No Result
View All Result
South Western Railway, Mysuru Division Hosts Inter Department Drama Competition
English Articles

South Western Railway, Mysuru Division Hosts Inter Department Drama Competition

by ಕಲ್ಪ ನ್ಯೂಸ್
May 16, 2026
0

Kalpa Media House  |  Bengaluru  | The South Western Railway, Mysuru Division, successfully organized the much-awaited Inter Department Drama Competition,...

Read moreDetails
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
AESL Launches Victory Batch at Rs 99 to support students appearing for RE-NEET

AESL Launches Victory Batch at Rs 99 to support students appearing for RE-NEET

May 13, 2026
Why The Hell Did You Make Manya Surve a Hero?: Sanjay Gupta Opens Up on Underworld Threats

Why The Hell Did You Make Manya Surve a Hero?: Sanjay Gupta Opens Up on Underworld Threats

May 13, 2026
  • Advertise With Us
  • Grievances
  • About Us
  • Contact Us
Saturday, May 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಭದ್ರಾವತಿ ಗ್ರಾಮೀಣದಲ್ಲಿ ಎಂಪಿಎಂ, ವಿಐಎಸ್’ಎಲ್ ಕಿಡಿ ಸ್ಫೋಟ

ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಲ್ಪ ನ್ಯೂಸ್ ವಿನೂತನ ಪ್ರಯತ್ನ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ವಾಸ್ತವ ಸಮೀಕ್ಷಾ ವರದಿ-3

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 10, 2019
in Special Articles
0
ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಭದ್ರಾವತಿ ಗ್ರಾಮೀಣದಲ್ಲಿ ಎಂಪಿಎಂ, ವಿಐಎಸ್’ಎಲ್ ಕಿಡಿ ಸ್ಫೋಟ
Share on FacebookShare on TwitterShare on WhatsApp

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ‘ಕಲ್ಪ ನ್ಯೂಸ್ ಲೋಕಾ ಯಾತ್ರೆ’ ಎಂಬ ಹೆಸರಿನ ಅಡಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡುವ ಸಾಹಸಕ್ಕೆ ಕೈಹಾಕಿದೆ.

ಚುನಾವಣಾ ನೀತಿ ಸಂಹಿತೆಯಿರುವ ಹಿನ್ನೆಲೆಯಲ್ಲಿ ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಎಷ್ಟು ಶೇಕಡಾವಾರು ಮತ ಬೀಳಬಹುದು, ಒಟ್ಟಾರೆ ಯಾರ ಗೆಲುವು ನಿಶ್ಚಿತ ಎಂಬುದನ್ನು ನಾವು ಸ್ಪಷ್ಟವಾಗಿ ಹೇಳುವುದಿಲ್ಲ. ಇಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರವಾಗಿ ಅಥವಾ ವಿರೋಧವಾಗಿ ಸಮೀಕ್ಷೆ ನಡೆಸದೇ, ಸದರಿ ಭಾಗದ ಸಮಸ್ಯೆಗಳು, ಜನರ ಮನದಾಳದ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ಜನರಿಗೆ ತಿಳಿಸುವ ಸಲುವಾಗಿ ಸ್ವತಂತ್ರವಾಗಿ ವಾಸ್ತವ ಸಮೀಕ್ಷೆಯನ್ನು ನಡೆಸಲಾಗಿದೆ. ಪ್ರತಿನಿತ್ಯ ನಮ್ಮ ತಂಡ ನೂರಾರು ಮತದಾರರನ್ನು ಮಾತನಾಡಿಸುತ್ತಿದ್ದು, ಇದರಲ್ಲಿ ಆಯ್ದ ಕೆಲವರ ಅನಿಸಿಕೆಗಳನ್ನು ಮಾತ್ರ ಪ್ರಕಟಿಸಿ, ಒಟ್ಟಾರೆಯಾಗಿ ಸದರಿ ಭಾಗದಲ್ಲಿನ ಒಲವು ಯಾರಿಗಿದೆ ಎಂಬುದನ್ನು ಓದುಗರಿಗೆ ತಿಳಿಸಿ, ನಿರ್ಧಾರವನ್ನೂ ಅವರಿಗೇ ಬಿಡುತ್ತೇವೆ.

ಜಂಕ್ಷನ್, ಉಂಬ್ಳೇಬೈಲ್ ಸೇರಿದಂತೆ ಭದ್ರಾವತಿ ಗ್ರಾಮೀಣ ಭಾಗ ಮತದಾರರ ಒಲವು-ನಿಲುವು ಹೀಗಿದೆ:

ತಿಮ್ಲಾಪುರ ಗ್ರಾಮ(ಭದ್ರಾವತಿ ನಗರಸಭೆಯ 23ನೆಯ ವಾರ್ಡ್):
ಪ್ರಸ್ತುತ ಲೋಕಸಭಾ ಚುನಾವಣಾ ಪ್ರಚಾರ ಪ್ರಕ್ರಿಯೆಯ ಬಗ್ಗೆ ಇಲ್ಲಿಯವರೆಗೂ ಯಾರೂ ಬಂದು ನಮ್ಮನ್ನ ಕಂಡಿಲ್ಲ, ಮಾತಾಡಿಸಿಲ್ಲ. ಐನೂರು ಮನೆಗಳಿವೆ. ನಾವು ಕೇಳೋದಿಷ್ಟೆ, ಎಂಪಿಎಂ ಶುರು ಮಾಡಿ ಮತ್ತೆ ವಿಐಎಸ್’ಎಲ್’ಗೆ ಚೇತರಿಕೆ ತನ್ನಿ. ಆದರೆ ಯಾರೂ ಈವರೆಗೆ ಮಾಡಿಲ್ಲ. ಸಾವಿರದ ನೂರು ಮತಗಳಿವೆ. ಲೋಕಲ್ ಆಗಿ ನಮಗೆ ಸಮಸ್ಯೆ ಇದೆ. ಹಾಗಾಗಿ ನಾವು ಜೆಡಿಎಸ್ ಪರ. ಆದರೆ ಕೇಂದ್ರದಲ್ಲಿ ನಮ್ಮ ಒಲವು ಮೋದೀಜಿಗೇ…!

-ಎಚ್.ಎನ್. ಪ್ರಸಾದ್,
ಇಲ್ಲಿನ ಚಹಾ ಅಂಗಡಿ ಮಾಲಿಕ ಸುಮಾರು ನಲವತ್ತು ವರ್ಷಗಳಿಂದ ಎಂಟು ಲೋಕಸಭಾ ಚುನಾವಣೆ ಅಭ್ಯಸಿಸಿರುವ ಮತದಾರ

“““““““““““

ಇಲ್ಲಿನ ಹಳೇಮಂದಿ ಪಕ್ಷಾಧರಿತ. ಅವರು ಕಾಂಗ್ರಸ್ಸು ಅಂದ್ರೆ ಯಾವತ್ತಿಗೂ ಅದೇ. ಅಂಥವರನ್ನ ಬದಲಿಸಲಿಕ್ಕೆ ಸಾಧ್ಯವಿಲ್ಲ. ಸ್ಥಳೀಯ ನಮ್ಮ ಬೆಂಬಲ ಜೆಡಿಎಸ್, ಕೇಂದ್ರದಲ್ಲಿ ಮೋದೀಜಿಯನ್ನು ಕೂರಿಸಬೇಕು .ಇಲ್ಲಿಗೆ ಯಡ್ಯೂರಪ್ಪನವರಾಗಲೀ ರಾಘವೇಂದ್ರ ಆಗಲೀ ಭೇಟಿ ನೀಡಿಯೇ ಇಲ್ಲ. ಬಡವರನ್ನ ಮಾತಾಡಿಸುವವರೇ ಇಲ್ಲ ಎಂದು ದುಮ್ಮಾನ ತೋಡಿಕೊಂಡರು. ಇದಕ್ಕೂ ಮಿಗಿಲಾಗಿ ವಿಐಎಸ್’ಎಲ್ ವೀಕು, ಎಂಪಿಎಂ ಮುಚ್ಚಿತು. ಬಿಜೆಪಿ ಆಡಳಿತದಲ್ಲಿದ್ದಾಗಲೂ ಯಾಕೆ ಕ್ರಮಕೈಗೊಳ್ಳಲಿಲ್ಲ? ಅವರದ್ದೇ ಸರ್ಕಾರ ಕೇಂದ್ರದಲ್ಲಿದೆ. ಆದರೆ, ಏನು ಮಾಡಿದರು?

-ರವಿ ಮತ್ತು ದೊಡ್ಡಯ್ಯ ಕೃಷಿಕರು

ಬಾಳೆಮಾರನಹಳ್ಳಿ, ಅರಳಿಕೊಪ್ಪ ಪಂಚಾಯತ್’ನ ಮುಖ್ಯಗ್ರಾಮ:
ಸುಮಾರು ಮುನ್ನೂರು ಮತದಾರರಿದ್ದಾರೆ. ಕೃಷಿಕ ಮೋಹನ್ ಮಾತನಾಡಿ, ಇಲ್ಲಿ ವೋಟು ಕೇಳಲು ಇನ್ನೂ ಯಾರೂ ಬಂದಿಲ್ಲ. ಜೆಡಿಎಸ್ ಪರ ಒಲವೇ ಜಾಸ್ತಿ ಇದೆ. ಹಿಂದಿನ ಲೋಕಸಭಾ ಚುನಾವಣೆಯಲ್ಲಿ ಇಲ್ಲಿ ಜೆಡಿಎಸ್ ಗೆ ಲೀಡ್ ಬಂದಿತ್ತು. ಈ ಸಾರಿ ಐಟಿ ದಾಳಿ ಮಾಡಿಸಿದ ಬಿಜೆಪಿ ಕೇಂದ್ರ ಸರ್ಕಾರದ ಕ್ರಮ ಸಾಧುವಲ್ಲ. ಯಾಕ್ರೀ ಕೇವಲ ಕಾಂಗ್ರೆಸ್ಸು, ಜೆಡಿಎಸ್ ನವರ ಹತ್ತಿರ ಮಾತ್ರ ಹಣ ಇದ್ಯಾ? ಬಿಜೆಪಿ ಅವರ ಹತ್ರ ಇಲ್ವಾ? ಎಂದು ಆಕ್ರೋಶ ವ್ಯಕ್ತಪಡಿಸಿದರು. ಇನ್ನೋರ್ವ ರೈತ ಶಿವಕುಮಾರ್ ಇದಕ್ಕೆ ಅವರು ಕೂಡಲೇ ಮಾತಿನ ಜಟಾಪಟಿ ಶುರು ಮಾಡಿದರು. ಟೀವಿ ಕಾರ್ಯಕ್ರಮದ ರೀತಿಯಿತ್ತು ಅವರೀರ್ವರ ಮಾತುಕತೆ. ಅಲ್ಲಿಂದ ನಮ್ಮ ತಂಡ ಹೊರಡುವಷ್ಟರಲ್ಲಿ ಸಾಕುಸಾಕಾಯಿತು.

ಅರಳಿಕೊಪ್ಪ ಗ್ರಾಮ:
ಒಂದು ಸಾವಿರ ಮತದಾರರಿದ್ದಾರೆ. ಇಲ್ಲಿಗೆ ಯಾರೂ ಬಂದಿಲ್ಲ. ಎಲೆಕ್ಷನ್ ಮೂರುದಿನ ಇದ್ದಾಗ ಬರ್ತಾರೆ. ಇಲ್ಲಿ ಕೂಲಿಜನ ಜಾಸ್ತಿ. ಹಣದ ಪ್ರಭಾವ ನಡೆಯುತ್ತೆ ಎನ್ನು ಅರ್ಥ ಬರುವಂತೆ ಮೂಗಿಮ್ಮಾಗಿ ಮಾತಾಡಿ… ಹೀಗಾಗಿ ಮೋದಿ ಇಲ್ಲ, ಮೈತ್ರೀನೂ ಇಲ್ಲ…

-ಶ್ರೀನಿವಾಸ್, ಕೃಷಿಕ

ಬೊಮ್ಮನಕಟ್ಟೆ(ಭದ್ರಾವತಿ ನಗರಸಭೆಯ 24ನೆಯ ವಾರ್ಡ್)
ಅಂದಾಜು 3800 ಮತದಾರರಿರುವ ಗ್ರಾಮ. ಕಳೆದ ಲೋಕಸಭಾ ಉಪಚುನಾವಣೆಯಲ್ಲಿ ಮೈತ್ರಿ ಪಕ್ಷಕ್ಕೆ ಲೀಡ್ ಕೊಡಲಾಗಿತ್ತು. ಈಗ ಮೋದಿ ಬಗ್ಗೆ ಒಲವು ಕಂಡುಬರುತ್ತಿದೆ.

-ಶಿವರಾಜ್, ಸಿವಿಲ್ ಗುತ್ತಿಗೆದಾರ

ಹಿರಿಯೂರು ಪಂಚಾಯತ್ ಕೇಂದ್ರ
ಅಂದಾಜು 4000 ಮತಗಳಿರುವ ಪ್ರದೇಶ ಇದು. ಇಲ್ಲಿ ಎರಡೂ ಪಕ್ಷಗಳಿಗೂ ಸಮ ಸಮ ಬಲವಿದೆ. ಇಬ್ಬರೂ ಹೋರಾಡಲೇಬೇಕು. ಆದರೆ, ಈವರೆಗೂ ಯಾರೂ ಬಂದಿಲ್ಲ.

-ನಾಗರಾಜ್, ವಿಶ್ರಾಂತ ನೌಕರ

ಲಕ್ಕವಳ್ಳಿ ಜಂಕ್ಷನ್:
ಈ ಭಾಗದಲ್ಲಿ ಎರಡೂ ಪಕ್ಷಗಳು ಬಹುತೇಕ ಸಮಬಲ ಹೊಂದಿದ್ದರೂ, ಜೆಡಿಎಸ್’ಗೆ ಹೆಚ್ಚು ಒಲವಿದೆ ಎಂದೇ ಹೇಳಬಹುದು. ಸ್ಥಳೀಯ ಜೆಡಿಎಸ್ ಮುಖಂಡರು ಹಾಗೂ ಮಾಜಿ ಶಾಸಕರಿಂದಾಗಿ ಇಲ್ಲಿ ಆ ಪಕ್ಷದ ಪ್ರಭಾವ ಹೆಚ್ಚು.

-ಹನೀಸ್, ಬೇಕರಿ ಮಾಲಿಕ

ಇಲ್ಲಿ ಸುಮಾರು 4400 ಮತಗಳಿವೆ. ವಿಧಾನಸಭೆಗೆ ನಾವು ಜೆಡಿಎಸ್ ಪರ. ಆದರೆ, ಈಗ ಲೋಕಸಭಾ ಚುನಾವಣೆಯಾದ್ದರಿಂದ ನಾವು ಬಿಜೆಪಿಗೆ ಬೆಂಬಲಿಸೋದು. ದೇಶಕ್ಕೆ ಮೋದಿ ಮತ್ತೆ ಪ್ರಧಾನಿಯಾಗಲೇಬೇಕು.

-ಮಂಜುನಾಥ್, ಜಂಕ್ಷನ್’ನಿಂದ ಭದ್ರಾವತಿಗೆ ಹಾಲು ಮಾರಾಟ ಮಾಡುವ ಯುವಕ

ಮಲ್ಲಿಗೇನಹಳ್ಳಿ:
ನಮ್ಮ ಗ್ರಾಮದ ಮತದಾರ ದೊಡ್ಡ ಆಕಾಂಕ್ಷೆಯಿಟ್ಟುಕೊಂಡಿದ್ದಾನೆ. ಆ ಗ್ರಾಮದಲ್ಲಿ ಚಾಮುಂಡೇಶ್ವರಿ ದೇವಸ್ಥಾನ ನಿರ್ಮಾಣವಾಗಬೇಕಿದೆ. ಯಾರು ಭರವಸೆ ಕೊಡುತ್ತಾರೋ ಅವರಿಗೇ ಸಾರಾಸಗಟು ಓಟು. ಇದು ಅಲ್ಲಿ ಒಮ್ಮತದ ನಿರ್ಧಾರ. ಹಿಂದಿನ ಜೆಡಿಎಸ್ ಶಾಸಕರಿಂದ ರಸ್ತೆ, ಚರಂಡಿಯಾಗಿದೆ.
ಈಗ ದೇವಾಲಯ ಬೇಕು.

-ವೆಂಕಟೇಶ ಬೋವಿ

ಕಣಗಲಸರ(ಉಂಬ್ಳೆಬೈಲ್ ಪಂಚಾಯತ್)
ಮಹೇಶ್, ಪ್ರಶಾಂತ್ ಮತ್ತು ಕಿರಣ್ ಎಂಬ ಯುವಕರು ಮೊದಲ ಬಾರಿಗೆ ವೋಟಿನ ಹಕ್ಕು ಪಡೆದ ಖುಷಿಯಲ್ಲಿದ್ದರು. ಇಲ್ಲಿ ಸುಮಾರು 450 ಮತಗಳಿದ್ದು, 40-45ರಿಂದ ಯುವ ಮತದಾರಿದ್ದಾರೆ. ಮೋದಿಗೇ ನಮ್ಮ ಮತ ಎಂದರು.

ಉಂಬ್ಳೇಬೈಲು:
800 ಮನೆಗಳಿರುವ ಗ್ರಾಮ. ಅಂದಾಜು 1800 ಮತಗಳಿವೆ. ಇಲ್ಲಿನ ಅಭಿಪ್ರಾಯ ಪ್ರಕಾರ ಶೇ.75 ಬಿಜೆಪಿ, ಶೇ.25 ಜೆಡಿಎಸ್.
ಸಮಸ್ಯೆಯೆಂದರೆ ಕುಡಿಯುವ ನೀರಿನ ಸರಬರಾಜು ಸರಿಯಾಗಿಲ್ಲ. ಪದೇಪದೇ ಕೆಟ್ಟು ಹೋಗುತ್ತಿರುತ್ತದೆ. ಅನಿಯಂತ್ರಿತವಾಗಿ ಸ್ಥಾಪನೆಯಾಗುತ್ತಿರುವ ಕೋಳಿ ಫಾರ್ಮ್’ಗಳಿಂದ ಮನೆ ನೊಣಗಳ ಕಾಟ ಸಹಿಸಲಸಾಧ್ಯವಾಗಿದೆ. ಇದನ್ನು ಎಲ್ಲ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿ ಹೋಗಿದ್ದಾರೆ. ಸಮಸ್ಯೆ ಬಗೆಹರಿದಿಲ್ಲ. ಸಮಸ್ಯೆ ಪರಿಹಾರಕ್ಕೆ ಯಾವ ರಾಜಕೀಯ ಪಕ್ಷದವರೂ ಬಂದಿಲ್ಲ.

-ಮಂಜು, ಕೃಷಿಕ

ಲಕ್ಕಿನಕೊಪ್ಪ ಎ ಮತ್ತು ಬಿ ಸರ್ಕಲ್’ಗಳ ಬಸ್ ಸ್ಟಾಪ್ ನಲ್ಲಿ ಹೆಸರು ಹೇಳಲಿಚ್ಛಿಸದ ಗ್ರಾಮಸ್ಥರ ಪ್ರಕಾರ ಅಲ್ಲಿ ಸುಮಾರು 800 ವೋಟುಗಳಲ್ಲಿ ಶೇ.70 ಮೈತ್ರಿ ಪಕ್ಷಕ್ಕೇ ಅಂತೆ.

ಈ ಭಾಗದ ಸಮೀಕ್ಷೆ ಕುರಿತಾಗಿ ನಮ್ಮ ಒಟ್ಟಾರೆ ಅಭಿಪ್ರಾಯ:

ಭದ್ರಾವತಿಯ ಗ್ರಾಮೀಣ ಭಾಗದಲ್ಲಿ ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ ತಂಡ ನೂರಾರು ಮಂದಿಯನ್ನು ಮಾತನಾಡಿಸಿದ್ದು, ಇಲ್ಲಿ ಬಹುತೇಕ ಮಂದಿ ಎಂಪಿಎಂ ಹಾಗೂ ವಿಐಎಸ್’ಎಲ್ ಕಾರ್ಖಾನೆಗಳ ಇಂದಿನ ಸ್ಥಿತಿಗೆ ಕಾರಣರಾದ ರಾಜಕಾರಣಿಗಳ ಕುರಿತಾಗಿ ಕಿಡಿ ಕಾರುತ್ತಾರೆ. ಪ್ರಮುಖವಾಗಿ, ಬಿಜೆಪಿ ವಿರುದ್ಧ ಇಲ್ಲಿ ಬಹಳಷ್ಟು ಆಕ್ರೋಶವಿದ್ದರೂ ಸಹ ಮೋದಿಯ ಪ್ರಭಾವವೂ ಸಹ ಇದೆ.

ಇಡಿಯ ಭಾಗದಲ್ಲಿ ಯಾವುದೇ ರಾಜಕೀಯ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಈವರೆಗೂ ಇಲ್ಲಿಗೆ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ. ಇಲ್ಲಿನ ಮಂದಿ ಪತ್ರಿಕೆ ಹಾಗೂ ಟಿವಿ ನೋಡಿ ತಿಳಿದುಕೊಳ್ಳುತ್ತಿದ್ದಾರೆ. ಇದರೊಂದಿಗೆ ಹಣ ಪಡೆದು ಮತ ಹಾಕುವ ಚಾಳಿಯೂ ಸಹ ಸಾಕಷ್ಟು ಕಾಣುತ್ತಿದ್ದು, ಈ ವಿಚಾರದಲ್ಲಿ ಚುನಾವಣಾ ಆಯೋಗ ಹಾಗೂ ಜಿಲ್ಲಾಡಳಿತ ಜಾಗೃತಿ ಮೂಡಿಸುವ ಕಾರ್ಯವನ್ನೂ ಸಹ ಮಾಡಬೇಕಿದೆ.

ಒಟ್ಟಾರೆ ಈ ಭಾಗದ ಜನಮನದಲ್ಲಿ ಚುನಾವಣೆಯ ಕಾವು ಇನ್ನೂ ಮುಟ್ಟಿಲ್ಲ. ಆದರೆ ಜನನಾಯಕರು ಹೋಗಲಿ ಕಾರ್ಯಕರ್ತರು ತಮ್ಮತ್ತ ಬಂದಿಲ್ಲ, ಸಮಸ್ಯೆ ಆಲಿಸಿಲ್ಲ ಎಂಬ ಮುನಿಸನ್ನು ಮಡಿಲಲ್ಲಿ ಇಟ್ಟುಕೊಂಡಿದ್ದಾರೆ. ಮೈತ್ರಿ ಪಕ್ಷ ಮತ್ತು ಬಿಜೆಪಿ ಅಛ್ಯರ್ಥಿಗಳಲ್ಲಿ ಯಾರು ಇಲ್ಲಿನ ಪರಿಸ್ಥಿತಿಯ ಲಾಭ ಪಡೆಯುವ ಜಾಣತನ ತೋರುತ್ತಾರೋ ಕಾದು ನೋಡಬೇಕಿದೆ. ಇಲ್ಲಿ ಅವಕಾಶ ತೆರೆದ ಪುಸ್ತಕದಂತಿದೆ.
-ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಟೀಂ

ವಿಶೇಷ ಸೂಚನೆ: ಈ ಚುನಾವಣಾ ಸಮೀಕ್ಷಾ ವರದಿ ಯಾವುದೇ ಪಕ್ಷಕ್ಕೆ ಅಥವಾ ಅಭ್ಯರ್ಥಿಯ ಪರವಾಗಿ ನಡೆಸಲಾಗಿರುವುದಿಲ್ಲ. ಬದಲಾಗಿ, ನಮ್ಮ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದ ಪ್ರತಿನಿಧಿಗಳು ಜನಸಾಮಾನ್ಯರನ್ನು ಖುದ್ದು ಸಂಪರ್ಕಿಸಿ, ಅವರ ಕಷ್ಟ-ಸುಖ ಹಾಗೂ ಚುನಾವಣೆ ಕುರಿತಾಗಿನ ಅವರ ಮನದಾಳದ ಭಾವನೆ ಹಾಗೂ ಅಭಿಪ್ರಾಯವನ್ನು ಸಂಗ್ರಹಿಸಿ, ಓದುಗರಿಗೆ ವಾಸ್ತವಾಂಶವನ್ನು ತೆರೆದಿಡುವ ಪ್ರಾಮಾಣಿಕ ಸೇವಾ ಕಾರ್ಯವನ್ನಷ್ಟೇ ಮಾಡಿದೆ.
Tags: BhadravathiBJPcongressElection Survey in KannadaKalpa News Digital MediaKannada NewsLoksabha Election2 019Malnad NewsShivamoggaSpecial Articleಕಲ್ಪನ್ಯೂಸ್ ಲೋಕಾಯಾತ್ರೆಚುನಾವಣಾ ಸಮೀಕ್ಷೆಲೋಕಸಭಾ ಚುನಾವಣೆ-2019
Share196Tweet123Send
Previous Post

ಅಂಬಿ ಪತ್ನಿಗೀಗ ಆನೆಬಲ: ಸುಮಲತಾರನ್ನು ಗೆಲ್ಲಿಸುವಂತೆ ಸ್ವತಃ ಮೋದಿ ಬಹಿರಂಗ ಕರೆ

Next Post

ರಾಮಚಂದ್ರಾಪುರ ಮಠದಲ್ಲಿ ಇಂದಿನಿಂದ ಆರಂಭವಾಗಿದೆ ರಾಜ್ಯಮಟ್ಟದ ಕೃಷಿ ಉತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಮಚಂದ್ರಾಪುರ ಮಠದಲ್ಲಿ ಇಂದಿನಿಂದ ಆರಂಭವಾಗಿದೆ ರಾಜ್ಯಮಟ್ಟದ ಕೃಷಿ ಉತ್ಸವ

ರಾಮಚಂದ್ರಾಪುರ ಮಠದಲ್ಲಿ ಇಂದಿನಿಂದ ಆರಂಭವಾಗಿದೆ ರಾಜ್ಯಮಟ್ಟದ ಕೃಷಿ ಉತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭದ್ರಾ ಡ್ಯಾಂನಿಂದ ತುಂಗಭದ್ರಾ ನದಿಗೆ ನೀರು | ಎಷ್ಟು ದಿನ? ಕಾರಣವೇನು?

ಭದ್ರಾ ಡ್ಯಾಂನಿಂದ ನದಿಗೆ ನೀರು ಹರಿಸಲು ಡೇಟ್ ಫಿಕ್ಸ್ | ಯಾವತ್ತು? ಎಷ್ಟು ನೀರು? ಯಾರಿಗೆ ಪ್ರಯೋಜನ?

May 16, 2026
ಮಧ್ಯಪ್ರಾಚ್ಯದ ಉದ್ವಿಗ್ನತೆ | ಭಾರತದಲ್ಲಿ ಹಿಂಸಾಚಾರದ ಸಾಧ್ಯತೆ | ಎಲ್ಲ ರಾಜ್ಯಗಳಿಗೆ ಕೇಂದ್ರ ಎಚ್ಚರಿಕೆ ಪತ್ರ

ಕೇಂದ್ರ ಗೃಹ ಇಲಾಖೆ ಭರ್ಜರಿ ಬೇಟೆ | 182 ಕೋಟಿ ರೂ ಮೌಲ್ಯದ ಜಿಹಾದಿ ಡ್ರಗ್ಸ್ ಸೀಜ್

May 16, 2026
ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

ದೇಶ ಮೊದಲು ಎಂದು ಹೇಳಿಕೊಟ್ಟ ಪಕ್ಷ ಬಿಜೆಪಿ: ಬಿ.ವೈ. ವಿಜಯೇಂದ್ರ

May 16, 2026
ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

ಕೊಪ್ಪಳ | 10ನೇ ವರ್ಷದ ಮಾವು ಮೇಳಕ್ಕೆ ಜನಸಾಗರ

May 16, 2026
ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

ಕಡಿಮೆ ಶುಲ್ಕದಲ್ಲಿ ಹೈಟೆಕ್ ಶಿಕ್ಷಣಕ್ಕಾಗಿ ಗಂಗೋತ್ರಿ ಪಿಯು ಕಾಲೇಜು ಆರಂಭ: ಹೆಚ್.ಎಸ್. ಸುಂದರೇಶ್

May 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL