ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕು ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ದಲಿತ ಮಹಿಳಾ ಸಿಬ್ಬಂದಿಗೆ ಲೈಂಗಿಕ ದೌರ್ಜನ್ಯ ನಡೆಸಿದ ನಿಕಟಪೂರ್ವ ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ರನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷಸಮಿತಿ (ಅಂಬೇಡ್ಕರ್ವಾದ) ನೇತೃತ್ವದಲ್ಲಿ ಸೋಮವಾರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನಾ ಧರಣಿ ಸತ್ಯಾಗ್ರಹ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಸಂಘಟನೆಯ ಮುಖಂಡರು, ಗುತ್ತಿಗೆ ಆಧಾರದ ಮೇಲೆ ತಾಲೂಕು ಕಚೇರಿಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಸಿಬ್ಭಂದಿಯನ್ನು ತಹಶೀಲ್ದಾರ್ ಎಚ್.ಸಿ. ಶಿವಕುಮಾರ್ ಕಾಮಕೇಳಿಗೆ ಒತ್ತಾಯಿಸಿ ದೂರವಾಣಿ ಕೆರೆ ಮಾಡಿದ್ದು, ಎಲ್ಲದಕ್ಕೂ ಸೂಕ್ತ ಸಾಕ್ಷ್ಯಾಧಾರ ಒದಗಿಸಿ ಸೆ. 14ರಂದು ಹಳೇನಗರ ಪೋಲಿಸದ್ ಠಾಣೆಯಲ್ಲಿ ಅವರ ವಿರುದ್ಧ ದೂರು ದಾಖಲಿಸಿದ್ದು, ಎಫ್ಐಆರ್ ಸಹ ಆಗಿರುತ್ತದೆ. ಐಪಿಸಿ ಕಲಂ 354, 354(ಎ), 509(2) ಹಾಗೂ ಅಟ್ರಾಸಿಟಿ ಸೇರಿದಂತೆ ಹಲವು ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
24 ಗಂಟೆಯೊಳಗೆ ಆರೋಪಿಯನ್ನು ಬಂಧಿಸಬೇಕೆಂಬ ನಿಯಮವಿದ್ದರೂ ಸಹ ಪ್ರಕರಣ ದಾಖಲಾಗಿ ಆರು ದಿನಗಳು ಕಳೆದರೂ ಈವರೆಗೆ ಆರೋಪಿ ತಹಶೀಲ್ದಾರ್ ಶಿವಕುಮಾರ್ ಅವರನ್ನು ಪೋಲಿಸ್ ಇಲಾಖೆ ಬಂದಿಸಿರುವುದಿಲ್ಲ. ಇದನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಗತಿಪರ ಸಂಘಟನೆಗಳು ಖಂಡಿಸಿ ಆರೋಪಿ ತಹಶೀಲ್ದಾರ್ ಬಂಧನಕ್ಕೆ ಒತ್ತಾಯಿಸಿದೆ.
ಆರೋಪಿಯನ್ನು ಶೀಘ್ರವಾಗಿ ಬಂಧಿಸದಿದ್ದಲ್ಲಿ ಸಂಘಟನೆ ವತಿಯಿಂದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಹೇಳಿದರು.
ಪ್ರತಿಭಟನೆಯ ಆರಂಭಕ್ಕೆ ಮುನ್ನ ಪೋಲಿಸರು ಹಾಗೂ ಪ್ರತಿಭಟನಾಕರಾರ ನಡುವೆ ಧ್ವನಿವರ್ಧಕ ಬಳಸುವ ಬಗ್ಗೆ ಮಾತಿನ ಚಕಮಕಿ ನಡೆಯಿತಾದರೂ ಕೊನೆಗೆ ಧ್ವನಿವರ್ಧಕ ಬಳಸಲು ಪೋಲಿಸರು ಅನುಮತಿ ನೀಡಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ಟಿ.ಎಚ್. ಹಾಲೇಶಪ್ಪ, ತಾಲೂಕು ಪ್ರಧಾನ ಸಂಚಾಲಕ ಎಂ. ಕುಬೇಂದ್ರಪ್ಪ, ಜಿಲ್ಲಾ ಸಂಘಟನಾ ಸಂಚಾಲಕ ಎಂ. ಪಳನಿರಾಜ್, ಮಾನವ ಹಕ್ಕುಗಳ ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎನ್. ರಾಜು, ಕ.ರಾ.ಮಾ.ಸ ರಾಜ್ಯಾಧ್ಯಕ್ಷ ಮಂಜುನಾಥ್, ನಗರಸಭೆ ಮಾಜಿ ಸ್ತಾಯಿ ಸಮಿತಿ ಅಧ್ಯಕ್ಷ ಬದ್ರಿನಾರಾಯಣ್, ರಕ್ಷಣಾ ವೇದಿಕೆ ಗಿರೀಶ್, ವಾಲ್ಮೀಕಿ ಸಮಾಜದ ಬಸವರಾಜಪ್ಪ, ಆಮ್ ಆದ್ಮಿ ಪಕ್ಷದ ರವಿಕುಮಾರ್, ಸೇರಿದಂತೆ ಅನೇಕರು ಭಾಗವಹಿಸಿದ್ದರು.
Get In Touch With Us info@kalpa.news Whatsapp: 9481252093
Discussion about this post