ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ನಮ್ಮಲ್ಲಿ ಉದ್ಯೋಗದ ಕೊರತೆ ಇಲ್ಲ ಆದರೆ ಕೌಶಲ್ಯಗಳ ಕೊರತೆ ಇದೆ ಎಂದು ಉಡುಪಿಯ ತ್ರಿಶಾ ಕಾಲೇಜಿನ ಪ್ರಾಚಾರ್ಯ ಗುರುಪ್ರಸಾದ್ ರಾವ್ ಅಭಿಪ್ರಾಯಪಟ್ಟರು.
ಇಲ್ಲಿನ ಪ್ರತಿಷ್ಠಿತ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಸಿಎ, ಸಿಎಸ್ ಕೋರ್ಸ್ಗಳ ಮಾಹಿತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಮ್ಮಲ್ಲಿ ಉದ್ಯೋಗದ ಕೊರತೆ ಇಲ್ಲ ಆದರೆ ಕೌಶಲ್ಯಗಳ ಕೊರತೆ ಇದೆ. ತರಗತಿ ಕೊಠಡಿಗಳಲ್ಲಿ ಎಲ್ಲವನ್ನೂ ಕಲಿಯಲು ಸಾಧ್ಯವಿಲ್ಲ. ಹೊರ ಪ್ರಪಂಚಕ್ಕೆ ಕಾಲಿಟ್ಟಾಗ ಎಲ್ಲಾ ಅನುಭವ ಪಡೆಯಲು ಸಾಧ್ಯ. ಸೂಕ್ತ ಅವಕಾಶಕ್ಕಾಗಿ ಕಾಯದೆ ಅವಕಾಶಗಳನ್ನು ನಾವೇ ಸೃಷ್ಟಿಸಿಕೊಳ್ಳಬೇಕು ಎಂದರು.
Also read: ಕಾಶಿಪುರ ರೈಲ್ವೆ ಫ್ಲೈಓವರ್-ಅಂಡರ್ ಪಾಸ್ ಯಾವಾಗ ಓಪನ್ ಆಗತ್ತೆ? ಸಂಸದರು ಹೇಳಿದ್ದೇನು?
ಭಾರತೀಯ ಸಿಎಗಳಿಗೆ ಜಗತ್ತಿನಾದ್ಯಂತ ಬೇಡಿಕೆ ಇದೆ. ಪ್ರಪಂಚದ ಅನೇಕ ದೇಶಗಳು ಭಾರತೀಯ ಚಾರ್ಟರ್ಡ್ ಅಕೌಂಟೆAಟ್ಗಳ ಯೋಜನೆಗಳನ್ನು ತಮ್ಮಲ್ಲಿ ಅಳವಡಿಸಿಕೊಳ್ಳುತ್ತಿವೆ ಎಂದರು.
ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಪ್ರಸ್ತಾವನೆ ಮಾಡಿ, ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮಿ ನಾರಾಯಣ ಕಾಮತ್, ವಾಣಿಜ್ಯಶಾಸ್ತ್ರ ಉಪನ್ಯಾಸಕಿ ಸುಕನ್ಯಾ ಜೈನ್, ಅರ್ಥಶಾಸ್ತ್ರ ಉಪನ್ಯಾಸಕಿ ಅಭಿನಯ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಂಖ್ಯಾಶಾಸ್ತ್ರ ಉಪನ್ಯಾಸಕಿ ಉದಯಶ್ರೀ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post