Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ದಾಖಲೆ ಜಯ ಗಳಿಸುವ ಮೂಲಕ ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ: ಅಮಿತ್ ಶಾ

March 30, 2023
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಮೇ 10 ರಂದು ನಡೆಯಲಿರುವ 224 ಸ್ಥಾನಗಳ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ #KarnatakaAssemblyElection ಭರ್ಜರಿ ಬಹುಮತದೊಂದಿಗೆ ಗೆಲ್ಲುವ ವಿಶ್ವಾಸದಲ್ಲಿರುವ ಗೃಹ ಸಚಿವ ಅಮಿತ್ ಶಾ ಅವರು ದಕ್ಷಿಣ ರಾಜ್ಯದಲ್ಲಿ ಸತತ ಎರಡನೇ ಅವಧಿಗೆ ಸರ್ಕಾರ ರಚಿಸುವ ಮೂಲಕ ದಾಖಲೆ ಬರೆಯುವ ಭರವಸೆಯಲ್ಲಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ, ಚುನಾವಣಾ ಪೂರ್ವದಲ್ಲಿ ಅಥವಾ ನಂತರದಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳುವುದಿಲ್ಲವೆಂದು ಚುನಾವಣಾ ಚಾಣಕ್ಯ ಅಮಿತ್ ಶಾ #AmitShah ಸ್ಪಷ್ಟವಾಗಿ ಸ್ಪಷ್ಟಪಡಿಸಿದರು.

ಅಮಿತ್ ಶಾರವರು “ಕರ್ನಾಟಕದಲ್ಲಿ ನಾನು ಒಂಬತ್ತು ದಿನಗಳನ್ನು ಕಳೆದಿದ್ದೇನೆ. ರಾಜ್ಯದ ಐದೂ ಪ್ರದೇಶಗಳಿಗೆ ಭೇಟಿ ನೀಡಿದ್ದೇನೆ. ಆದ್ದರಿಂದ ಅರ್ಧದಷ್ಟು ಕ್ಷೇತ್ರಗಳಿಗಿಂತ ಹೆಚ್ಚು ಗೆದ್ದು ರಾಜ್ಯದಲ್ಲಿ ಸಂಪೂರ್ಣ ಬಹುಮತ ಸಾಧಿಸಲಿದ್ದೇವೆ ಎಂದು ವಿಶ್ವಾಸದಿಂದ ಹೇಳಬಲ್ಲೆ. ಇದು ಮೋದಿ ನಾಯಕತ್ವದಲ್ಲಿಯೇ ನಡೆಯುತ್ತದೆ. ಚಿಂತಿಸಬೇಡಿ,” ಎಂದು ನ್ಯೂಸ್ 18 ಆಯೋಜಿಸಿದ್ದ ರೈಸಿಂಗ್ ಇಂಡಿಯಾ ಶೃಂಗಸಭೆಯಲ್ಲಿ ಹೇಳಿದರು.

ಜೆಡಿಎಸ್ ಜೊತೆಗಿನ ಯಾವುದೇ ಮೈತ್ರಿಯನ್ನು ಸ್ಪಷ್ಟವಾಗಿ ತಳ್ಳಿಹಾಕಿದ ಶಾ, ಕರ್ನಾಟಕದ ಎಲ್ಲಾ 224 ಸ್ಥಾನಗಳಲ್ಲಿ ಭಾಜಪ #BJP ಸ್ವಂತ ಬಲದಿಂದಲೇ ಸ್ಪರ್ಧಿಸಲಿದೆ ಮತ್ತು ರಾಜ್ಯದಲ್ಲಿ ನಮ್ಮ ಪಕ್ಷವು ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲು ನೋಡುತ್ತಿಲ್ಲ, ನಮ್ಮ ಪಕ್ಷ ಕಳೆದ ಚುನಾವಣೆಯಲ್ಲಿ ಗಳಿಸಿದ 104 ಸ್ಥಾನಗಳಿಗಿಂತ ಹೆಚ್ಚು ಕ್ಷೇತ್ರಗಳನ್ನು ಜಯಿಸುವ ವಿಶ್ವಾಸವಿದೆ.
“ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ,” ಎಂದ ಶಾ , “ಲಕ್ಷಾಂತರ ಕಾರ್ಯಕರ್ತರೊಂದಿಗೆ” ಚರ್ಚೆಯ ನಂತರ ನಮ್ಮ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಹೊರತರಲಿದೆ ಎಂದು ಹೇಳಿದರು. ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ತಮ್ಮ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿವೆ.

ಮಾಜಿ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ವ್ಯಂಗ್ಯವಾಡಿದ ಶಾ, ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅವರನ್ನು ಪ್ರಧಾನಿ ಮೋದಿ ಇದಿರು ತಂದು ಹೋರಾಡಿದರೆ, ಬಿಜೆಪಿಗೆ ಅದಕ್ಕಿಂತ ಉತ್ತಮ ಗೆಲುವಿನ ಸೂತ್ರವಿಲ್ಲವೆಂದು ಹೇಳಿದರು.

”ಅವರು ಕರ್ನಾಟಕ ಚುನಾವಣೆಯನ್ನು ‘ಮೋದಿ v/s ಗಾಂಧಿ’ ಹೋರಾಟ ಎಂದು ಬಿಂಬಿಸಿದರೆ, ನಮಗೇನು ಅಭ್ಯಂತರವಿಲ್ಲ. ವಾಸ್ತವವಾಗಿ, ಬಿಜೆಪಿಗೆ ಇದಕ್ಕಿಂತ ಉತ್ತಮವಾದ ಗೆಲುವಿನ ಸೂತ್ರ ಸಿಗಲು ಸಾಧ್ಯವಿಲ್ಲವೆಂದು” ಶಾ ನ್ಯೂಸ್ 18 ರೈಜಿಂಗ್ ಇಂಡಿಯಾ ಶೃಂಗಸಭೆಯಲ್ಲಿ ಹೇಳಿದಾಗ ಪ್ರೇಕ್ಷಕರು ನಗುವಿನ ಅಲೆಗಳಲ್ಲಿ ತೇಲಿದರು.

ದೆಹಲಿಯ ರಾಜಕೀಯ ಪಂಡಿತರ ಒಂದು ವಿಭಾಗದ ಪ್ರಕಾರ ಹಳೆಯ ಭವ್ಯವಾದ ಕಾಂಗ್ರೆಸ್ ಪಕ್ಷವನ್ನು ಪುನರುಜ್ಜೀವನಗೊಳಿಸಲು, ಕಾಂಗ್ರೆಸ್‌ಗೂ ಒಬ್ಬ ಅಮಿತ್ ಶಾ ತುಂಬಾ ಅಗತ್ಯವಿದೆ ಎಂದು ನಂಬುತ್ತಾರೆ. ಅವರ ಇನ್ನೊಂದು ಅಭಿಪ್ರಾಯವೆಂದರೆ, ರಾಷ್ಟ್ರ ರಾಜಕಾರಣದಲ್ಲಿ ಬಿಜೆಪಿಯ ಭವಿಷ್ಯವನ್ನು ಬೇರೆಯವರಿಗಿಂತ ಉತ್ತಮವಾಗಿಸಲು ರಾಹುಲ್ ಗಾಂಧಿ ಪರೋಕ್ಷವಾಗಿ ಸಹಾಯ ಮಾಡಿದ್ದಾರೆ. ಹಲವು ಚುನಾವಣೆಗಳಲ್ಲಿ ಗಾಂಧಿ ಪ್ರಚಾರ ಮಾಡಿದಲ್ಲೆಲ್ಲಾ ಕಾಂಗ್ರೆಸ್ ತುಂಬಾ ಕಳಪೆ ಪ್ರದರ್ಶನವನ್ನು ನೀಡಿದೆ.

ಕರ್ನಾಟಕದಲ್ಲಿ ಒಬಿಸಿ ವರ್ಗದಲ್ಲಿ ಮುಸ್ಲಿಮರಿಗೆ 4% ಮೀಸಲಾತಿಯನ್ನು ಜಾರಿಗೆ ತಂದಿದ್ದಕ್ಕಾಗಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಶಾ, ಬಿಜೆಪಿ ಸರ್ಕಾರವು ಇತ್ತೀಚೆಗೆ ಅದನ್ನು ರದ್ದುಪಡಿಸಿ ಒಕ್ಕಲಿಗರು ಮತ್ತು ವೀರಶೈವ-ಲಿಂಗಾಯತರಿಗೆ ಹಂಚಿಕೆ ಮಾಡಿದೆ. ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಅಸಂವಿಧಾನಿಕ ಕ್ರಮ. ಇದನ್ನು ಮೊದಲೇ ತೆಗೆದು ಹಾಕಬೇಕಿತ್ತು.
Kalahamsa Infotech private limitedಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರೆಸಿದ ಅಮಿತ್ ಶಾ ಅಷ್ಟಕ್ಕೇ ನಿಲ್ಲದೆ, ಲೋಕಸಭೆಯಿಂದ ರಾಹುಲ್ ಗಾಂಧಿಯವರ ಅನರ್ಹತೆ ಮತ್ತು ನಂತರ ಕಾಂಗ್ರೆಸ್ ಸೃಷ್ಟಿಸುತ್ತಿರುವ ಗದ್ದಲದ ಬಗೆಗಿನ ಪ್ರಶ್ನೆಗೆ ಶಾ, “ಗಾಂಧಿ ಕುಟುಂಬವು ತನಗಾಗಿ ಪ್ರತ್ಯೇಕ ಕಾನೂನನ್ನು ಏಕೆ ಬಯಸುತ್ತದೆ? ಒಂದು ಕುಟುಂಬಕ್ಕೆ ಪ್ರತ್ಯೇಕ ಕಾನೂನು ಬೇಕೇ ಎಂಬುದನ್ನು ಭಾರತದ ಜನತೆಯೇ ನಿರ್ಧರಿಸಬೇಕು ಎಂದರು.

“ಮೋದಿ” ಸಮುದಾಯದ ಬಗೆಗಿನ ಅವಹೇಳನಕಾರಿ ಹೇಳಿಕೆಗಾಗಿ ಸೂರತ್ ಕೋರ್ಟ್ ಇತ್ತೀಚಿಗೆ ರಾಹುಲ್ ಗಾಂಧಿಯನ್ನು ದೋಷಿ ಎಂದು ತೀರ್ಪು ನೀಡಿತ್ತು. ಇದರ ಆಧಾರದ ಮೇಲೆ ಅವರನ್ನು ಲೋಕಸಭೆಯ ಸದಸ್ಯತ್ವದಿಂದ ಅನರ್ಹಗೊಳಿಸಿತು. ತರುವಾಯ, ರಾಹುಲ್‌ಗೆ ಅಧಿಕೃತ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಲಾಯಿತು. ಈ ಇಡೀ ಸಂಚಿಕೆಯನ್ನು ತನ್ನ ನಾಯಕನ ವಿರುದ್ಧದ ಪಿತೂರಿ ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಮತ್ತು ವಿವಿಧ ರಾಜ್ಯಗಳಲ್ಲಿನ ನಿರ್ಣಾಯಕ ಚುನಾವಣೆಗಳ ಮುನ್ನ ಇದರಿಂದ ರಾಜಕೀಯ ಲಾಭ ಪಡೆಯಲು ಪ್ರಯತ್ನಿಸುತ್ತಿದೆ. ಆದರೆ ಶಿಕ್ಷೆಯ ವಿರುದ್ಧ ಇದುವರೆಗೆ ಯಾವುದೇ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿಲ್ಲ.

ಪ್ರಧಾನಿಯನ್ನು ದೂಷಿಸುತ್ತಾ ಕೂರುವ ಬದಲು, ದೋಷಾರೋಪಣೆಯ ವಿರುದ್ಧ ಉನ್ನತ ನ್ಯಾಯಾಲಯಗಳಿಗೆ ತೆರಳುವಂತೆ ಗಾಂಧಿಗೆ ಸೂಚಿಸಿದ ಶಾ, ರಾಹುಲ್ ಗಾಂಧಿಯವರ ದುರಹಂಕಾರವೇ ಅವರಿಗೆ ಉನ್ನತ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸದಂತೆ ತಡೆಯುತ್ತಿದೆ ಎಂದು ಹೇಳಿದರು. “ಇವರಿಗೆ ಈ ದುರಹಂಕಾರ ಎಲ್ಲಿಂದ ಬರುತ್ತದೆ? ಇಲ್ಲಿಯವರೆಗೆ ಲಾಲೂ ಪ್ರಸಾದ್ ಯಾದವ್, ಜೆ ಜಯಲಲಿತಾ ಮತ್ತು ರಶೀದ್ ಆಳ್ವಿ ಸೇರಿದಂತೆ 17 ಜನರು ತಮ್ಮ ಸದಸ್ಯತ್ವವನ್ನು ಕಳೆದುಕೊಂಡಿದ್ದಾರೆ, ಆದರೆ ಯಾರೂ ಇವರಂತೆ ಗದ್ದಲ ಸೃಷ್ಟಿಸಲಿಲ್ಲ ”ಎಂದು ಶಾ ಕಾಂಗ್ರೆಸ್‌ನ ಕಿವಿ ಹಿಂಡಿದರು.

ಎಡಪಂಥೀಯ ಉಗ್ರವಾದದ (Left Wing Extremism) ಕುರಿತಾದ ಪ್ರಶ್ನೆಗೆ ಉತ್ತರಿಸಿದ ಶಾ, ಕೇಂದ್ರದಲ್ಲಿನ ಕಳೆದ ಒಂಬತ್ತು ವರ್ಷಗಳ ಭಾಜಪದ ಆಡಳಿತದಲ್ಲಿ ಪರಿಸ್ಥಿತಿ ಸಾಕಷ್ಟು ಸುಧಾರಿಸಿದೆ ಮತ್ತು ಎಡಪಂಥೀಯ ಉಗ್ರವಾದ ಸಂಬಂಧಿತ ಘಟನೆಗಳು ನಿರಂತರವಾಗಿ ಕ್ಷೀಣಿಸುತ್ತಿವೆ ಎಂದು ಹೇಳಿದರು. ಒಂದೆರಡು ರಾಜ್ಯಗಳ ಕೆಲವು ಜಿಲ್ಲೆಗಳಲ್ಲಿ ಅವರು ಚಿಕ್ಕ ಅಸ್ತಿತ್ವ ಹೊಂದಿದ್ದರೂ, ಈ ಪಿಡುಗಿನ ವಿರುದ್ಧದ ಹೋರಾಟವು ವಿಜಯದ ಹಾದಿಯಲ್ಲಿದೆ. ಹಾಗೇ ಎಡಪಂಥೀಯ ಉಗ್ರವಾದ ಸಂಬಂಧಿತ ಹಿಂಸಾತ್ಮಕ ಘಟನೆಗಳ ಸಂಖ್ಯೆಯು 76% ರಷ್ಟು ಕಡಿಮೆಯಾಗಿದೆ ಎಂದು ಅವರು ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Amit shahBENGALURUBJPcongressKannada News Websitekarnataka assembly election 2023Latest News KannadaPM Narendra ModiPolitical Newsಅಮಿತ್ ಶಾಕರ್ನಾಟಕ ವಿಧಾನಸಭಾ ಚುನಾವಣೆ 2018ಬೆಂಗಳೂರುಭಾರತೀಯ ಜನತಾ ಪಕ್ಷ
Previous Post

ದೇವಾಲಯದ ಮೆಟ್ಟಿಲು ಬಾವಿ ಕುಸಿದು 12 ಮಂದಿ ಸಾವು: ಉಳಿದವರ ರಕ್ಷಣೆ

Next Post

ಮಡಿಕೇರಿ ಅಂತಾರಾಜ್ಯ ಗಡಿಯಲ್ಲಿ ಎಷ್ಟು ಚೆಕ್ ಪೋಸ್ಟ್ ಹಾಕಲಾಗಿದೆ? ಏನೆಲ್ಲಾ ಕ್ರಮ ವಹಿಸಲಾಗಿದೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಡಿಕೇರಿ ಅಂತಾರಾಜ್ಯ ಗಡಿಯಲ್ಲಿ ಎಷ್ಟು ಚೆಕ್ ಪೋಸ್ಟ್ ಹಾಕಲಾಗಿದೆ? ಏನೆಲ್ಲಾ ಕ್ರಮ ವಹಿಸಲಾಗಿದೆ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಜೂ.22ರಂದು ರುದ್ರಾರಾಧ್ಯರಿಗೆ ಯೋಗರತ್ನಾಕರ ಪ್ರಶಸ್ತಿ ಪ್ರದಾನ: ವಿಜಯ್ ಕುಮಾರ್ ಹರ್ಷ

June 20, 2025
File Image

ಅಪ್ಸರಕೊಂಡ – ಮುಗಲಿ ಕಡಲ ವನ್ಯ ಜೀವಿಧಾಮ ಘೋಷಣೆ | ಸಚಿವ ಸಂಪುಟ ಸಭೆ ಅನುಮೋದನೆ

June 20, 2025

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!