No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಭದ್ರಾವತಿ ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಕಲಾಕಾರ ಶಂಕರಮೂರ್ತಿ ವಿಧಿವಶ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 18, 2020
in Small Bytes, ಭದ್ರಾವತಿ
0
ಭದ್ರಾವತಿ ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಕಲಾಕಾರ ಶಂಕರಮೂರ್ತಿ ವಿಧಿವಶ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಎಂಪಿಎಂ ನಿವೃತ್ತ ನೌಕರ, ರಂಗದಾಸೋಹಿ, ಶಿಲ್ಪಾಕಲಾಕಾರ ಎಸ್.ಜಿ. ಶಂಕರಮೂರ್ತಿ ಇಂದು ಬೆಳಗ್ಗೆ ಅನಾರೋಗ್ಯದಿಂದ ಶಿವಮೊಗ್ಗದ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತ್ನಿ, ಓರ್ವ ಪುತ್ರ, ಸೊಸೆ, ಮೊಮ್ಮಗ, ಸಹೋದರರನ್ನು ಹೊಂದಿದ್ದರು. ಇತ್ತೀಚೆಗೆ ಅನಾರೋಗ್ಯಕ್ಕೆ ಒಳಗಾಗಿದ್ದ ಶಂಕರಮೂರ್ತಿಯವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಎಸ್.ಜಿ ಶಂಕರಮೂರ್ತಿ ಹಾಗು ಎಸ್.ಜಿ ಸಂಗಮೇಶ್ವರ ಸಹೋದರರು ಕಳೆದ ೫ ದಶಕಗಳಿಂದ ಸಾಹಿತ್ಯ, ಶಿಲ್ಪ ಕಲೆ ಹಾಗು ರಂಗ ಕಲಾ ಕ್ಷೇತ್ರದಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದು, ಶಂಕರಮೂರ್ತಿಯವರು ಮೂಲತಃ ಶಿಲ್ಪ ಕಲಾವಿದರಾಗಿದ್ದು, ವರನಟ ಡಾ. ರಾಜ್‌ಕುಮಾರ್ ಕುಟುಂಬದೊಂದಿಗೆ ಒಡನಾಡ ಹೊಂದಿದ್ದರು. ಡಾ. ರಾಜ್‌ಕುಮಾರ್‌ರವರು ಬೆಂಗಳೂರಿನಲ್ಲಿ ನಿರ್ಮಿಸಿರುವ ಮನೆಯ ವಾಸ್ತು ಶಿಲ್ಪದ ಜವಾಬ್ದಾರಿಯನ್ನು ಅಂದು ಶಂಕರಮೂರ್ತಿ ಕುಟುಂಬದವರು ವಹಿಸಿಕೊಂಡು ಅಚ್ಚುಕಟ್ಟಾಗಿ ನಿರ್ವಹಿಸಿದ್ದರು. ಅಲ್ಲದೆ ರಾಜ್‌ಕುಮಾರ್‌ರವರ ಹಲವು ಪ್ರತಿಮೆಗಳನ್ನು ನಿರ್ಮಿಸಿಕೊಟ್ಟಿದ್ದರು.

ಶಂಕರಮೂರ್ತಿಯವರು ಎಂಪಿಎಂ ಕಾರ್ಖಾನೆ ಉದ್ಯೋಗಿಯಾಗಿದ್ದರು. ಸಹೋದರ ಸಂಗಮೇಶ್ವರ ವಿಐಎಸ್‌ಎಲ್ ಕಾರ್ಖಾನೆ ಉದ್ಯೋಗಿದ್ದರು. ಸುಮಾರು 4 ದಶಕಗಳ ಹಿಂದೆಯೇ ವಿಐಎಸ್‌ಎಲ್ ವಸ್ತು ಸಂಗ್ರಹಾಲಯದಲ್ಲಿ ಭಾರತರತ್ನ ಸರ್.ಎಂ ವಿಶ್ವೇಶ್ವರಾಯನವರ ಪ್ರತಿಮೆಯನ್ನು ನಿರ್ಮಿಸಿಕೊಟ್ಟು ಪ್ರಶಂಸೆಗೆ ಪಾತ್ರರಾಗಿದ್ದರು.

ಇತ್ತೀಚಿನ ಕೆಲವು ವರ್ಷಗಳ ಹಿಂದೆ ನಗರದ ತರೀಕೆರೆ ರಸ್ತೆಯ ಮಹಾತ್ಮಗಾಂಧಿ ವೃತ್ತದಲ್ಲಿ ಮಹಾತ್ಮಗಾಂಧಿ ಪ್ರತಿಮೆ, ಕಳೆದ ತಿಂಗಳು ನಗರದ ರೈಲ್ವೆ ನಿಲ್ದಾಣ ಮುಂಭಾಗ ಅನಾವರಣಗೊಂಡ ಸರ್.ಎಂ ವಿಶ್ವೇಶ್ವರಾಯ ಪ್ರತಿಮೆಗಳನ್ನು ಶಂಕರಮೂರ್ತಿ ನಿರ್ಮಿಸಿಕೊಟ್ಟಿದ್ದರು. ಅಲ್ಲದೆ ನಗರಸಭೆ ಮುಂಭಾಗದ ಉದ್ಯಾನವನದಲ್ಲಿ ಭದ್ರೆ ಮಾತೆಯ ಮೂರ್ತಿ ನಿರ್ಮಾಣಕ್ಕೆ ಸಿದ್ದತೆ ಕೈಗೊಂಡು ಬಹುತೇಕ ಪೂರ್ಣಗೊಳಿಸಿದ್ದರು. ಪ್ರತಿ ವರ್ಷ ಗೌರಿ-ಗಣೇಶ ಹಬ್ಬಕ್ಕೆ ಮೂರ್ತಿಗಳನ್ನು ತಯಾರಿಸಿಕೊಡುತ್ತಿದ್ದರು. ಸುಮಾರು ೨ ದಶಕಗಳಿಗೂ ಹೆಚ್ಚು ಕಾಲದಿಂದ ಆಂಧ್ರ ಪ್ರದೇಶಕ್ಕೆ ತೆರಳಿ ಮೂರ್ತಿಗಳನ್ನು ನಿರ್ಮಿಸಿಕೊಟ್ಟು ಬರುತ್ತಿದ್ದರು.

ಶಿಲ್ಪ ಕಲಾ ಚಟುವಟಿಕೆಗಳಿಗಿಂತ ರಂಗ ಚಟುವಟಿಕೆಗಳಲ್ಲಿ ಶಂಕರ ಮೂರ್ತಿ ಹೆಚ್ಚಾಗಿ ತೊಡಗಿಸಿಕೊಂಡಿದ್ದರು. ಅಂದು ನಗರದಲ್ಲಿ ಎಂಪಿಎಂ ಮತ್ತು ವಿಐಎಸ್‌ಎಲ್ ಕಾರ್ಖಾನೆಗಳ ಆರಂಭದ ಜೊತೆ ಜೊತೆಗೆ ರಂಗ ಚಟುವಟಿಕೆಗಳು ಸಹ ಆರಂಭಗೊಂಡಿದ್ದವು. ಇಂತಹ ಸಂದರ್ಭದಲ್ಲಿ ರಂಗಕಲಾವಿದರ ಒಡನಾಡಿಯಾಗಿ ಬೆಳೆದು ರಂಗ ವಿನ್ಯಾಸಕರಾಗಿ, ನಾಟಕ ರಚನೆಗಾರರಾಗಿ, ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದರು.

ಶಾಂತಲ ಆರ್ಟ್ಸ್ ಮತ್ತು ಶಾಂತಲ ಕಲಾ ವೇದಿಕೆಯನ್ನು ಸ್ಥಾಪಿಸುವ ಮೂಲಕ ಅನೇಕ ಶಿಲ್ಪ ಹಾಗು ರಂಗ ಕಲಾವಿದರು ಸಮಾಜದ ಮುಖ್ಯ ವಾಹಿನಿಯಲ್ಲಿ ಗುರುತಿಸಿಕೊಳ್ಳಲು ಕಾರಣಕರ್ತರಾಗಿದ್ದರು. ಅಲ್ಲದೆ ಹಲವು ವರ್ಷಗಳಿಂದ ನಗರದಲ್ಲಿ ಪಾಳುಬಿದ್ದಿದ್ದ ಕನಕಮಂಟಪ ಪುನರ್ ನಿರ್ಮಾಣಗೊಳ್ಳಲು ಪ್ರಮುಖ ಪಾತ್ರವಹಿಸಿದ್ದರು. ರಂಗ ಸೇವೆಯ ತಮ್ಮ ಬದುಕಿನ ಚಿತ್ರಣವನ್ನು ರಂಗಗೊಂಚಲು ಎಂಬ ಪುಸ್ತಕದ ಮೂಲಕ ಹಂಚಿಕೊಂಡಿದ್ದರು.

ಇವರ ಸೇವೆಯನ್ನು ಗುರುತಿಸಿ ಜಿಲ್ಲಾಡಳಿತ, ತಾಲೂಕು ಆಡಳಿತ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಹಲವು ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.
ತಾಲೂಕು ಕನ್ನಡ ಸಾಹಿತ್ಯ ಪರಿಷತ್, ಶರಣ ಸಾಹಿತ್ಯ ಪರಿಷತ್, ವಿವಿಧ ರಂಗ ಚಟುವಟಿಕೆಗಳ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನದೊಂದಿಗೆ ಕಳೆದ 6 ದಶಕಗಳಿಂದ ಸಾಹಿತ್ಯ, ಶಿಲ್ಪ ಕಲೆ, ರಂಗ ಚಟುವಟಿಕೆಗಳ ಕೊಂಡಿಯಾಗಿದ್ದ ಹಿರಿಯ ಜೀವಿಯೊಂದು ಕಳಚಿಬಿದ್ದಂತಾಗಿದೆ. ಇವರ ನಿಧನ ಕಲಾ ಕ್ಷೇತ್ರಕ್ಕೆ ತುಂಬಲಾರದ ನಷ್ಟವನ್ನುಂಟು ಮಾಡಿದೆ.

ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಶಾಂತಲ ಕಲಾವೇದಿಕೆ ಅಧ್ಯಕ್ಷೆ ಯಶೋಧ ವೀರಭದ್ರಪ್ಪ, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ. ವಿರೂಪಾಕ್ಷಪ್ಪ, ಕನ್ನಡ ಪರಿಷತ್ ಸಾಹಿತ್ಯ ಪರಿಷತ್ ಅಧ್ಯಕ್ಷ ಅಪೇಕ್ಷ ಮಂಜುನಾಥ್, ಹೊಸಮನೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಬಿ.ಜಿ ಧನಂಜಯ, ಎಂಪಿಎಂ ಮತ್ತು ವಿಐಎಸ್‌ಎಲ್ ಕಾರ್ಮಿಕರು, ಕರ್ನಾಟಕ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇವರ ಅಗಲಿಕೆಯಿಂದ ಕಲೆ ಬರಿದಾಗಿದೆ ಎಂದು ಎಂಪಿಎಂ ನೌಕರರ ಸಂಘದ ಅಧ್ಯಕ್ಷ ಎಸ್. ಚಂದ್ರಶೇಖರ್, ಕಲಾವಿದ ಗುರು ಸಂತಾಪ ಸೂಚಿಸಿದ್ದಾರೆ.

Get In Touch With Us info@kalpa.news Whatsapp: 9481252093

Tags: BhadravathiKannada News WebsiteLatest News KannadaLocal NewsMalnad NewsMPMShimogaShivamogga Newsಎಂಪಿಎಂಭದ್ರಾವತಿಮಲೆನಾಡು ಸುದ್ಧಿಶಾಂತಲಾ ಆರ್ಟ್ಸ್ಶಿಲ್ಪಾಕಲಾಕಾರಶಿವಮೊಗ್ಗ ನ್ಯೂಸ್
Share212Tweet123Send
Previous Post

ಭದ್ರಾವತಿ ಶಾಸಕ ಸಂಗಮೇಶ್ವರ್ ಮನೆ ಸೀಲ್ ಡೌನ್: ಒಂದು ವಾರ ಸಾರ್ವಜನಿಕರಿಗೆ ಪ್ರವೇಶವಿಲ್ಲ

Next Post

ರೈತರ ಆರ್ಥಿಕ ವರಮಾನ ದ್ವಿಗುಣಗೊಳಿಸಲು ಕೃಷಿ ಮಸೂದೆ ಪೂರಕ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ರಾಘವೇಂದ್ರ ಅವರೇ, ನೀವೊಬ್ಬ ಸಮರ್ಥ ಸಂಸದ ಎಂಬುದನ್ನು ನಿಮ್ಮ ಸಾಧನೆಗಳೇ ಕೂಗಿ ಹೇಳುತ್ತಿವೆ

ರೈತರ ಆರ್ಥಿಕ ವರಮಾನ ದ್ವಿಗುಣಗೊಳಿಸಲು ಕೃಷಿ ಮಸೂದೆ ಪೂರಕ: ಸಂಸದ ರಾಘವೇಂದ್ರ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

ಎಬೋಲಾ ಕುರಿತಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಹತ್ವದ ಪ್ರಕಟಣೆ | ಏನಿದೆ?

June 2, 2026
ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

ಹಿಂದೂ ಧರ್ಮ ನಾಶದ ಹೇಳಿಕೆ ನೀಡಿದ ಸ್ಟಾಲಿನ್‌ ಹೆಸರಿನಲ್ಲೇ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ದುರ್ಗಾ ಸ್ಟಾಲಿನ್ ಪೂಜೆ

June 2, 2026
ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

ತಮಿಳುನಾಡು ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಪಕ್ಷಕ್ಕೆ ರಾಜೀನಾಮೆ?

June 2, 2026
ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

ಸೊರಬ | ಪಾರಂಪರಿಕ ನಾಟಿ ವೈದ್ಯ ಮಂಚಪ್ಪ ನಿಧನ

June 2, 2026
ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

ಡಿ.ಕೆ. ಶಿವಕುಮಾರ್‌ಗೆ ಅಭಿನಂದಿಸಿದ ರಾಜ್ಯ ಕಾಂಗ್ರೆಸ್ ಮುಖಂಡ ಎಂ. ಶ್ರೀಕಾಂತ್

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL