Friday, October 10, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಉಡುಪಿ

ಸಮಾಜ ಸೇವೆಯೆಂದರೆ ಒಂದು ದಿನದಲ್ಲ, ಜೀವನ ಪರ್ಯಂತದ ಕಾರ್ಯ | ಮಾರುತಿ

ಕಾರ್ಕಳ | ಕ್ರಿಯೇಟಿವ್ ಕಾಲೇಜಿನ ವಾರ್ಷಿಕ ಶಿಬಿರದ ಸಮಾರೋಪ

October 10, 2025
in ಉಡುಪಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ(ಉಡುಪಿ)  |

ಸಮಾಜ ಸೇವೆ ಎಂದರೆ ಅದು ಒಂದು ದಿನದ್ದಲ್ಲ. ಬದಲಾಗಿ ಜೀವನ ಪರ್ಯಂತದ ಕಾರ್ಯವಾಗಿದೆ ಎಂದು ಪದವಿ ಪೂರ್ವ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಸಲಹೆ ನೀಡಿದರು.

ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ರಾಷ್ಟ್ರೀಯ ಸೇವಾ ಯೋಜನೆ ಪ್ರಯುಕ್ತ ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ವತಿಯಿಂದ ನಡೆದ ‘ನಶಾ ಮುಕ್ತ ಭಾರತ ಅಭಿಯಾನ’ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ವಿದ್ಯಾರ್ಥಿ ಜೀವನದಲ್ಲಿ ಇಂತಹ ಶಿಬಿರಗಳು ನೈಜ ಜೀವನದ ಪಾಠ ಕಲಿಸುವ ಪಾಠಶಾಲೆಯಂತಿವೆ. ಸಮಾಜ ಸೇವೆ ಎಂದರೆ ಕೇವಲ ಒಂದು ದಿನದ ಕಾರ್ಯಕ್ರಮವಲ್ಲ. ಅದು ಜೀವನಪೂರ್ತಿ ಅಳವಡಿಸಿಕೊಳ್ಳಬೇಕಾದ ಮನೋಭಾವ ಎಂದು ಕರೆ ನೀಡಿದರು.

ಸಂಸ್ಥೆಯ ಸಹ ಸಂಸ್ಥಾಪಕರಾದ ಎಸ್.ಎಲ್. ಅಶ್ವತ್ ಮಾತನಾಡಿ, ಸಮಾಜಕ್ಕೆ ಕೊಡುಗೆ ನೀಡುವ ಮನೋಭಾವ ಬೆಳೆಸಿದರೆ, ಶಿಕ್ಷಣದ ಗುರಿ ಸಾರ್ಥಕವಾಗುತ್ತದೆ ಎಂದರು.

ಮುನಿಯಾಲು ಉದಯ ಕೃಷ್ಣಯ್ಯ ಶೆಟ್ಟಿ ಚಾರಿಟೇಬಲ್ ಟ್ರಸ್ಟ್ ಹಾಗೂ ಬಂಟ್ಸ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ ಉದಯ್ ಕುಮಾರ್ ಶೆಟ್ಟಿ ರವರು, ಇಂದಿನ ಯುವಕರು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಳ್ಳುವಲ್ಲಿ ಮುಂಚೂಣಿಯಲ್ಲಿರಬೇಕು. ಶಿಬಿರಗಳಲ್ಲಿ ಬೆಳೆದ ಅನುಭವವು ಭವಿಷ್ಯದ ನಾಯಕರಾಗಿ ರೂಪಗೊಳ್ಳಲು ಸಹಾಯಕವಾಗುತ್ತದೆ ಎಂದರು.

ಉದ್ಯಮಿ ವಿಜಯ್ ಶೆಟ್ಟಿ ರವರು ಮಾತನಾಡಿ, ವಿದ್ಯಾರ್ಥಿಗಳು ಕೇವಲ ಅಕಾಡೆಮಿಕ್ ಯಶಸ್ಸಿನಲ್ಲೇ ಅಲ್ಲ, ಸಮಾಜಮುಖಿ ಕಾರ್ಯಗಳಲ್ಲೂ ತೊಡಗಿಸಿಕೊಂಡಾಗ ಮಾತ್ರ ನಿಜವಾದ ಶಿಕ್ಷಣದ ಅರ್ಥ ಸಾರ್ಥಕವಾಗುತ್ತದೆ ಎಂದರು.
ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷರು ಮತ್ತು ಇಸ್ರೋದ ನಿವೃತ್ತ ವಿಜ್ಞಾನಿ ಜನಾರ್ಧನ ಇಡ್ಯಾ ಮಾತನಾಡಿ, ಜೀವನದಲ್ಲಿ ದೊಡ್ಡ ಸ್ಥಾನ ಪಡೆಯುವುದಕ್ಕಿಂತ, ಒಳ್ಳೆಯ ಮಾನವಿಯ ಮೌಲ್ಯಗಳನ್ನು ಅಳವಡಿಸಿಕೊಂಡು ನಾಗರಿಕನಾಗುವುದು ಮುಖ್ಯ. ಈ ಶಿಬಿರದ ಅನುಭವಗಳು ನಿಮ್ಮ ವ್ಯಕ್ತಿತ್ವ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆಎಂದರು.

ನ್ಯಾಯವಾದಿ ಮತ್ತು ನೋಟರಿ ನಂದಿನಿ ಶೆಟ್ಟಿ ಮಾತನಾಡಿ, ಎನ್’ಎಸ್’ಎಸ್ ಶಿಬಿರವು ವಿದ್ಯಾರ್ಥಿಗಳಲ್ಲಿ ಸೇವಾ ಮನೋಭಾವ, ನಾಯಕತ್ವ ಹಾಗೂ ಮಾನವೀಯ ಮೌಲ್ಯಗಳನ್ನು ಬೆಳೆಸುವ ವೇದಿಕೆ ಆಗಿದೆ’ ಎಂದು ಅಭಿಪ್ರಾಯಪಟ್ಟರು.

ಎಂಪಿಎಂ ಕಾಲೇಜು ಪ್ರಾಂಶುಪಾಲ ಶ್ರೀವಮಾ ಅಜ್ರಿ ಮಾತನಾಡಿ, ಯುವಕರು ರಾಷ್ಟ್ರದ ಶಕ್ತಿ. ಅವರಿಂದ ಪ್ರಾರಂಭವಾಗುವ ಪ್ರತಿಯೊಂದು ಸಣ್ಣ ಸೇವಾ ಚಟುವಟಿಕೆ ದೇಶದ ಅಭಿವೃದ್ಧಿಗೆ ದಾರಿ ತೋರಿಸಬಹುದು ಎಂದು ಹೇಳಿದರು.
ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಅನ್ನಪೂರ್ಣ ಕಾಮತ್ ಮಾತನಾಡಿ, ಎನ್’ಎಸ್’ಎಸ್ ಘಟಕದ ವತಿಯಿಂದ ನಡೆದ ಕಾರ್ಯವೈಖರಿಗಳನ್ನು ಶ್ಲಾಘಿಸಿದರು.

ವಿದ್ಯಾರ್ಥಿಗಳು ಶ್ರಮ, ಶಿಸ್ತು ಮತ್ತು ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸಿದ್ದು ಪ್ರಶಂಸನೀಯ. ಎನ್’ಎಸ್’ಎಸ್ ಕೇವಲ ಕಾರ್ಯಕ್ರಮವಲ್ಲ, ಅದು ವ್ಯಕ್ತಿತ್ವ ನಿರ್ಮಾಣದ ಪಾಠವಾಗಿದೆ ಎಂದರು.

ಪೌರ ಕಾರ್ಮಿಕರಿಗೆ ಸನ್ಮಾನ

ಸಮಾರೋಪ ಕಾರ್ಯಕ್ರಮದಲ್ಲಿ 25 ವರ್ಷಗಳಿಗಿಂತಲೂ ಸುದೀರ್ಘ ಅವಧಿಯಿಂದ ಪೌರಕಾರ್ಮಿಕರಾಗಿ ದುಡಿದು ಸಮಾಜಕ್ಕೆ ಸೇವೆ ಸಲ್ಲಿಸುತ್ತಿರುವ ಸುಧೀರ್, ಪೂವಪ್ಪ, ರವಿ, ನಾಗೇಶ್, ಸಂಜೀವ ಇವರನ್ನು ಎನ್’ಎಸ್’ಎಸ್ ಘಟಕದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.
ಅತಿಥಿಗಳ ಸಮ್ಮುಖದಲ್ಲಿ ಶಿಬಿರವಾಣಿಯನ್ನು ಬಿಡುಗಡೆಗೊಳಿಸಲಾಯಿತು. ವಿದ್ಯಾರ್ಥಿಗಳಾದ ಹಿತ ಮತ್ತು ಅಕ್ಷತಾ 7 ದಿನಗಳ ಎನ್’ಎಸ್’ಎಸ್ ಘಟಕದ ಅನುಭವಗಳ ಕುರಿತು ಮಾತನಾಡಿದರು.

ಎಲ್ಲಾ ಅತಿಥಿಗಳನ್ನು ಕಾರ್ಯಕ್ರಮದ ಸವಿನೆನಪಿನ ಧ್ಯೋತಕವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಂಸ್ಥೆಯ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಬಿ, ವಿದ್ವಾನ್ ಗಣಪತಿ ಭಟ್, ಆದರ್ಶ ಎಂ.ಕೆ. ರವರು ಗೌರವ ಉಪಸ್ಥಿತಿ ವಹಿಸಿದ್ದರು.

ಉಪನ್ಯಾಸಕರಾದ ಸಂತೋಷ್ ಸ್ವಾಗತಿಸಿ, ಶಿಬಿರಾಧಿಕಾರಿ ಉಮೇಶ್ ವಂದನಾರ್ಪ ಮಾಡಿದರು. ಉಪನ್ಯಾಸಕಿ ಪ್ರಿಯಾಂಕ ತೀರ್ಥರಾಮ ಕಾರ್ಯಕ್ರಮ ನಿರೂಪಿಸಿ, ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: coastal newsDakshina KannadaKannada NewsKannada News LiveKannada News OnlineKannada News WebsiteKannada WebsiteKarawali NewsKarkala (Udupi)Latest News KannadaMangaloreNews in KannadaNews Kannadaಕಾರ್ಕಳ (ಉಡುಪಿ)
Previous Post

ಭೀಕರ ರಸ್ತೆ ಅಪಘಾತ | ಪತಿ ಕಣ್ಣೆದುರೇ ಛಿದ್ರ ಛಿದ್ರವಾದ ಪತ್ನಿ ದೇಹ | ಘಟನೆ ಆಗಿದ್ದೆಲ್ಲಿ?

Next Post

ಶಿವಮೊಗ್ಗ | ಗಾಂಜಾ ಮಾರಿದ್ದ ಇಮ್ರಾನ್, ಇಮ್ತಿಯಾಜ್ ಎನ್ನುವವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗ | ಗಾಂಜಾ ಮಾರಿದ್ದ ಇಮ್ರಾನ್, ಇಮ್ತಿಯಾಜ್ ಎನ್ನುವವರಿಗೆ 3 ವರ್ಷ ಕಠಿಣ ಜೈಲು ಶಿಕ್ಷೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ನ.8-9 | ಶ್ರೀ ಅಕಾಡೆಮಿ ಆಫ್ ಮ್ಯೂಸಿಕ್ ಅಂಡ್ ಆರ್ಟ್ಸ್ ವತಿಯಿಂದ ಅದ್ಬುತ ಕಾರ್ಯಕ್ರಮ

October 10, 2025

ಶಿವಮೊಗ್ಗದಿಂದ ಮೈಸೂರಿಗೆ ಹೊರಟು ಬಸ್ ಹತ್ತಿದ್ದ ವೃದ್ಧೆಗೆ ಕಾದಿತ್ತು ಶಾಕ್

October 10, 2025

ಈ ಒಂದು ದಿನ ಬೆಳಗಾವಿ-ಮೀರಜ್ ಎಕ್ಸ್’ಪ್ರೆಸ್ ರೈಲು ತಡವಾಗಿ ಚಲಿಸಲಿದೆ

October 10, 2025

ಒಂದೇ ವಾರದಲ್ಲಿ ಬಾಕ್ಸಾಫೀಸ್ ಕೊಳ್ಳೆ ಹೊಡೆದ ಕಾಂತಾರ -1 | ವಿಶ್ವದಾದ್ಯಂತ ಕಲೆಕ್ಷನ್ ಎಷ್ಟು?

October 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ನ.8-9 | ಶ್ರೀ ಅಕಾಡೆಮಿ ಆಫ್ ಮ್ಯೂಸಿಕ್ ಅಂಡ್ ಆರ್ಟ್ಸ್ ವತಿಯಿಂದ ಅದ್ಬುತ ಕಾರ್ಯಕ್ರಮ

October 10, 2025

ಶಿವಮೊಗ್ಗದಿಂದ ಮೈಸೂರಿಗೆ ಹೊರಟು ಬಸ್ ಹತ್ತಿದ್ದ ವೃದ್ಧೆಗೆ ಕಾದಿತ್ತು ಶಾಕ್

October 10, 2025

ಈ ಒಂದು ದಿನ ಬೆಳಗಾವಿ-ಮೀರಜ್ ಎಕ್ಸ್’ಪ್ರೆಸ್ ರೈಲು ತಡವಾಗಿ ಚಲಿಸಲಿದೆ

October 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!