No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
  • Advertise With Us
  • Grievances
  • About Us
  • Contact Us
Thursday, July 9, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶಿವಮೊಗ್ಗವನ್ನು ಅರಸಿ ಬಂತು ‘ಕಲಾಶ್ರಯ’ | ಸಂಗೀತ ಕಾರ್ಯಕ್ರಮ ಸಂಘಟಕ ಸುಬ್ರಹ್ಮಣ್ಯ ಶಾಸ್ತ್ರಿಗಳಿಗೆ ಪ್ರಶಸ್ತಿ ಗರಿ

ನಟನ  ತರಂಗಿಣಿ ಸಂಸ್ಥೆ 20ನೇ ವಾರ್ಷಿಕೋತ್ಸವದಲ್ಲಿ ಪ್ರದಾನ | ಬೆಂಗಳೂರಿನಲ್ಲಿ ಜು. 7ರಂದು ಗೌರವಾರ್ಪಣೆ

kalpa News by kalpa News
July 4, 2024
in Special Articles, ಶಿವಮೊಗ್ಗ
0
ಶಿವಮೊಗ್ಗವನ್ನು ಅರಸಿ ಬಂತು ‘ಕಲಾಶ್ರಯ’ | ಸಂಗೀತ ಕಾರ್ಯಕ್ರಮ ಸಂಘಟಕ ಸುಬ್ರಹ್ಮಣ್ಯ ಶಾಸ್ತ್ರಿಗಳಿಗೆ ಪ್ರಶಸ್ತಿ ಗರಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ರಘುರಾಮ, ಶಿವಮೊಗ್ಗ  |

ರಾಜಧಾನಿ ಬೆಂಗಳೂರಿನ ಕುಮಾರಸ್ವಾಮಿ ಬಡಾವಣೆಯ ಎರಡನೇ ಹಂತದ ವಿಕ್ರಮ ನಗರದಲ್ಲಿರುವ ನಟನ ತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ ಸಂಸ್ಥೆ ಕೊಡಮಾಡುತ್ತಿರುವ ಪ್ರತಿಷ್ಠಿತ ‘ಕಲಾಶ್ರಯ’ ಪ್ರಶಸ್ತಿಗೆ ಮಲೆನಾಡಿನ ತವರು ಶಿವಮೊಗ್ಗದ ಹಿರಿಯ ಸಂಗೀತ ಸಂಘಟಕ, ಕಲಾ ಕೈಂಕರ್ಯ ಧುರೀಣ ಸುಬ್ರಮಣ್ಯ ಶಾಸ್ತ್ರಿ ಅವರು ಆಯ್ಕೆಯಾಗಿದ್ದಾರೆ.

ಬೆಂಗಳೂರಿನ ಜಯನಗರ 8ನೇ ಬಡಾವಣೆಯ ಶ್ರೀ ಜಯರಾಮ ಸೇವಾ ಮಂಡಳಿ ಸಭಾಂಗಣದಲ್ಲಿ ಜು. 7ರ ಸಂಜೆ 6ಕ್ಕೆ ಹಮ್ಮಿಕೊಂಡಿರುವ ನಟನ ತರಂಗಿಣಿ-ಸಂಸ್ಥೆ 20ನೇ ವರ್ಷದ ಸಂಭ್ರಮೋತ್ಸವದಲ್ಲಿ ಸುಬ್ರಹ್ಮಣ್ಯ ಶಾಸ್ತ್ರಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಲಾಗುವುದು ಎಂದು ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ, ನಾಡಿನ ಹಿರಿಯ ವಿದುಷಿ ಡಾ.ವೈ.ಜಿ. ಪರಿಮಳಾ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಶಾಸ್ತ್ರೀಯ ಸಂಗೀತ ಸೇವೆಗೆಂದೇ ಮೀಸಲಾಗಿರುವ ನಗರದ ಪ್ರಖ್ಯಾತ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಪ್ರ. ಕಾರ್ಯದರ್ಶಿಯಾಗಿ, ಕಳೆದ 7 ದಶಕದಿಂದ ವಿಭಿನ್ನ ಸೇವೆ ಸಲ್ಲಿಸಿದವರು ಸುಬ್ರಹ್ಮಣ್ಯ ಶಾಸ್ತ್ರಿಯವರು. ಈವರೆಗೆ ಸಾವಿರಾರು ಸಂಗೀತ ಕಾರ್ಯಕ್ರಮಗಳನ್ನು ಆಯೋಜಿಸಿ, ಕಿರಿ-ಹಿರಿಯ ಕಲಾವಿದರನ್ನು ಪ್ರೋತ್ಸಾಹಿಸಿದವರು.

ವಿವಿಧ ಸಂಘ, ಸಂಸ್ಥೆಗಳೊಂದಿಗೆ ಸುಮಧುರ ಬಾಂಧವ್ಯ ಹೊಂದಿರುವವರು. ಗಾಯನ, ವಾದನ ಕಛೇರಿಗಳಿಗೆ ಖುದ್ದು ಹಾಜರಾಗಿ, ಅಂತ್ಯದವರೆಗೂ ಉಪಸ್ಥಿತರಿದ್ದು, ಕಲಾ ಕೈಂಕರ್ಯ ಸಲ್ಲಿಸುವ ವಿಶಾಲ ಮನದವರು. ಗಮಕ ಕಲಾ ಪರಿಷತ್ ಜಿಲ್ಲಾ ಕಾರ್ಯದರ್ಶಿಯಾಗಿಯೂ ಇವರು ಇತ್ತೀಚೆಗೆ ಆಯ್ಕೆಯಾಗಿರುವುದು ಬಹು ವಿಶೇಷ. ಸಂಗೀತ ಕಛೇರಿಗಳ ಆಯೋಜನೆ, ಸಂಘಟನೆ ಮತ್ತು ಕಲಾ ಪೋಷಣೆ ಮಾಡುವ ಶಾಸ್ತ್ರಿ ಅವರಿಗೆ ಕಲಾಶ್ರಯ ಪ್ರಶಸ್ತಿ ಅರಸಿ ಬಂದಿರುವುದು ಸಂತೋಷದ ವಿಷಯವಾಗಿದೆ.
ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಿರಿಯ ಜ್ಯೋತಿಷ್ಯ ಶಾಸ್ತ್ರಜ್ಞ, ಬೇಕಲ್ ಗೋಕುಲಂ ಗೋಶಾಲೆ ಸಂಸ್ಥಾಪಕ ವಿಷ್ಣು ಪ್ರಸಾದ ಹೆಬ್ಬಾರ್, ನಾಗರತ್ನಾ ಹೆಬ್ಬಾರ್, ಉಡುಪಿಯ ಹಿರಿಯ ಸಂಗೀತ ತಜ್ಞ ಅರವಿಂದ ಹೆಬ್ಬಾರ್, ಮೃದಂಗ ವಿದ್ವಾನ್ ನಿಶಾಂತ್ ಪುತ್ತೂರು, ಸಂಗೀತ- ನೃತ್ಯ ಕಲಾ ವಿದುಷಿ ವೈ.ಜಿ. ಶ್ರೀ ಲತಾ ಉಪಸ್ಥಿತರಿರಲಿದ್ದಾರೆ.

ಶಾಸ್ತ್ರಿಗಳ ಸೇವೆ ಅನನ್ಯ
ಮಲೆನಾಡಿನ ವಿನಮ್ರ ಮತ್ತು ಹಿರಿಯ ಸಂಗೀತ ಸೇವಕ ಎಚ್.ಆರ್. ಸುಬ್ರಮಣ್ಯ ಶಾಸ್ತ್ರಿ ಅವರು ಮೂಲತಃ ಹೊಸೂಡಿಯವರು.

ತಾತ ಹೊಸೂಡಿ ವೆಂಕಟಶಾಸ್ತ್ರಿಗಳು ವಿದ್ವತ್ತಿನೊಂದಿಗೆ ದಾನಿಗಳಾಗಿಯೂ ಪ್ರಖ್ಯಾತರಾದವರು. ಶಿವಮೊಗ್ಗೆಯ ಪ್ರತಿಷ್ಠಿತ ಕರ್ನಾಟಕ ಸಂಘಕ್ಕೆ ಶತಮಾನದ ಹಿಂದೆಯೇ ಸ್ಥಳದಾನ ಮಾಡಿದವರು. ಅಂಥಾ ವಂಶದಲ್ಲಿ ಜನಿಸಿದ ಸುಬ್ರಮಣ್ಯ ಶಾಸ್ತ್ರಿ ಮೂಲತಃ ಕೃಷಿಕ ಮನೆತನದವರಾದರೂ ವೃತ್ತಿಯಲ್ಲಿ ವ್ಯಾಪಾರ-ಉದ್ದಿಮೆದಾರರು. ಸಂಗೀತ- ಸಾಹಿತ್ಯ ಎಂಬುದು ಅವರ ವಂಶಕ್ಕೇ ಅಂಟಿದ ವಿಶೇಷ ನಂಟು.
ಶಿವಮೊಗ್ಗದ ಸುಪ್ರಸಿದ್ಧ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿ ಸಂಸ್ಥಾಪಕರಲ್ಲಿ ಸುಬ್ರಮಣ್ಯ ಶಾಸ್ತ್ರಿಯೂ ಒಬ್ಬರು. ಕಳೆದ 7 ದಶಕಗಳಿಗೂ ಹೆಚ್ಚು ಕಾಲ ವಿವಿಧ ಹುದ್ದೆಗಳನ್ನು ಅಲಂಕರಿಸಿ ನಗರಕ್ಕೆ ರಾಜ್ಯ, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದ ಕಲಾ ದಿಗ್ಗಜರನ್ನು ಆಹ್ವಾನಿಸಿ ಕಛೇರಿ ಸುಧೆಯನ್ನು ಕಲಾ ಪ್ರೇಮಿಗಳಿಗೆ ಉಣ ಬಡಿಸುವಲ್ಲಿ ಇವರ ಪಾತ್ರ ದೊಡ್ಡದು. ಸದ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ 80ರ ಹರೆಯದ ಶಾಸ್ತ್ರಿ, ವಿದ್ಯಾಗಣಪತಿ ಸಮಿತಿಯ ಅಮೃತ ಮಹೋತ್ಸವವನ್ನೂ ಯಶಗೊಳಿಸಿ 75 ಸಂಗೀತ ಕಛೇರಿ ಸಮನ್ವಯಿಸಿ ಹೊಸ ದಾಖಲೆ ಮಾಡಿದ ತಂಡದಲ್ಲಿ ಅಗ್ರಜರು.

ಸಂಗೀತ ಶಿಕ್ಷಣ ವ್ಯಕ್ತಿತ್ವಕ್ಕೆ ಸಂಸ್ಕಾರ ರೂಢಿಸಿ ಬದುಕನ್ನು ಎತ್ತರಕ್ಕೆ ಕೊಂಡೊಯ್ಯುತ್ತದೆ. ಮನಸ್ಸಿನ ಕಲಾತ್ಮಕ ಭಾಗವನ್ನು ವ್ಯಕ್ತಪಡಿಸಲು ಅನುವು ಮಾಡಿಕೊಡುತ್ತದೆ. ವ್ಯಕ್ತಿಯ ಭಾವನಾತ್ಮಕ, ಬೌದ್ಧಿಕ ಮತ್ತು ಆಧ್ಯಾತ್ಮಿಕ ಯೋಗಕ್ಷೇಮದ ನಡುವೆ ಸಮತೋಲನವನ್ನು ತರುತ್ತದೆ. ಸಂಗೀತವು ಆತ್ಮಕ್ಕೆ ಲಯ, ಮಾಧುರ್ಯ ಮತ್ತು ಸಾಮರಸ್ಯವನ್ನು ತಂದುಕೊಡುತ್ತದೆ. ಸಂಗೀತ ಕಲಿಕೆ ಒಂದು ಸೌಹಾರ್ದ ಮತ್ತು ಸುಂದರ ಸಮಾಜದ ಬೆಳವಣಿಗೆಗೆ ಅತ್ಯಗತ್ಯ. ನಾನು ನಾಟ್ಯ ತರಂಗಿಣಿ – ಕಲಾ ಶಾಲೆಯನ್ನು ಪ್ರಾರಂಭಿಸಲು ಇದೇ ಸ್ಫೂರ್ತಿ. 20 ವರ್ಷದಿಂದ ಭಗವಂತನ ಸೇವೆ ಎಂದೇ ಭಾವಿಸಿ ಸಾವಿರಾರು ಮಕ್ಕಳಿಗೆ ಬೋಧನೆ ಮಾಡಿದ್ದು, ಈ ಕೈಂಕರ್ಯ ನನಗೆ  ಧನ್ಯತೆ ನೀಡಿದೆ.
-ವಿದುಷಿ ಪರಿಮಳ, ನಟನ ತರಂಗಿಣಿ ಸಂಸ್ಥೆ ಸಂಸ್ಥಾಪಕ ಅಧ್ಯಕ್ಷೆ

ಬಾಲ್ಯದಲ್ಲಿಯೇ ಸರೋದ್ ವಾದನ ಕಲಿಕೆಗೆ ಒಲವು ತೋರಿದ ಶಾಸ್ತ್ರಿ ಅವರಿಗೆ ಸಂಗೀತವೆಂದರೆ ಪ್ರಾಣ. ವಿವಿಧ ರಾಗ, ತಾಣಗಳ ಬಗ್ಗೆ ಅವರಿಗೆ ಆಳವಾದ ಪ್ರೀತಿ ಇರುವ ಕಾರಣ ಅವರ ಅಂತರಂಗದಲ್ಲಿ ಸಂಗೀತ ಸರಸ್ವತಿಯಂತೆ ಗುಪ್ತಗಾಮಿನಿಯಾಗಿ ಹರಿಯುತ್ತಲೇ ಇದ್ದಾಳೆ. ಕಾನೂನು ಪದವೀಧರರಾದರೂ ಶಾಸ್ತ್ರಿ ಅವರು ಸಂಗೀತಾಸಕ್ತಿ ಬಿಡಲಿಲ್ಲ.
ವ್ಯಾಪಾರ, ಉದ್ಯಮದ ನಡುವೆಯೂ ಅವರಿಗೆ ಕಲಾವಿದರೆಂದರೆ ಅನನ್ಯ ಅಂತಃಕರಣ.  ಕಛೇರಿ ಎಂದರೆ ಸಮಯದ ಪರಿವೆಯೇ ಇಲ್ಲ. ಶಾಸ್ತ್ರೀಯ ಗಾಯನದ ಬಗ್ಗೆ ವಿಶೇಷವಾದ ಅಕ್ಕರೆ ರೂಢಿಸಿಕೊಂಡಂತಹ ವ್ಯಕ್ತಿತ್ವ. ಇದು ಕಲಾವಿದರು ಚಿಕ್ಕವರಿರಲಿ, ದೊಡ್ಡವರಿರಲಿ ಅವರನ್ನು ಪ್ರೀತಿಯಿಂದ ಕರೆದು, ಆದರಿಸಿ ವೇದಿಕೆ ನೀಡಿ, ಪ್ರೋತ್ಸಾಹಿಸಿ, ತಾವೂ ಅಲ್ಲಿ ಖುಷಿ ಕಂಡುಕೊಳ್ಳುವುದು ಶಾಸ್ತ್ರಿಗಳ ದೊಡ್ಡ ಗುಣ. ಸುಸಂಸ್ಕೃತ ಯಜಮಾನ ಹೇಗೆ ಇರಬೇಕು ಎಂಬುದಕ್ಕೆ ಇವರು ಮಾದರಿಯೂ ಹೌದು.

ಕಾಯಂ ಶ್ರೋತೃ
ಶಿವಮೊಗ್ಗ, ಸಾಗರ, ತೀರ್ಥಹಳ್ಳಿ ಸೇರಿದಂತೆ ಮಲೆನಾಡು, ಕರಾವಳಿ ವ್ಯಾಪ್ತಿಯಲ್ಲಿ ಸಂಗೀತ ಕಚೇರಿ ಎಲ್ಲೇ ನಡೆದರೂ ಅಲ್ಲಿ ಶಾಸ್ತ್ರಿಗಳ ಹಾಜರಾತಿ ಇರಲೇಬೇಕು. ಕಾರ್ಯಕ್ರಮದ ಅಂತ್ಯದವರೆಗೂ ಗಾನ ಸುಧೆ ಸವಿದು ಕಲಾವಿದರನ್ನು ಬೆನ್ನು ತಟ್ಟಿ ಬೆಂಬಲ ನೀಡುವುದು ಶಾಸ್ತ್ರಿಗಳ ಹಿರಿಯಗುಣ.

ತಮ್ಮ ಪರಿಸರದಲ್ಲಿ ಶಾಸ್ತ್ರೀಯ ಸಂಗೀತ ಪಾಲನೆ, ಪೋಷಣೆ ಮಾಡಿ ಕಲೆ ಪಲ್ಲವಿಸಲು ಸ್ಫೂರ್ತಿ ನೀಡುವ ಕ್ರಿಯಾಶೀಲ ವ್ಯಕ್ತಿತ್ವವೇ ಆಗಿರುವ ಶಾಸ್ತ್ರಿ ಯಾವುದೇ ಸನ್ಮಾನ, ಪ್ರಶಸ್ತಿ, ವೇದಿಕೆ ಇತ್ಯಾದಿಗಳ ಹಿಂದೆ ಹೋದವರಲ್ಲ. ನನ್ನನ್ನು ಗೌರವಿಸಿ ಎಂದು ಕೇಳಿದವರೇ ಅಲ್ಲ. ಕಲಾವಿದರಿಗೆ ಮನ್ನಣೆ ಸಿಕ್ಕರೆ ಅದು ತನಗೇ ಸಿಕ್ಕಿತು ಎಂದು ಹಿರಿಹಿರಿ ಹಿಗ್ಗುವ ಹಿರಿಯ ಜೀವ.
ಸಂಗೀತ ಕ್ಷೇತ್ರಕ್ಕೆ ಇಂಥವರ ಸೇವೆ ಯಾವತ್ತೂ ಬೇಕಿದೆ. ಇತ್ತೀಚೆಗೆ ಗಮಕ ಕಲಾ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿಯೂ ಇವರು ಆಯ್ಕೆಯಾಗಿರುವುದು ವಿಶೇಷ. ಬೆಂಗಳೂರಿನ ನಾಟ್ಯ ತರಂಗಿಣಿ ಸಂಸ್ಥೆ ಮಲೆನಾಡಿನ ಒಬ್ಬ ಅಪ್ಪಟ ಸಂಗೀತ ಪ್ರೇಮಿ ಮತ್ತು ಸಂಘಟಕರಾದ ಇಂಥ ವ್ಯಕ್ತಿತ್ವವನ್ನು ಗುರುತಿಸಿ ಗೌರವಾದರಕ್ಕೆ ಆಯ್ಕೆ ಮಾಡಿಕೊಂಡಿರುವುದು ಶಿವಮೊಗ್ಗಕ್ಕೇ ಹೆಮ್ಮೆ.

ಶ್ರೀನಿವಾಸರಿಗೆ ನಾದಶ್ರೀ ಪ್ರಶಸ್ತಿ
ಮೃದಂಗ ಮತ್ತು ತಬಲಾ ತಯಾರಿಕೆಯಲ್ಲಿ ಅಗ್ರಗಣ್ಯರಾದ ಬೆಂಗಳೂರಿನ ವಿದ್ವಾನ್ ಶ್ರೀನಿವಾಸ ಅನಂತ ರಾಮಯ್ಯ ಅವರಿಗೆ ಇದೇ ಸಂದರ್ಭ ಸಂಸ್ಥೆ ‘ನಾದ ಶ್ರೀ’ ಪ್ರಶಸ್ತಿ ನೀಡಿ ಸನ್ಮಾನಿಸುತ್ತಿದೆ.

ಕಲೆ ಬೆಳೆಯಲು, ನೂರ್ಕಾಲ ಬೆಳಗಲು ತೆರೆಹಿಂದೆ ಬಹು ಮುಖ್ಯ ಪಾತ್ರ ವಹಿಸುವವರನ್ನು ನಟನ ತರಂಗಿಣಿ ಸಂಸ್ಥೆ ಕಳೆದ ಎರಡು ವರ್ಷಗಳಿಂದ ಗೌರವಿಸುತ್ತಿರುವುದು ಒಂದು ಮಾದರಿ ಕಾರ್ಯವಾಗಿದೆ. ಈ ಮೂಲಕ ಸಂಸ್ಥೆಯ ಹೆಸರು ಮತ್ತು ಕೀರ್ತಿ ನೂರ್ಮಡಿಸುತ್ತಿದೆ. ತಾಯಿ ಪರಿಮಳಾ ಕಟ್ಟಿ ಬೆಳೆಸಿದ ಸಂಸ್ಥೆಗೆ ವಿದುಷಿ ಶ್ರೀಲತಾ ನಿಕ್ಷಿತ್ ಹೊಸ ಹೊಸ ಆಯಾಮ ನೀಡುತ್ತಿರುವುದು‘ ಹಾಲಿನ ತೊರೆಯಂತಿರುವ ಕಲಾ ಲೋಕಕ್ಕೆ ಬೆಲ್ಲದ ಕೆಸರು, ಸಕ್ಕರೆಯ ಮರಳು’ ಸೇರಿಸಿದಂತಾಗಿದೆ ಎಂಬುವುದೇ ಸುಕೃತ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Carnatic musicKannada News WebsiteLatest News KannadaShimogaShivamoggaShivamogga NewsTarangini School of Music and Danceಕಲಾಶ್ರಯಜಯರಾಮ ಸೇವಾ ಮಂಡಳಿತರಂಗಿಣಿ ಸ್ಕೂಲ್ ಆಫ್ ಮ್ಯೂಸಿಕ್ ಆ್ಯಂಡ್ ಡಾನ್ಸ್ಬೆಂಗಳೂರುಶಾಸ್ತ್ರೀಯ ಸಂಗೀತಶಿವಮೊಗ್ಗಸಂಗೀತಸುಬ್ರಮಣ್ಯ ಶಾಸ್ತ್ರಿಹೊಸೂಡಿ ವೆಂಕಟಶಾಸ್ತ್ರಿ
Share199Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾತರದ ಘಳಿಗೆಯಲ್ಲಿ ಕಾಲ್ಚೆಂಡಿನ ಕಾಳಗ | ಫುಟ್ಬಾಲ್ ಲೀಗ್ ನ ಫೈನಲ್ ಸಮರಕ್ಕೆ ಕ್ಷಣಗಣನೆ

Next Post

ಯುದ್ದ ಗೆದ್ದ ನಾನು ಶಿವಮೊಗ್ಗದಲ್ಲಿ ತುಕ್ಕು ಹಿಡಿಯುತ್ತಿದ್ದೇನೆ, ದಾರಿ ತೋರಿಸಿ | ಸೇನಾ ಟ್ಯಾಂಕರ್ ಸ್ಥಿತಿಗತಿ

kalpa News

kalpa News

Next Post
ಯುದ್ದ ಗೆದ್ದ ನಾನು ಶಿವಮೊಗ್ಗದಲ್ಲಿ ತುಕ್ಕು ಹಿಡಿಯುತ್ತಿದ್ದೇನೆ, ದಾರಿ ತೋರಿಸಿ | ಸೇನಾ ಟ್ಯಾಂಕರ್ ಸ್ಥಿತಿಗತಿ

ಯುದ್ದ ಗೆದ್ದ ನಾನು ಶಿವಮೊಗ್ಗದಲ್ಲಿ ತುಕ್ಕು ಹಿಡಿಯುತ್ತಿದ್ದೇನೆ, ದಾರಿ ತೋರಿಸಿ | ಸೇನಾ ಟ್ಯಾಂಕರ್ ಸ್ಥಿತಿಗತಿ

Leave a Reply Cancel reply

Your email address will not be published. Required fields are marked *

No Result
View All Result
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ
English Articles

Shivamogga SIR | District Achieves 81% e-Form Distribution

by kalpa News
July 8, 2026
0

Kalpa Media House  | Shivamogga | As part of the Election Commission of India’s statewide Special Summary Revision of the...

Read moreDetails
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
SPARSH RR Nagar Launches 5 Plastic Surgery Clinics of Excellence

SPARSH RR Nagar Launches 5 Plastic Surgery Clinics of Excellence

July 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL