ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಮಾಜಿ ಶಾಸಕ ಅಪ್ಪಾಜಿ ಗೌಡರ ಹಠಾತ್ ನಿಧನ ಅವರ ಅಭಿಮಾನಿಗಳಲ್ಲಿ ತೀವ್ರ ದುಃಖ ಉಂಟು ಮಾಡಿದ್ದು, ಎಲ್ಲೆಲ್ಲೂ ರೋಧನ ಕಂಡು ಬಂದಿದೆ.
ಅಪ್ಪಾಜಿ ನಿಧನದ ಸುದ್ದಿ ತಿಳಿದು ರಾತ್ರೋ ರಾತ್ರಿ ಅವರ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು ಹಾಗೂ ಕಾರ್ಯಕರ್ತರು ತಮ್ಮ ನೆಚ್ಚಿನ ನಾಯಕನನ್ನು ಕಳೆದುಕೊಂಡು ರೋಧಿಸುತ್ತಿದ್ದರು.
ತಮ್ಮ ನಾಯಕನ ಅಂತಿಮ ದರ್ಶನಕ್ಕೆ ಆಗಮಿಸಿದ್ದ ಸಾವಿರಾರು ಮಂದಿ ಕಣ್ಣೀರು ಹಾಕುತ್ತಾ, ಅಣ್ಣಾ ಎದ್ದೇಳು, ಅಣ್ಣಾ ಮಾತನಾಡು ಎಂದು ಗೋಳಿಡುತ್ತಿದ್ದು ದೃಶ್ಯ ಮನಕಲಕುವಂತಿತ್ತು.
ಇಂದು ಮುಂಜಾನೆ 10.30ರವರೆಗೂ ಮಾತ್ರ ನಿವಾಸದ ಮುಂದೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜನರು ತಂಡೋಪತಂಡವಾಗಿ ಆಗಮಿಸಿ ದರ್ಶನ ಪಡೆಯುತ್ತಿದ್ದಾರೆ.
ಮುಂಜಾನೆ 10.30ಕ್ಕೆ ಅಪ್ಪಾಜಿ ಗೌಡರ ಅಂತಿಮ ಯಾತ್ರೆ ಆರಂಭವಾಗಲಿದ್ದು, 11 ಗಂಟೆ ವೇಳೆಗೆ ಗೋಣಿಬೀಡು ತೋಟದಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post