ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬುಧವಾರ ರಾತ್ರಿ ನಿಧನರಾದ ಮಾಜಿ ಶಾಸಕ ಎಂ.ಜೆ. ಅಪ್ಪಾಜಿಗೌಡರ ಅಂತ್ಯ ಸಂಸ್ಕಾರ ಗುರುವಾರ ಮುಂಜಾನೆ 11 ಗಂಟೆಗೆ ಗೋಣಿಬೀಡು ತೋಟದಲ್ಲಿ ನಡೆಯಲಿದೆ.
ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾಗೆ ಮಾಹಿತಿ ನೀಡಿದ ಕುಟುಂಬಸ್ಥರು, ಗುರುವಾರ ಮುಂಜಾನೆ 10.30ರವರೆಗೂ ಮನೆಯ ಮುಂಭಾಗದಲ್ಲಿಯೇ ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಆನಂತರ ಮೆರವಣಿಗೆಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ ನಡೆಯಲಿದ್ದು, 11 ಗಂಟೆ ಸುಮಾರಿಗೆ ಗೋಣಿಬೀಡು ತೋಟದಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post