ಕಲ್ಪ ಮೀಡಿಯಾ ಹೌಸ್ | ಬೈಂದೂರು |
ಶಿವಮೊಗ್ಗ #Shivamogga ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರು ಬೈಂದೂರಿಯಲ್ಲಿ ಭರ್ಜರಿ ಸಮಾವೇಶ ನಡೆಸಿ ಶಕ್ತಿ ಪ್ರದರ್ಶನ ನಡೆಸಿದ್ದಾರೆ.
ರಾಷ್ಟ್ರಭಕ್ತರ ಬಳಗದ ವತಿಯಿಂದ ಬೈಂದೂರು ಹೋಬಳಿ ಮಟ್ಟದ ಸಮಾವೇಶ ನಡೆಸಿದ್ದು, ಇಡಿಯ ಸಭಾಂಗಣ ತುಂಬಿ ತುಳುಕುತ್ತಿತ್ತು.
ಹಿಂದುತ್ವದ ಆಧಾರದಲ್ಲಿ ನಡೆದ ಸಮಾವೇಶದಲ್ಲಿ ಕೇಸರಿ ಶಾಲುಗಳು ರಾರಾಜಿಸಿದವು.
ತಾಯಿ ಭಾರತಾಂಬೆಯ ಭಾವಚಿತ್ರಕ್ಕೆ ಮುತ್ತೈದೆಯರಿಂದ ಪುಷ್ಪಾರ್ಚನೆ ಮಾಡಿಸುವ ಮೂಲಕ ಸಮಾವೇಶಕ್ಕೆ ಚಾಲನೆ ನೀಡಲಾಯಿತು.
ಬೈಂದೂರು ವಿಧಾನಸಭಾ ಕ್ಷೇತ್ರದ ವಿವಿಧ ಭಾಗಗಳಿಂದ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















