No Result
View All Result
Minister Somanna Inspects & Inaugurates Road Under Bridges in Tumkur District eliminating level Crossing gates
English Articles

Minister Somanna Inspects & Inaugurates Road Under Bridges in Tumkur District eliminating level Crossing gates

by ಕಲ್ಪ ನ್ಯೂಸ್
February 26, 2026
0

Kalpa Media House  |  Bengaluru  | Union Minister of State for Railways and Jal Shakti, V. Somanna, today inaugurated three...

Read moreDetails
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
Amazon Opens Its Second Largest Office in Asia in Bengaluru

Amazon Opens Its Second Largest Office in Asia in Bengaluru

February 24, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

SWR Opens Makajipalli–Dharmavaram Double Line Project

February 23, 2026
  • Advertise With Us
  • Grievances
  • About Us
  • Contact Us
Sunday, March 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ರಿಪ್ಪನ್’ಪೇಟೆ, ಗರ್ತಿಕೆರೆ, ಕೋಣಂದೂರಿನ ಮತದಾರನ ಒಲವು ಹೇಗಿದೆ?

ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಲ್ಪ ನ್ಯೂಸ್ ವಿನೂತನ ಪ್ರಯತ್ನ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ವಾಸ್ತವ ಸಮೀಕ್ಷಾ ವರದಿ-10

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 21, 2019
in Special Articles
0
ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ರಿಪ್ಪನ್’ಪೇಟೆ, ಗರ್ತಿಕೆರೆ, ಕೋಣಂದೂರಿನ ಮತದಾರನ ಒಲವು ಹೇಗಿದೆ?
Share on FacebookShare on TwitterShare on WhatsApp

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ‘ಕಲ್ಪ ನ್ಯೂಸ್ ಲೋಕಾ ಯಾತ್ರೆ’ ಎಂಬ ಹೆಸರಿನ ಅಡಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡುವ ಸಾಹಸಕ್ಕೆ ಕೈಹಾಕಿದೆ.

ಚುನಾವಣಾ ನೀತಿ ಸಂಹಿತೆಯಿರುವ ಹಿನ್ನೆಲೆಯಲ್ಲಿ ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಎಷ್ಟು ಶೇಕಡಾವಾರು ಮತ ಬೀಳಬಹುದು, ಒಟ್ಟಾರೆ ಯಾರ ಗೆಲುವು ನಿಶ್ಚಿತ ಎಂಬುದನ್ನು ನಾವು ಸ್ಪಷ್ಟವಾಗಿ ಹೇಳುವುದಿಲ್ಲ. ಇಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರವಾಗಿ ಅಥವಾ ವಿರೋಧವಾಗಿ ಸಮೀಕ್ಷೆ ನಡೆಸದೇ, ಸದರಿ ಭಾಗದ ಸಮಸ್ಯೆಗಳು, ಜನರ ಮನದಾಳದ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ಜನರಿಗೆ ತಿಳಿಸುವ ಸಲುವಾಗಿ ಸ್ವತಂತ್ರವಾಗಿ ವಾಸ್ತವ ಸಮೀಕ್ಷೆಯನ್ನು ನಡೆಸಲಾಗಿದೆ. ಪ್ರತಿನಿತ್ಯ ನಮ್ಮ ತಂಡ ನೂರಾರು ಮತದಾರರನ್ನು ಮಾತನಾಡಿಸುತ್ತಿದ್ದು, ಇದರಲ್ಲಿ ಆಯ್ದ ಕೆಲವರ ಅನಿಸಿಕೆಗಳನ್ನು ಮಾತ್ರ ಪ್ರಕಟಿಸಿ, ಒಟ್ಟಾರೆಯಾಗಿ ಸದರಿ ಭಾಗದಲ್ಲಿನ ಒಲವು ಯಾರಿಗಿದೆ ಎಂಬುದನ್ನು ಓದುಗರಿಗೆ ತಿಳಿಸಿ, ನಿರ್ಧಾರವನ್ನೂ ಅವರಿಗೇ ಬಿಡುತ್ತೇವೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಾರ್ವಜನಿಕ ಚುನಾವಣೆ-2019: ರಿಪ್ಪನ್’ಪೇಟೆ, ಗರ್ತಿಕೆರೆ, ಕೋಣಂದೂರು, ಗೌತಮಪುರ, ಕನ್ನಂಗಿ ಭಾಗದಲ್ಲಿನ ಮತದಾರರ ಒಲವು, ನಿಲುವು:

ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರ:
ಶಾಸಕರು: ಆರಗ ಜ್ಞಾನೇಂದ್ರ

ಸಮೀಕ್ಷೆಯ ಒಟ್ಟಾರೆ ನಿರೀಕ್ಷಿತ ಫಲಿತಾಂಶ: ಬಿಜೆಪಿ-ಜೆಡಿಎಸ್-55:45

ರಾಘವೇಂದ್ರ ಅವಧಿಯಲ್ಲಿ ರೈಲು ನಿಲ್ದಾಣವಾಗಿದೆ. ಆದರೆ, ಕೃಷಿಕರಿಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ಕಿರುಕುಳ ನೀಡುತ್ತಿದ್ದು, ಇದರಿಂದ ಮುಕ್ತಿ ಬೇಕಿದೆ. ಅಲ್ಲದೇ, ಸುಮಾರು 4 ರಿಂದ 5 ಹಳ್ಳಿಗಳಿಗೆ ಸಹಾಯವಾಗುವ ಹಳಿಯಾರು ಸೇತುವೆ ನಿರ್ಮಾಣವಾಗಬೇಕಿದೆ. ಈ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಇದು ಲೋಕಸಭಾ ಚುನಾವಣೆಯಾದ್ದರಿಂದ ದೇಶವನ್ನೂ ನೋಡಬೇಕು. ಹೀಗಾಗಿ, ದೇಶವನ್ನು ರಕ್ಷಿಸುತ್ತಿರುವ ಮೋದಿ ಮತ್ತೆ ಪ್ರಧಾನಿಯಾಗಬೇಕು.

-ಪಾಂಡುರಂಗ, ಮೆಟಲ್ ಸ್ಟೋರ್ ಮಾಲಿಕ, ರಿಪ್ಪನ್’ಪೇಟೆ

ಶಾಸಕರಿಂದ ಯಾವುದೇ ದೊಡ್ಡ ಕೆಲಸಗಳು ಆಗಿಲ್ಲ. ಅಲ್ಲದೇ ರಾಘವೇಂದ್ರ ಅವರು ಸಂಸದರಾದ ನಂತರ ಯಾವುದೇ ರೀತಿಯ ಮಹತ್ವದ ಕಾರ್ಯಗಳು ನಮ್ಮೂರಲ್ಲಿ ಆಗಿಲ್ಲ. ಹಿಂದೆ ಬಂಗಾರಪ್ಪ ಅವರಿಂದ ನಮಗೆಲ್ಲಾ ಕೆಲಸವಾಗಿದೆ. ಹೀಗಾಗಿ, ಅವರ ಪುತ್ರನನ್ನು ಬೆಂಬಲಿಸೋಣ ಎಂದುಕೊಂಡಿದ್ದೇವೆ. ಇದರ ಜೊತೆಯಲ್ಲಿ ಮೋದಿ ಅಲೆಯೂ ಸಹ ನಮ್ಮೂರಲ್ಲಿ ಇದ್ದು, ಇದು ಬಿಜೆಪಿಗೆ ಕೊಂಚ ಮತಗಳನ್ನುಕೊಡಿಸಬಹುದು.  ಪ್ರಮುಖವಾಗಿ ನಮ್ಮೂರಿನ ಸನಿಹ ಕರಡಿಗ ಬಳಿಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನರಿಗೆ ಪ್ರಯೋಜನವಾಗುವ 100 ಮೀಟರ್ ಉದ್ದದ ಸೇತುವೆ ನಿರ್ಮಾಣವಾಗಬೇಕಿದೆ.

-ಮಂಜಪ್ಪ: ಕಾನಗೋಡು
-ಶಿವಪ್ಪ, ನಾಗಣ್ಣ, ಸತ್ಯನಾರಾಯಣ, ನಾಗರಾಜ್: ಹೆದ್ದಾರಿಪುರ

ದೇಶ ಸೇವೆ ಮಾಡುವವರು, ಸರ್ವರನ್ನೂ ಸಮನಾಗಿ ಕಾಣುವವರು ದೇಶದ ಅಧಿಕಾರದ ಚುಕ್ಕಾಣಿ ಹಿಡಿಯಲಿ. ನಮ್ಮೂರು ಗೌತಮಪುರದ ವಿಚಾರದಲ್ಲಿ ಹೇಳುವುದಾದರೆ, ಅಲ್ಲಿ ಆಸ್ಪತ್ರೆ ಸೌಕರ್ಯ ಬೇಕು, ವೈದ್ಯರು ಸದಾ ಸಿಗುವಂತಾಗಬೇಕು, ಮೊಬೈಲ್ ಟವರ್ ಬೇಕು ಹಾಗೂ ನಮ್ಮೂರಲ್ಲೇ ಪ್ರೌಢಶಾಲೆ ಬೇಕು.

-ಯಶೋಧ, ಗಾಯತ್ರಿ: ಗೌತಮಪುರ

ಹಿಂದೆ ಉಪಚುನಾವಣೆಯಲ್ಲಿ ರಾಘವೇಂದ್ರ ಲೀಡ್ ಪಡೆದಿದ್ದರು. ಆದರೆ ಈ ಬಾರಿ ಕೊಂಚ ಕಷ್ಟವಿದ್ದು, ಇಲ್ಲಿನ ಸರಾಸರಿ ಸಮ ಬಲ ಇದೆ ಎನ್ನಬಹುದು. ಅಲ್ಲದೇ, ಮೈತ್ರಿ ಪಕ್ಷವಾದ್ದರಿಂದ ಅವರಿಗೇ ಹೆಚ್ಚು ಲಾಭದಂತಿದೆ. ಅಲ್ಲದೇ, ಇಲ್ಲಿನ ಈಡಿಗ ಹಾಗೂ ಲಿಂಗಾಯತ ಸಮುದಾಯದವರೇ ನಿರ್ಣಾಯಕರು. ಯಡಿಯೂರಪ್ಪ ಹಾಗೂ ರಾಘವೇಂದ್ರ ಅವರಿಂದ ನಮ್ಮೂರಿಗೆ ಕೆಲಸವಾಗಿದೆ. ಇದು ಅವರಿಗೆ ಸಹಕಾರಿಯಾಗುವ ವಾತಾವರಣವಿದೆ.

-ಕಿರಣ್ ಕುಮಾರ್, ಸ್ಥಳೀಯ ಉದ್ಯಮಿ, ಗರ್ತಿಕೆರೆ(ಅಮೃತ ಗ್ರಾಮ ಪಂಚಾಯ್ತಿ)

ಯುವಕರಲ್ಲಿ ಮೋದಿ ಅಲೆ ಇದೆ. ಇದು ಬಿಜೆಪಿಗೆ ಸಹಕಾರಿಯಾಗಬಹುದು.
-ಶಿವಪ್ಪ, ಹೊಟೇಲ್ ಮಾಲೀಕ

ಇಲ್ಲಿ ಜೆಡಿಎಸ್’ಗೆ ಹೆಚ್ಚು ಬಲ ಎನ್ನಬಹುದಾಗಿದ್ದರೂ, ಪ್ರಸ್ತುತ ಪರಿಸ್ಥಿತಿಯಲ್ಲಿ 50:50ರಷ್ಟು ಸೆಣೆಸಾಟವಿದೆ.
-ಚಂದ್ರಪ್ಪ, ಕೃಷಿಕರು

ಇಲ್ಲಿನ ಗ್ರಾಮ ಪಂಚಾಯ್ತಿ ಬಿಜೆಪಿಯದ್ದೇ ಆದ್ದರಿಂದ ರಾಘವೇಂದ್ರ ಅವರಿಗೆ ಸಹಕಾರಿಯಾಗಬಹುದು. ಇವರಿಂದ ಕೆಲವು ಕೆಲಸವೂ ಸಹ ಆಗಿದೆ. ಈಡಿಗರು ಹೆಚ್ಚಿರುವ ಇಲ್ಲಿ, ಮಧು ಬಂಗಾರಪ್ಪ ಅವರ ಕುರಿತಾಗಿ ಅನುಕಂಪವೂ ಸಹ ಇದೆ. ನಕ್ಸಲ್ ಪೀಡಿತ ಕೊರ್ನಕೋಟೆ ಭಾಗದಲ್ಲಿ ಹಿಂದೆ ಕಿಮ್ಮನೆ ರತ್ನಾಕರ್ ಅವರು ಕೆಲಸವನ್ನು ಮಾಡಿದ್ದಾರೆ.  ಇನ್ನು, ಸಮಸ್ಯೆ ಕುರಿತಾಗಿ ಹೇಳುವುದಾದರೆ, ನಮ್ಮೂರಿನ ಪ್ರಾಥಮಿಕ ಶಾಲೆಯ ಕೊಠಡಿಗಳು ದುರಸ್ಥಿಯಾಗಬೇಕಿದೆ. ಇದರು ಆಗದೇ ಇದ್ದಲ್ಲಿ ಎಂದಾದರೂ ಅಪಾಯ ನಿಶ್ಚಿತ. ಇನ್ನು, ಇಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರು ಶಿವಮೊಗ್ಗದಲ್ಲಿ ವಾಸವಾಗಿದ್ದಾರೆ. ಸಂಜೆ ನಂತರ ಯಾರಿಗಾದರೂ ಆರೋಗ್ಯ ಹದಗೆಟ್ಟರೆ ಕೋಣಂದೂರಿಗೇ ಹೋಗಬೇಕು. ಹೀಗಾಗಿ, ವೈದ್ಯರು ಇಲ್ಲೇ ವಾಸಿಸುವಂತೆ ಆಗಬೇಕು.

-ಧರ್ಮಣ್ಣ, ಕೆಸರಿ, ಹುಂಚದಕಟ್ಟೆ

ನಮ್ಮೂರಿನ ಸ್ಮಶಾನದ ಸಮಸ್ಯೆ ವಿಚಾರದಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಯಾರೂ ಇದನ್ನು ಪರಿಹಾರ ಮಾಡಲಿಲ್ಲ. ಹೀಗಾಗಿ, ಈ ಬಾರಿ ಬದಲಾವಣೆ ಮಾಡೋಣ ಎಂದು ನಿರ್ಧರಿಸಿದ್ದೇವೆ. ನಾವು ಜಾತಿ ನೋಡುವುದಿಲ್ಲ, ಬದಲಾಗಿ ಕೆಲಸ ನೋಡುತ್ತೇವೆ. ಸ್ಮಶಾನದ ಸಮಸ್ಯೆಯನ್ನು ಪರಿಹಾರ ಮಾಡಿಕೊಡುವವರಿಗೆ ನಮ್ಮ ಬೆಂಬಲ. ಇಲ್ಲೆಲ್ಲಾ ಮೋದಿ ಅಲೆ ಇಲ್ಲ. ನಮ್ಮ ಸಮಸ್ಯೆ ಮೊದಲು, ಆನಂತರ ದೇಶ.

-ಶಿವು, ಶಾಂತಕುಮಾರ್, ವಿಜಯ್, ಹೀರಾನಾಯ್ಕ, ಸತೀಶ್, ಗಿರೀಶ್: ಕೃಷಿಕರು, ಶಂಕರಹಳ್ಳಿ(ಹಾದಿಗಲ್ಲು ಗ್ರಾಮಪಂಚಾಯ್ತಿ)

ಇಲ್ಲಿ ಕಾಂಗ್ರೆಸ್ ಹೆಚ್ಚಾಗಿದೆ. ಆದರೆ, ಈ ಬಾರಿ ಮೈತ್ರಿ ಅಭ್ಯರ್ಥಿಗೆ ಬೆಂಬಲ. ರಾಘವೇಂದ್ರ ಅವರ ಬದಲಾಗಿ ಪರ್ಯಾಯ ವ್ಯಕ್ತಿಗೆ ಅವಕಾಶ ನೀಡೋಣ ಎಂದಿದ್ದೇವೆ. ಇಲ್ಲಿ ಕಿಮ್ಮನೆ ರತ್ನಾಕರ್ ಅವರಿಂದ ಕೆಲಸವಾಗಿದೆ. ಇನ್ನು, ಮೋದಿ ಅಲೆ ನಮ್ಮ ಊರಿನಲ್ಲಿ ಇಲ್ಲ. ನಮಗೆಲ್ಲಾ ಎಸ್. ಬಂಗಾರಪ್ಪ ಅವರ ಮೇಲೆ ಇಂದಿಗೂ ಅಭಿಮಾನವಿದೆ.

-ಮುರುಳಿ, ಬೆಜ್ಜುವಳ್ಳಿ

ಆರಗ ಜ್ಞಾನೇಂದ್ರ ಅವರು ಸಾಕಷ್ಟು ಕೆಲಸ ಮಾಡಿದ್ದಾರೆ. ಇಲ್ಲಿ ಮೋದಿ ಅಲೆಯೂ ಸಹ ಇದೆ. ಆದರೂ ಇಲ್ಲಿ ಸಮಾ ಸಮ ಸೆಣೆಸಾಟ ಇರುವುದಂತೂ ಸತ್ಯ. ಯಾರೇ ಮೈಮರೆತರೂ ಪೆಟ್ಟು ನಿಶ್ಚಿತ. ದೇಶದ ಮಟ್ಟಿಗೆ ನೋಡುವುದಾದರೆ, ದೇಶದ ಮುಂಚೂಣಿ ಹೋರಾಟಗಾರ, ದೇಶವನ್ನು ರಕ್ಷಿಸುತ್ತಿರುವ ಮೋದಿ ಮತ್ತೆ ಪ್ರಧಾನಿಯಾಗಲೇಬೇಕು.

-ಮಿಥುನ್, ಮೇಳಿಗೆ
-ಸಚಿನ್, ಕೋಣಂದೂರು
-ಸಚಿನ್, ಹೊಸನಗರ
(ವಿದ್ಯಾರ್ಥಿ ಯುವ ಮತದಾರರು)

ಇಲ್ಲಿ ಬಿಜೆಪಿಯದ್ದೇ ಹವಾ. ಇದರೊಂದಿಗೆ ಮೋದಿ ಅಲೆಯೂ ಸಹ ಇದೆ. ಎರಡೂ ಪಕ್ಷದವರು ಬಂದು ಹೋಗಿದ್ದಾರೆ. ಆದರೆ, ನಮ್ಮಲ್ಲಿನ ಬೆಂಬಲ ಮೋದಿ ಅವರಿಗೆ. ನಮ್ಮೂರಿನ ಮಟ್ಟಿಗೆ ನೋಡುವುದಾದರೆ, ಕೋಣಂದೂರಿಗೆ ಒಂದು ಡಿಗ್ರಿ ಕಾಲೇಜು ಬೇಕು.

-ಚೇತನ್, ಜೆಡ್ಡಿನಗದ್ದೆ, ಕನ್ನಂಗಿ ಗ್ರಾಮಪಂಚಾಯ್ತಿ

ಸಾಲಮನ್ನಾ ಅಂತಾರೆ ಯಾರಿಗೆ ಬಂದಿದೆ. ನಮ್ಮೂರಲ್ಲಿಯಂತೂ ಯಾರಿಗೂ ಮನ್ನಾ ಆಗಿಲ್ಲ. ಬರೀ ದುಡ್ಡಿದ್ದವರಿಗೆ ಮನ್ನಾ ಮಾಡುತ್ತಾರೆ. ನಮ್ಮಂತವರನ್ನು ಯಾರೂ ಕೇಳುವುದಿಲ್ಲ. ನಮ್ಮಲ್ಲಿ ವಿದ್ಯುತ್ ಸಮಸ್ಯೆಯಿದ್ದು ದಿನದಲ್ಲಿ ಕೇವಲ 3 ಗಂಟೆ ಇರುತ್ತದೆ. ಇಲ್ಲಿ, ಯಾರಿಗೂ ಅನುಕಂಪವಿಲ್ಲ. ಬದಲಾಗಿ, ಸ್ಥಳೀಯ ಹಾಗೂ ದೇಶದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತವಿರಬೇಕು. ಗೊಬ್ಬರಕ್ಕೆ ಸಬ್ಸಿಡಿ ಬೇಕು. ಇದೊಂದು ವಿಚಾರ ಮಾಡಿದರೆ ನಮ್ಮ ಸಾಲವನ್ನು ನಾವೇ ತೀರಿಸಿಕೊಳ್ಳುತ್ತೇವೆ. ಯಾರೂ ಸಾಲಮನ್ನಾ ಮಾಡುವುದು ಬೇಡ.

-ಸತ್ಯನಾರಾಯಣ್, ಪ್ರಭಾಕರ್, ಉದಯ್, ಗಣೇಶ್: ಕನ್ನಂಗಿ

ಈ ಭಾಗದ ಸಮೀಕ್ಷೆ ಕುರಿತಾಗಿ ನಮ್ಮ ಒಟ್ಟಾರೆ ಅಭಿಪ್ರಾಯ:

ಈ ಭಾಗದಲ್ಲಿ ಒಟ್ಟಾರೆಯಾಗಿ ಬಿಜೆಪಿ-ಮೈತ್ರಿ ಅಭ್ಯರ್ಥಿಗೆ 60:40 ಸೆಣೆಸಾಟವಿದ್ದರೂ ಕೆಲವು ಭಾಗದಲ್ಲಿ ಬಿಜೆಪಿ ಬಲವಾಗಿದ್ದರೆ, ಇನ್ನು ಕೆಲವು ಭಾಗದಲ್ಲಿ ಬಿಜೆಪಿಗೆ ವಿರೋಧವಿದ್ದು, ಜೆಡಿಎಸ್’ಗೆ ಮತ ಚಲಾವಣೆಯಾಗಲಿವೆ.

ಮಲೆನಾಡು ಭಾಗದಲ್ಲಿ ಹಲವಾರು ಸಮಸ್ಯೆಗಳು ಮಡುಗಟ್ಟಿದ್ದು, ಸ್ಥಳೀಯ ಜನಪ್ರತಿನಿಧಿಗಳು ಸೇರಿದಂತೆ ದೊಡ್ಡ ಮಟ್ಟದ ನಾಯಕರೂ ಸಹ ಯಾವುದೇ ರೀತಿಯ ಸ್ಪಂದನೆಯಿಲ್ಲ ಎಂಬುದು ಇಲ್ಲಿನವರ ಆಕ್ರೋಶವಾಗಿದೆ. ಆದರೂ ಸಹ ಹಲವು ಅಭಿವೃದ್ಧಿ ಕಾರ್ಯಗಳು ಇಲ್ಲಿ ಕಾಣುತ್ತವೆ.

ಇದರ ನಡುವೆಯೇ ಮತದಾನಕ್ಕೆ ಇನ್ನೊಂದು ದಿನ ಬಾಕಿಯಿದ್ದು, ಈ ಭಾಗದ ಮಂದಿ ಯಾರಿಗೆ ಒಲಿಯಲಿದ್ದಾರೆ ಎಂಬ ಕುತೂಹಲ ಮೂಡಿದೆ.
-ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ವಿಶೇಷ ಸೂಚನೆ: ಈ ಚುನಾವಣಾ ಸಮೀಕ್ಷಾ ವರದಿ ಯಾವುದೇ ಪಕ್ಷಕ್ಕೆ ಅಥವಾ ಅಭ್ಯರ್ಥಿಯ ಪರವಾಗಿ ನಡೆಸಲಾಗಿರುವುದಿಲ್ಲ. ಬದಲಾಗಿ, ನಮ್ಮ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದ ಪ್ರತಿನಿಧಿಗಳು ಜನಸಾಮಾನ್ಯರನ್ನು ಖುದ್ದು ಸಂಪರ್ಕಿಸಿ, ಅವರ ಕಷ್ಟ-ಸುಖ ಹಾಗೂ ಚುನಾವಣೆ ಕುರಿತಾಗಿನ ಅವರ ಮನದಾಳದ ಭಾವನೆ ಹಾಗೂ ಅಭಿಪ್ರಾಯವನ್ನು ಸಂಗ್ರಹಿಸಿ, ಓದುಗರಿಗೆ ವಾಸ್ತವಾಂಶವನ್ನು ತೆರೆದಿಡುವ ಪ್ರಾಮಾಣಿಕ ಸೇವಾ ಕಾರ್ಯವನ್ನಷ್ಟೇ ಮಾಡಿದೆ.
Tags: BJPcongressElection Survey in KannadaIndia election 2019JDSKalpa News Digital MediaKannada NewsLoksabha election 2019Malnad NewsShivamoggaSpecial Articleಆರಗ ಜ್ಞಾನೇಂದ್ರಕಲ್ಪನ್ಯೂಸ್ ಲೋಕಾಯಾತ್ರೆಚುನಾವಣಾ ಸಮೀಕ್ಷೆ
Share196Tweet123Send
Previous Post

ಭೀಕರ ರಸ್ತೆ ಅಪಘಾತ: 7 ಪ್ರಯಾಣಿಕರ ಸಾವು

Next Post

Big Breaking: ಉಗ್ರರ ಅಟ್ಟಹಾಸಕ್ಕೆ ನಲುಗಿದ ಶ್ರೀಲಂಕಾ: 129 ಮಂದಿ ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Big Breaking: ಉಗ್ರರ ಅಟ್ಟಹಾಸಕ್ಕೆ ನಲುಗಿದ ಶ್ರೀಲಂಕಾ: 129 ಮಂದಿ ಸಾವು

Big Breaking: ಉಗ್ರರ ಅಟ್ಟಹಾಸಕ್ಕೆ ನಲುಗಿದ ಶ್ರೀಲಂಕಾ: 129 ಮಂದಿ ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

ರಕ್ತದಾನದಿಂದ ಕನಿಷ್ಠ ಮೂರು ಜೀವಗಳನ್ನು ಉಳಿಸಬಹುದು: ಡಾ. ನಾಗರಾಜ ಅಭಿಪ್ರಾಯ

February 28, 2026
ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

ಬೆಂಗಳೂರು | ‘ಮ್ಯಾಚ್ ಡೇ 2026’ ವಿನೂತನ ಕಾರ್ಯಕ್ರಮಕ್ಕೆ ಅದ್ಧೂರಿ ಚಾಲನೆ

February 28, 2026
ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

ಪ್ರೇರಣ ಪಬ್ಲಿಕ್ ಶಾಲೆ ನಾವಿನ್ಯಯುತ ಚಿಂತನಾತ್ಮಕ ಕಲಿಕೆಗೆ ವೇದಿಕೆ: ಸೋಮಶೇಖರಯ್ಯ

February 28, 2026
ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

ಶೀಘ್ರದಲ್ಲೇ ಚಿತ್ರದುರ್ಗ-ದಾವಣಗೆರೆ ರೈಲು ಸಂಚಾರ ಪ್ರಾರಂಭ: ಕೇಂದ್ರ ಸಚಿವ ಸೋಮಣ್ಣ

February 28, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಮಾರ್ಚ್ 1 ರಂದು ಬೆಂಗಳೂರಿನಿಂದ ಮುಂಬೈಗೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸಂಚಾರ

February 28, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL