ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಆಕಾಶವಾಣಿಯ ಹಿರಿಯ ಕಲಾವಿದ, ಸಂಗೀತ ವಿದ್ವಾನ್ ಕೆ.ಆರ್. ಸುಬ್ರಹ್ಮಣ್ಯ(56) ವಿಧಿವಶರಾಗಿದ್ದಾರೆ.
ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ.
ದಶಕಗಳ ಕಾಲದಿಂದಲೂ ಆಕಾಶವಾಣಿ ಕಲಾವಿದರಾಗಿ ಸೇವೆ ಸಲ್ಲಿಸುತ್ತಿದ್ದ ಸುಬ್ರಹ್ಮಣ್ಯ ಅವರು ಭದ್ರಾವತಿಯಲ್ಲಿ ಆಕಾಶವಾಣಿ ಸುಬ್ಬಣ್ಣ ಎಂದೇ ಜನಜನಿತವಾದವರು. ಸಿಂಡಿಕೇಟ್ ಬ್ಯಾಂಕ್ ಪಗ್ನಿ ಸಂಗ್ರಹ ಮಾಡುತ್ತಿದ್ದ ಅವರು, ಸಂಗೀತ ಕ್ಷೇತ್ರದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದವರು.
ಮಲೆನಾಡು ಕಲಾವಿದರು ಎಂಬ ತಂಡವೊಂದನ್ನು ಕಟ್ಟಿಕೊಂಡಿದ್ದ ಸುಬ್ಬಣ್ಣ, ಹಲವಾರು ಯುವ ಪ್ರತಿಭೆಗಳಿಗೆ ನೀರೆರೆದು ಪ್ರೋತ್ಸಾಹ ನೀಡಿದವರು.
ಅತ್ಯಂತ ಸರಳ, ಸಜ್ಜನಿಕೆ ವ್ಯಕ್ತಿತ್ವದ ಸುಬ್ಬಣ್ಣ, ಸಮಾಜ ಸೇವೆಯಲ್ಲೂ ಸಹ ತಮ್ಮನ್ನು ತೊಡಗಿಸಿಕೊಂಡು ಸಾಮಾಜಿಕ ಕಳಕಳಿ ಮೆರೆದವರು.
ಇವರ ಆತ್ಮಕ್ಕೆ ಸದ್ಗತಿ ದೊರೆಯಲಿ ಎಂದು ಸಮಾಜ ಗಣ್ಯರು ಪ್ರಾರ್ಥಿಸಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post