ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಸಾರ್ವಜನಿಕ ಶಿಕ್ಷಣ ಇಲಾಖೆ, ಕರ್ನಾಟಕ ಸರ್ಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಕಾರ್ಕಳ ಹಾಗೂ ಸರ್ಕಾರಿ ಪ್ರೌಢಶಾಲೆ ಶಿವಪುರ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಶಿಕ್ಷಣ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿ ಜಿಲ್ಲಾ ಮಟ್ಟದ ಚೆಸ್ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರಾಥಮಿಕ ವಿಭಾಗದಲ್ಲಿ ಏಳನೇ ತರಗತಿಯ ಸಮೃದ್ಧ್ ಭಂಡಾರಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಪ್ರೌಢಶಾಲಾ ವಿಭಾಗದಲ್ಲಿ ಒಂಬತ್ತನೇ ತರಗತಿಯ ಮೌಲ್ಯ ಹಾಗೂ ಹತ್ತನೇ ತರಗತಿಯ ವರುಣ್ ಕಾಮತ್ ಉತ್ತಮ ಪ್ರದರ್ಶನ ನೀಡಿ ಜಿಲ್ಲಾ ಮಟ್ಟದ ಚೆಸ್ ಪಂದ್ಯಾಟಕ್ಕೆ ಅರ್ಹತೆ ಪಡೆದಿದ್ದಾರೆ.
Also read>> ದಸರಾ ಉದ್ಘಾಟನೆ ಗೌರವವನ್ನು ಸುತ್ತೂರು ಶ್ರೀಗಳಿಗೆ ನೀಡಿ : ಡಾ. ಸುಶ್ರುತ ಗೌಡ ಮನವಿ
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 










