No Result
View All Result
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು
English Articles

A Second Chance at Life Through Deceased Organ Donation

by ಕಲ್ಪ ನ್ಯೂಸ್
February 3, 2026
0

Kalpa Media House  |  Bengaluru, Whitefield  | For 48-year-old Unnikrishnan, life for several years revolved around dialysis sessions, medications, and...

Read moreDetails
Bhaskara Parva: Generations of Journalism Students Reunite to Honour a Teacher Who Shaped Their Lives

Bhaskara Parva: Generations of Journalism Students Reunite to Honour a Teacher Who Shaped Their Lives

February 2, 2026
NITK Surathkal Inaugurates First Annual Sports Festival- ‘Endeavor 2026’

NITK Surathkal Inaugurates First Annual Sports Festival- ‘Endeavor 2026’

February 1, 2026
Samsung Sets Two Guinness World Records with its India

Samsung Sets Two Guinness World Records with its India

January 31, 2026
ಮೈಸೂರು | ಮಹಾರಾಣಿ ಮಹಿಳಾ ವಿದ್ಯಾರ್ಥಿನಿಯರಿಗೆ ಆಹಾರ ಹಾಗು ಆತಿಥ್ಯೋದ್ಯಮ ಕೌಶಲ್ಯ ತರಬೇತಿ

Maharani’s Science College Collaboration Empowers Students with Industry-Ready Skills

January 31, 2026
  • Advertise With Us
  • Grievances
  • About Us
  • Contact Us
Thursday, February 5, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಬಡ ಪರಿಶಿಷ್ಟರು ಸಾಗು ಮಾಡುತ್ತಿದ್ದ ಭೂಮಿ ಒಕ್ಕಲೆಬ್ಬಿಸಿದ್ದ ಅಕ್ಷಮ್ಯ: ಮಾಜಿ ಶಾಸಕ ಅಪ್ಪಾಜಿ ಕಿಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 29, 2020
in Small Bytes, ಭದ್ರಾವತಿ
0
ಬಡ ಪರಿಶಿಷ್ಟರು ಸಾಗು ಮಾಡುತ್ತಿದ್ದ ಭೂಮಿ ಒಕ್ಕಲೆಬ್ಬಿಸಿದ್ದ ಅಕ್ಷಮ್ಯ: ಮಾಜಿ ಶಾಸಕ ಅಪ್ಪಾಜಿ ಕಿಡಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಹತ್ತಾರು ವರ್ಷಗಳಿಂದ ಬಡ ಪರಿಶಿಷ್ಟರು ಸಾಗು ಮಾಡುತ್ತಿದ್ದ ಭೂಮಿಯನ್ನು ತೆರವುಗೊಳಿಸಿದ್ದ ಅಕ್ಷಮ್ಯ ಎಂದು ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಕಿಡಿ ಕಾರಿದ್ದಾರೆ.

ಈ ಕುರಿತಂತೆ ಮಾತನಾಡಿದ ಅವರು, ತಾಲೂಕಿನ ಬಿಆರ್‌ಪಿ ಸಮೀಪದ ತಾವರಘಟ್ಟ ಗ್ರಾಮದಲ್ಲಿ ರುದ್ರಭೂಮಿ ಒತ್ತುವರಿ ಮಾಡಲಾಗಿದೆ ಎಂದು ರಾಜಕೀಯ ಪಿತೂರಿ ಹೂಡಿ ಗುರುವಾರ ಗ್ರಾಮದಲ್ಲಿ 144 ನೇ ಸೆಕ್ಷನ್ ಜಾರಿಗೊಳಿಸಿ ಜನರಿಗೆ ಭೀತಿ ಹುಟ್ಟಿಸಲಾಗಿದೆ. ಬಡ ಪರಿಶಿಷ್ಟರಿಬ್ಬರು ಹತ್ತಾರು ವರ್ಷಗಳಿಂದ ಸಾಗು ಮಾಡುತ್ತಿದ್ದ ಭೂಮಿಯನ್ನು ತೆರವುಗೊಳಿಸಿರುವ ಕ್ರಮ ವಿರೋಧಿಸಿ ಶಾಸಕರ ಮತ್ತು ತಾಹಸೀಲ್ದಾರರ ವಿರುದ್ದ ಖಂಡಿಸಿ ಸೋಮವಾರ ತಾಲೂಕು ಕಛೇರಿ ಮುತ್ತಿಗೆ ಹಾಕಲಾಗುವುದು ಎಂದರು.

ತಾವರಘಟ್ಟ ಸರ್ವೇ ನಂ.14 ರಲ್ಲಿ ಬಡವರಿಗೆ 1999-2000 ನೆಯ ಸಾಲಿನಲ್ಲಿ ನಮ್ಮ 2 ನೆಯ ಶಾಸಕರ ಅಧಿಕಾರದ ಅವಧಿಯಲ್ಲಿ ಸಾಗು ಮಾಡುತ್ತಿದ್ದ ಸುಮಾರು 30 ಬಡ ಕುಟುಂಬಗಳಿಗೆ ತಲಾ 2 ಏಕರೆಯಂತೆ ಹಕ್ಕು ಪತ್ರವನ್ನು ನೀಡಿದ್ದೇವೆ. ಅದೇ ಸಂದರ್ಭದಲ್ಲಿ ಗ್ರಾಮಸ್ಥರ ಒತ್ತಾಯದ ಮೇರೆಗೆ ರುದ್ರಭೂಮಿಗಾಗಿ 1.20 ಎಕರೆ ಭೂಮಿಯನ್ನೂ ನೀಡಿದ್ದೇವೆ. ಇತ್ತೀಚೆಗೆ ಜನರ ದುರಾದೃಷ್ಟ ಎಂಬಂತೆ ನಮ್ಮೂರಿನ ಶಾಸಕ ಬಿ.ಕೆ. ಸಂಗಮೇಶ್ವರ್ ಪಟಾಲಂ ಕಟ್ಟಿಕೊಂಡು ಜೊತೆಗೆ ತಹಸೀಲ್ದಾರ್ ಅವರನ್ನು ಅಡ್ಡ ದಾರಿ ಹಿಡಿಸಿ ಸ್ಥಳಕ್ಕೆ ಕರೆದೊಯ್ದು ರುದ್ರಭೂಮಿಗೆ ಸಂಬಂಧವಿಲ್ಲದ ಬಡವರು ಸಾಗು ಮಾಡುತ್ತಿರುವ ಬೇರೆ ಭೂಮಿಯನ್ನು ತೋರಿಸಿ ತೆರವುಗೊಳಿಸಲು ಪಿತೂರಿ ನಡೆಸಿದ್ದರು. ಕೆಲವಾರು ಮಂದಿ ಗ್ರಾಮಸ್ಥರಿಗೆ ಒತ್ತುವರಿ ಭೂಮಿ ತೆರವುಗೊಳಿಸಿ ನಿವೇಶನ ಮಾಡಿ ವಿತರಿಸುವುದಾಗಿ ಸುಳ್ಳು ಭರವಸೆ ನೀಡಿದ್ದ ವಿಷಯವು ತಿಳಿಯಿತು ಎಂದರು.

ಗ್ರಾಮಸ್ಥರು ಈ ಅನ್ಯಾಯವನ್ನು ತಿಳಿಸಿದ ಮೇರೆಗೆ ಸ್ಥಳಕ್ಕೆ ತೆರಳಿ ಅಧಿಕಾರಿಗಳೊಂದಿಗೆ ಚರ್ಚಿಸಿದ ನಾವು ಇದು ರುದ್ರಭೂಮಿಗೆ ಸೇರಿದ ಭೂಮಿಯಲ್ಲ. ರುದ್ರಭೂಮಿಗೆ ನಮ್ಮ ಅಧಿಕಾರದ ಅವಧಿಯಲ್ಲಿ 1.20 ಏಕರೆ ನೀಡಿದ್ದೇವೆ. ಅದನ್ನು ಯಾರಾದರು ಒತ್ತುವರಿ ಮಾಡಿದ್ದರೆ ತೆರವುಗೊಳಿಸಿ. ಶಾಸಕರು ತೋರುತ್ತಿರುವ ಭೂಮಿ ಹಕ್ಕು ಪತ್ರ ಪಡೆದು ಸಾಗು ಮಾಡುತ್ತಿರುವ ಬಡವರ ಭೂಮಿಯಾಗಿದೆ ಇವರೆಲ್ಲ ಅಪ್ಪಾಜಿ ಕಡೆಯವರೆಂದು ಭಾವಿಸಿ ತೆರವಿಗೆ ಕೈ ಹಾಕಿದ್ದಾರೆ ಎಂದು ತಿಳಿಸಿದ ಮೇರೆಗೆ ಕೆಲಕಾಲ ನಮ್ಮಿಬ್ಬರ ನಡುವೆ ಮಾತಿನ ಚಕಮಕಿ ಅವಾಚ್ಯ ಪದಗಳ ಸುರಿಮಳೆ ನಡೆದು ಪರಿಸ್ತಿತಿ ಬಿಗಡಾಯಿಸುವ ಹಂತ ತಲುಪಿ ಪೋಲಿಸರು ಲಾಠಿ ಪ್ರಹಾಹ ನಡೆಸುವಂತಹ ಘಟ್ಟ ತಲುಪಿತ್ತು. ತದ ನಂತರ ಅಧಿಕಾರಿಗಳು ಸರ್ವೇ ಮಾಡಿದ ನಂತರ ಕ್ರಮಕೈಗೊಳ್ಳುವುದಾಗಿ ಪ್ರಕರಣ ನೆನೆಗುದಿಗೆ ಬಿದ್ದಿತ್ತು ಎಂದರು.

Sri Huccharaya Swamy Temple, Shikaripura | ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯ, ಶಿಕಾರಿಪುರ

 

ದೇವಾಲಯ ಪರಿಚಯ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ

ಆದರೆ ತಹಸೀಲ್ದಾರ್ ಶಿವಕುಮಾರ್ ಶಾಸಕ ಸಂಗಮೇಶ್ವರ್ ಒತ್ತಡಕ್ಕೆ ಮಣಿದು ಗುರುವಾರ ಗ್ರಾಮಕ್ಕೆ ತೆರಳಿ ಜನರಲ್ಲಿ ಭೀತಿ ಹುಟ್ಟಿಸಿ 144 ನೇ ಸೆಕ್ಷನ್ ಜಾರಿ ಮಾಡಿ ದಿನೇಶ್ ನಾಯ್ಕ, ಗಂಗಾಧರ, ಮಂಜನ್ ಎಂಬುವರು ಹತ್ತಾರು ವರ್ಷಗಳಿಂದ ಸಾಗು ಮಾಡಿ ಶುಂಠಿ, ಭತ್ತ, ತೆಂಗು, ಅಡಿಕೆ ಮುಂತಾದ ಬೆಳೆ ಬೆಳೆದಿದ್ದ ಫಸಲನ್ನು ನಾಶ ಮಾಡಿ ಜೆಸಿಬಿಯಿಂದ ಟ್ರೆಂಚ್ ಹೊಡೆದು ತೆರವುಗೊಳಿಸಿ ಹರಾಜಕಥೆ ಮೆರೆದಿದ್ದಾರೆ. ವಿಪರ್ಯಾಸವೆಂದರೆ ತೆರವು ಮಾಡಿರುವ ಭೂಮಿಯ ಕೆಳಭಾಗ ಮತ್ತು ಮೇಲ್ಭಾಗದಲ್ಲಿದ್ದ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳವರ ಭೂಮಿ ತೆರವುಗೊಳಿಸಿ ಮದ್ಯಭಾಗದಲ್ಲಿರುವ ಸ್ವಜಾತಿಯವರನ್ನು ಮುಟ್ಟದೆ ಬಿಟ್ಟಿದ್ದಾರೆ. ಶಾಸಕರಿಗೆ ಬಡವರೆಂದರೆ ತಾತ್ಸಾರವಾಗಿದೆ. ಸ್ವಜಾತಿ ಜನರೆಂದರೆ ರಕ್ಷಿಸುವ ಹುನ್ನಾರವಾಗಿದೆ. ಶಾಸಕ ರಾಜಕಾರಣಿಯಾಗಿ ಜಾತೀಯತೆ ಮಾಡಿದರೆ ನಡೆಯುತ್ತದೆ. ಆದರೆ ತಾಹಸೀಲ್ದಾರ್ ಜಾತೀಯತೆ ಮೆರೆಯುವುದೆಂದರೆ ಏನರ್ಥ…? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಸೋಮವಾರ ಉತ್ತರಿಸುವುದಾಗಿ ಹೇಳಿದರು.

ಇದೇ ರೀತಿ ಎಂಪಿಎಂ ಮತ್ತು ವಿಐಎಸ್‌ಎಲ್ ಅವಳಿ ಕಾರ್ಖಾನೆಗಳನ್ನು ಹಾಳುಗೆಡವಿದ್ದಾರೆ. ವಿಐಎಸ್‌ಎಲ್ ನಗರಾಡಳಿವು ಕುಡಿಯಲು ನೀರು ಸಹ ಸರಿಯಾಗಿ ಸರಬರಾಜು ಮಾಡುತ್ತಿಲ್ಲ. ರಾಜ್ಯ ಸರಕಾರ ಮದ್ಯ ಪ್ರವೇಶ ಮಾಡಿ ಕುಡಿಯುವ ನೀರಿನ ವ್ಯವಸ್ಥೆಯನ್ನು ನಗರಸಭೆಗೆ ಹಸ್ತಾಂತರಿಸುವಂತೆ ಮಾಡಬೇಕು. ಜನರಿಗೆ ತೊಂದರೆಯಾದರೆ ಶಾಸಕರು, ಸಂಸದರು, ಚುನಾಯಿತ ಪ್ರತಿನಿಧಿಗಳು ಆಡಳಿತದ ವಿರುದ್ದ ಎದ್ದು ನಿಂತು ಸಮಸ್ಯೆ ಬಗೆಹರಿಸುವಂತಾಗಬೇಕೆಂದು ಒತ್ತಾಯಿಸಿದರು.

ಜೆಡಿಎಸ್ ಅಧ್ಯಕ್ಷ ಆರ್. ಕರುಣಾಮೂರ್ತಿ, ತಾಪಂ ಅಧ್ಯಕ್ಷೆ ಲಕ್ಷೀದೇವಿ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಜೆ.ಪಿ. ಯೋಗೇಶ್, ಮಣಿಶೇಖರ್, ಮುಖಂಡರಾದ ಕರಿಯಪ್ಪ, ಮಾಜಿ ನಗರಸಭಾಧ್ಯಕ್ಷರಾದ ಸುಧಾಮಣಿ, ವಿಶಾಲಾಕ್ಷಿ, ಕಾರ್ಮಿಕ ಮುಖಂಡ ಜೆ.ಎನ್. ಚಂದ್ರಹಾಸ, ಲೋಕೇಶ್ವರ ರಾವ್, ಮೈಲಾರಪ್ಪ, ಶಿವರಾಜ್, ಆನಂದ್, ನಟರಾಜ್, ಬದರಿನಾರಾಯಣ್ ಮುಂತಾದವರು ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: BhadravathiKannada News WebsiteLatest News KannadaLocal NewsM J AppajiMalnad NewsMLA B K SangameshwaraShimogaShivamogga Newsಎಂ.ಜೆ. ಅಪ್ಪಾಜಿಭದ್ರಾವತಿಮಲೆನಾಡು ಸುದ್ಧಿಶಿವಮೊಗ್ಗ ನ್ಯೂಸ್
Share199Tweet123Send
Previous Post

ಚಿರು ಸರ್ಜಾ ಸತ್ತ ನಂತರ ತೇಜೋವಧೆ ಮಾಡುವುದು ಮಾನವೀಯತೆಯಲ್ಲ: ಪ್ರಶಾಂತ್ ಸಂಬರಗಿ ಕಿಡಿ

Next Post

ಜಿಲ್ಲೆಯಲ್ಲಿಂದು 244 ಕೊರೋನಾ ಪಾಸಿಟಿವ್: 285 ಮಂದಿ ಗುಣಮುಖ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲೆಯಲ್ಲಿಂದು 244 ಕೊರೋನಾ ಪಾಸಿಟಿವ್: 285 ಮಂದಿ ಗುಣಮುಖ

Leave a Reply Cancel reply

Your email address will not be published. Required fields are marked *

  • Trending
  • Latest
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ಗದಗ-ಧಾರವಾಡ ಪ್ಯಾಸೆಂಜರ್ ರೈಲು ಪುನಾರಂಭ? ಕೇಂದ್ರ ಸಚಿವ ಜೋಶಿ ಹೇಳಿದ್ದೇನು?

ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಹೀಗಿದೆ ಡೀಟೇಲ್ಸ್

January 31, 2026
ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

ದಂಪತಿ ನಿಗೂಢ ಸಾವು | ಜೀವ ಉಳಿಸಬೇಕಾದವನಿಂದಲೇ ಕೋಲ್ಡ್ ಬ್ಲಡಡ್ ಮರ್ಡರ್ | ಯಾರವನು?

January 21, 2026
25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಸೂಡಾ ಅಧ್ಯಕ್ಷ ಸುಂದರೇಶ್ ಗುದ್ದಲಿಪೂಜೆ

February 4, 2026
ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

ಪ್ಲಾಸ್ಟಿಕ್ ಮುಕ್ತ ಪರಿಸರ ಸ್ನೇಹಿ ಮಾರಿಕಾಂಬಾ ಜಾತ್ರೆ ಆಚರಿಸಿ: ಪರ್ಯಾವರಣ ಟ್ರಸ್ಟ್ ಕರೆ

February 4, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

February 4, 2026
ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

ನಟ ಅರ್ಜುನ್ ಕಪೂರ್ ಅವರ ‘ಸ್ಪೀಡ್ ಡೆಮನ್ಸ್ ದೆಹಲಿ’ ತಂಡದಲ್ಲಿ ಅಂತರಾಷ್ಟ್ರೀಯ ಸ್ಟಾರ್‌ಗಳ ಅಬ್ಬರ!

February 4, 2026
ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

ವನ್ಯಜೀವಿ ಉಪಟಳಕ್ಕೆ ರೈತರು ಬಲಿ | ಶಾಶ್ವತ ಪರಿಹಾರಕ್ಕಾಗಿ ಕೇಂದ್ರ ಅರಣ್ಯ ಸಚಿವರಿಗೆ ಹೆಚ್‌ಡಿಕೆ ಮನವಿ

February 4, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL