ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿದ್ಯಾರ್ಥಿಗಳಲ್ಲಿರುವ ಸೃಜನಶೀಲತೆ ಮತ್ತು ಕೌಶಲ್ಯವನ್ನು ಅಭಿವೃದ್ಧಿ ಪಡಿಸುವಲ್ಲಿ ಇಂತಹ ಶಿಬಿರ ಅತ್ಯವಶ್ಯಕ ಎಂದು ಸಂತ ಬೆಸಿಲಿಕಾ ಅತ್ತೂರು ಇಲ್ಲಿನ ಸಹಾಯಕ ಧರ್ಮ ಗುರುಗಳಾದ ರೆ. ರಾಬಿನ್ ಜಾಯ್ಸನ್ ಹೇಳಿದರು.
ಇಲ್ಲಿನ ಕ್ರೈಸ್ಟ್ಕಿಂಗ್ #Christ King ಆಂಗ್ಲಮಾಧ್ಯಮ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢ ವಿಭಾಗದ ಮಕ್ಕಳಿಗಾಗಿ ಸಂಸ್ಥೆಯ ನೂತನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಬೇಸಿಗೆ ಶಿಬಿರವನ್ನು #Summercamp ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಶಿಬಿರದ ಮುಖ್ಯ ಅತಿಥಿಯಾಗಿ ಆಗಮಿಸಿದ ಯಕ್ಷರಂಗಾಯಣ ಕಾರ್ಕಳ ನಿರ್ದೇಶಕರಾದ ವೆಂಕಟ್ರಮಣ ಐತಾಳ್ರವರು ಮಾತನಾಡುತ್ತಾ ಮಕ್ಕಳಾದ ನೀವು ಜೀವನದಲ್ಲಿ ನಿಮಗೆ ಸಿಗುವ ಎಲ್ಲಾ ಚಟುವಟಿಕೆಗಳಲ್ಲೂ ಪಾಲ್ಗೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಿ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕರಾದ ರುಡಾಲ್ಫ್ ಕಿಶೋರ್ ಲೋಬೋರವರು ವಹಿಸಿದ್ದರು. ಅವರು ಮಾತನಾಡುತ್ತಾ ಯುವ ಮನಸ್ಸುಗಳನ್ನು ಚೈತನ್ಯಗೊಳಿಸಿ, ಕಲಿಕೆ, ಸೃಜನಶೀಲತೆ ಮತ್ತು ಸಾಹಸದೊಂದಿಗೆ ಮುನ್ನಡೆಸುವ ಒಂದು ಪ್ರೇರಣಾದಾಯಕ ಪ್ರಯಾಣವೇ ವರ್ಟೆಕ್ಸ್ ವೆಂಚರ್ ಎಂದು ಹೇಳಿದರು.
ಮಾ.23ರಿಂದ 30ರವರೆಗೆ ನಡೆಯುವ ಈ ಶಿಬಿರದಲ್ಲಿ ಧ್ಯಾನ, ಯೋಗ, ಏರೋಬಿಕ್ಸ್, ಇಕೋ ವಾರಿಯರ್ಸ್, ಮ್ಯಾಜಿಕ್ ಶೋ, ಅಡುಗೆ ಮನೆ ಚಟುವಟಿಕೆ, ಬುಟ್ಟಿ ಹೆಣೆಯುವ ಪ್ರಾತ್ಯಕ್ಷಿಕೆ, ಕರಕುಶಲ ವಸ್ತು ತಯಾರಿ, ಸಂಗೀತದ ಮೋಜು, ರಂಗಕಲೆ, ಸಾಹಸಮಯ ಕ್ರೀಡೆಗಳು, ಆರೋಗ್ಯ ತಪಾಸಣೆ, ಹೊರಸಂಚಾರ ಹಾಗೂ ಪುರಾತನ ಕಾಲದ ವಸ್ತುಗಳ ಪ್ರದರ್ಶನ ಇನ್ನೂ ಮುಂತಾದ ಚಟುವಟಿಕೆಗಳು ಈ ಶಿಬಿರದಲ್ಲಿ ನೆರವೇರಲಿದೆ.
ವೇದಿಕೆಯಲ್ಲಿ ಸಂಸ್ಥೆಯ ಆಪ್ತ ಸಮಾಲೋಚಕಿಯಾಗಿರುವ ಸಿಸ್ಟರ್ ಶಾಲೆಟ್ ಸಿಕ್ವೇರಾ, ಪದವಿ ಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕಿಯಾದ ಜೋಸ್ನಾ ಸ್ನೇಹಲತಾ, ಆಡಳಿತಾಧಿಕಾರಿಯಾದ ಕಿರಣ್ ಕ್ರಾಸ್ತಾ ಹಾಗೂ ಕಾಲೇಜು ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ದಯಾನಂದ, ಹಾಗೂ ಪ್ರಾಥಮಿಕ ವಿಭಾಗದ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷರಾದ ಉದಯರವಿರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಜಯಲಕ್ಷ್ಮೀರವರು ಸ್ವಾಗತಿಸಿ, ವಿಜೇತಾ ಜೈನ್ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















