ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನೀರಿನಿಂದ ಮೈದುಂಬಿ ಕಂಗೊಳಿಸುತ್ತಿರುವ ಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೆ.2ರಂದು ಬಾಗಿನ ಅರ್ಪಿಸಲಿದ್ದಾರೆ.
ಅಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಎಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ 12.15ಕ್ಕೆ ಭದ್ರಾ ಜಲಾಶಯದ ಹೆಲಿಪ್ಯಾಡ್’ಗೆ ಆಗಮಿಸುವ ಮುಖ್ಯಮಂತ್ರಿಗಳು ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.
ಹೆಚ್ಚು ಕಾಫಿ ಕುಡಿದರೆ ಗ್ಯಾಸ್ಟ್ರಿಕ್ ಗ್ಯಾರೆಂಟಿ | ಜೀವನಶೈಲಿ ಹೀಗಿರಲಿ | Gastric | Tips For Healthy Life
ಆರೋಗ್ಯ ಸಲಹೆ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ಹೆಲಿಕಾಪ್ಟರ್ ಮೂಲಕವೇ ಮಧ್ಯಾಹ್ನ 1.45ಕ್ಕೆ ಅಲ್ಲಿಂದ ಹೊರಡಲಿರುವ ಅವರು, ಅಜ್ಜಂಪುರ ತಾಲೂಕಿನ ಬೆಟ್ಟದ ತಾವರೆಕೆರೆ ಗ್ರಾಮಕ್ಕೆ ಆಗಮಿಸಿ, ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ನೀರನ್ನು ಹರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಆನಂತರ ಬೆಂಗಳೂರಿಗೆ ಹಿಂತಿರುಗಲಿದ್ದಾರೆ.
ಇನ್ನು, ಮುಖ್ಯಮಂತ್ರಿಗಳ ಈ ಭೇಟಿಯ ವೇಳೆ ಸ್ಥಳಕ್ಕೆ ಆಗಮಿಸುವ ಎಲ್ಲ ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post