿದರು.
ಸಹ್ಯಾದ್ರಿ ಸಹೋದಯ ಶಾಲಾ ಸಂಘಟನೆ ವತಿಯಿಂದ ಚರ್ಚಾ ಸ್ಪರ್ಧೆ, ಕನ್ನಡ ಆಶು ಭಾಷಣ, ಪ್ರಬಂಧ ಲೇಖನ, ಕಥೆ ಹೇಳುವುದು, ಮಕ್ಕಳಿಂದ ಕವನ ಬರವಣಿಗೆ & ವಾಚನ, ಚಿತ್ರಕಲೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಶಿವಮೊಗ್ಗ ಜಿಲ್ಲೆಯ 30ಕ್ಕೂ ಹೆಚ್ಚು ಪ್ರತಿಷ್ಠಿತ ಸಿ.ಬಿ.ಎಸ್.ಸಿ ಶಾಲೆಗಳ 250ಕ್ಕೂ ಹೆಚ್ಚು ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಗೆ ಸಂಸ್ಥೆಯ ಅನುಭವಿ ಶಿಕ್ಷಕ ವೃಂದದವರು ತೀರ್ಪುಗಾರರಾಗಿ ಭಾಗವಹಿಸಿದ್ದರು.
Also read: ವಿದ್ಯಾರ್ಥಿಗಳು ನಿರ್ಭೀತಿಯಿಂದ ಕೆಲಸ ಮಾಡಿದಾಗ ಯಶಸ್ಸು ಸಾಧ್ಯ: ರಾಜೇಂದ್ರ ಭಟ್
ಕಾರ್ಯಕ್ರಮದಲ್ಲಿ ಪಿಇಎಸ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಸೋಮಶೇಖರಯ್ಯ, ಉಪಪ್ರಾಂಶುಪಾಲಾರದ ಎನ್ ಶಂಕರ್ ಹಾಗೂ ಸಂಘಟನಕಾರರಾದ ಮಂಜುಳ, ರೋಜಿ ಸಿಖ್ವೇರಾ ಅವರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರಿಂದ ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿನಿ ಮಾನ್ಯತಾ ತೀರ್ಪುಗಾರರ ಬಗ್ಗೆ ವಿವರಿಸಿದರು. ವಿದ್ಯಾರ್ಥಿನಿ ಶ್ರೀಜಾ ಸ್ವಾಗತಿಸಿದರು, ನಿರೂಪಣೆಯನ್ನು ವಿದ್ಯಾರ್ಥಿನಿ ನಿರಿಶಾ ಮತ್ತು ಸಾಹಿತ್ಯ ನಡೆಸಿಕೊಟ್ಟರು, ಸಿರಿ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









