ಕಲ್ಪ ಮೀಡಿಯಾ ಹೌಸ್ | ಕಾರ್ಗಲ್ |
ಚಿರತೆಗಳ ಕಾದಾಟದಲ್ಲಿ ಆಕಸ್ಮಿಕವಾಗಿ ಸಾವನ್ನಪ್ಪಿರುವ ಚಿರತೆಯ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಂತ್ಯಸಂಸ್ಕಾರ ನೆರೆವೇರಿಸಿರುವ ಭಾವನಾತ್ಮಕ ಸನ್ನಿವೇಶಕ್ಕೆ ತಾಲೂಕು ಸಾಕ್ಷಿಯಾಯಿತು.
ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಕಾರ್ಗಲ್ ಅರಣ್ಯ ವಲಯ ವ್ಯಾಪ್ತಿಯಲ್ಲಿ ಚಿರತೆಯೊಂದು ಅಸುನೀಗಿದ್ದು ಪತ್ತೆಯಾಗಿತ್ತು.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಾಥಮಿಕ ಮಾಹಿತಿ ಅನ್ವಯ ಚಿರತೆಗಳ ಬಡಿದಾಟದಲ್ಲಿ ಇದು ಸಾವನ್ನಪ್ಪಿದೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದು ಚಿರತೆಯ ಶವವನ್ನು ತಂದು ಮರಣೋತ್ತರ ಪರೀಕ್ಷೆ ನಡೆಸಿದ ನಂತರ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ.
(ಮಾಹಿತಿ: ಓಂಕಾರ್, ತಾಳಗುಪ್ಪ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post