Sunday, July 6, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ರಾಮನಗರ

ಕೇವಲ ಕಟ್ಟಡಗಳಿಂದ ಆರೋಗ್ಯ ಸುಧಾರಣೆ ಸಾಧ್ಯವಿಲ್ಲ: ಆರೋಗ್ಯ ಸಚಿವ ಸುಧಾಕರ್‌

ಕನಕಪುರದಲ್ಲಿ ನಿರ್ಮಾಣವಾದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ

February 13, 2023
in ರಾಮನಗರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಕನಕಪುರ  |

ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್‌ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ನೀಡಿ ಎಂದು ನಾನು ಎಂದೂ ಕೇಳಿರಲಿಲ್ಲ. ಅಂತಹ ಮನಸ್ಥಿತಿಯೂ ನನ್ನದಲ್ಲ. ಕನಕಪುರಕ್ಕೆ ಮುಂದಿನ ದಿನಗಳಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್‌ ಕಾಲೇಜು ಯೋಜನೆ ಮಂಜೂರಾತಿ ಮಾಡಲು ಎಲ್ಲಾ ಪ್ರಯತ್ನ ಮಾಡುತ್ತೇನೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್‌ Health Minister Dr. Sudhakar ಸ್ಪಷ್ಪಪಡಿಸಿದರು.

ಇನ್ಫೋಸಿಸ್ ಫೌಂಡೇಶನ್‌ ಸಹಯೋಗದಲ್ಲಿ 45 ಕೋಟಿ ರೂ. ವೆಚ್ಚದಲ್ಲಿ ಕನಕಪುರದಲ್ಲಿ ನಿರ್ಮಾಣವಾದ 100 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿ ಸಚಿವರು ಮಾತನಾಡಿದರು.
ಕನಕಪುರಕ್ಕೆ ಅಧಿಕೃತವಾಗಿ ಮೊದಲ ಬಾರಿಗೆ ಬಂದಿದ್ದೇನೆ. ಮೆಡಿಕಲ್‌ ಕಾಲೇಜು ಯೋಜನೆಯನ್ನು ಕನಕಪುರದಿಂದ ಕಿತ್ತುಕೊಂಡು ಹೋಗಿದ್ದೇನೆ ಎಂದು ಇಲ್ಲಿನ ಸಂಸದರು ಪದೇ ಪದೆ ಹೇಳುತ್ತಾರೆ. ಆದ್ದರಿಂದ ಇಲ್ಲಿಗೆ ನಮ್ಮ ಕ್ಲಿನಿಕ್‌ ನೀಡಲಾಗುವುದು. ಹಾಗೆಯೇ ಮಹಿಳೆಯರಿಗಾಗಿ ಮೀಸಲಾದ ಆಯುಷ್ಮತಿ ಕ್ಲಿನಿಕ್‌ ಕೂಡ ನೀಡಲಾಗುವುದು. ರಾಮನಗರ ಜಿಲ್ಲೆಗೆ ಈಗಾಗಲೇ ಅಂದಾಜು 600 ಕೋಟಿ ರೂ. ವೆಚ್ಚದ ಮೆಡಿಕಲ್‌ ಕಾಲೇಜು ನೀಡಲು ಸಚಿವ ಸಂಪುಟದಲ್ಲಿ ನಿರ್ಧಾರವಾಗಿದೆ. ಕನಕಪುರದಲ್ಲಿ ಹೌಸಿಂಗ್‌ ಬೋರ್ಡ್‌ನಲ್ಲಿ ಜಾಗ ಗುರುತಿಸಲಾಗಿದೆ. ಅನೇಕ ಜಿಲ್ಲೆಗಳಲ್ಲಿ, ಜಿಲ್ಲಾ ಕೇಂದ್ರಗಳಲ್ಲಿ ಸರ್ಕಾರಿ ಮೆಡಿಕಲ್‌ ಕಾಲೇಜು ಆರಂಭಿಸಲಾಗಿದೆ. ಕೆಲವೆಡೆ ಇನ್ನೂ ಆಗಿಲ್ಲ. ಆದ್ದರಿಂದ ಕನಕಪುರದಲ್ಲಿ ಪಿಪಿಪಿ ಮಾದರಿಯಲ್ಲಿ ಮೆಡಿಕಲ್‌ ಕಾಲೇಜು ಆರಂಭಿಸಲು ಚಿಂತಿಸಲಾಗಿದೆ. ಇದು ಮಾಡಿದರೆ ಬಹಳ ಸುಲಭವಾಗುತ್ತದೆ ಎಂದರು.

ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜನ್ನು ಚಿಕ್ಕಬಳ್ಳಾಪುರಕ್ಕೆ ನೀಡಲು ನಾನು ಎಂದೂ ಕೇಳಿರಲಿಲ್ಲ. ಅಂತಹ ಮನಸ್ಥಿತಿ ನನಗಿಲ್ಲ. ಹಿಂದಿನ ಸಿಎಂ ಸಿದ್ದರಾಮಯ್ಯ ಅವರ ಬಜೆಟ್‌ನಲ್ಲಿ ಇದನ್ನು ಘೋಷಿಸಲಾಗಿತ್ತು. ನಂತರ ಬಿ.ಎಸ್‌.ಯಡಿಯೂರಪ್ಪನವರು ಅನುದಾನ ನೀಡಿದರು. ಮುಂದಿನ ದಿನಗಳಲ್ಲಿ ಕನಕಪುರಕ್ಕೆ ಮೆಡಿಕಲ್‌ ಕಾಲೇಜು ನೀಡಲು ಎಲ್ಲಾ ಬಗೆಯ ಪ್ರಯತ್ನ ಮಾಡಲಾಗುವುದು ಎಂದರು.
ಕೇವಲ ಕಟ್ಟಡಗಳಿಂದ ಆರೋಗ್ಯ ಸುಧಾರಣೆ ಸಾಧ್ಯವಿಲ್ಲ. ಅದಕ್ಕೆ ಬೇಕಾದ ವೈದ್ಯರು, ತಜ್ಞರನ್ನು ಕೂಡ ನೇಮಕಾತಿ ಮಾಡಬೇಕಾಗುತ್ತದೆ. ಕನಕಪುರದ ಈ ಹೊಸ ಆಸ್ಪತ್ರೆಗೆ ಬೇಕಾದ ವೈದ್ಯೋಪಕರಣಗಳಲ್ಲಿ ಅರ್ಧದಷ್ಟನ್ನು ಕಳುಹಿಸಲಾಗಿದೆ. ಹಾಗೆಯೇ ಒಂದೇ ತಿಂಗಳಲ್ಲಿ ವೈದ್ಯರು ಸೇರಿದಂತೆ ಎಲ್ಲಾ ಸಿಬ್ಬಂದಿಯನ್ನು ನೇಮಕಾತಿ ಮಾಡಲಾಗುವುದು ಎಂದರು.

Also read: ವಿಐಎಸ್‌ಎಲ್ ಉಳಿಸಲು ಪ್ರಧಾನಿಯವರ ಮನವೊಲಿಸುವಂತೆ ಆದಿಚುಂಚನಗಿರಿ ಶ್ರೀಗಳಿಗೆ ಕಾರ್ಮಿಕರ ಮನವಿ

ಆರೋಗ್ಯ, ಶಿಕ್ಷಣ ಹಾಗೂ ಮೂಲಸೌಕರ್ಯದ ಅಭಿವೃದ್ಧಿಯನ್ನು ಸರ್ಕಾರವೇ ಮಾಡಬೇಕೆಂದು ಬಯಸುವುದು ತಪ್ಪು. ವಿವಿಧ ಸಂಘ, ಸಂಸ್ಥೆಗಳ ಸಹಕಾರದಲ್ಲಿ ಅಭಿವೃದ್ಧಿ ಕಾರ್ಯ ಕೈಗೊಳ್ಳುವುದು ಅಗತ್ಯ. ದೇಶದಲ್ಲಿ 2014 ರಿಂದ 2021 ರವರೆಗೆ, 1 ಲಕ್ಷ ಕೋಟಿ ರೂ.ಗೂ ಅಧಿಕ ಸಿಎಸ್‌ಆರ್‌ ನಿಧಿಯನ್ನು ವಿವಿಧ ಕಾರ್ಯಗಳಿಗೆ ಬಳಸಲಾಗಿದೆ. ಅದರಲ್ಲೂ ಕರ್ನಾಟಕ, ಆಂಧ್ರಪ್ರದೇಶ ಮೊದಲಾದ ದಕ್ಷಿಣದ ರಾಜ್ಯಗಳಲ್ಲಿ ಶೇ.33 ರಷ್ಟನ್ನು ಬಳಸಲಾಗಿದೆ. ಆರೋಗ್ಯ, ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಕ್ಷೇತ್ರಕ್ಕೆ ಹೆಚ್ಚು ಒತ್ತು ದೊರೆತಿದೆ ಎಂದರು.
ಮಹಿಳೆಯರ ಅಭಿವೃದ್ಧಿಯನ್ನು ಅಳತೆ ಮಾಡದೆ ದೇಶದ ಅಭಿವೃದ್ಧಿ ಅಳತೆ ಮಾಡಲು ಸಾಧ್ಯವೇ ಇಲ್ಲ ಎಂದು ಡಾ.ಬಿ.ಆರ್‌.ಅಂಬೇಡ್ಕರ್‌ ಹೇಳಿದ್ದಾರೆ. ರಾಜ್ಯದಲ್ಲಿ ತಾಯಿ ಮತ್ತು ಶಿಶು ಮರಣ ಪ್ರಮಾಣ ಶೇ.81 ರಿಂದ 61 ಕ್ಕೆ ಇಳಿಕೆಯಾಗಿದೆ. ನವಜಾತ ಶಿಶುವಿನ ಮರಣ ಪ್ರಮಾಣ ಇನ್ನೂ ತಗ್ಗಿಸಬೇಕಿದೆ. ದೇಶದ ಸರಾಸರಿಗಿಂತ ಕರ್ನಾಟಕದ ಪ್ರಮಾಣ ಉತ್ತಮ ಎಂದೆನಿಸಿದರೂ, ದಕ್ಷಿಣದ ಕೆಲ ರಾಜ್ಯಗಳಿಗಿಂತ ಹಿಂದುಳಿದಿದ್ದೇವೆ. ಉತ್ತರ ಕರ್ನಾಟಕ ಭಾಗದಲ್ಲಿ ಈ ಸಮಸ್ಯೆ ಹೆಚ್ಚಿದೆ ಎಂದರು.

ಇದಕ್ಕಾಗಿ ಜಿಲ್ಲೆ, ತಾಲೂಕು ಮಟ್ಟದಲ್ಲೂ ಸಮಸ್ಯೆಗಳನ್ನು ಗುರುತಿಸಿ ಕ್ರಮ ವಹಿಸಲಾಗಿದೆ. ಹಿಂದಿನ ಸಿಎಂ ಬಿ.ಎಸ್‌.ಯಡಿಯೂರಪ್ಪನವರು, 125 ತಾಯಿ ಮತ್ತು ಮಕ್ಕಳ ಆಸ್ಪತ್ರೆಗಳನ್ನು ನಿರ್ಮಿಸುವುದಾಗಿ ಘೋಷಿಸಿದ್ದು, ಅದರಂತೆ ಆಸ್ಪತ್ರೆ ನಿರ್ಮಿಸಲಾಗುತ್ತಿದೆ. ನಗರದ ಬಡವರಿಗೆ ನಮ್ಮ ಕ್ಲಿನಿಕ್‌ ನೀಡಿರುವುದು ಹೊಸ ಪರಿಕಲ್ಪನೆಯಾಗಿದೆ. ನಗರದ ಬಡವರಿಗೆ ಪ್ರಾಥಮಿಕ ಆರೋಗ್ಯ ಸೇವೆ ನೀಡುವ ಕೇಂದ್ರಗಳು ಈವರೆಗೆ ಇರಲಿಲ್ಲ. 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲುದ್ದೇಶಿಸಿದ್ದು, 118 ಕ್ಲಿನಿಕ್‌ಗಳು ಕಾರ್ಯಾರಂಭವಾಗಿದೆ ಎಂದರು.
ಮುಂದಿನ ತಿಂಗಳು ಶಿಲಾನ್ಯಾಸ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಾ.ಕೆ.ಸುಧಾಕರ್‌, 600 ಕ್ಕೂ ಹೆಚ್ಚು ಹಾಸಿಗೆಗಳ ಆಸ್ಪತ್ರೆಯನ್ನು ರಾಮನಗರದಲ್ಲಿ ನಿರ್ಮಿಸಲಾಗಿದೆ. ಜೊತೆಗೆ ಹೊಸ ಮೆಡಿಕಲ್‌ ಕಾಲೇಜು ನೀಡಲು ನಿರ್ಧಾರವಾಗಿದೆ. ಸಿಂಡಿಕೇಟ್‌ನಲ್ಲೂ ಅದು ಒಪ್ಪಿಗೆ ಪಡೆದು, ಮುಂದಿನ ತಿಂಗಳಲ್ಲಿ ಶಿಲಾನ್ಯಾಸ ನೆರವೇರುವ ಸಾಧ್ಯತೆ ಇದೆ ಎಂದರು.

ಬಿಜೆಪಿ ಪ್ರಣಾಳಿಕೆಗೆ ಸಂಬಂಧಿಸಿದಂತೆ ತಂಡದವರೊಂದಿಗೆ ಚರ್ಚೆ ನಡೆಸಲಾಗಿದೆ. ನಾಳೆ ಮತ್ತೊಂದು ಸಭೆ ನಡೆಯಲಿದೆ. ಇದರಲ್ಲಿ ಯಾರನ್ನು ಭೇಟಿ ಮಾಡಿ ಚರ್ಚಿಸಬೇಕೆಂದು ತೀರ್ಮಾನವಾಗಲಿದೆ. ಅತ್ಯಂತ ನೈಜ ಹಾಗೂ ನೂರಕ್ಕೆ ನೂರು ಅನುಷ್ಠಾನವಾಗುವಂತಹ ಅಂಶಗಳು ಪ್ರಣಾಳಿಕೆಯಲ್ಲಿ ಇರಲಿದೆ ಎಂದರು.

ಅಧಿಕಾರದ ಬಗ್ಗೆ ಕಾಂಗ್ರೆಸ್‌ ನಾಯಕ ಡಿ.ಕೆ.ಶಿವಕುಮಾರ್‌ ಹೇಳಿರುವುದು ಅವರ ಅಭಿಪ್ರಾಯವಾಗಿದೆ. ಅದು ರಾಜ್ಯದ ಜನರ ಅಭಿಪ್ರಾಯವಲ್ಲ. ಮುಂದಿನ ಚುನಾವಣೆಯಲ್ಲಿ ಜನರು ಅಭಿಪ್ರಾಯ ಹೇಳುತ್ತಾರೆ. ಸಿದ್ದರಾಮಯ್ಯನವರ ಸರ್ಕಾರದ ತಂಡವನ್ನು 2018 ರಲ್ಲೇ ಜನರು ಮನೆಗೆ ಕಳುಹಿಸಿದ್ದಾರೆ ಎಂದರು.
ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Health Minister Dr. SudhakarKanakapuraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaNewsinKannadaNewsKannadaಆರೋಗ್ಯ ಸಚಿವ ಡಾ. ಕೆ.ಸುಧಾಕರ್ಕನಕಪುರ
Previous Post

ವಿಐಎಸ್‌ಎಲ್ ಉಳಿಸಲು ಪ್ರಧಾನಿಯವರ ಮನವೊಲಿಸುವಂತೆ ಆದಿಚುಂಚನಗಿರಿ ಶ್ರೀಗಳಿಗೆ ಕಾರ್ಮಿಕರ ಮನವಿ

Next Post

ಎಲ್’ಟಿಟಿಇ ಮುಖ್ಯಸ್ಥ ಪ್ರಭಾಕರನ್ ಜೀವಂತವಿದ್ದಾರೆ: ಪಜಾ ನೆಡುಮಾರನ್ ಸ್ಪೋಟಕ ಹೇಳಿಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಎಲ್'ಟಿಟಿಇ ಮುಖ್ಯಸ್ಥ ಪ್ರಭಾಕರನ್ ಜೀವಂತವಿದ್ದಾರೆ: ಪಜಾ ನೆಡುಮಾರನ್ ಸ್ಪೋಟಕ ಹೇಳಿಕೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025

134ನೇ ಫುಟ್ಬಾಲ್ ದುರಂದ್ ಕಪ್’ಗೆ ರಾಷ್ಟ್ರಪತಿಗಳಿಂದ ಚಾಲನೆ | ಏನಿದರ ವಿಶೇಷ?

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ | ತಪ್ಪಿದ ಭಾರೀ ಅನಾಹುತ

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!