ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದಾಗಿ ಇಂದು ಸಮಾಜದಲ್ಲಿ ಜಾಗೃತಿ ಮೂಡಲು ಸಾಧ್ಯವಾಗಿದೆ. ಪತ್ರಕರ್ತರಾಗಲು ಬಯಸುವವರಿಗೆ ನಿಷ್ಟುರತೆ, ನಿಷ್ಪಕ್ಷಪಾತತೆ, ಸೂಕ್ಷ್ಮ ಗ್ರಹಿಕೆ, ಬದ್ಧತೆ ಇರಬೇಕು ಎಂದು ಹಿರಿಯ ಪತ್ರಕರ್ತ, ಕೃಷಿಬಿಂಬ ಪತ್ರಿಕೆಯ ಸಂಪಾದಕ ರಾಧಾಕೃಷ್ಣ ತೋಡಿಕಾನ ಹೇಳಿದರು.
ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ #Christ King College ಹಮ್ಮಿಕೊಳ್ಳಲಾಗಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪತ್ರಿಕೆಗಳು ಸಮಾಜ, ಆಡಳಿತ ವ್ಯವಸ್ಥೆ ಹಾಗೂ ಜನರ ನಡುವೆ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದರು.

Also read: ಶಿವಮೊಗ್ಗ, ಭದ್ರಾವತಿ ಸೇರಿ ರಾಜ್ಯದ 12 ಕಡೆ ಲೋಕಾಯುಕ್ತ ದಾಳಿ | ದಾಖಲೆಗಳ ಪರಿಶೀಲನೆ
ಜಗತ್ತಿನಲ್ಲಿ ನಡೆಯುವ ವಿದ್ಯಾಮಾನಗಳನ್ನು ಕ್ಷಣ ಮಾತ್ರದಲ್ಲಿ ಭೂಮಂಡಲಕ್ಕೆ ವ್ಯಾಪಿಸುವ ಕಾರ್ಯವನ್ನು ಪತ್ರಿಕಾ ಮಾಧ್ಯಮಗಳು ಮಾಡುತ್ತವೆ. ಇಂತಹ ಪತ್ರಿಕಾ ರಂಗ ಹಾಗೂ ಸುದ್ದಿಮಾಧ್ಯಮಗಳನ್ನು ಗೌರವಿಸಿ ಆದರಿಸಬೇಕಾದ್ದು ಈ ಸಮಾಜದ ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.

ಈ ಸಂದರ್ಭದಲ್ಲಿ ಹಾಜರಿದ್ದ ವಿವಿಧ ಪತ್ರಿಕೆಗಳ ಪತ್ರಕರ್ತರು, ವರದಿಗಾರರು, ಛಾಯಾಗ್ರಾಹಕರನ್ನು ನೆನಪಿನ ಕಾಣಿಕೆ ನೀಡಿ ಗೌರವಿಸಲಾಯಿತು. ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಕಿಶೋರ್ ರುಡಾಲ್ಫ್ ಲೋಬೊ, ಆಡಳಿತಾಧಿಕಾರಿ ವಿನಯ್ ಕುಮಾರ್ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ವಾಣಿಜ್ಯಶಾಸ್ತ್ರ ಉಪನ್ಯಾಸಕ ದೀಪಕ್ ಸ್ವಾಗತಿಸಿ ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










Discussion about this post