Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಹಿಜಾಬ್ ವಿವಾದ: ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆ, ಮುಖ್ಯ ನ್ಯಾಯಾಧೀಶರ ಅಂಗಳದಲ್ಲಿ ಚೆಂಡು

February 9, 2022
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರಾಜ್ಯ ಹೈಕೋರ್ಟ್‌ನಲ್ಲಿ ನಿನ್ನೆಯಿಂದ ವಿಚಾರಣೆ ನಡೆಯುತ್ತಿದ್ದ ಹಿಜಾಬ್ ವಿವಾದವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿ ನ್ಯಾಯಾಲಯ ಆದೇಶಿಸಿದೆ.

ಈ ಕುರಿತಂತೆ ಪ್ರಕರಣವನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಿರುವ ಹಿರಿಯ ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್, ಪ್ರಕರಣದಲ್ಲಿ ಹಲವು ವಿಚಾರಗಳು ಗೊಂದಲದಲ್ಲಿವೆ. ಹಲವು ಪ್ರಶ್ನೆಗಳು ಎದ್ದಿವೆ. ಹೀಗಾಗಿ, ಹೆಚ್ಚಿನ ವಿಚಾರಣೆಯ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ವಿಸ್ತೃತ ಪೀಠಕ್ಕೆ ಇದನ್ನು ವರ್ಗಾಯಿಸಲು ಮುಖ್ಯ ನ್ಯಾಯಮೂರ್ತಿಗಳ ಪೀಠಕ್ಕೆ ವರ್ಗಾಯಿಸುತ್ತಿದ್ದೇನೆ ಎಂದರು.

ಇದು ತುರ್ತು ಪರಿಹರಿಸಬೇಕಾದ ವಿಚಾರವಾದ್ದರಿಂದ ಮುಖ್ಯನ್ಯಾಯಮೂರ್ತಿಗಳಿಗೆ ತತಕ್ಷಣವೇ ದಾಖಲೆಗಳನ್ನು ಸಲ್ಲಿಸಲು ಹೈಕೋರ್ಟ್ ರಿಜಿಸ್ಟಾರ್ ಅವರಿಗೆ ನ್ಯಾಯಾಧೀಶರು ಸೂಚಿಸಿದ್ದಾರೆ.

ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾವಣೆಯಾದ ಹಿನ್ನೆಲೆಯಲ್ಲಿ ಈ ಪೀಠದಲ್ಲಿ ಯಾರೆಲ್ಲಾ ನ್ಯಾಯಾಧೀಶರು ಇರಬೇಕು ಎಂಬುದನ್ನು ಮುಖ್ಯನ್ಯಾಯಮೂರ್ತಿಗಳು ನಿರ್ಧರಿಸುತ್ತಾರೆ. ಅರ್ಜಿದಾರರ ಪರ ವಕೀಲರು ಮಂಡಿಸಿದ ವಾದವೇನು?
ಪರೀಕ್ಷಾ ಸಮಯವಾದ್ದರಿಂದ ಶಾಲೆಗಳು ಎಂದಿನಂತೆ ನಡೆಯಬೇಕಿದೆ. ಯಥಾಸ್ಥಿತಿ ಕಾಪಾಡಿಕೊಳ್ಳಬೇಕಾದ ಅನಿವಾರ್ಯತೆಯಿದೆ. ಈಗ ಹೇಗಿದೆಯೋ ಹಾಗೆಯೇ ಬಿಟ್ಟು ಬಿಡಿ. ಎರಡು ತಿಂಗಳು ಈಗಿನಂತೆಯೇ ಬಿಟ್ಟರೆ ಆಕಾಶವೇನೂ ಕಳಚಿ ಬೀಳುವುದಿಲ್ಲ. ಮುಂದಿನ ಶೈಕ್ಷಣಿಕ ವರ್ಷದಿಂದ ಸಮವಸ್ತ್ರದ ಕುರಿತಾಗಿ ನೋಡಿಕೊಳ್ಳಬಹುದು. ಸದ್ಯ ಕಡೆಯ ಪಕ್ಷ ೨ ತಿಂಗಳಿಗೆ ಮಧ್ಯಂತರ ಆದೇಶ ನೀಡಿ ಎಂದು ಅರ್ಜಿದಾರರ ಪರ ವಕೀಲ ಹೆಗಡೆ ವಾದಿಸಿದ್ದಾರೆ.
ಅಲ್ಲದೇ, ಮುಂಬೈ, ಮದ್ರಾಸ್ ಹಾಗೂ ಕೇರಳ ನ್ಯಾಯಾಲಯಗಳು ನೀಡಿದ ತೀರ್ಪನ್ನು ಉಲ್ಲೇಖಿಸಿ ವಾದ ಮಂಡಿಸಿದ್ದಾರೆ. ಇನ್ನು, ಅರ್ಜಿದಾರರ ಪರವಾಗಿ ವಾದ ಮಂಡಿಸಿದ ಮತ್ತೊಬ್ಬ ವಕೀಲ ದೇವದತ್ ಕಾಮತ್, ಪ್ರಕರಣ ವಿಸ್ತೃತ ಪೀಠಕ್ಕೆ ಹೋಗಲಿ. ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ತರಗತಿಗೆ ಬರಲು ಅನುಮತಿ ನೀಡಿ. ನಮಗೆ ಕೋರ್ಟ್ ಮೇಲೆ ನಂಬಿಕೆ ಇದೆ ಎಂದು ವಾದ ಮಂಡಿಸಿದ್ದಾರೆ
ಇನ್ನು, ಸರ್ಕಾರದ ಪರವಾಗಿ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ನಾವದಗಿ ಅವರು, ಈ ವಿಚಾರ ರಾಜ್ಯದ ಕಾನೂನು ಸುವ್ಯವಸ್ಥೆ ಮೇಲೆ ಪರಿಣಾಮ ಬೀರುತ್ತದೆ. ಈ ಉದ್ದೇಶದಿಂದ ಆದಷ್ಟು ಶೀಘ್ರ ನ್ಯಾಯಾಲಯ ತೀರ್ಮಾನ ಘೋಷಿಸುವುದು ಉತ್ತಮ. ವಿಸ್ತೃತ ಪೀಠಕ್ಕೆ ವರ್ಗಾಯಿಸುವುದಾದರೆ ಸರ್ಕಾರದ್ದೇನೂ ಅಭ್ಯಂತರವಿಲ್ಲ ಎಂದಿದ್ದಾರೆ. ಅಲ್ಲದೇ ಪ್ರಮುಖವಾಗಿ, ಇಲ್ಲಿ ಸಮವಸ್ತ್ರದ ಕುರಿತಾಗಿ ರಾಜ್ಯ ಸರ್ಕಾರದ ಆದೇಶವನ್ನೇ ಈ ವಿದ್ಯಾರ್ಥಿನಿಯರು ಪ್ರಶ್ನಿಸಿದ್ದಾರೆ. ಇವರ ಅರ್ಜಿಯಲ್ಲೇ ತಪ್ಪಿದೆ. ಕಾಲೇಜಿನ ಸಮವಸ್ತ್ರ ನೀತಿಯನ್ನು ಮಕ್ಕಳು ಶಾಲಾ-ಕಾಲೇಜಿಗೆ ಬರಲಿ, ಪಾಠ ಕೇಳಲಿ. ಈ ಬಗ್ಗೆ ಶಾಲಾ ಆಡಳಿತ ಮಂಡಳಿಗಳಿಗೆ ಸ್ವಾಯತ್ತತೆ ನೀಡಲಾಗಿದೆ ಎಂದು ನ್ಯಾಯಾಲಯಕ್ಕೆ ಹೇಳಿದ್ದಾರೆ.

ಹಿಜಾಬ್ ಇಸ್ಲಾಂನ ಅವಿಭಾಜ್ಯ ಅಂಗವಲ್ಲ ಎಂದು ಹಲವು ನ್ಯಾಯಾಲಯದ ತೀರ್ಪುಗಳು ಹೇಳಿವೆ. ಇಂತಹ ಸಂದರ್ಭದಲ್ಲಿ ತರಗತಿಯಲ್ಲಿ ಹಿಜಾಬ್ ಹಾಕುತ್ತೇವೆ ಎನ್ನುವುದು ಪೂರ್ವಾಗ್ರಹ ಪೀಡಿತದಿಂದ ಕೂಡಿದೆ ಎಂದು ವಾದ ಮಂಡಿಸಿದರು.

ಅಲ್ಲದೇ, ಹಿಜಾಬ್ ವಿವಾದದ ಕುರಿತಾಗಿ ನ್ಯಾಯಾಲಯ ಮಧ್ಯಂತರ ತೀರ್ಪು ನೀಡುವುದುನ್ನು ಎಜಿ ಅವರು ವಿರೋಧಿಸಿದ್ದಾರೆ.

ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು, ನಾವು ಶಾಲೆಗೆ ಹೋಗುವಾಗ ಸಮವಸ್ತ್ರ ಒಂದೇ ಬಣ್ಣದ್ದಾಗಿತ್ತು. ಆದರೆ, ಈಗ ಇದೇ ವಿವಾದವಾಗಿದೆ. ವಾದ ವಿವಾದ ಆಲಿಸಿದ ವೇಳೆ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರವಾದ್ದರಿಂದ ಇದನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸುವುದು ಒಳಿತು ಎಂದು ಚಿಂತಿಸುತ್ತಿದ್ದೇವೆ ಎಂದರು.

ಆದರೆ, ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ ವಕೀಲರು, ನಮಗೆ ಘನ ನ್ಯಾಯಾಲಯದ ಬಗ್ಗೆ ನಂಬಿಕೆಯಿದೆ. ಪ್ರಕರಣದ ಆಳಕ್ಕೆ ಹೋದರೆ ಕಕ್ಷಿದಾರರ ಬಗ್ಗೆ ಮಾತನಾಡಬೇಕಾಗುತ್ತದೆ. ವಿಸ್ತೃತ ಪೀಠಕ್ಕೆ ವರ್ಗಾವಣೆ ಬೇಡ. ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಆದಷ್ಟು ಶೀಘ್ರ ಇಲ್ಲಿಯೇ ತೀರ್ಪು ನೀಡಿ ಎಂದು ಮನವಿ ಮಾಡಿದರು.
ಶಾಲೆಗಳನ್ನು ಎಂದಿನಿಂದ ಆರಂಭ ಮಾಡುತ್ತೀರಿ ಎಂದು ನ್ಯಾಯಮೂರ್ತಿಗಳು ಪ್ರಶ್ನಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಅಡ್ವೊಕೇಟ್ ಜನರಲ್ ಅವರು, ಸೋಮವಾರದಿಂದ ಶಾಲೆಗಳನ್ನು ಆರಂಭಿಸುತ್ತೇವೆ ಎಂದು ಮಾಹಿತಿ ನೀಡಿದರು.

ಇನ್ನು ಆಡಳಿತ ಮಂಡಳಿಗಳ ಪರವಾಗಿ ವಾದ ಮಂಡಿಸಿದ ವಕೀಲ ಸಜನ್ ಪೂವಯ್ಯ, ಸಮವಸ್ತ್ರದ ಕುರಿತಾಗಿ ಆಡಳಿತ ಮಂಡಳಿ ಪ್ರತಿ ವರ್ಷ ಸಭೆ ನಡೆಸಿ, ಎಲ್ಲರ ಅಭಿಪ್ರಾಯ ಸಂಗ್ರಹಿಸಿ ಸಮವಸ್ತ್ರದ ಬಗ್ಗೆ ತೀರ್ಮಾನ ಕೈಗೊಳ್ಳಲಾಗಿರುತ್ತದೆ. ಈಗಿನ ಸಮವಸ್ತ್ರ ಹೇಗಿರಬೇಕು ಎಂಬುದು ಕಳೆದ ವರ್ಷವೇ ನಿರ್ಧಾರವಾಗಿದೆ. ಈ ವರ್ಷವೂ ಅದನ್ನೇ ಪಾಲಿಸಲಾಗುತ್ತಿದೆ. ಸರ್ಕಾರ ಇದರಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆದರೆ, ಸರ್ಕಾರ ಬದಲಾಯಿಸಿದೆ ಎಂದು ದೂರುತ್ತಿದ್ದಾರೆ. ಅಲ್ಲದೇ, ಈ ವಿದ್ಯಾರ್ಥಿನಿಯರು ಇಷ್ಟು ದಿನ ಇದೇ ಸಮವಸ್ತ್ರ ಧರಿಸಿದ್ದಾರೆ. ಆದರೆ, ಈಗ ಏಕಾಏಕಿ ಇದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ದೂರಿದ್ದಾರೆ.

ದಯಮಾಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ಮಧ್ಯಂತರ ಆದೇಶ ನೀಡಬೇಡಿ ಎಂದು ಮನವಿ ಮಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUHigh Court of KarnatakaHIjabHijab Issue in KarnatakaHijab RawKannada News WebsiteKarnataka High CourtLatest News Kannadasaffronಕರ್ನಾಟಕ ಹೈಕೋರ್ಟ್ಕೇಸರಿ ಶಾಲು‌ಬೆಂಗಳೂರುಹಿಜಾಬ್ಹಿಜಾಬ್-ಕೇಸರಿ ಶಾಲು ವಿವಾದ
Previous Post

ಭತ್ತ ಖರೀದಿ ಕೇಂದ್ರಕ್ಕೆ ಶಾಸಕ ಹಾಲಪ್ಪ ಚಾಲನೆ

Next Post

ಬೇಕಾಬಿಟ್ಟಿ ವಾದ ಮಂಡಿಸಲು ಮುಂದಾದ ವಕೀಲರ ಚಳಿ ಬಿಡಿಸಿದ ನ್ಯಾ.ಕೃಷ್ಣ ದೀಕ್ಷಿತ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೇಕಾಬಿಟ್ಟಿ ವಾದ ಮಂಡಿಸಲು ಮುಂದಾದ ವಕೀಲರ ಚಳಿ ಬಿಡಿಸಿದ ನ್ಯಾ.ಕೃಷ್ಣ ದೀಕ್ಷಿತ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!