No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Monday, June 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಆಯುಷ್ಮಾನ್ ಕಾರ್ಡ್ ವಿತರಣೆಯಲ್ಲಿ ದೇಶಕ್ಕೇ ಕರ್ನಾಟಕ ಪ್ರಥಮ: ಸಚಿವ ಸುಧಾಕರ್

ಒಟ್ಟು 1 ಕೋಟಿ ಕಾರ್ಡ್ ವಿತರಣೆಗೆ ಸಿದ್ಧತೆ, ಮಾರ್ಚ್ ವೇಳೆಗೆ ಎಲ್ಲಾ ಅರ್ಹರಿಗೆ ಕಾರ್ಡ್ ವಿತರಿಸುವ ಗುರಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 14, 2022
in ರಾಷ್ಟ್ರೀಯ
0
ಪತ್ರಕರ್ತರು ಮತ್ತು ಕುಟುಂಬದವರಿಗೆ ಆಯುಷ್ಮಾನ್ ಕಾರ್ಡ್: ಅರ್ಜಿ ಆಹ್ವಾನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯದಲ್ಲಿ ಡಿಸೆಂಬರ್ ವೇಳೆಗೆ ಶೇ.50 ರಷ್ಟು ಅರ್ಹರಿಗೆ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಕಾರ್ಡ್’ಗಳನ್ನು ವಿತರಿಸಲಾಗುವುದು. ಒಟ್ಟು 1 ಕೋಟಿ ಕಾರ್ಡ್’ಗಳನ್ನು ವಿತರಿಸಲು ಸಿದ್ಧತೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಅತ್ಯಂತ ಕಡಿಮೆ ಅವಧಿಯಲ್ಲಿ ಒಂದು ಕೋಟಿ ಕಾರ್ಡ್’ಗಳನ್ನು ಸಿದ್ಧಪಡಿಸಲಾಗಿದೆ. ಆಯುಷ್ಮಾನ್ ಕಾರ್ಡ್ ವಿತರಣೆಯಲ್ಲಿ ಕರ್ನಾಟಕ ಇಡೀ ದೇಶದಲ್ಲಿಯೇ ಮಾದರಿ ರಾಜ್ಯವಾಗಿ ಹೊರಹೊಮ್ಮಿದೆ. ಶೀಘ್ರದಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಆಯುಷ್ಮಾನ್ ಕಾರ್ಡ್’ಗಳನ್ನು ಎಲ್ಲಾ ಅರ್ಹರಿಗೆ ವಿತರಿಸಲಾಗುವುದು ಎಂದು ಹೇಳಿದ್ದಾರೆ.
ಕಾರ್ಡ್ ವಿತರಣೆಯಲ್ಲಿ ಚಿಕ್ಕಬಳ್ಳಾಪುರ, ಹಾವೇರಿ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳು ಅತ್ಯುತ್ತಮ ಸಾಧನೆ ತೋರಿದ್ದು, ಮೂರನೇ ಒಂದರಷ್ಟು ಫಲಾನುಭವಿಗಳನ್ನು ಈಗಾಗಲೇ ನೋಂದಣಿ ಮಾಡಲಾಗಿದೆ. ಆರೋಗ್ಯ ಇಲಾಖೆಯ ಕ್ಷೇತ್ರಾಧಿಕಾರಿಗಳು ಕಾರ್ಡ್’ಗಳ ನೋಂದಣಿಗಾಗಿ ಯಶಸ್ವಿಯಾಗಿ ಅಭಿಯಾನ ನಡೆಸುತ್ತಿದ್ದಾರೆ. ನ.11ಕ್ಕೆ ಅಂತ್ಯಗೊಂಡಂತೆ, ಒಂದು ಕೋಟಿ ಕಾರ್ಡ್’ಗಳ ನೋಂದಣಿಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದೆ. ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳು ಮತ್ತು ಜಿಲ್ಲಾ ಕುಷ್ಠರೋಗ ವಿಭಾಗದ ಅಧಿಕಾರಿಗಳ ಜಂಟಿ ಪ್ರಯತ್ನದಿಂದ ಇಂತಹ ಮಹತ್ವದ ಸಾಧನೆಯಾಗಿದೆ. ಡಿಎಚ್’ಒಗಳು ಮತ್ತು ಡಿಎಲ್’ಒಗಳು ಸಹ ನಿಯಮಿತವಾಗಿ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.

ಮುಂದಿನ ಮಾರ್ಚ್ ವೇಳೆಗೆ ಎಲ್ಲಾ ಅರ್ಹರಿಗೆ ಕಾರ್ಡ್
ಇಡಿಸಿಎಸ್ ವಿಭಾಗದ ನಿರಂತರ ಪ್ರಯತ್ನ ಶ್ಲಾಘನೀಯವಾಗಿದ್ದು, ಗ್ರಾಮ ಒನ್ ಕೇಂದ್ರಗಳಲ್ಲಿ ದೈನಂದಿನ ಗುರಿ ತಲುಪಲು ಪ್ರಯತ್ನಿಸಲಾಗುತ್ತಿದೆ. ಇದಕ್ಕಾಗಿ ದೊಡ್ಡ ಪ್ರಮಾಣದ ಶಿಬಿರಗಳನ್ನು ಕೂಡ ಆಯೋಜಿಸಲಾಗುತ್ತಿದೆ. ಅನೇಕ ತಾಂತ್ರಿಕ ಸಮಸ್ಯೆಗಳ ಹೊರತಾಗಿಯೂ ಆಪರೇಟರ್ಗಳು ಬೆಳಿಗ್ಗೆ 6 ರಿಂದ ರಾತ್ರಿ 11 ಗಂಟೆವರೆಗೆ ಅವಿರತವಾಗಿ ಕೆಲಸ ಮಾಡುತ್ತಿದ್ದಾರೆ. ಮನೆ ಮನೆಗೆ ತೆರಳಿ ನೋಂದಣಿ ಅಭಿಯಾನ ನಡೆಸುವ ಜೊತೆಗೆ ತಾಂತ್ರಿಕ ಅಡಚಣೆಗಳನ್ನು ಎನ್’ಎಚ್’ಎ ನೆರವಿನಿಂದ ಪರಿಹರಿಸಲಾಗುತ್ತಿದೆ. ಮುಂದಿನ ಮಾರ್ಚ್ ವೇಳೆಗೆ ಎಲ್ಲಾ ಅರ್ಹರಿಗೆ ಎಬಿ-ಎಆರ್’ಕೆ ಕಾರ್ಡ್’ಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.
ಎಲ್ಲರಿಗೂ ಆರೋಗ್ಯ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ 2018 ರ ಮಾರ್ಚ್ 2 ರಂದು ಆರೋಗ್ಯ ಕರ್ನಾಟಕ ಯೋಜನೆ ಪ್ರಾರಂಭಿಸಿತ್ತು. ಇದರಡಿ ಪ್ರಾಥಮಿಕ. ಮಾಧ್ಯಮಿಕ ಮತ್ತು ತೃತೀಯ ಹಂತದ ಆಸ್ಪತ್ರೆಗಳಲ್ಲಿ ಬಿಪಿಎಲ್ ಕುಟುಂಬದವರಿಗೆ ಒಂದು ವರ್ಷಕ್ಕೆ 2 ಲಕ್ಷ ರೂ. ಮತ್ತು ಎಪಿಎಲ್ ಕುಟುಂಬಗಳಿಗೆ ಶೇ.30 ರಷ್ಟು ಸಬ್ಸಿಡಿ ದರದಲ್ಲಿ ಚಿಕಿತ್ಸೆ ಒದಗಿಸಲಾಗುತ್ತಿತ್ತು. ಇದೇ ಸಮಯದಲ್ಲಿ ಕೇಂದ್ರ ಸರ್ಕಾರ ತನ್ನ ಮಹತ್ವಾಕಾಂಕ್ಷೆಯ, ಎಲ್ಲರಿಗೂ ಆರೋಗ್ಯ ಸೌಲಭ್ಯ ಕಲ್ಪಿಸುವ ಯೂನಿವರ್ಸಲ್ ಹೆಲ್ತ್ ಕವರೇಜ್ ಯೋಜನೆಯನ್ನು ಇದೇ ಗುರಿ ಮತ್ತು ಇದೇ ಉದ್ದೇಶದಿಂದ ಪ್ರಾರಂಭಿಸಿತು ಎಂದರು.

ರಾಷ್ಟ್ರೀಯ ಯೋಜನೆ ಹೆಚ್ಚಿನ ವ್ಯಾಪ್ತಿ ಹೊಂದಿದ್ದರಿಂದ ಮತ್ತು ಪ್ರಯೋಜನಕಾರಿಯಾಗಿದ್ದರಿಂದ ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಎಂಬ ಹೆಸರಿನಡಿ ಯೋಜನೆಯನ್ನು ಜಾರಿ ತರಲಾಯಿತು. ಯೂನಿವರ್ಸಲ್ ಹೆಲ್ತ್ ಕವರೇಜ್ ಯೋಜನೆಯ ನೈಜ ಸ್ಪೂರ್ತಿಯೊಂದಿಗೆ ಈ ಯೋಜನೆ ಜಾರಿಗೊಳಿಸಲಾಗಿದ್ದು, ಎಲ್ಲಾ 5.09 ಕೋಟಿ ಅರ್ಹ ನಾಗರಿಕರಿಗೆ ಎಬಿ-ಪಿಎಂಜೆಎವೈ-ಎಆರ್’ಕೆ ಕಾರ್ಡ್’ಗಳನ್ನು ವಿತರಿಸಲಾಗುವುದು. ಎಬಿ-ಪಿಎಂಜೆಎವೈ ರಾಷ್ಟ್ರೀಯ ಯೋಜನೆಯಾಗಿದ್ದು, ಪ್ರತಿ ರಾಜ್ಯಗಳಲ್ಲೂ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಕೋ ಬ್ರಾಂಡೆಡ್ ಕಾರ್ಡ್’ಗಳನ್ನು ಸೃಜಿಸುವ ಅಭಿಯಾನವನ್ನು ಸಹ ಆರಂಭಿಸಿವೆ ಎಂದು ಸಚಿವರು ತಿಳಿಸಿದರು.

(ವರದಿ: ಡಿ.ಎಲ್. ಹರೀಶ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Ayushman BharatBENGALURUDr K SudhakarHealth Karnataka CardKannada News WebsiteLatest News Kannadaಆಯುಷ್ಮಾನ್ ಭಾರತ್ಆರೋಗ್ಯ ಕರ್ನಾಟಕ ಕಾರ್ಡ್ಆರೋಗ್ಯ ಕರ್ನಾಟಕ ಯೋಜನೆಡಾ.ಕೆ.ಸುಧಾಕರ್ಬೆಂಗಳೂರುಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Share198Tweet123Send
Previous Post

ಮಾನಸಿಕ ನೆಮ್ಮದಿ ಜೀವನಕ್ಕೆ ಪುಸ್ತಕ ಓದುವ ಹವ್ಯಾಸ ಪೂರಕ: ಪ್ರೊ.ಅಣ್ಣಯ್ಯ ನಾಯಕ

Next Post

ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ಜತೆ ಮೈತ್ರಿ ಇಲ್ಲ: ಎಚ್.ಡಿ. ಕುಮಾರಸ್ವಾಮಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಊಟಕ್ಕೆ ಗತಿ ಇಲ್ಲದವರು ಸೈನ್ಯ ಸೇರುತ್ತಾರೆ: ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಟುಟೀಕೆ

ಸಿದ್ದರಾಮಯ್ಯರನ್ನು ಸೋಲಿಸಲು ಬಿಜೆಪಿ ಜತೆ ಮೈತ್ರಿ ಇಲ್ಲ: ಎಚ್.ಡಿ. ಕುಮಾರಸ್ವಾಮಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
SWR to run special trains for Good Friday, Easter rush

Regulation, Diversion and Rescheduling of Trains in the Solapur–Wadi Section

June 1, 2026
ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

ಮಾನವೀಯ ಮೌಲ್ಯಗಳ ಸರದಾರ ಅಂಬರೀಷ್: ಸುರೇಶ್ ಋಗ್ವೇದಿ

June 1, 2026
ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

ಕೋಕ್ ಬ್ರೇಕ್ ಇನ್ಮುಂದೆ ಮತ್ತಷ್ಟು ಮಜಾ | ಗೂಗಲ್ ಜೆಮಿನಿ ಜೊತೆ ಕೈಜೋಡಿಸಿದ ಕೊಕಾ-ಕೋಲಾ

June 1, 2026
ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ | ಕಾರಣವೇನು?

ಶಿವಮೊಗ್ಗ | 7 ಲಕ್ಷ ರೂ. ನಗದು ದೋಚಿದ್ದ ಇಬ್ಬರು ಕಳ್ಳರ ಬಂಧನ

June 1, 2026
ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

ಬಸ್ಸು – ಬೈಕ್‌ ನಡುವೆ ಡಿಕ್ಕಿ, ಭೀಕರ ಅಪಘಾತದಲ್ಲಿ ಓರ್ವ ಸಾವು

June 1, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL