ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಭಾರೀ ಮಳೆಗೆ ಮನೆ ಕಳೆದುಕೊಂಡವರಿಗೆ ರಾಜ್ಯ ಸರ್ಕಾರದಿಂದ ಹೆಚ್ಚಿನ ಪರಿಹಾರ ಬಿಡುಗಡೆ ಮಾಡುವಂತೆ ಪ್ರಯತ್ನ ಮಾಡಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್ ಭರವಸೆ ನೀಡಿದರು.
ನಗರದಲ್ಲಿ ಅತಿವೃಷ್ಟಿ ಮಳೆಗೆ ಹಾನಿಯಾಗಿರುವ ಶರಾವತಿ ನಗರದ ಸ್ಲಂ ಏರಿಯಾದ ನಾಗರಾಜ್ ಅವರ ಮನೆ ಹಾಗೂ ಸುತ್ತಲಿನ ಪ್ರದೇಶವನ್ನು ವೀಕ್ಷಿಸಿ ಅವರು ಮಾತನಾಡಿದರು.
ಅತಿವೃಷ್ಠಿಯಿಂದಾಗಿ ಹಾನಿಗೊಳಗಾದ ಮನೆಯನ್ನು ಪರಿಶೀಲನೆ ನಡೆಸಿದ್ದೇವೆ. ಪಾಲಿಕೆ ವತಿಯಿಂದ ಈಗಾಗಲೇ ತತಕ್ಷಣದ ಪರಿಹಾರವಾಗಿ 10 ಸಾವಿರ ರೂ.ಗಳನ್ನು ನೀಡಲಾಗಿದೆ. ಜೊತೆಗೆ ಹೆಚ್ಚಿನ ಪರಿಹಾರವನ್ನು ರಾಜ್ಯ ಸರ್ಕಾರದಿಂದ ಕೊಡಿಸಲು ಅಗತ್ಯವಾಗಿರುವ ಎಲ್ಲ ದಾಖಲೆಗಳನ್ನು ಸಿದ್ದಪಡಿಸಿ, ಪ್ರಯತ್ನ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಅಧ್ಯಕ್ಷ ರಾದ ಜಗದೀಶ್, ಮೇಯರ್ ಸುವರ್ಣ ಶಂಕರ್, ಉಪ ಮೇಯರ್ ಸುರೇಖಾ ಮುರಳೀಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರಾಜ್, ಬಿ.ಕೆ. ಶ್ರೀನಾಥ್, ಧರ್ಮಪ್ರಸಾದ್, ಪಾಲಿಕೆ ಆಡಳಿತ ಪಕ್ಷದ ನಾಯಕರಾದ ಎಸ್. ಚನ್ನಬಸಪ್ಪ, ನಗರ ಪ್ರಧಾನ ಕಾರ್ಯದರ್ಶಿ ಬಳ್ಳೇಕೆರೆ ಸಂತೋಷ್, ಮೋಹನ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಹೃಷಿಕೇಶ್ ಪೈ, ಪಾಲಿಕೆ ಸದಸ್ಯರಾದ, ಎಂ.ಜಿ. ಬಾಲು, ಪ್ರಭಾರ್ಕರ್, ವಾರ್ಡ್ ಪ್ರಮುಖರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093
Discussion about this post