ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಭದ್ರಾ ಜಲಾಶಯದಿಂದ ನದಿಗೆ 45 ಸಾವಿರ ಕ್ಯೂಸೆಕ್ಸ್ ನೀರು ಹರಿಸುತ್ತಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಸಂಭವಿಸಬಹುದಾದ ನೆರೆ ಪರಿಸ್ಥಿತಿ ಎದುರಿಸಲು ನಗರಸಭೆ ಸರ್ವ ಸನ್ನದ್ಧವಾಗಿದೆ.
ಈ ಕುರಿತಂತೆ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದೊಂದಿಗೆ ಮಾತನಾಡಿದ ನಗರಸಭೆ ಆಯುಕ್ತ ಮನೋಹರ್, ಸಂಭವನೀಯ ನೆರೆ ಪರಿಸ್ಥಿತಿ ಎದುರಿಸಲು ನಾವು ಎಲ್ಲ ರೀತಿಯಲ್ಲೂ ಸನ್ನದ್ಧರಾಗಿದ್ದೇವೆ. ಗಂಡೂರಾವ್ ಶೆಡ್, ಕಿಂಗ್ಷಾ ಕಾಲೋನಿ, ಕವಲಗುಂದಿ ಬಡಾವಣೆಗಳಲ್ಲಿ ಈಗಾಗಲೇ ಬಡಾವಣೆಗಳಲ್ಲಿ ಈಗಾಗಲೇ ಮುನ್ನೆಚ್ಚರಿಕಾ ಘೋಷಣೆಗಳನ್ನು ಮಾಡಲಾಗಿದೆ. ಅಗತ್ಯ ಪರಿಸ್ಥಿತಿ ಎದುರಾದರೆ ಅಲ್ಲಿನ ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲು ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ನದಿ ಪಾತ್ರದ ಜನರು ಮುನ್ನೆಚ್ಚರಿಕೆ ವಹಿಸಬೇಕಿದ್ದು, ಯಾವುದೇ ಕಾರಣಕ್ಕೂ ಯಾರೂ ನದಿಗೆ ಇಳಿಯಬಾರದು ಎಂದು ಆಯುಕ್ತರು ತಿಳಿಸಿದ್ದಾರೆ.
ಇನ್ನು, ನದಿಗೆ ಭಾರೀ ಪ್ರಮಾಣದ ನೀರು ಹರಿಸಿರುವ ಹಿನ್ನೆಲೆಯಲ್ಲಿ ಸಂಭವನೀಯ ನೆರೆ ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಿರುವ ಎಲ್ಲ ರೀತಿಯ ಮುಂಜಾಗ್ರತೆ ಹಾಗೂ ಸಿದ್ದತೆಗಳನ್ನು ನಗರಸಭೆ ಮಾಡಿಕೊಂಡಿದೆ ಎಂದು ಆಯುಕ್ತರು ತಿಳಿಸಿದ್ದಾರೆ.
ಇನ್ನು, ನಗರದ ಎರಡು ಸಮುದಾಯ ಭವನಗಳಲ್ಲಿ ಗಂಜಿ ಕೇಂದ್ರ ತೆರೆಯಲು ನಗರಸಭೆ ಯೋಚಿಸಿದ್ದು, ಪರಿಸ್ಥಿತಿ ನೋಡಿಕೊಂಡು ತುರ್ತಾಗಿ ಆರಂಭ ಮಾಡಲು ಎಲ್ಲ ಸಿದ್ದತೆ ನಡೆಸಿದೆ.
ಇನ್ನು, ಮುನ್ನೆಚ್ಚರಿಕಾ ಕ್ರಮವಾಗಿ ಹೊಸ ಸೇತುವೆ ರಸ್ತೆಯಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ಎರಡೂ ಕಡೆಗಳಲ್ಲಿ ಬ್ಯಾರಿಕೇಟ್ ಹಾಕಿ ಬಂದ್ ಮಾಡಲಾಗಿದೆ.
Get In Touch With Us info@kalpa.news Whatsapp: 9481252093







Discussion about this post