ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಅತಿಯಾದ ಮೊಬೈಲ್ ಗೀಳು, #Mobile Obsession ಡ್ರಗ್ಸ್ ಚಟ #Drug addiction ಹಾಗೂ ಇನ್ನಿತರ ಯಾವುದೇ ದುರಭ್ಯಾಸಗಳಿಂದ ದೂರವಾಗಬೇಕೆಂಬ ಕಲ್ಪನೆ ನಮ್ಮಲ್ಲಿಯೇ ಮೂಡಬೇಕು. ಆಗ ಮಾತ್ರ ಅದರಿಂದ ಮುಕ್ತವಾಗಲು ಸಾಧ್ಯ ಎಂದು ಮನೋತಜ್ಞ ಡಾ.ಪಿ.ವಿ. ಭಂಡಾರಿ ಅಭಿಪ್ರಾಯಪಟ್ಟರು.
ಇಲ್ಲಿನ ಕ್ರೈಸ್ಟ್ಕಿಂಗ್ #Christ King ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆಯ ಗೀಳು, ದುಶ್ಚಟಗಳು ಹಾಗೂ ಪರೀಕ್ಷಾ ತಯಾರಿಯಲ್ಲಿ ಎದುರಾಗುವ ತೊಡಕುಗಳ ಕುರಿತು ಆಯೋಜಿಸಲಾಗಿದ್ದ ತರಬೇತಿ ಕಾರ್ಯಕ್ರಮದಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿ ಅವರು ಮಾತನಾಡಿದರು.

ನಂತರ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಸಿದ್ಧತೆಯ ಕುರಿತಾಗಿ ಸಂವಾದ ಕಾರ್ಯಕ್ರಮ ನಡೆಯಿತು. ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀನಾರಾಯಣ ಕಾಮತ್ ಅವರು ಸಂದರ್ಭೋಚಿತವಾಗಿ ಮಾತನಾಡಿದರು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಪ್ರಸ್ತಾವನೆಗೈದರು. ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಸಂಸ್ಥೆಯ ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಸಮಾಲೋಚಕಿ ಸಿ.ಡಾ.ಶಾರ್ಲೆಟ್ ಸಿಕ್ವೇರಾ ಮುಂತಾದವರು ಉಪಸ್ಥಿತರಿದ್ದರು.
ಸಂಸ್ಥೆಯ ಆಂಗ್ಲಭಾಷಾ ಉಪನ್ಯಾಸಕಿಯರಾದ ಪಾವನಾ ಧನ್ಯರಾಜ್ ಸ್ವಾಗತಿಸಿ, ಸಿ.ಕೆ. ಶಿಜಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post