ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ #Pratibha Karanji ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ವಿದ್ಯಾರ್ಥಿಗಳ ಕವ್ವಾಲಿ ತಂಡ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
ಶಾಲಾ ಶಿಕ್ಷಣ ಇಲಾಖೆ ಕರ್ನಾಟಕ ಸರಕಾರ, ಜಿಲ್ಲಾಡಳಿತ ಹಾಗೂ ಜಿಲ್ಲಾಪಂಚಾಯತ್ ಉಡುಪಿ, ಉಪನಿರ್ದೇಶಕರ ಕಛೇರಿ ಉಡುಪಿ ಇವರ ವತಿಯಿಂದ ಶ್ರೀ ದುರ್ಗಾ ಆಂಗ್ಲಮಾಧ್ಯಮ ಶಾಲೆ ಕೊಕ್ಕರ್ಣೆ ಇಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಎಂಟನೇ ತರಗತಿಯಿಂದ ಪದವಿ ಪೂರ್ವ ವಿಭಾಗದ ವಿದ್ಯಾರ್ಥಿಗಳ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಕಾರ್ಕಳ ಕ್ರೈಸ್ಟ್ಕಿಂಗ್ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳನ್ನೊಳಗೊಂಡ ಕವ್ವಾಲಿ ತಂಡ ಪ್ರಥಮ ಸ್ಥಾನ ಪಡೆದುಕೊಂಡು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.
Also read: ಮೂಲಸೌಕರ್ಯವಿಲ್ಲದೇ ನರಳುತ್ತಿದೆ ಸೋಮಿನಕೊಪ್ಪ ಭೋವಿ ಕಾಲೋನಿ ಸ್ಮಶಾನ
ದ್ವಿತೀಯ ವಿಜ್ಞಾನ ವಿಭಾಗದ ನೈತಿಕ್ ಶೆಟ್ಟಿ, ಐಫಾ ಫರ್ಹಾನ, ಭುವನ್, ಪ್ರಥಮ ವಿಜ್ಞಾನ ವಿಭಾಗದ ಸ್ಮೃತಿ ಮರಾಠೆ, ಒಂಬತ್ತನೇ ತರಗತಿಯ ಶ್ರೀಶಾ ಪ್ರಭು, ರೇಚಲ್ ಡಿ’ಸೋಜ ತಂಡವನ್ನು ಪ್ರತಿನಿಧಿಸಿದ್ದರು. ಉಳಿದಂತೆ ಗಝಲ್ನಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸ್ಮೃತಿ ಮರಾಠೆ ದ್ವಿತೀಯ ಸ್ಥಾನ, ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ಕೀರ್ತನ್ ಡಿ’ಸೋಜ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post