ಬೆಂಗಳೂರು: ವಿವಾದ ಸೃಷ್ಠಿಸಿರುವ ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಕಾಳ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಹೈಕೋರ್ಟ್ ಸಮ್ಮತಿ ನೀಡಿದೆ.
ಈ ಕುರಿತಂತೆ ಇಂದು ಆದೇಶ ನೀಡಿರುವ ನ್ಯಾಯಾಲಯ, ಸಿನೆಮಾ ಬಿಡುಗಡೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ.
ನ್ಯಾಯಾಲಯ ಆದೇಶ ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಚಿತ್ರ ಬಿಡುಗಡೆಯಾಗಲಿದೆ.
ಕಾವೇರಿ ನೀರು ಹಂಚಿಕೆ ವಿವಾದ ಸಂಬಂಧ ಸುಪ್ರೀಂ ಕೋರ್ಟ್ ತೀರ್ಪಿನ ಕುರಿತು ರಜನಿಕಾಂತ್ ನೀಡಿದ್ದ ಹೇಳಿಕೆಯನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಚಿತ್ರ ಪ್ರದರ್ಶನಕ್ಕೆ ವಿರೋಧ ವ್ಯಕ್ತಪಡಿಸಿದ್ದರಿಂದ ಚಿತ್ರ ಪ್ರದರ್ಶನಗೊಂಡರೆ ಅಹಿತಕರ ಘಟನೆ ನಡೆಯಬಹುದು ಎಂದು ಮುನ್ನೆಚ್ಚರಿಕೆಯಿಂದ ನಿರ್ಬಂಧ ವಿಧಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿರ್ಧಾರದ ವಿರುದ್ಧ ಇವರು ಹೈಕೋರ್ಟ್ ಮೊರೆ ಹೋಗಿದ್ದರು.
ಈ ಮಧ್ಯೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪರ ವಕೀಲರು, ತಾವು ಚಿತ್ರ ಪ್ರದರ್ಶಕರಿಗೆ ಅಥವಾ ಪ್ರತಿಭಟನಾಕಾರರಿಗೆ ಚಿತ್ರ ಪ್ರದರ್ಶನ ಮಾಡಬಾರದೆಂದು ಸೂಚನೆ ನೀಡಿರಲಿಲ್ಲ ಎಂದು ಹೇಳಿದ್ದಾರೆ.
Discussion about this post