ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಅಕ್ಷರ ಜ್ಞಾನ ಇಲ್ಲದೆಯೂ ತುಳುವರು ತುಳುವ ಇತಿಹಾಸವನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದಾರೆ. ತುಳುನಾಡಿನ ಊರಿನ ಹೆಸರುಗಳ ಹಿಂದೆ ಅದರ ಇತಿಹಾಸವೂ ಸೇರಿಕೊಂಡಿದೆ ಎಂದು ಬಂಟ್ವಾಳದ ಬಿ.ಸಿ.ರೋಡಿನ ವೀರ ರಾಣಿ ಅಬ್ಬಕ್ಕ ಅಧ್ಯಯನ ಕೇಂದ್ರ ಹಾಗೂ ವಸ್ತು ಸಂಗ್ರಹಾಲಯದ ಸಂಸ್ಥಾಪಕ ಮತ್ತು ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ.ತುಕರಾಂ ಪೂಜಾರಿ ಅಭಿಪ್ರಾಯ ವ್ಯಕ್ತಪಡಿಸಿದರು.
ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದ್ದ ತುಳುನಾಡ ಇತಿಹಾಸ ದರ್ಶನ ಎಂಬ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಉಪ ಪ್ರಾಚಾರ್ಯ ಡಾ. ಪ್ರಕಾಶ್ ಮಾತನಾಡಿ, ತುಳುವ ಇತಿಹಾಸ ಅರಿತುಕೊಂಡು ನಾವು ಹಿರಿಯರ ಆದರ್ಶದಂತೆ ಬಾಳಿ ಬದುಕಬೇಕು. ತುಳುನಾಡು ಪ್ರಾಚೀನ ಕಾಲದಲ್ಲಿ ಯಾಂತ್ರಿಕವಾಗಿಯೂ ಬಹಳ ಮುಂದುವರಿದಿತ್ತು ಅನ್ನುವುದಕ್ಕೆ ನಮಗೆ ಬಹಳಷ್ಟು ಉದಾಹರಣೆಗಳು ಸಿಗುತ್ತವೆ ಎಂದು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















Discussion about this post