ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಿನ್ನೆ ಸುರಿದ ಧಾರಾಕಾರ ಮಳೆಗೆ ತಾಲೂಕಿನ ಬಸವನಗಂಗೂರು ಗ್ರಾಮದ ಕೆರೆ ಕೋಡಿ ಬಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿದೆ.
ನೀರು ಉಕ್ಕಿ ಹರಿದ ಪರಿಣಾಮ ತಗ್ಗು ಪ್ರದೇಶದಲ್ಲಿರುವ ಕೆಎಚ್’ಬಿ ಪ್ರೆಸ್ ಕಾಲೋನಿ, ಸರ್ಕಾರಿ ನೌಕರರ ಸಂಘದ ಲೇಔಟ್ ಹಾಗೂ ಸುತ್ತಮುತ್ತಲಿನ ರಸ್ತೆಗಳು ಜಲಾವೃತವಾಗಿವೆ. ಚರಂಡಿಗಳು, ಯುಜಿಡಿ ಗುಂಡಿಗಳು ತುಂಬಿ ಹರಿಯುತ್ತಿವೆ. ಪ್ರತಿ ಮಳೆಗಾಲದ ವೇಳೆ ಈ ಸಮಸ್ಯೆ ಎದುರಾಗುತ್ತಿದೆ.
ಇಲ್ಲಿಯವರೆಗೂ ಕೆಎಚ್’ಬಿ ಸಂಸ್ಥೆಯಾಗಲಿ, ಅಬ್ಬಲಗೆರೆ ಗ್ರಾಮ ಪಂಚಾಯ್ತಿ ಆಡಳಿತವಾಗಲಿ, ಸಣ್ಣ ನೀರಾವರಿ ಇಲಾಖೆಯಾಗಲಿ ಯಾವುದೇ ಪರಿಹಾರ ಕ್ರಮ ಕೈಗೊಂಡಿಲ್ಲ. ಇದರಿಂದ ನಿವಾಸಿಗಳು ತೊಂದರೆ ಎದುರಿಸುವಂತಾಗಿದೆ. ಇನ್ನಾದರೂ ಜಿಲ್ಲಾಡಳಿತ ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮಕೈಗೊಳ್ಳಬೇಕಾಗಿದೆ ಎಂದು ಕೆಎಚ್’ಬಿ ಕಾಲೋನಿ ನಿವಾಸಿಗಳು ಆಗ್ರಹಿಸಿದ್ದಾರೆ.
ಮಾಹಿತಿ: ರೇಣುಕೇಶ್
Get In Touch With Us info@kalpa.news Whatsapp: 9481252093
Discussion about this post