No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Wednesday, August 26, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕರ್ನಾಟಕ ಬಜೆಟ್‌ 2023-24: ಚುನಾವಣೆಗೆ ಬೊಮ್ಮಾಯಿ ಸರಕಾರದ ಗೆಲುವಿನ ದಾಳ?

ಎಲ್ಲಾ ವರ್ಗ-ವಲಯಗಳನ್ನು ಸಂತೈಸುವ ಜನಪ್ರಿಯ ಮತ್ತು ಚುನಾವಣಾ ಭಾಷಣದ ಬಜೆಟ್?

kalpa News by kalpa News
February 16, 2023
in Special Articles
0
ಕರ್ನಾಟಕ ಬಜೆಟ್‌ 2023-24: ಚುನಾವಣೆಗೆ ಬೊಮ್ಮಾಯಿ ಸರಕಾರದ ಗೆಲುವಿನ ದಾಳ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ: ಶ್ರೇಯಾಂಕ್ ಎಸ್. ರಾನಡೆ  |

ರಾಜ್ಯದ ಹಣಕಾಸು ಸ್ಥಿತಿ ಉತ್ತಮವಾಗಿದೆ, ಹೆಚ್ಚಿನ ಪ್ರಮಾಣದ ತೆರಿಗೆ ವಸಾಲಾಗಿದೆ. ಕೋವಿಡ್‌ ಮೂರನೇ ಅಲೆ ಭೀತಿ ಕಡಿಮೆಯಾಗಿದೆ, ಚುನಾವಣೆ ಹತ್ತಿರದಲ್ಲಿದೆ. ಆರ್ಥಿಕ ಹಿಂಜರಿತದ ಸಮಯದಲ್ಲಿದ್ದರೂ ಕಳೆದ ಬಾರಿ ಹೆಚ್ಚು ಸಾಲ ಮಾಡದ ಕಾರಣ (Off budget borrowing) ರಾಜಸ್ವ ನಿಧಿಯ ಬಳಕೆಯಲ್ಲಿ ಬೊಮ್ಮಾಯಿ ಸರಕಾರಕ್ಕೆ ಹೆಚ್ಚಿನ ಅವಕಾಶವಿದೆ. ಕಾಂಗ್ರೆಸ್‌ ಜೆಡಿಎಸ್‌ ಪಕ್ಷಗಳು ಚುನಾವಣೆಗೆ ಘೋಷಿಸುತ್ತಿರುವ ಉಚಿತ ಯೋಜನೆಗಳು ಈ ಸರಕಾರದ ಮೇಲೂ ಪರೋಕ್ಷ ಒತ್ತಡವನ್ನು ಹೇರುತ್ತಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಈ ಬಾರಿಯ ರಾಜ್ಯ ಬಜೆಟ್‌ ಅನ್ನು ನೋಡಬೇಕಿದೆ.

ಇದು 2023ರ ವಿಧಾನಸಭಾ ಚುನಾವಣೆಯ ಮುನ್ನ 15ನೇ ವಿಧಾನಸಭೆಯ, ಬೊಮ್ಮಾಯಿ ನೇತೃತ್ವದ ಬಿಜೆಪಿ #BJP ಸರಕಾರದ ಕೊನೆಯ ಬಜೆಟ್ #Budget2023 .‌ ಹಾಗಾಗಿ ಇದು ಪೂರ್ಣಾವಧಿ ಬಜೆಟ್‌ ಅಲ್ಲವೇ ಅಲ್ಲ. ಮುಂದೆ ಯಾವುದೇ ಸರಕಾರ ಆರಿಸಿ ಬಂದರೂ ಹೊಸ ಬಜೆಟ್‌ ಮಂಡಿಸುತ್ತಾರೆ. ಹಾಗಾಗಿ ಸಹಜವಾಗಿ ಇದು ಏಪ್ರಿಲ್‌-ಮೇ ಎರಡು ತಿಂಗಳುಗಳಿಗೆ ಸೀಮಿತವಾಗಬಲ್ಲ ಮತ್ತು ಕೇವಲ ಚುನಾವಣೇಯನ್ನೇ ಪ್ರಧಾನವಾಗಿರಿಸಿಕೊಂಡ ಮಹತ್ವಾಕಾಂಕ್ಷಿ ಬಜೆಟ್‌ ಆಗಿರಲಿದೆ. ಪ್ರಾರಂಭದಿಂದ ಕೊನೆವರೆಗೂ ಇದು ಚುನಾವಣಾ ಭಾಷಣದಂತೆಯೇ ಕಾಣಲಿದೆ. ಎರಡು-ಮೂರು ವರ್ಷಗಳ ಕಾಲ ಸರಕಾರ ಏನು ಮಾಡಿದೆ, ಮುಂದೆ ಮರಳಿ ಅಧಿಕಾರಕ್ಕೆ ಬಂದರೆ ಏನು ಮಾಡಲಿದೆ ಎಂಬುದನ್ನು ವಿವರಿಸುವ ಶ್ವೇತಪತ್ರವೆಂದರೂ ತಪ್ಪಾಗದು. ಒಟ್ಟಾರೆ ಭರವಸೆ, ಹೆಚ್ಚು ಜನಪ್ರಿಯ ಮತ್ತು ಎಲ್ಲಾ ಪ್ರದೇಶ, ಸಮುದಾಯಗಳನ್ನು, ವರ್ಗಗಳನ್ನು ಸಂತೈಸುವ ಬಜೆಟ್‌ ಆಗಿರಲಿದೆ. ನಾವದನ್ನು ಹಾಗೇ ನೋಡಬೇಕು.

ಈಗಾಗಲೇ ಅಂದಾಜಿಸಿರುವಂತೆ ಬಜೆಟ್‌ ಗಾತ್ರ 3 ಲಕ್ಷ ಕೋಟಿಗೂ ಅಧಿಕವಾಗುವ ನಿರೀಕ್ಷೆಯಿದೆ. ಜನವರಿ ತಿಂಗಳೊಂದರಲ್ಲಿಯೇ ಸುಮಾರು 6,000 ಕೋಟಿ ರೂಪಾಯಿ ತೆರಿಗೆ ಸಂಗ್ರಹವಾಗಿದೆ. ಮಾರ್ಚ್‌ ಅಂತ್ಯದ ವೇಳೆಗೆ ವಾಣಿಜ್ಯ ತೆರಿಗೆ 70,000 ಸಾವಿರ ಕೋಟಿ ಸಂಗ್ರಹವಾಗುವ ನಿರೀಕ್ಷೆರಯಿದೆ. ಇದು ಸರ್ಕಾರದ ಕೈಯನ್ನು ಗಟ್ಟಿಗೊಳಿಸಿದೆ. ಜೆ.ಎಸ್.ಟಿ. ಸಂಗ್ರಹ ಉತ್ತಮವಾಗಿದ್ದರೂ, ಜಿ.ಎಸ್.ಟಿಯಿಂದ #GST ಉತ್ಪಾದನಾ ರಾಜ್ಯಗಳಿಗೆ ಆಗಿರುವ ನಷ್ಟ ಭರಿಸಲು ನೀಡುತ್ತಿದ್ದ ಕೇಂದ್ರದ ಪರಿಹಾರವನ್ನು ಈ ವರ್ಷದಿಂದ ನಿಲ್ಲಿಸಲಾಗುತ್ತದೆ. ಹಾಗಾಗಿ ಇದಕ್ಕೆ ಬೇಕಾದ ಆರ್ಥಿಕ ಸ್ಥಳಾವಕಾಶವನ್ನು ಸರ್ಕಾರ ಮಾಡಿಕೊಳ್ಳಲೇಬೇಕು. ಹೊಸ ಯೋಜನೆಗಳ ಅನಿವಾರ್ಯತೆ ಒಂದೆಡೆ, ಹಳೆ ಯೋಜನೆಗಳನ್ನು ಮುಂದುವರೆಸುವ ಬಾಧ್ಯತೆ ಮತ್ತೊಂದೆಡೆ.

ರಾಜ್ಯದ ದೂರಗಾಮಿ ಅಭಿವೃದ್ಧಿಗೆ ಹೂಡಿಕೆ ಅನಿವಾರ್ಯ. ಚುನಾವಣೆ ಗೆಲ್ಲಲು ಜನಪ್ರಿಯ ಯೋಜನೆಗಳೇ ಆಧಾರ. ಈಗಾಗಲೇ ಘೋಷಿಸಿರುವಂತೆ ಕಾಂಗ್ರೆಸ್‌ #Congress ಪಕ್ಷದ ಮಹಿಳೆಯರಿಗೆ 2,000 ರೂಪಾಯಿಗಳ ಸಹಾಯಧನದ ಪ್ರತಿಯಾಗಿ ಬೊಮ್ಮಾಯಿ ಸರಕಾರ ಅದೇ ಮಾದರಿಯ ಯೋಜನೆ ನೀಡುವುದಾಗಿ ಹೇಳಿದ್ದಾರೆ. ಇಂತಹ ಅನೇಕ ಯೋಜನೆಗಳಿಗೆ ಹಣ ಕಾಯ್ದಿರಿಸುವುದೂ ಅನಿವಾರ್ಯ. ಮುಂದೆ ಇವುಗಳಲ್ಲಿ ಆರ್ಥಿಕ ಪರಿಸ್ಥಿತಿ, ರಾಜಕೀಯ ಪರಿಸ್ಥಿತಿಗಳಿಗನುಗುಣವಾಗಿ ಬದಲಾವಣೆಗಳಾಗಬಹುದು. ಹೆಚ್ಚಿನ ಘೋಷಣೆಗಳು ಜಾರಿಯಾಗದೇ ಉಳಿದುಬಿಡಬಹುದು. ಇದು ಎಲ್ಲಾ ಸರಕಾರಗಳಲ್ಲಿ ನಡೆಯುವ ಸಾಮಾನ್ಯ ಪ್ರಕ್ರಿಯೆ.
ಕೇಂದ್ರ ಸರಕಾರದ ಬಜೆಟ್‌ ನಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂಪಾಯಿಗಳು ಮತ್ತು ರೈಲ್ವೆ ಯೋಜನೆಗಳಿಗೆ 7,561 ಕೋಟಿ ಅನುದಾನವನ್ನು ಮೀಸಲಿರಿಸಲಾಗಿದೆ. ಅದರೊಂದಿಗೆ ವಲಯವಾರು ಹಂಹಿಕೆಯಲ್ಲಿಯೂ ಕರ್ನಾಟಕಕ್ಕೆ ಹೆಚ್ಚಿನ ಹಣಕಾಸು ಒದಗಿಸಲಾಗಿದೆ. ಇವೆಲ್ಲ ಕರ್ನಾಟಕಕ್ಕೆ ಇತ್ತೀಚಿನ ವರ್ಷಗಳಲ್ಲಿ ಕೊಟ್ಟ ಅತೀ ಹೆಚ್ಚು ಅನುದಾನಗಳಾಗಿವೆ. ಈ ಬಾರಿ ಕೇಂದ್ರದಿಂದ ರಾಜ್ಯಕ್ಕೆ ನೀಡುವ ತೆರಿಗೆ #Tax ಹಂಚಿಕೆಯಲ್ಲಿ 52,281 ಕೋಟಿಯನ್ನು ನೀಡಲಾಗಿದೆ. 15ನೇ ಹಣಕಾಸು ಆಯೋಗ ರಾಜ್ಯಕ್ಕೆ ತೆರಿಗೆಯ ಪ್ರಮಾಣವನ್ನು 4.7%ನಿಂದ 3.6%ಕ್ಕೆ ಇಳಿಸಿದ ಹೊರತಾಗಿಯೂ ರಾಜ್ಯದ ಬೊಕ್ಕಸಕ್ಕೆ ಕೊರತೆಯಾಗಿಲ್ಲ. ಇವು ಬಸವರಾಜ ಬೊಮ್ಮಾಯಿಯವರಿಗೆ ಇತರ ಯೋಜನೆಗಳತ್ತ ಗಮನಹರಿಸಲು ಸಹಾಯವಾಗಲಿದೆ. ಆದರೂ ಈ ಬಜೆಟ್‌ ಹೆಚ್ಚು ಕಡಿಮೆ ಕೇಂದ್ರ ಮಂಡಿಸಿರುವ ಬಜೆಟ್‌ ಹಾದಿಯಲ್ಲಿಯೇ ಸಾಗಲಿದೆ. ಹಿಂಜರಿತದ ಹೊತ್ತಲ್ಲಿ ಸರಕಾರದ ಹೂಡಿಕೆಯೇ ಪ್ರಧಾನವಾಗಿರಲಿದೆ.

ನೀರೀಕ್ಷಿತ ಗುರಿ ತಲುಪಲು ಜಲ್‌ ಜೀವನ್‌ ಮಿಶನ್‌ ನಂತಹ ಮಹತ್ವಾಕಾಂಕ್ಷಿ ಯೋಜನೆಗಳು, ನಮ್ಮ ಕ್ಲಿನಿಕ್‌ ಗಳು, ಉದ್ಯೋಗ ಖಾತ್ರಿಯಂತಹ ಯೋಜನೆಗಳಿಗೆ ರಾಜ್ಯವೇ ಹೆಚ್ಚಿನ ಹಣಕಾಸನ್ನು ಹೊಂದಿಸುವ ಅಗತ್ಯವಿದೆ. ಕೇಂದ್ರದ ಕೆಲವು ಯೋಜನೆಗಳಿಗೆ ಅನುದಾನ ಕಡಿತವಾಗುತ್ತಿರುವ ಹೊತ್ತಿನಲ್ಲಿ ಅದರ ಭಾರವೂ ರಾಜ್ಯದ ಮೇಲೇ ಇರುತ್ತದೆ. ಈ ಯೋಜನೆಗಳ ಜೊತೆಗೆ ರಾಜ್ಯ ತನ್ನ ಯೋಜನೆಗಳನ್ನು ಮುನ್ನಡೆಸಬೇಕು, ಹೊಸ ಯೋಜನೆಗಳನ್ನು ಘೋಷಿಸಬೇಕು. ಹಾಗಾಗಿ ಹೆಚ್ಚುವರಿ ಸಾಲದ ಮೊರೆ ಹೋದರೂ ಅಚ್ಚರಿಯಿಲ್ಲ. ಆರ್ಥಿಕ ಹಿಂಜರಿತ ತಪ್ಪಿಸಲು ಮಾಡಿದ ಸಾಲವನ್ನು ಮೂಲ ಸೌಕರ್ಯ ಅಭಿವೃದ್ಧಿ ಹೂಡಿಕೆಯತ್ತ ಕೇಂದ್ರೀಕರಿಸಿದರೆ ಸಾಲ ಪೋಲಾಗದೆ, ಅದರ ಲಾಭ ಪ್ರತ್ಯಕ್ಷ ಮತ್ತು ಪರೋಕ್ಷವಾಗಿಯೂ ಒದಗುತ್ತದೆ. ರಾಜ್ಯದ ಸಮಗ್ರ ಅಭಿವೃದ್ಧಿಗೆ ನಾಂದಿ ಹಾಡಲಿದೆ. ಚುನಾವಣೆ, ಜನಪ್ರಿಯ ಘೋಷಣೆಗಳು ಎಷ್ಟೇ ಮುಖ್ಯವಾದರೂ ರಾಜ್ಯದ ಬೆಳವಣಿಗೆಯೂ ಅಷ್ಟೇ ಮುಖ್ಯ. ಕಲೆದ ಬಜೆಟ್‌ ನಲ್ಲಿ ಮತ್ತು ಸರಕಾರದ ಇತರ ಕಾರ್ಯಕ್ರಮಗಳಲ್ಲಿ ಇದನ್ನು ವ್ಯಕ್ತಪಡಿಸಿದ್ದಾರೆ. ಅದು ಈ ಭಾರಿಯೂ ಮುಂದುವರೆಯಲಿದೆ.

ಕೃಷಿ, ಆರೋಗ್ಯ, ಶಿಕ್ಷಣ, ಕೌಶಲಾಭಿವೃದ್ಧಿ, ಕೈಗಾರಿಕೆ, ಜನಕಲ್ಯಾಣ ಕಾರ್ಯಕ್ರಮಗಳಿಗೆ ಸುಮಾರು 10,000 ಕೋಟಿಗಳಷ್ಟು ಹೆಚ್ಚುವರಿ ಅನುಧಾನ ಒದಗಿಸುವ ಸಾಧ್ಯತೆಯಿದೆ. ಇದು ಪ್ರತ್ಯಕ್ಷ ಮತ್ತು ಪರೋಕ್ಷವಾದ ಆರ್ಥಿಕ ಬೆಳವಣಿಗೆ, ಅಭಿವೃದ್ಧಿಗೆ ಕಾರಣವಾಗಲಿದೆ. ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಕೊಡಲಾಗುವ ಮೊತ್ತ 40,000 ಕೋಟಿ ದಾಟಬಹುದು ಎಂದು ಅಂದಾಜಿಸಲಾಗುತ್ತಿದೆ. ಬೆಂಗಳುರಿನ ಅಭಿವೃದ್ಧಿಗೆ 10,000 ಸಾವಿರ ಕೋಟಿ ಅನುಧಾನವನ್ನು ಕೇಳಲಾಗಿದೆ. ವಿಶ್ವದ ಐಟಿ ಹಬ್‌ ಆಗುವ ಸಾಮರ್ಥ್ಯವಿರುವ ಬೆಂಗಳೂರು ಅಭಿವೃದ್ಧಿಗೆ ಗಮನ ಕೊಡುವಷ್ಟೇ ಮಳೆಬಂದಾಗ ಮುಳುಗಡೆಯಾಗುವ, ಸಂಚಾರ ದಟ್ಟಣೆಯಂತಹ ಮೂಲಭೂತ ಸಮಸಯೆಗಳತ್ತವೂ ಗಮನಹರಿಸಬೇಕು. ಬೆಂಗಳುರು ಬೆಳವಣಿಗೆಯಾಗಬೇಕು ನಿಜ ಆದರೆ ಅದರ ಜೊತೆಗೆ ಸಮಾನಾಂತರ ನಗರಗಳನ್ನು ಅಭಿವೃದ್ಧಿಪಡಿಸದ ಹೊರತು ಬೆಳವಣಿಗೆ ಅರ್ಥವಿರುವುದಿಲ್ಲ. ಮುಂದೇ ಇದೇ ಗಂಭೀರ ಸಮಸ್ಯೆಯಾಗಬಹುದು.

ಹಿಂದುಳಿದ ಪ್ರದೇಶಗಳತ್ತ ನೀರಾವರಿ, ರಸ್ತೆ, ಗುಡಿ ಕೈಗಾರಿಕೆ, ಜವಳಿ ಪಾರ್ಕ್‌, ಕೌಶಲಾಭಿವೃದ್ಧಿ ಯೋಜನೆಗಳ ಮೂಲಕವೇ ಗಮನಹರಿಸಬೇಕು. ಪ್ರಾದೇಶಿಕ ಅಸಮತೋಲನ ಯಾವುದೇ ರಾಜ್ಯದ ಬೆಳವಣಿಗೆಗೆ ಪೂರಕವಲ್ಲ. ಜಿಲ್ಲೆಗೊಂದು ವಸ್ತು ಸೇರಿದಂತೆ ಸ್ಥಳೀಯ ಕೈಗಾರಿಕೆ, ಆಹಾರ ಪ್ರೊಸೆಸಿಂಗ್‌ ಯುನಿಟ್‌ಗಳನ್ನು ಸ್ಥಾಪಿಸುವ ಮೂಲಕ ಕೃಷಿ, ಕೈಗಾರಿಕೆ, ಉದ್ಯಮ ಮತ್ತು ಉದ್ಯೋಗಗಳನ್ನು ಸೃಷ್ಟಿಸುವುದು ಶಾಧ್ಯ. ಆದರೆ ಅದಕ್ಕೆ ಹೆಚ್ಚಿನ ಗಮನ ಅಗತ್ಯ. ಒಟ್ಟಾರೆ ಕಳೆದ ಕೆಲವಾರು ವರ್ಷಗಳಿಂದ ಇಂತಹ ಆಕರ್ಷಕವೆನಿಸುವ ಯೋಜನೆಗಳನ್ನು ಘೋಷಿಸಲಾಗುತ್ತಿದೆ. ಆದರೆ ಅದರ ಅನುಷ್ಠಾನ ಮಾತ್ರ ನಿರೀಕ್ಷಿತ ಪ್ರಮಾಣದಲ್ಲಿ ಸಾಧ್ಯವಾಗುತ್ತಿಲ್ಲ. ಅದಾಗದ ಹೊರತು ಬಜೆಟ್‌ ಕೇವಲ ಘೊಷಣಾ ಪತ್ರವಾಗಿ ಉಳಿದುಹೋಗುವ ಅಪಾಯವಿದೆ.

ತಂತ್ರಜ್ಞಾನಗಳು ಬದುಕನ್ನು ಬದಲಾಯಿಸುತ್ತಿರುವಂತೆ ನಿರೀಕ್ಷಿತ ಮಟ್ಟದ ಆಡಳಿತ ಸುಧಾರಣೆ ತರದಿರುವುದು ವಿಷಾದನೀಯ. ಇ-ಆಡಳಿತವಿದ್ದರೂ ಭ್ರಷ್ಟಾಚಾರ ತಗ್ಗದಿರುವುದು ಇಂತಹ ಕಾಯಕಲ್ಪಗಳಿಗೆ ಬೆಲೆಯಿಲ್ಲ ಎನ್ನುವುದನ್ನು ಸಾರುತ್ತದೆ.‌ ಕಂದಾಯ ಕಾವೇರಿ೨.೦ ಅನುಷ್ಟಾನವಾಗುತ್ತಿದೆ, ಆದರೂ ಪಾರದರ್ಶಕವಾಗಿ ಕಂದಾಯ ಕೆಲಸಗಳು ಆಗುವುದಿಲ್ಲ ಎಂಬುದು ಅನೇಕ ತಬರರ ನೋವಿನ ಕಥೆ. ಇದೊಂದು ಉದಾಹರಣೆ. ಎಲ್ಲಾ ಇಲಾಖೆಗಳಲ್ಲೂ ಇದು ತಪ್ಪದ ತಲೆನೋವು. ಇದೇ ಕಾರಣಕ್ಕೆ ಅನೇಕ ಕಾರ್ಪೊರೆಟ್‌ ಕಂಪೆನಿಗಳು, ಹೊಸ ಉದ್ಯಮಗಳು ಇಲ್ಲಿ ನೆಲೆಯೂರುವುದಕ್ಕೆ, ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಲು ಕಷ್ಟವಾಗುತ್ತಿರುವುದು. ವಿದೇಶಿ ಸಂಸ್ಥೆಗಳು ಅದಾನಿ ಸಂಸ್ಥೆ ಬಗ್ಗೆ ಪ್ರಶ್ನೆ ಮಾಡುತ್ತಿದ್ದೇವೆ. ಆದರೆ ವ್ಯವಸ್ಥೆ ಮತ್ತು ಆಡಳಿತ ನಿಯಂತ್ರಣ ವ್ಯವಸ್ಥೆಯ ಮಿತಿಗಳನ್ನೇ ಎಲ್ಲಾ ದೊಡ್ಡ ದೊಡ್ಡ ಉದ್ದಿಮೆದಾರರು ಬಳಸಿಕೊಳ್ಲುತ್ತಾರಷ್ಟೇ ಎಂಬುದನ್ನು ಮರೆತಿರುತ್ತೇವೆ. ಬಜೆಟ್‌ ನಲ್ಲಿ ಶುದ್ಧ ಆಡಳಿತ ಎನ್ನುವ ಸರಕಾರಗಳು, ಶುದ್ಧವಾಗಿಯೇ ಜಾರಿಯಾಗಬೇಕೆಂದು ಟೊಂಕಕಟ್ಟಿ ನಿಲ್ಲದಿರುವುದು ಅನೇಕ ಯೋಜನೆಗಳ ಹಳ್ಳಹಿಡಿಯುವಿಕೆಗೆ ಸಾಕ್ಷಿ. ಸರ್ಕಾರ ಇದಕ್ಕೆ ಹೊಸ ಯೋಜನಾ ಮಾನದಂಡಗಳನ್ನು ಹಾಕಿಕೊಳ್ಳದ ಹೊರತು ಪ್ರಯತ್ನಗಳೆಲ್ಲ ದಂಡವಾಗುತ್ತವೆ.

ಒಂದೆಡೆ ಹೆಚ್ಚು ಹೆಚ್ಚು ತೆರಿಗೆ ವಿಧಿಸುವುದು, ಮತ್ತೊಂದೆಡೆ ಜನರು ಕಟ್ಟುವ ಅದೇ ತೆರಿಗೆಯಿಂದ ಜನರಿಗೆ ಸೌಲಭ್ಯ ಒದಗಿಸುವ ಜನಪ್ರಿಯ ಕಾರ್ಯಕ್ರಮಗಳನ್ನು ರೂಪಿಸುವುದು. ಇದೆಲ್ಲ ಚುನಾವಣಾ ಆಡುಂಬೋಲವಾಗಿಬಿಟ್ಟಿದೆ. ಇದಕ್ಕಿಂತ ತೆರಿಗೆಯನ್ನು ಕಡಿಮೆಗೊಳಿಸಿದರೆ, ಇಂಧನ ದರ ತಗ್ಗಿಸಿದರೆ ಇದರಿಂದ ಎಲ್ಲರಿಗೂ ನೇರ ಲಾಭವಾಗಲಿದೆ. ದೂರದೃಷ್ಟಿಯಿಲ್ಲದೆ ಹೆಚ್ಚು ಹೆಚ್ಚು ಉಚಿತ ಯೋಜನೆಗಳನ್ನು ಘೋಷಿಸುವುದು, ಅವುಗಳನ್ನು ಪೂರೈಸಲು ಹೆಚ್ಚುವರಿ ಸಾಲ ಮಾಡುವುದು. ಭಾರತದ ಆರ್ಥಿಕ ಭವಿಷ್ಯವನ್ನು ಅತಂತ್ರದತ್ತ ದೂಡುವುದು. ಇದೊಂದು ಟ್ರೆಂಡ್‌ ಆಗಿ ಬಿಟ್ಟಿದೆ.
ಇತ್ತೀಚೆಗೆ ಬಜೆಟ್‌ ಮಂಡಿಸಿದ ತೆಲಂಗಾಣ ಸರಕಾರ ಈಗಾಗಲೇ ರಾಜ್ಯಗಳಿಗೆ ಇರುವ ಮಿತಿಯನ್ನು ಲೆಕ್ಕಿಸದೆ ತನ್ನ ಉಚಿತ ಯೋಜನೆಗಳಿಗೆ ಯತೇಚ್ಛ ಸಾಲವನ್ನು ಮಾಡಿದೆ. ಅದನ್ನು ತೀರಿಸುವುದಕ್ಕೆ ಯೋಜನಾ ದೂರದೃಷ್ಟಿಯಿಲ್ಲ. ಆದರೆ ತನಗೆ ಹೆಚ್ಚುವರಿ ಸಾಲ ಮಾಡುವುದಕ್ಕೆ ಕೇಂದ್ರ ಅವಕಾಶ ನೀಡುತ್ತಿಲ್ಲ ಎಂಬ ಚುನಾವಣಾ, ಭಾವನಾತ್ಮಕ ಟೀಕೆಯನ್ನು, ದೂಷಣೆಯನ್ನು ಮಾಡಿದೆ. ಅದೇ ರೀತಿ ಕೇರಳ ರಾಜ್ಯ ಕೂಡ ಸುಧಾರಣೆಯ ಹೆಸರಲ್ಲಿ ಸಾಲದ ಹೊರೆ ಏರಿಸುತ್ತಿದೆ. ಏರಿರುವ ತೆರಿಗೆ ಪ್ರಮಾಣದ ಕಾರಣದಿಂದ ಗಡಿ ಭಾಗದ ಜನರು ಕರ್ನಾಟಕಕ್ಕೆ ಬಂದು ಇಂಧನ ತುಂಬಿಸಿಕೊಂಡು ಹೋಗುತ್ತಿದ್ದಾರೆ. ಇವು ಯಾವ ಮಾದರಿಯ ಅಭಿವೃದ್ಧಿಗಳು? ಇವು ಕೇವಲ ಅಧಿಕಾರದಲ್ಲಿರುವ ತಂತ್ರಗಳು.

ಈ ಬಾರಿಯ ಬಜೆಟ್‌ ಎಲ್ಲಾ ರೀತಿಯಲ್ಲಿಯೂ ಚುನಾವಣಾ ಭಾಷಣವೇ ಆಗಿರಲಿದೆ. ಸುಧಾರಣೆ, ಹೊಸ ಯೋಜನೆಗಳು, ಬಡ, ಮಹಿಳಾ, ಕೃಷಿಕ ಮತ್ತು ಹೊಸ ತಲೆಮಾರಿನ ಆಶೊತ್ತರಗಳನ್ನು ಈಡೇರಿಸುವ ಮಹತ್ವಾಕಾಂಕ್ಷೆಗಳಿಂದ ಕೂಡಿರಲಿದೆ. ಇದನ್ನು ಆರ್ಥಿಕ ತಜ್ಞರು ತುಂಬಾ ಗಂಭೀರವಾಗಿ ಪರಿಗಣಿಸಬೇಕಾದ ಅನಿವಾರ್ಯತೆಯಿಲ್ಲ. ಚುನಾವಣೆ ಮುಗಿದ ಮೇಲೆ ಬದಲಾದ ಸನ್ನಿವೇಶದಲ್ಲಿ ಇದೇ ಸರಕಾರ ಬಂದರೂ ಬೇರೆ ಸರಕಾರ ಬಂದರೂ ಇದರಲ್ಲಿ ಬದಲಾವಣೆ ಆಗುವುದು ಖಚಿತ. ಆದರೂ ಸರಕಾರದ ಪಾಲಿಗೆ ಕಳೆದ ಕೆಲವಾರು ತಿಂಗಳುಗಳಿಂದ ಎದುರಾಗುತ್ತಿರುವ ನಿರಂತರ ಆರೋಪ, ರಾಜಕೀಯ ಟೀಕೆಗಳಿಗೆ ಉತ್ತರಿಸಿ, ಇಡೀ ಚುನಾವಣಾ ಅಖಾಡವನ್ನು ತಮ್ಮತ್ತ ಮಾಡಿಕೊಳ್ಳಲು ಇರುವ ಉತ್ತಮ ಮತ್ತು ಕೊನೆಯ ಅವಕಾಶ.

ಯಡಿಯೂರಪ್ಪ ರಾಜಿನಾಮೆ ನೀಡಿದ ಬಳಿಕ ಮುಖ್ಯಮಂತ್ರಿಯಾಗಿ ಬಂದ ಬಸವರಾಜ ಬೊಮ್ಮಾಯಿ ಎಲ್ಲರನ್ನೂ ಸರಿದೂಗಿಸಿಕೊಂಡು, ನಿಭಾಯಿಸಿಕೊಂಡು ಹೋಗುವ ಕಲೆಯನ್ನು ತೋರಿಸಿದ್ದಾರೆ. ಸರಕಾರ ಬೀಳದಂತೆ ನೋಡಿಕೊಳ್ಳಲು ಇದು ಉತ್ತಮ ನಡೆಯಾದರೂ, ಇದರಿಂದ ಮಹತ್ವದ ಬದಲಾವಣೆಗಳನ್ನು ನಿರೀಕ್ಷಿಸುವುದು ಕಷ್ಟ. ಚುನಾವಣಾ ವರ್ಷದ ಬಜೆಟ್‌ ನಲ್ಲಿಯೂ ಎಲ್ಲರನ್ನೂ ಸರಿದೂಗಿಸುವ ಮಧ್ಯಮ ಮಾರ್ಗವನ್ನು ಹಿಡಿಯುತ್ತಾರಾ ಅಥವಾ ಎಲ್ಲರಿಗೂ ಅಚ್ಚರಿ ತರಬಲ್ಲ ಬದಲಾವಣೆಗಳ ಭರವಸೆಯನ್ನು ಹೊತ್ತು ತರುತ್ತಾರಾ ಎಂಬುದನ್ನು ಕಾದು ನೋಡಬೇಕು. ಸರಕಾರಗಳಿಗೆ ಚುನಾವಣೆ ಗೆಲ್ಲುವುದೇ ಮುಖ್ಯ. ಆಗಲೇ ಏನಾದರೂ ಮಾಡಲು ಸಾಧ್ಯ. ಜನರನ್ನು ಮೆಚ್ಚಿಸಿ, ಒಪ್ಪಿಸಲು ಇದೊಂದು ಕಡೆಯ ಆಟ. ಇದರ ನಂತರ ನಡೆಯುವುದೆಲ್ಲವೂ ಚುನಾವಣಾ ರಾಜಕಾರಣದ ಬಯಲಾಟ. ಭರಫೂರ ಭರವಸೆಗಳನ್ನು ಹೊತ್ತು ಬರುವ ಬಜೆಟ್‌ ಚುನಾವಣಾ ಅಖಾಡಕ್ಕೆ ನೇರ ಭೂಮಿಕೆಯನ್ನು ಸಿದ್ಧಪಡಿಸಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ‌ CM Basavaraja BommaiAssembly Election 2023BJPcongressKannada News WebsiteKarnataka Budget 2023Karnataka Election 2023Latest News KannadaOff budget borrowingSpecial Articleತೆರಿಗೆವಿಧಾನಸಭೆ ಚುನಾವಣೆ 2023ವಿಶೇಷ ಲೇಖನ
Share209Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಫೆ.18ರಂದು ಶಿವರಾತ್ರಿ ವೈಭವ: ವಿಶೇಷ ಜನಜಾಗೃತಿ ಕಾರ್ಯಕ್ರಮ

Next Post

ಡಾ. ಸತ್ಯವತಿಯವರ ಸಾಹಿತ್ಯದ ಸೊಬಗು ಸಹೃದಯರ ಮನಸ್ಸು ಮುಟ್ಟುತ್ತದೆ: ಡಾ. ನಾ. ಗೀತಾಚಾರ್ಯ

kalpa News

kalpa News

Next Post
ಡಾ. ಸತ್ಯವತಿಯವರ ಸಾಹಿತ್ಯದ ಸೊಬಗು ಸಹೃದಯರ ಮನಸ್ಸು ಮುಟ್ಟುತ್ತದೆ: ಡಾ. ನಾ. ಗೀತಾಚಾರ್ಯ

ಡಾ. ಸತ್ಯವತಿಯವರ ಸಾಹಿತ್ಯದ ಸೊಬಗು ಸಹೃದಯರ ಮನಸ್ಸು ಮುಟ್ಟುತ್ತದೆ: ಡಾ. ನಾ. ಗೀತಾಚಾರ್ಯ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL