Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಮಾನವೀಯತೆಯ ಮೇರುಪರ್ವತ, ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಅಸ್ತಂಗತ

ಫಲಿಸಲಿಲ್ಲ ಕೋಟ್ಯಂತರ ಭಕ್ತರ ಪ್ರಾರ್ಥನೆ, ಕಳಚಿತ ಸನಾತನ ಧರ್ಮದ ಮೇರು ಕೊಂಡಿ

January 21, 2019
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕ್ಯಾತ್ಸಂದ್ರ: ಭಾರತೀಯ ಸನಾತನ ಪರಂಪರೆಯ ಯುಗ ಸಂತ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಹಿರಿಯ ಸ್ವಾಮಿಗಳಾದ ಡಾ. ಶಿವಕುಮಾರ ಶ್ರೀಗಳು ಇಂದು ಅಸ್ತಂಗತರಾಗಿದ್ದಾರೆ.

ಶತಮಾನ ಕಂಡ 111 ವರ್ಷದ ಶತಾಯುಷಿ ಸಿದ್ದಗಂಗಾ ಶ್ರೀಗಳು ವಯೋಸಹಜವಾದ ಅಸ್ವಸ್ತತೆಯಿಂದ ಬಳಲುತ್ತಿದ್ದ ಅವರು, ಇಂದು ನಸುಕಿನಲ್ಲಿ ತಮ್ಮ ಇಹದ ಕರ್ತವ್ಯವನ್ನು ಮುಗಿಸಿ ಶಿವನ ಪಾದದಲ್ಲಿ ಲೀನವಾಗಿದ್ದಾರೆ. ಈ ಮೂಲಕ ಶ್ರೀಮಠದ ಸಾವಿರಾರು ಮಕ್ಕಳನ್ನು, ಕೋಟ್ಯಾಂತರ ಭಕ್ತರನ್ನು ಅನಾಥವನ್ನಾಗಿಸಿ ಶ್ರೀಗಳು ತೆರಳಿದ್ದಾರೆ.

ಇಂದು ಮುಂಜಾನೆ 11.44ಕ್ಕೆ ಶಿವನ ಪಾದ ಸೇರಿದ್ದು, ನಾಳೆ ಸಂಜೆ 4.30ಕ್ಕೆ ಶ್ರೀಗಳ ಅಂತಿಮ ಕ್ರಿಯಾಧಾನಗಳು ನಡೆಯಲಿವೆ.

ನಿನ್ನೆಯಿಂದ ಶ್ರೀಗಳ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಸಾವಿರಾರು ಭಕ್ತರು ತಂಡೋಪತಂಡವಾಗಿ ಮಠದತ್ತ ಧಾವಿಸಿ, ಕಿಟಕಿಯ ಮೂಲಕವೇ ಶ್ರೀಗಳ ದರ್ಶನ ಪಡೆಯುತ್ತಿದ್ದರು. ಇಂದು ನಸುನಿಕಿನಲ್ಲಿ ಶ್ರೀಗಳ ಆರೋಗ್ಯ ತೀವ್ರವಾಗಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿ ನಡೆಯುತ್ತಿದ್ದ ದೈನಂದಿನ ಮುಂಜಾನೆಯ ಪ್ರಾರ್ಥನೆಯನ್ನು ರದ್ದುಗೊಳಿಸಲಾಗಿತ್ತು.

ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ವಿಶೇಷ ಚಿಕಿತ್ಸೆಗಾಗಿ 15 ದಿನಗಳ ಹಿಂದೆ ಚೆನ್ನೈಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಒಂದು ವಾರದಿಂದ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿ ಹಗಲು ರಾತ್ರಿ ಎನ್ನದೇ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸಿದ್ಧಗಂಗಾ ಶ್ರೀಗಳಿಗೆ ಮೊದಲ ಬಾರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು 2016ರ ಮೇ 16 ರಂದು. ಪಿತ್ತಕೋಶದಲ್ಲಿ ಬ್ಲಾಕ್ ಆಗುತ್ತಿದೆ ಎಂಬ ಶಂಕೆ ಮೇಲೆ ಬೆಂಗಳೂರಿನ ಬಿಜಿಎಸ್  ಆಸ್ಪತ್ರೆಗೆ ಕರೆದೊಯ್ದು ಅಂದು ವಿವಿಧ ಪರೀಕ್ಷೆಗಳನ್ನು ನಡೆಸಲಾಯಿತು. ಆ ವೇಳೆ ಪಿತ್ತಕೋಶದ ನಾಳಗಳಲ್ಲಿ ಸ್ವಲ್ಪ ಮಟ್ಟಿಗೆ ಬ್ಲಾಕ್ ಆಗಿರುವುದು ಪತ್ತೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರನೇತೃತ್ವದಲ್ಲಿ ತಪಾಸಣೆ ನಡೆಸಿ, ಎಆರ್‌ಸಿಪಿ ಮಾಡಿ ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇದು ವರ್ಷಗಳ ಕಾಲ ಸರಿಯಾಗಿಯೇ ಇತ್ತು. ಆದರೆ ಒಂದು ವರ್ಷ ಕಳೆಯುತ್ತಿದ್ದಂತೆ ಆಗಾಗ ಸ್ಟೆಂಟ್ ಗಳು ಬ್ಲಾಕ್ ಆಗಲಾರಂಭಿದ್ದವು.

ಶ್ರೀಗಳಿಗೆ ಪದೇ ಪದೇ ಸ್ಟೆಂಟ್ ಗಳಲ್ಲಿ ಬ್ಲಾಕ್ ಆಗುತ್ತಿದ್ದರಿಂದ ಎಆರ್’ ಸಿಪಿಮಾಡಿ 4 ಮೆಟಲ್ ಮತ್ತು 7 ಪ್ಲಾಸ್ಟಿಕ್ ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು.
ಶ್ರೀಗಳ ಶ್ವಾಸಕೋಶದಲ್ಲಿ ಪದೇ ಪದೇ ಸೋಂಕು ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಅದಕ್ಕೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ತೀರ್ಮಾನಿಸಿ, ಅದರಂತೆ ಮಠದ ಕಿರಿಯ ಶ್ರೀ, ಹಿರಿಯ ವಿದ್ಯಾರ್ಥಿಗಳು ಹಾಗೂ ವೈದ್ಯರು ಚರ್ಚೆ ನಡೆಸಿ ಚೆನ್ನೈ ನಲ್ಲಿರುವ ರೆಲಾ ಆಸ್ಪತ್ರೆಗೆ ಕರೆದೊಯ್ಯುವ ನಿರ್ಧಾರ ಕೈಗೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಡಿ.6 ರಂದು ಶ್ರೀಗಳಿಗೆ ಆ ವರೆಗೆ ನೀಡಿದ್ದ ಎಲ್ಲಾ ವೈದ್ಯಕೀಯ ಚಿಕಿತ್ಸೆಯ ದಾಖಲೆಗಳೊಂದಿಗೆ ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಚೆನ್ನೈಗೆ ಪ್ರಯಾಣ ಬೆಳೆಸಿದ್ದರು. ಚೆನ್ನೈನ ರೆಲಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಮಹಮ್ಮದ್ ರೆಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಡಾ.ಮಹಮ್ಮದ್ ರೆಲಾ ಅವರ ಸಲಹೆಯಂತೆ ಡಿ.7 ರಂದು ಸಿದ್ಧಗಂಗಾ ಶ್ರೀಗಳನ್ನು ವಿಶೇಷ ಏರ್ ಅಂಬುಲೆನ್ಸ್ ನಲ್ಲಿ ಚೆನ್ನೈನ ರೆಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಡಿ.8 ರಂದು ಡಾ.ಮಹಮ್ಮದ್ ರೆಲಾ ನೇತೃತ್ವದಲ್ಲಿ ಶ್ರೀಗಳಿಗೆ ಯಶಸ್ವಿ ಬೈ ಪಾಸ್ ಸರ್ಜರಿ ಮಾಡಲಾಯಿತು. ಶಸ್ತ್ರಚಿಕಿತ್ಸೆ ಬಳಿಕ ಕೇವಲ ಎರಡ್ಮೂರು ಗಂಟೆಗಳ ಒಳಗಾಗಿ ಶ್ರೀಗಳು ಅನಸ್ತೆಶಿಯಾದಿಂದ ಚೇತರಿಸಿಕೊಂಡಿದ್ದರು. ಇದನ್ನು ವೈದ್ಯಕೀಯ ಲೋಕದ ಪವಾಡ ಎಂದು ವೈದ್ಯರು ಬಣ್ಣಿಸಿದ್ದರು.

ಎರಡ್ಮೂರು ದಿನಗಳಲ್ಲಿ ಶಸ್ತ್ರಚಿಕಿತ್ಸೆಯಿಂದಲೂ ಶ್ರೀಗಳು ಚೇತರಿಸಿಕೊಂಡಿದ್ದರು.

ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆಯಲ್ಲಿ ಶ್ರೀಗಳು ಲವಲವಿಕೆಯಿಂದ ಇದ್ದದ್ದರಿಂದ ಅವರ ಇಚ್ಛೆಯಂತೆ ಡಿ.9 ರಂದು ಆಸ್ಪತ್ರೆಯಿಂದ ಮಠಕ್ಕೆ ಕರೆಯಲಾಗಿತ್ತು.
ಕೆಲವೇ ದಿನಗಳಲ್ಲಿ ಪುನಃ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಶ್ರೀಗಳ ಮನವೊಲಿಸಿ ಅವರನ್ನು 2019ರ ಜ.3 ರಂದು ನಗರದ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಯಿತು. ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಹಾಗೂ ಮಠದಲ್ಲೇ ಚಿಕಿತ್ಸೆ ನೀಡುವಂತೆ ಶ್ರೀಗಳು ಇಚ್ಛೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ 13 ದಿನಗಳ ಬಳಿಕ ಜ.16ರ ಬೆಳಗ್ಗಿನ ಜಾವ 3.50 ರ ಸಮಯದಲ್ಲಿ ಶ್ರೀಗಳನ್ನು ಮಠಕ್ಕೆ ಕರೆತಂದು, ಮಠದಲ್ಲಿಯೇ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ, ಎಲ್ಲ ಪ್ರಯತ್ನಗಳು ವಿಫಲವಾಗಿದ್ದು, ಕೋಟ್ಯಂತರ ಭಕ್ತರ ಹೋಮ ಹವನ, ಪೂಜೆ, ಪ್ರಾರ್ಥನೆಗಳು ಫಲ ನೀಡದೇ ಶಿವಕುಮಾರ ಸ್ವಾಮಿಗಳು ರಾಜ್ಯದ ಸನಾತನ ಪರಂಪರೆಯನ್ನು ಅನಾಥವನ್ನಾಗಿಸಿ, ಶಿವನಲ್ಲಿ ಐಕ್ಯರಾಗಿದ್ದಾರೆ.

ಶ್ರೀಮಠದಲ್ಲಿ ಬಿಗಿ ಪೊಲೀಸ್ ಭದ್ರತೆ
ಸಿದ್ದಗಂಗಾಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ ಸಹ ಭಕ್ತರು ಭಕ್ತರು ಹಾಗೂ ನೂರಾರು ಗಣ್ಯರು ಮಠಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ರಾಷ್ಟಿಯ ಹೆದ್ದಾರಿ 4 ಹಾಗೂ ಮಠದ ಸುತ್ತಮುತ್ತಲು ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಕಡೆಗಳಿಂದ ಸಾವಿರಾರು ಪೊಲೀಸ್ನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಸ್ವತಃ ಡಿಜಿ, ಐಜಿ ಇಂದು ನಸುಕಿನಿಂದಲೇ ಮಠದಲ್ಲಿ ಮೊಕ್ಕಾಂ ಹೂಡಿ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದು, ಡಿಜಿಪಿಗಳನ್ನು ಹಾಗೂ ಹಲವು ಜಿಲ್ಲೆಗಳ ವರಿಷ್ಠಾಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ವಿವಿಐಪಿಗಳ ಆಗಮನದ ಹಿನ್ನೆಲೆಯಲ್ಲಿ ಮಠದ ಬಳಿಯಲ್ಲಿ ಏಕಕಾಲಕ್ಕೆ ಸುಮಾರು 11 ಹೆಲಿಕಾಪ್ಟರ್ ಗಳನ್ನು ಇಳಿಸುವಷ್ಟು ಹೆಲಿಪ್ಯಾಡ್ ಗಳನ್ನು ನಿರ್ಮಾಣ ಮಾಡಲಾಗಿದೆ.

Tags: DiedDistrict NewsDr. Shivakumar SwamijiPolice SecuritySiddaganga MuttSiddaganga SwamijiSiddaganga Swamiji DeathTumkurಕ್ಯಾತ್ಸಂದ್ರಡಾ. ಶಿವಕುಮಾರ ಶ್ರೀತುಮಕೂರುತ್ರಿವಿಧ ದಾಸೋಹಿಸಿದ್ಧಗಂಗಾ ಮಠ
Previous Post

ಸರ್ಕಾರಿ ನೌಕರರು ಕೆಲಸಲ್ಲಿ ಶ್ರೇಷ್ಠತೆ ಹೊಂದಬೇಕು: ಬಿ.ಎಸ್. ಪಾಟೀಲ್

Next Post

ನಾಳೆ ಸರ್ಕಾರಿ ರಜೆ ಘೋಷಣೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನಾಳೆ ಸರ್ಕಾರಿ ರಜೆ ಘೋಷಣೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!