No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಸಿರಿಗೆರೆ, ಹಾರನಹಳ್ಳಿ ಗ್ರಾಮಾಂತರದಲ್ಲಿ ಮತದಾನದ ಒಲವು

ಜಿಲ್ಲೆಯಲ್ಲಿ ಮೊದಲ ಬಾರಿಗೆ ಕಲ್ಪ ನ್ಯೂಸ್ ವಿನೂತನ ಪ್ರಯತ್ನ : ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ವಾಸ್ತವ ಸಮೀಕ್ಷಾ ವರದಿ-9

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 19, 2019
in Special Articles
0
ಕಲ್ಪ ನ್ಯೂಸ್ ‘ಲೋಕಾ’ಯಾತ್ರೆ: ಸಿರಿಗೆರೆ, ಹಾರನಹಳ್ಳಿ ಗ್ರಾಮಾಂತರದಲ್ಲಿ ಮತದಾನದ ಒಲವು
Share on FacebookShare on TwitterShare on WhatsApp

ಶಿವಮೊಗ್ಗ: 2019ರ ಲೋಕಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಪ್ರಚಾರ ಕಾರ್ಯಗಳೊಂದಿಗೆ ಸೋಲು ಗೆಲುವಿನ ಚರ್ಚೆಗಳು ಆರಂಭವಾಗಿದ್ದು, ಈಗಲೇ ಮತಗಳ ಅಂತರಗಳ ಕುರಿತಾಗಿಯೂ ಎಲ್ಲೆಡೆ ಚರ್ಚೆಯಾಗುತ್ತಲೇ ಇದೆ.

ಈ ಹಿನ್ನೆಲೆಯಲ್ಲಿ ವಿನೂತನ ಸಾಹಸಕ್ಕೆ ಕೈ ಹಾಕಿರುವ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ, ‘ಕಲ್ಪ ನ್ಯೂಸ್ ಲೋಕಾ ಯಾತ್ರೆ’ ಎಂಬ ಹೆಸರಿನ ಅಡಿಯಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ವಿವಿಧ ಭಾಗಗಳಲ್ಲಿ ಜನಾಭಿಪ್ರಾಯ ಸಂಗ್ರಹ ಮಾಡುವ ಸಾಹಸಕ್ಕೆ ಕೈಹಾಕಿದೆ.

ಚುನಾವಣಾ ನೀತಿ ಸಂಹಿತೆಯಿರುವ ಹಿನ್ನೆಲೆಯಲ್ಲಿ ಯಾವ ಪಕ್ಷ ಅಥವಾ ಅಭ್ಯರ್ಥಿಗೆ ಎಷ್ಟು ಶೇಕಡಾವಾರು ಮತ ಬೀಳಬಹುದು, ಒಟ್ಟಾರೆ ಯಾರ ಗೆಲುವು ನಿಶ್ಚಿತ ಎಂಬುದನ್ನು ನಾವು ಸ್ಪಷ್ಟವಾಗಿ ಹೇಳುವುದಿಲ್ಲ. ಇಲ್ಲಿ ಯಾವುದೇ ಪಕ್ಷ ಅಥವಾ ಅಭ್ಯರ್ಥಿಗಳ ಪರವಾಗಿ ಅಥವಾ ವಿರೋಧವಾಗಿ ಸಮೀಕ್ಷೆ ನಡೆಸದೇ, ಸದರಿ ಭಾಗದ ಸಮಸ್ಯೆಗಳು, ಜನರ ಮನದಾಳದ ಅಭಿಪ್ರಾಯ ಹಾಗೂ ಅನಿಸಿಕೆಗಳನ್ನು ಜನರಿಗೆ ತಿಳಿಸುವ ಸಲುವಾಗಿ ಸ್ವತಂತ್ರವಾಗಿ ವಾಸ್ತವ ಸಮೀಕ್ಷೆಯನ್ನು ನಡೆಸಲಾಗಿದೆ. ಪ್ರತಿನಿತ್ಯ ನಮ್ಮ ತಂಡ ನೂರಾರು ಮತದಾರರನ್ನು ಮಾತನಾಡಿಸುತ್ತಿದ್ದು, ಇದರಲ್ಲಿ ಆಯ್ದ ಕೆಲವರ ಅನಿಸಿಕೆಗಳನ್ನು ಮಾತ್ರ ಪ್ರಕಟಿಸಿ, ಒಟ್ಟಾರೆಯಾಗಿ ಸದರಿ ಭಾಗದಲ್ಲಿನ ಒಲವು ಯಾರಿಗಿದೆ ಎಂಬುದನ್ನು ಓದುಗರಿಗೆ ತಿಳಿಸಿ, ನಿರ್ಧಾರವನ್ನೂ ಅವರಿಗೇ ಬಿಡುತ್ತೇವೆ.

ಶಿವಮೊಗ್ಗ ಲೋಕಸಭಾ ಕ್ಷೇತ್ರ ಸಾರ್ವಜನಿಕ ಚುನಾವಣೆ-2019: ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆಯನೂರು ಕೋಟೆ, ಹಾರನಹಳ್ಳಿ, ಸಿರಿಗೆರೆ ಭಾಗದ ಮತದಾರರ ಸಮೀಕ್ಷೆ ಒಲವು-ನಿಲುವು ಹೀಗಿದೆ:

ಶಿವಮೊಗ್ಗ ಗ್ರಾಮಾಂತರ ಶಾಸಕರು: ಶ್ರೀ ಅಶೋಕ್ ನಾಯ್ಕ್‌
ಸಮೀಕ್ಷೆಯ ಒಟ್ಟಾರೆ ನಿರೀಕ್ಷಿತ ಫಲಿತಾಂಶ: ಬಿಜೆಪಿ-ಜೆಡಿಎಸ್-60:40

ಬಿಜೆಪಿಯವರ ಬಂದಿದ್ದಾರೆ ಆದರೆ, ಮೈತ್ರಿ ಪಕ್ಷದವರು ಹೆಚ್ಚಾಗಿ ಬರುತ್ತಿಲ್ಲ. ನಮ್ಮಲ್ಲಿ ಕಷ್ಟಗಳು ಸಾಕಷ್ಟಿವೆ. ಯಾರು ಬಂದರೂ ನಮ್ಮ ಸಮಸ್ಯೆ ಕೇಳೋರು ಯಾರೂ ಇಲ್ಲ. ಆದರೆ, ಮೋದಿ ಅವರನ್ನು ನೋಡಿ ನಾವು ಮತ ಚಲಾಯಿಸುತ್ತೇವೆ.

-ಸುನಿಲ್ ಕುಮಾರ್, ವೆಂಕಟೇಶ್ ಹಾಗೂ ಮಧುಸೂಧನ್, ಕೃಷಿಕರು, ಆಯನೂರು ಕೋಟೆ

ನಮ್ಮೂರಲ್ಲಿ ಚುನಾವಣೆ ಕಾವು ಅಷ್ಟಾಗಿ ಕಾಣುತ್ತಿಲ್ಲ. ಎರಡೂ ಪಕ್ಷದವರು ಒಂದು ಬಾರಿ ಬಂದಿದ್ದಾರೆ. ಇಲ್ಲಿ ಬಿಜೆಪಿ ಹಾಗೂ ಜೆಡಿಎಸ್’ಗೆ 60:40 ಕಾದಾಟ ಇದೆ. ಆದರೆ, ನಮ್ಮೂರಿನ ಸಮಸ್ಯೆಗಳು ಹಲವಿದೆ. ಹಿಂದುಳಿದ ವರ್ಗಗಳ ಕಾಲೋನಿ ಅಭಿವೃದ್ದಿ ಆದ ಹಾಗೆ ಮುಂದುವರೆದವರ ಕಾಲೋನಿಗಳು ಆಗುತ್ತಿಲ್ಲ. ನಮ್ಮೂರಿಗೆ ಇರುವ ರೈಲು ನಿಲ್ದಾಣದಲ್ಲಿ ಎಲ್ಲ ರೈಲುಗಳಿಗೆ ನಿಲುಗಡೆ ಬೇಕು. ಪ್ರಮುಖವಾಗಿ, ನಮ್ಮಲ್ಲಿ ಒಂದೇ ಬ್ಯಾಂಕ್ ಇದ್ದು, ಇದು ಸಾರ್ವಜನಿಕರ ಬ್ಯಾಂಕ್ ವ್ಯವಹಾರಗಳಿಗೆ ತೊಂದರೆಯಾಗಿದೆ. ಹೀಗಾಗಿ, ಇನ್ನೂ ಒಂದೆರಡು ಬ್ಯಾಂಕ್ ಬರುವ ಹಾಗೆ ಆಗಬೇಕು. ಮತದಾನ ಕುರಿತಾಗಿ ಹೇಳುವುದಾದರೆ ಕಳೆದಬಾರಿ ಸುಮಾರು ಶೇ.72ರಷ್ಟು ಮತದಾನವಾಗಿತ್ತು. ಈ ಬಾರಿ ಶೇ.80ರಷ್ಟು ಮತದಾನ ನಿಶ್ಚಿತ. ನಮ್ಮ ಹಕ್ಕನ್ನು ನಾವು ಚಲಾಯಿಸುತ್ತೇವೆ.

-ಶಿವರಾಜ್, ಸುಧಾಕರ್, ಎಸ್.ಎಂ. ಜಗನ್ನಾಥ್, ರಾಜಶೇಖರ್, ಓಂಕಾರಪ್ಪ: ಹಾರನಹಳ್ಳಿ ಗ್ರಾಮಸ್ಥರು

ನಮ್ಮೂರಲ್ಲಿ ರಸ್ತೆ ಸಮಸ್ಯೆಯೇ ದೊಡ್ಡದಿದೆ. ಕುಂಸಿಯಿಂದ ಚಾಮೇನಹಳ್ಳಿಯವರೆಗೂ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಇದರ ಅಭಿವೃದ್ಧಿಗೆ ಹಣ ಮಂಜೂರಾಗಿದೆ ಎನ್ನುತ್ತಾರೆ. ಆದರೆ, ಈವರೆಗೂ ಕೆಲಸ ಆಗಿಲ್ಲ. ಓಡಾಡುವುದೇ ಕಷ್ಟವಾಗಿದೆ.

-ಚಂದ್ರಶೇಖರಪ್ಪ, ಬಾಳೆಕೊಪ್ಪ ಗ್ರಾಮ

ನಮ್ಮೂರಲ್ಲಿ ಮೋದಿ ಅಲೆ ಇದ್ದು, ಇದನ್ನು ನೋಡಿಯೇ ನಾವು ಮತ ಹಾಕೋದು.

-ವಿಜಯೇಂದ್ರಪ್ಪ, ಬಾಳೆಕೊಪ್ಪ

ನಮಗೆ ದೇಶ ಮುಖ್ಯ ಆನಂತರ ನಮ್ಮೂರು. ನಮ್ಮ ದೇಶವನ್ನು ಉಳಿಸಲು ಮೋದಿ ಮತ್ತೆ ಪ್ರಧಾನಿಯಾಗಬೇಕು. ಆದರೆ, ನಮ್ಮೂರಿನಲ್ಲಿ ಒಟ್ಟಾರೆ ನೋಡುವುದಾದರೆ 50:50 ಸೆಣೆಸಾಟವಿದೆ.

-ರಾಜಪ್ಪ, ಬಾಳೆಕೊಪ್ಪ

ಸಾಲಮನ್ನಾ ಆಗಿದೆ ಅಂತಾರೆ. ಆದರೆ, ನಮ್ಮೂರಲ್ಲಿ ಕೆಲವರಿಗೆ ಪತ್ರ ಬಂದಿದೆ ಬಿಟ್ಟರೆ ಸಾಲಮನ್ನಾ ಯಾರಿಗೂ ಆಗಿಲ್ಲ. ಈ ಚುನಾವಣೆ ದೇಶಕ್ಕೆ ಸಂಬಂಧಿಸಿದ್ದು ಆದ್ದರಿಂದ ದೇಶವನ್ನು ರಕ್ಷಣೆ ಮಾಡುವ ವ್ಯಕ್ತಿಗೆ ನಾವು ಬೆಂಬಲಿಸುತ್ತೇವೆ. ಮೋದಿ ಮತ್ತೆ ಪ್ರಧಾನಿಯಾಗಬೇಕು. ಅದರೊಂದಿಗೆ, ನಮ್ಮೂರಲ್ಲಿ ಕಾಡುತ್ತಿರುವುದು ರಸ್ತೆ ಸಮಸ್ಯೆ. ಇದನ್ನು ಸರಿಪಡಿಸುವವರಿಗೆ ಇನ್ನೂ ಬೆಂಬಲ ಹೆಚ್ಚಾಗುತ್ತದೆ.

-ರಾಜು, ಜಯಣ್ಣ, ಈಶ್ವರ್: ಕೃಷಿಕರು, ಬಾಳೆಕೊಪ್ಪ

ಕುಂಸಿಯಿಂದ ಬಾಳೆಕೊಪ್ಪಕ್ಕೆ ಹೋಗುವ ರಸ್ತೆಯದ್ದೇ ನಮಗೆ ದೊಡ್ಡ ಸಮಸ್ಯೆ. ಇದಕ್ಕಾಗಿ ಮತದಾನ ಬಹಿಷ್ಕಾರ ಮಾಡುವುದಾಗಿ ಹೇಳಿದ್ದೆವು. ಆದರೆ, ಬಿಜೆಪಿಯವರು ಬಂದು ಮಾಡಿಕೊಡುವ ಭರವಸೆ ನೀಡಿದ್ದಾರೆ. ನೋಡುತ್ತೇವೆ ಮತ ಹಾಕುವ ಬಗ್ಗೆ ಮನಸ್ಸು ಮಾಡುತ್ತಿದ್ದೇವೆ. ಆದರೆ, ದೇಶಕ್ಕಾಗಿ ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂಬುದು ನಮ್ಮ ಆಸೆ.

-ಮಂಜಪ್ಪ, ಅಂಗಡಿ ಮಾಲಿಕರು

ಇಲ್ಲಿ ಸಮಸಮ ಕಾದಾಟ ಇದೆ ಸರ್. ರಾಘವೇಂದ್ರ ಹಲವು ಬಾರಿ ಬಂದಿದ್ದಾರೆ. ಆದರೆ, ಸೋತ ಮೇಲೆ ಮಧು ಮುಖವನ್ನೇ ನಾವು ನೋಡಿಲ್ಲ. ಆದರೆ, ಹಾಲಿ ಸಂಸದರು ಇನ್ನೂ ಹೆಚ್ಚು ನಮಗೆ ಸ್ಪಂದಿಸಬೇಕಿತ್ತು.

-ಮೈಲಾರಪ್ಪ, ಹಳೇಕುಂಸಿ

ನಮ್ಮಲ್ಲಿ ಮೋದಿ ಅಲೆ ಇದೆ ಸರ್. ಜಿಎಸ್’ಟಿ ಅನುಷ್ಠಾನ, ದೇಶವನ್ನು ಸಾಲಮುಕ್ತವಾಗುವತ್ತ ಹೆಜ್ಜೆ, ದೇಶದ ಭದ್ರತೆ ಹಾಗೂ ಭಾರತೀಯರು-ಮೋದಿಯವರು ವಿಚಾರವಂತರು ಎಂಬುದನ್ನು ಜಗತ್ತಿಗೆ ತೋರಿಸಿಕೊಟ್ಟ ಮೋದಿಯವರು ಮತ್ತೆ ಪ್ರಧಾನಿಯಾಗಬೇಕು. ನಮ್ಮಲ್ಲಿ 70:30 ಕಾದಾಟ ಇದೆ ಎಂಬುದಂತೂ ನಿಶ್ಚಿತ.

-ಸತ್ಯನಾರಾಯಣ್, ಅಂಗಡಿ ಮಾಲಿಕರು, ಕುಂಸಿ

ನಮ್ಮಲ್ಲಿ ಪಕ್ಷ ನೋಡಲ್ಲ ಸರ್ ವ್ಯಕ್ತಿ ನೋಡುತ್ತೇವೆ. ನಮಗೆ ಬಂಗಾರಪ್ಪ ಬಗ್ಗೆ ಅಭಿಮಾನವಿದೆ. ಮೋದಿ ನೋಡಿ ಮತ ಹಾಕಿದರೆ ನಮಗೇನು ಪ್ರಯೋಜನವಿಲ್ಲ. ಅವರು ತಂದ ಜಿಎಸ್’ಟಿ ನಮ್ಮಂತವರಿಗೂ ಸಹ ಹೊಡೆತ ನೀಡಿದೆ. ನಮ್ಮೂರಿಗೆ ಸಂಬಂಧಿಸಿದಂತೆ ಸೀಗೆಹಳ್ಳ ನೀರಾವರಿ ಯೋಜನೆ ಮಾಡಿಕೊಟ್ಟರೆ ಅಂತಹವರಿಗೆ ಬೆಂಬಲ ನೀಡುತ್ತೇವೆ.

-ರವಿಕುಮಾರ್, ಕೃಷಿಕರು, ಸಿರಿಗೆರೆ

ಯಾರು ಏನೇ ಹೇಳಲಿ ಸರ್. ಬಿಜೆಪಿ ಗೆಲ್ಲುತ್ತೆ.
-ಅವಿನಾಶ್, ಸಿರಿಗೆರೆ

ನಮ್ಮಲ್ಲಿ ಜೆಡಿಎಸ್ ಕಡೆ ಒಲವು ಹೆಚ್ಚಾಗಿದೆ. ನಮ್ಮ ಕ್ಷೇತ್ರದ ಹಿಂದಿನ ಶಾಸಕಿ ಹೆಚ್ಚು ಕೆಲಸ ಮಾಡಿದ್ದಾರೆ. ಆದರೆ, ಈಗಿನ ಶಾಸಕರಿಂದ ನಮಗೆ ಅಷ್ಟಾಗಿ ಸ್ಪಂದನೆಯಿಲ್ಲ. ನಮ್ಮೂರಿಗೆ ಸಂಬಂಧಿಸಿದಂತೆ ರಸ್ತೆ ಅಭಿವೃದ್ದಿ ಮೊದಲು ಆಗಬೇಕು. ಮಲೆ ಶಂಕರ ದೇವಾಲಯಕ್ಕೆ ಸಾವಿರಾರು ಮಂದಿ ಬರುತ್ತಾರೆ. ಆದರೆ, ಇಲ್ಲಿನ ರಸ್ತೆಯೇ ಅದ್ವಾನವಾಗಿದೆ.

-ಅವಿನಾಶ್, ಸಿರಿಗೆರೆ

ನಮ್ಮಲ್ಲಿ ಹೆಚ್ಚು ಉಪಕಾರ ಆಗಿರುವುದು ರಾಘವೇಂದ್ರ ಅವರಿಂದಲೇ. ಸೋಲಾರ್ ದೀಪಗಳು, ರಸ್ತೆ, ಕುಡಿಯುವ ನೀರು ಅಭಿವೃದ್ಧಿ ಆಗಿದೆ. ಆದರೆ, ಈಗಿನ ಶಾಸಕರು ಇನ್ನೂ ಹೆಚ್ಚಿನ ಸ್ಪಂದನೆ ಕೊಡಬೇಕು. ಇವೆಲ್ಲಾ ಸ್ಥಳೀಯ ಸಮಸ್ಯೆಗಳು, ಹೇಗೋ ಸರಿಹೋಗುತ್ತವೆ. ಆದರೆ, ಈಗ ದೇಶದ ಚುನಾವಣೆಯಾದ್ದರಿಂದ ಮೋದಿ ಮತ್ತೆ ಪ್ರಧಾನಿಯಾಗುವುದೇ ಸೂಕ್ತ ಎಂಬುದು ನಮ್ಮ ಅನಿಸಿಕೆ. ಜೆಡಿಎಸ್-ಬಿಜೆಪಿಗೆ ಶೇ.60:40ರಷ್ಟು ಬೆಂಬಲ ಇದೆ.

-ಶೇಖರಾಚಾರಿ, ರಾಜಶೇಖರಪ್ಪ, ತಮ್ಮಣ್ಣಾಚಾರಿ: ತಮ್ಮಡಿಹಳ್ಳಿ

ಮೋದಿಯಿಂದ ರೈತರಿಗೆ ಮಾತ್ರವಲ್ಲ ಹೈನುಗಾರಿಗೆ ಮಾಡುವವರಿಗೂ ಸಹ ಸಹಾಯವಾಗಿದೆ. ಈಗಿನ ಶಾಸಕರು ಕೆಲಸ ಮಾಡುತ್ತಿಲ್ಲ. ಹಿಂದಿನ ಶಾಸಕರ ಕೆಲಸ ಇಂದಿಗೂ ನಮ್ಮ ಮನಸ್ಸಿನಲ್ಲಿದೆ. ಆದರೆ, ದೇಶದ ಚುನಾವಣೆ ದೃಷ್ಠಿಯಿಂದ ಮೋದಿಯೇ ಪ್ರಧಾನಿಯಾಗಬೇಕು. ಅವರು ದೇಶ ಹಾಗೂ ಸೈನಿಕರನ್ನು ರಕ್ಷಿಸಿದ್ದಾರೆ. ದೇಶ ರಕ್ಷಣೆ ಮುಖ್ಯ. ದೇಶ ಉಳಿದರೆ ನಾವು.

-ಪ್ರಕಾಶ್, ನಾಗರಾಜ್, ಗಂಗಪ್ಪ: ತಮ್ಮಡಿಹಳ್ಳಿ

ಸೊಸೈಟಿ ಸಾಲಮನ್ನಾ ಆಗುತ್ತಿದೆ. ಬ್ಯಾಂಕ್’ಗಳಲ್ಲಿನ ಸಾಲವೂ ಮನ್ನಾ ಆಗಬೇಕು. ಎಲ್ಲ ವರ್ಗದವರನ್ನೂ ಸಮಾನವಾಗಿ ಕಾಣುವ ವ್ಯಕ್ತಿ ಆಯ್ಕೆಯಾಗಬೇಕು.
-ಸಂಗೀತಾ, ಗಿರಿಜಮ್ಮ: ತಮ್ಮಡಿಹಳ್ಳಿ

ಈ ಭಾಗದ ಸಮೀಕ್ಷೆ ಕುರಿತಾಗಿ ನಮ್ಮ ಒಟ್ಟಾರೆ ಅಭಿಪ್ರಾಯ:

ಆಯನೂರು ಕೋಟೆ, ಹಾರನಹಳ್ಳಿ, ಬಾಳೆಕೊಪ್ಪ, ಚಾಮೇನಹಳ್ಳಿ, ಹಳೇಕುಂಸಿ, ಸಿರಿಗೆರೆ, ಮಲೆ ಶಂಕರ, ತಮ್ಮಡಿಹಳ್ಳಿ ಭಾಗಗಳು ಶಿವಮೊಗ್ಗ ಗ್ರಾಮಾಂತರ ವಿಧಾನಸಭಾ ಕ್ಷೇತ್ರದಕ್ಕೆ ಒಳಪಟ್ಟಿದ್ದು, ಹಿಂದಿನ ಶಾಸಕ ಶಾರದಾ ಪೂರ್ಯಾನಾಯ್ಕ್‌ ಅವರ ಕೆಲಸಗಳ ಬಗ್ಗೆ ಒಳ್ಳೆಯ ಹೆಸರಿದೆ. ಈಗಿನ ಶಾಸಕರಿಗಿಂತಲೂ ಹಿಂದಿನ ಶಾಸಕಿಯ ಬಗ್ಗೆಯೇ ಹೆಚ್ಚಿನ ಒಲವಿದೆ.

ಆದರೆ, ಇದು ದೇಶದ ಚುನಾವಣೆಯಾದ್ದರಿಂದ ಶಾಸಕರ ಸಕಾರಾತ್ಮಕ ಹಾಗೂ ನಕಾರಾತ್ಮಕ ಅಂಶಗಳು ಈ ಭಾಗದಲ್ಲಿ ಅಷ್ಟಾಗಿ ಪರಿಣಾಮ ಬೀರುವುದಿಲ್ಲ ಎನಿಸಿದೆ.

ಒಟ್ಟಾರೆಯಾಗಿ ಈ ಭಾಗದಲ್ಲಿಯೂ ಸಹ ಮೋದಿ ಅಲೆಯಿದ್ದು, ಬಿ.ಎಸ್. ಯಡಿಯೂರಪ್ಪ ಹಾಗೂ ರಾಘವೇಂದ್ರ ಅವರ ಕುರಿತಾಗಿ ಒಳ್ಳೆಯ ಅಭಿಪ್ರಾಯವಿದೆ. ಇದೇ ವೇಳೆ ಜೆಡಿಎಸ್ ಮಾಜಿ ಶಾಸಕಿ ಶಾರದಾ ಪೂರ್ಯಾನಾಯ್ಕ್‌ ಅವರ ಬಗ್ಗೆ ಸದಭಿಪ್ರಾಯವಿದ್ದರೂ, ಮಧು ಬಂಗಾರಪ್ಪ ಅವರು ಇನ್ನೂ ಹೆಚ್ಚು ಜನರೊಂದಿಗೆ ತೊಡಗಿಕೊಳ್ಳಬೇಕು ಎಂಬುದು ಇಲ್ಲಿನ ಜನರ ಮಾತಿನಿಂದ ತಿಳಿಯುತ್ತದೆ.
ಒಟ್ಟಾರೆಯಾಗಿ ಈ ಭಾಗದಲ್ಲಿ ಬಿಜೆಪಿ-ಜೆಡಿಎಸ್ ನಡುವೆ 60:40 ಕಾದಾಟವಿದೆ.
-ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಟೀಂ

ವಿಶೇಷ ಸೂಚನೆ: ಈ ಚುನಾವಣಾ ಸಮೀಕ್ಷಾ ವರದಿ ಯಾವುದೇ ಪಕ್ಷಕ್ಕೆ ಅಥವಾ ಅಭ್ಯರ್ಥಿಯ ಪರವಾಗಿ ನಡೆಸಲಾಗಿರುವುದಿಲ್ಲ. ಬದಲಾಗಿ, ನಮ್ಮ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದ ಪ್ರತಿನಿಧಿಗಳು ಜನಸಾಮಾನ್ಯರನ್ನು ಖುದ್ದು ಸಂಪರ್ಕಿಸಿ, ಅವರ ಕಷ್ಟ-ಸುಖ ಹಾಗೂ ಚುನಾವಣೆ ಕುರಿತಾಗಿನ ಅವರ ಮನದಾಳದ ಭಾವನೆ ಹಾಗೂ ಅಭಿಪ್ರಾಯವನ್ನು ಸಂಗ್ರಹಿಸಿ, ಓದುಗರಿಗೆ ವಾಸ್ತವಾಂಶವನ್ನು ತೆರೆದಿಡುವ ಪ್ರಾಮಾಣಿಕ ಸೇವಾ ಕಾರ್ಯವನ್ನಷ್ಟೇ ಮಾಡಿದೆ.
Tags: BJPcongressElection Survey in KannadaIndia election 2019JDSKalpa News Digital MediaKannada NewsLoksabha election 2019Malnad NewsShivamoggaಕಲ್ಪನ್ಯೂಸ್ ಲೋಕಾಯಾತ್ರೆಚುನಾವಣಾ ಸಮೀಕ್ಷೆ
Share196Tweet123Send
Previous Post

ರಾಜ್ಯದಲ್ಲಿ ಮೊದಲ ಹಂತದ ಮತದಾನ ಆರಂಭ

Next Post

ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ

ಭದ್ರಾವತಿ: ಮತದಾನ ಜಾಗೃತಿಗೆ ಲಿಮ್ಕಾ ದಾಖಲೆ ಕಲಾವಿದನ ಗೋಡೆಬರಹಕ್ಕೆ ವ್ಯಾಪಕ ಪ್ರಶಂಸೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

ಮರ ಬಿದ್ದು, ಸಾಗರ ಶಿವಮೊಗ್ಗ ಮಧ್ಯೆ ಹೆದ್ದಾರಿ ಬಂದ್ | ಇಲ್ಲಿದೆ ಪರ್ಯಾಯ ಮಾರ್ಗ

June 1, 2026
ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

ಅಜ್ಜಂಪುರ–ಬೀರೂರು ರೈಲ್ವೆ ಯೋಜನೆಗಳಿಗೆ ಶಂಕುಸ್ಥಾಪನೆ | ಚನ್ನರಾಯಪಟ್ಟಣದಲ್ಲಿ ಹಾಸನ–ಸೊಲ್ಲಾಪುರ ಎಕ್ಸ್‌ಪ್ರೆಸ್‌ಗೆ ಹೆಚ್ಚುವರಿ ನಿಲುಗಡೆ

June 1, 2026
ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

ಗುಬ್ಬಿಯಲ್ಲಿ ರಸ್ತೆ ಕೆಳ ಸೇತುವೆ ಶಂಕುಸ್ಥಾಪನೆ | ಒಂದು ವರ್ಷದಲ್ಲಿ ಕಾಮಗಾರಿ ಪೂರ್ಣ | ಸಚಿವ ವಿ. ಸೋಮಣ್ಣ

June 1, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL