No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ

ಕ್ರೈಸ್ಟ್ ಕಿಂಗ್: ಸಂಭ್ರಮ ಸಡಗರದ ಶಿಕ್ಷಕರ ದಿನಾಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 5, 2025
in ಉಡುಪಿ
0
ಶಿಕ್ಷಕರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ: ಎಸ್.ಎಲ್ ಭೋಜೆಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಪ್ರಸ್ತುತ ಸಮಾಜ ಮಾನವೀಯ ಮೌಲ್ಯಗಳನ್ನು ಕಳೆದುಕೊಳ್ಳುತ್ತಿದ್ದು ಇದರಿಂದಾಗಿ ಗುರು ಶಿಷ್ಯ ಸಂಬಂಧದ ಮೌಲ್ಯ ಕೂಡಾ ಕುಸಿಯುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯ ಎಸ್ ಎಲ್ ಭೋಜೆಗೌಡ ಹೇಳಿದರು.

ಇಲ್ಲಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ಕ್ರೈಸ್ಟ್ ಕಿಂಗ್ #Christ King ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು #Teachers Day ಶಿಕ್ಷಕ ರಕ್ಷಕ ಸಂಘದ ಆಶ್ರಯದಲ್ಲಿ ಸಂಸ್ಥೆಯ ನೂತನ ಕಾಲೇಜು ಸಭಾಂಗಣದಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಅವರು ದೀಪ ಬೆಳಗುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇಂದು ಸಂಬಂಧಗಳನ್ನು ಹಣದ ಮೂಲಕ ಅಳೆಯುತ್ತಿರುವುದು ಖೇದಕರ ವಿಷಯ, ಶಿಕ್ಷಕರು ಈ ಸಮಾಜದ ಕಣ್ಮಣಿಗಳು, ಅವರಿಂದ ಸುಸಂಸ್ಕೃತ ಸಮಾಜ ನಿರ್ಮಾಣ ಸಾಧ್ಯ, ಈ ಪ್ರಪಂಚದಲ್ಲಿ ಸರ್ವಶ್ರೇಷ್ಟ ನಾಯಕರನ್ನು ತಯಾರು ಮಾಡುವವರು ಯಾರಾದರೂ ಇದ್ದರೆ ಅದು ಶಿಕ್ಷಕರು ಮಾತ್ರ ಎಂದು ಹೇಳಿದರು.

ಇನ್ನೋರ್ವ ಅತಿಥಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ನಿವೃತ್ತ ಮುಖ್ಯಗುರು ಸಂಜೀವ ದೇವಾಡಿಗ ಅವರು ಮಾತನಾಡಿ, ಶಿಕ್ಷಕರು ಸಮರ್ಪಣಾ ಮನೋಭಾವದಿಂದ ಕಾರ್ಯನಿರ್ವಹಿಸಿದರೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿ ಸಾಧ್ಯ. ಶಿಕ್ಷಕರು ತಮ್ಮ ವೃತ್ತಿಯ ಬಗ್ಗೆ ಪ್ರೀತಿ ಅಭಿಮಾನಗಳನ್ನು ಬೆಳಿಸಿಕೊಳ್ಳಬೇಕು ಎಂದು ಹೇಳಿದರು.

ಸರಕಾರಿ ಪ್ರೌಢಶಾಲೆ ರೆಂಜಾಳ ಇಲ್ಲಿನ ಮುಖ್ಯ ಶಿಕ್ಷಕಿ ಶ್ರೀಮತಿ ಸ್ವರ್ಣಲತಾ ಕೆ ಅವರಿಗೆ ‘ಕ್ರೈಸ್ಟ್‌ಕಿಂಗ್ ಶಿಕ್ಷಕ ರತ್ನ’ ಮತ್ತು ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ಶಿಕ್ಷಕ ಶ್ರೀ ಫ್ರೆಡ್ರಿಕ್ ರೆಬೆಲ್ಲೊ ಅವರಿಗೆ ‘ಕ್ರೈಸ್ಟ್‌ಕಿಂಗ್ ಕ್ರೀಡಾ ಶಿಕ್ಷಕಶ್ರೀ’ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ರ್ಣಲತಾ ಅವರು ಉಳಿಪೆಟ್ಟನ್ನು ತಿಂದ ಕಲ್ಲು ಉತ್ತಮ ಮೂರ್ತಿಯಾಗುತ್ತದೆ, ಅದೇ ರೀತಿ ಕಷ್ಟವನ್ನುಂಡು ಬೆಳೆದರೆ ಉತ್ತಮ ವ್ಯಕ್ತಿತ್ವ ಮೂಡಿಬರುತ್ತದೆ ಎಂದು ಹೇಳಿದರು.
ಫ್ರೆಡ್ರಿಕ್ ರೆಬೆಲ್ಲೊ ಅವರು ಮಾತನಾಡಿ, ವಿದ್ಯಾರ್ಥಿಗಳು ಧೈರ್ಯ-ಸ್ಥೈರ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು, ನಮ್ಮ ನಮ್ಮ ಪ್ರತಿಭೆಗಳನ್ನು ನಾವು ನಾವೇ ಗುರುತಿಸಿ, ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಸದಸ್ಯ ಡಾ. ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ ಶಿಕ್ಷಕರು ಮಕ್ಕಳನ್ನು ಪ್ರೀತಿ ವಾತ್ಸಲ್ಯದಿಂದ ನೋಡಿಕೊಳ್ಳಬೇಕು, ನಮ್ಮ ದೇಶಕ್ಕಾಗಿ ಕಾಯಾ ವಾಚಾ ಮನಸಾ ದುಡಿಯುವುದೇ ನಿಜವಾದ ದೇಶಪ್ರೇಮ. ಭಾರತದ ಭವಿಷ್ಯ ನಿರ್ಮಾಣವಾಗುವುದು ತರಗತಿ ಕೊಠಡಿಗಳಲ್ಲಿ, ಅಲ್ಲಿ ಮಕ್ಕಳಿಗೆ ಸರಿಯಾದ ಮೌಲ್ಯಯುತ ಶಿಕ್ಷಣ ದೊರೆತಾಗ ಭಾರತ ವಿಶ್ವನಾಯಕನಾಗುತ್ತದೆ ಎಂದು ಹೇಳಿದರು.

ಶಿಕ್ಷಕ-ರಕ್ಷಕ ಸಂಘದ ಪದವಿಪೂರ್ವ ವಿಭಾಗದ ಅಧ್ಯಕ್ಷರಾದ ದಯಾನಂದ ಮಲೆಬೆಟ್ಟು ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಪದವಿಪೂರ್ವ ವಿಭಾಗದ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಪ್ರಸ್ತಾವನೆಗೈದರೆ ಕನ್ನಡ ಉಪನ್ಯಾಸಕ ಉಮೆಶ್ ಬೆಳ್ಳಿಪ್ಪಾಡಿ ಪ್ರಶಸ್ತಿಗಳ ಪರಿಚಯಗೈದರು. ಸಂಸ್ಥೆಯ ಗಣಿತಶಾಸ್ತ್ರ ಉಪನ್ಯಾಸಕ ಅರುಣ್ ಸಂದೀಪ್ ಡಿ’ಸೋಜ, ಕಚೇರಿ ಸಹಾಯಕಿ ಶ್ರೀಮತಿ ಪೃಥ್ವಿ ಶೆಟ್ಟಿ ಮತ್ತು ಗ್ರಂಥಪಾಲಕಿ ಶ್ರೀಮತಿ ರೇಷ್ಮಾ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಸಂಸ್ಥೆಯ ಎಲ್ಲಾ ಶಿಕ್ಷಕರು, ಉಪನ್ಯಾಸಕರು ಹಾಗೂ ಬೋಧಕೇತರ ವೃಂದದವರನ್ನು ಈ ಸಂದರ್ಭದಲ್ಲಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.
ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ಸಂಸ್ಥೆಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕರಿಂದ ಹಾಗೂ ಪೋಷಕರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು.

ಶಕೀಲಾ ಜಿ ಶೆಟ್ಟಿ, ವಿದ್ಯಾ, ಮಮತಾ, ವಿಶ್ವಾನಾಥ ಪುಜಾರಿ, ಕಿಶನ್, ಪ್ರಕಾಶ್ ಡಿಸೋಜ, ಸುನಿಲ್ ಡಿಸೋಜ, ಜಾನ್ ತಾವ್ರೋ, ವನಿತಾ ವಿವಿಧ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ – ರಕ್ಷಕ ಸಂಘದ ಪ್ರಾಥಮಿಕ ವಿಭಾಗದ ಅಧ್ಯಕ್ಷ ಉದಯರವಿ ಸ್ವಾಗತಿಸಿ ಪ್ರೌಢಶಾಲಾ ವಿಭಾಗದ ಅಧ್ಯಕ್ಷೆ ಶ್ರೀಮತಿ ಶರಿಟಾ ನೊರೋನ್ಹ ವಂದಿಸಿದರು. ಶಿಕ್ಷಕ ರಕ್ಷಕ ಸಂಘದ ಸದಸ್ಯರಾದ ಶ್ರೀಮತಿ ಹೇಮಲತಾ ಮತ್ತು ಯಶಸ್ವಿನಿ ರಾವ್ ಕಾರ್ಯಕ್ರಮ ನಿರೂಪಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Christ Kingcoastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkalaLatest News KannadaMangaloreNews in KannadaNews KannadaTeachers dayUdupiಕಾರ್ಕಳಕ್ರೈಸ್ಟ್ ಕಿಂಗ್ಶಿಕ್ಷಕರ ದಿನಾಚರಣೆ
Share196Tweet123Send
Previous Post

ಕುಸ್ತಿ ಸ್ಪರ್ಧೆ | ಕ್ರೈಸ್ಟ್‌ಕಿಂಗ್ ಕಾಲೇಜಿನ ಪೂರ್ಣಿಮಾ ಪ್ರಭು ರಾಜ್ಯಮಟ್ಟಕ್ಕೆ ಆಯ್ಕೆ

Next Post

ಮುಂಜಾನೆ ಸುವಿಚಾರ | ನಮ್ಮ ನಡವಳಿಕೆ ನಮ್ಮ ವ್ಯಕ್ತಿತ್ವದ ಪ್ರತೀಕ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮುಂಜಾನೆ ಸುವಿಚಾರ | ನಮ್ಮ ನಡವಳಿಕೆ ನಮ್ಮ ವ್ಯಕ್ತಿತ್ವದ ಪ್ರತೀಕ

ಮುಂಜಾನೆ ಸುವಿಚಾರ | ನಮ್ಮ ನಡವಳಿಕೆ ನಮ್ಮ ವ್ಯಕ್ತಿತ್ವದ ಪ್ರತೀಕ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಶಾಸಕ ಬೈರತಿ ಬಸವರಾಜ್’ಗೆ ಅರೆಸ್ಟ್ ಭೀತಿ | ಫೋನ್ ಕಾಲ್’ಗೂ ಸಿಗದೇ ಎಸ್ಕೇಪ್

ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿ ಸುಪ್ರೀಂ ಕೋರ್ಟ್’ನಲ್ಲೂ ವಜಾ

February 12, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

ಅಂತರಾಷ್ಟ್ರೀಯ ರೇಸಿಂಗ್ ಫೆಸ್ಟಿವಲ್‌ಗೆ ಸಜ್ಜಾದ ಗೋವಾ | ಕಿಚ್ಚಾಸ್ ಕಿಂಗ್ಸ್ ಬೆಂಗಳೂರು ತಂಡ ಸ್ಪರ್ಧೆ!

February 12, 2026
Mysore – Shivamogga Express Big Update on this Date | Must Read

ಹಾಸನ-ಸೋಲಾಪುರ ಎಕ್ಸ್’ಪ್ರೆಸ್ ರೈಲಿನ ಟೈಮಿಂಗ್ ಬದಲು | ಇಲ್ಲಿದೆ ಡೀಟೇಲ್ಸ್

February 12, 2026
ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

February 12, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL