ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಐಸಿಸ್ ಉಗ್ರರೊಂದಿಗೆ ನಂಟು ಹೊಂದಿರುವ ಆರೋಪದ ಹಿನ್ನೆಲೆಯಲ್ಲಿ ನೇತ್ರ ತಜ್ಞ ಡಾ.ಅಬ್ದುಲ್ ರಹಮಾನ್ ಎನ್ನುವವನನ್ನು ರಾಷ್ಟ್ರೀಯ ತನಿಖಾ ದಳ ಬಂಧಿಸಿದೆ.
ಈ ಕುರಿತಂತೆ ರಾಷ್ಟ್ರೀಯ ಮಾಧ್ಯಮವೊಂದು ವರದಿ ಮಾಡಿದ್ದು, ನಗರದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ನೇತ್ರ ತಜ್ಞನಾಗಿ ಕೆಲಸ ಮಾಡುತ್ತಿರುವ ವೈದ್ಯನನ್ನು ಬಂಧಿಸಲಾಗಿದೆ ಎಂದು ಹೇಳಿದೆ.
ಅಬ್ದುರ್ ರಹಮಾನ್ 2014ರಲ್ಲಿ ಸಿರಿಯಾದಲ್ಲಿರುವ ಐಸಿಸ್ ವೈದ್ಯಕೀಯ ಶಿಬಿರಗಳಿಗೂ ಭೇಟಿ ನೀಡಿ ಬಂದಿದ್ದ ಎಂಬ ಆಘಾತಕಾರಿ ಮಾಹಿತಿಯೂ ಸಹ ಹೊರಬಿದ್ದಿದ್ದು, ಇಲ್ಲಿ ಆತ ಐಸಿಸ್ ಉಗ್ರರೊಂದಿಗೆ ಸುಮಾರು 10 ದಿನಗಳ ಕಾಲ ಇದ್ದು ಬಳಿಕ ಭಾರತಕ್ಕೆ ವಾಪಾಸಾಗಿದ್ದ ಎನ್ನಲಾಗಿದೆ.
ಹೋರಾಟದಲ್ಲಿ ಗಾಯಗೊಳ್ಳುವ ಐಸಿಸ್ ಉಗ್ರರಿಗೆ ನೆರವಾಗುವ ನಿಟ್ಟಿನಲ್ಲಿ ಅಬ್ದುರ್ ರಹಮಾನ್ ಒಂದು ಮೆಡಿಕಲ್ ಮೊಬೈಲ್ ಅಪ್ಲಿಕೇಷನ್ ತಯಾರಿಸುತ್ತಿದ್ದ ಮತ್ತು ಐಸಿಸ್ ಹೋರಾಟಗಾರರಿಗೆ ಉಪಯೋಗವಾಗುವಂತೆ ಶಸ್ತ್ರಾಸ್ತ್ರ ಸಂಬಂಧಿ ಅಪ್ಲಿಕೇಷನ್ ಒಂದನ್ನೂ ಸಹ ತಯಾರಿಸುತ್ತಿದ್ದ ಎಂದು ರಾಷ್ಟ್ರೀಯ ತನಿಖಾ ದಳ ಬಿಡುಗಡೆಗೊಳಿಸಿರುವ ಹೇಳಿಕೆಯಲ್ಲಿ ಉಲ್ಲೇಖಿಸಲಾಗಿದೆ.
Get In Touch With Us info@kalpa.news Whatsapp: 9481252093
Discussion about this post