No Result
View All Result
SWR to run special trains for Good Friday, Easter rush
English Articles

Regulation, Diversion and Rescheduling of Trains in the Solapur–Wadi Section

by ಕಲ್ಪ ನ್ಯೂಸ್
June 1, 2026
0

Kalpa Media House  |  Hubballi  | Due to technical works being carried out in the Solapur–Wadi section, temporary regulation, diversion...

Read moreDetails
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ

Hennur Sparsh Hospital Completes One Year | A Reflection of Multispecialty Care

May 25, 2026
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
  • Advertise With Us
  • Grievances
  • About Us
  • Contact Us
Tuesday, June 2, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮಾನವೀಯತೆಯ ಮೇರುಪರ್ವತ, ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಅಸ್ತಂಗತ

ಫಲಿಸಲಿಲ್ಲ ಕೋಟ್ಯಂತರ ಭಕ್ತರ ಪ್ರಾರ್ಥನೆ, ಕಳಚಿತ ಸನಾತನ ಧರ್ಮದ ಮೇರು ಕೊಂಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 21, 2019
in ರಾಷ್ಟ್ರೀಯ
0
ಮಾನವೀಯತೆಯ ಮೇರುಪರ್ವತ, ತ್ರಿವಿಧ ದಾಸೋಹಿ ಸಿದ್ಧಗಂಗಾ ಶ್ರೀ ಅಸ್ತಂಗತ
Share on FacebookShare on TwitterShare on WhatsApp

ಕ್ಯಾತ್ಸಂದ್ರ: ಭಾರತೀಯ ಸನಾತನ ಪರಂಪರೆಯ ಯುಗ ಸಂತ, ತ್ರಿವಿಧ ದಾಸೋಹಿ ಸಿದ್ದಗಂಗಾ ಮಠದ ಹಿರಿಯ ಸ್ವಾಮಿಗಳಾದ ಡಾ. ಶಿವಕುಮಾರ ಶ್ರೀಗಳು ಇಂದು ಅಸ್ತಂಗತರಾಗಿದ್ದಾರೆ.

ಶತಮಾನ ಕಂಡ 111 ವರ್ಷದ ಶತಾಯುಷಿ ಸಿದ್ದಗಂಗಾ ಶ್ರೀಗಳು ವಯೋಸಹಜವಾದ ಅಸ್ವಸ್ತತೆಯಿಂದ ಬಳಲುತ್ತಿದ್ದ ಅವರು, ಇಂದು ನಸುಕಿನಲ್ಲಿ ತಮ್ಮ ಇಹದ ಕರ್ತವ್ಯವನ್ನು ಮುಗಿಸಿ ಶಿವನ ಪಾದದಲ್ಲಿ ಲೀನವಾಗಿದ್ದಾರೆ. ಈ ಮೂಲಕ ಶ್ರೀಮಠದ ಸಾವಿರಾರು ಮಕ್ಕಳನ್ನು, ಕೋಟ್ಯಾಂತರ ಭಕ್ತರನ್ನು ಅನಾಥವನ್ನಾಗಿಸಿ ಶ್ರೀಗಳು ತೆರಳಿದ್ದಾರೆ.

ಇಂದು ಮುಂಜಾನೆ 11.44ಕ್ಕೆ ಶಿವನ ಪಾದ ಸೇರಿದ್ದು, ನಾಳೆ ಸಂಜೆ 4.30ಕ್ಕೆ ಶ್ರೀಗಳ ಅಂತಿಮ ಕ್ರಿಯಾಧಾನಗಳು ನಡೆಯಲಿವೆ.

ನಿನ್ನೆಯಿಂದ ಶ್ರೀಗಳ ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡ ಹಿನ್ನೆಲೆಯಲ್ಲಿ ಆತಂಕದ ವಾತಾವರಣ ಸೃಷ್ಠಿಯಾಗಿತ್ತು. ಸಾವಿರಾರು ಭಕ್ತರು ತಂಡೋಪತಂಡವಾಗಿ ಮಠದತ್ತ ಧಾವಿಸಿ, ಕಿಟಕಿಯ ಮೂಲಕವೇ ಶ್ರೀಗಳ ದರ್ಶನ ಪಡೆಯುತ್ತಿದ್ದರು. ಇಂದು ನಸುನಿಕಿನಲ್ಲಿ ಶ್ರೀಗಳ ಆರೋಗ್ಯ ತೀವ್ರವಾಗಿ ಏರುಪೇರಾದ ಹಿನ್ನೆಲೆಯಲ್ಲಿ ಮಠದಲ್ಲಿ ನಡೆಯುತ್ತಿದ್ದ ದೈನಂದಿನ ಮುಂಜಾನೆಯ ಪ್ರಾರ್ಥನೆಯನ್ನು ರದ್ದುಗೊಳಿಸಲಾಗಿತ್ತು.

ಹಲವು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳಿಗೆ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು. ವಿಶೇಷ ಚಿಕಿತ್ಸೆಗಾಗಿ 15 ದಿನಗಳ ಹಿಂದೆ ಚೆನ್ನೈಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗುತ್ತಿತ್ತು. ಕಳೆದ ಒಂದು ವಾರದಿಂದ ಸಿದ್ದಗಂಗಾ ಮಠದ ಆಸ್ಪತ್ರೆಯಲ್ಲಿ ಹಗಲು ರಾತ್ರಿ ಎನ್ನದೇ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸಿದ್ಧಗಂಗಾ ಶ್ರೀಗಳಿಗೆ ಮೊದಲ ಬಾರಿಗೆ ಅನಾರೋಗ್ಯ ಕಾಣಿಸಿಕೊಂಡಿದ್ದು 2016ರ ಮೇ 16 ರಂದು. ಪಿತ್ತಕೋಶದಲ್ಲಿ ಬ್ಲಾಕ್ ಆಗುತ್ತಿದೆ ಎಂಬ ಶಂಕೆ ಮೇಲೆ ಬೆಂಗಳೂರಿನ ಬಿಜಿಎಸ್  ಆಸ್ಪತ್ರೆಗೆ ಕರೆದೊಯ್ದು ಅಂದು ವಿವಿಧ ಪರೀಕ್ಷೆಗಳನ್ನು ನಡೆಸಲಾಯಿತು. ಆ ವೇಳೆ ಪಿತ್ತಕೋಶದ ನಾಳಗಳಲ್ಲಿ ಸ್ವಲ್ಪ ಮಟ್ಟಿಗೆ ಬ್ಲಾಕ್ ಆಗಿರುವುದು ಪತ್ತೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಬಿಜಿಎಸ್ ಆಸ್ಪತ್ರೆ ವೈದ್ಯ ಡಾ.ರವೀಂದ್ರ ಅವರನೇತೃತ್ವದಲ್ಲಿ ತಪಾಸಣೆ ನಡೆಸಿ, ಎಆರ್‌ಸಿಪಿ ಮಾಡಿ ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು. ಇದು ವರ್ಷಗಳ ಕಾಲ ಸರಿಯಾಗಿಯೇ ಇತ್ತು. ಆದರೆ ಒಂದು ವರ್ಷ ಕಳೆಯುತ್ತಿದ್ದಂತೆ ಆಗಾಗ ಸ್ಟೆಂಟ್ ಗಳು ಬ್ಲಾಕ್ ಆಗಲಾರಂಭಿದ್ದವು.

ಶ್ರೀಗಳಿಗೆ ಪದೇ ಪದೇ ಸ್ಟೆಂಟ್ ಗಳಲ್ಲಿ ಬ್ಲಾಕ್ ಆಗುತ್ತಿದ್ದರಿಂದ ಎಆರ್’ ಸಿಪಿಮಾಡಿ 4 ಮೆಟಲ್ ಮತ್ತು 7 ಪ್ಲಾಸ್ಟಿಕ್ ಸ್ಟೆಂಟ್ ಗಳನ್ನು ಅಳವಡಿಸಲಾಗಿತ್ತು.
ಶ್ರೀಗಳ ಶ್ವಾಸಕೋಶದಲ್ಲಿ ಪದೇ ಪದೇ ಸೋಂಕು ಕಾಣಿಸಿಕೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ಅದಕ್ಕೊಂದು ಶಾಶ್ವತವಾದ ಪರಿಹಾರ ಕಂಡುಕೊಳ್ಳಲು ತೀರ್ಮಾನಿಸಿ, ಅದರಂತೆ ಮಠದ ಕಿರಿಯ ಶ್ರೀ, ಹಿರಿಯ ವಿದ್ಯಾರ್ಥಿಗಳು ಹಾಗೂ ವೈದ್ಯರು ಚರ್ಚೆ ನಡೆಸಿ ಚೆನ್ನೈ ನಲ್ಲಿರುವ ರೆಲಾ ಆಸ್ಪತ್ರೆಗೆ ಕರೆದೊಯ್ಯುವ ನಿರ್ಧಾರ ಕೈಗೊಳ್ಳಲಾಗಿತ್ತು.

ಈ ಹಿನ್ನೆಲೆಯಲ್ಲಿ ಡಿ.6 ರಂದು ಶ್ರೀಗಳಿಗೆ ಆ ವರೆಗೆ ನೀಡಿದ್ದ ಎಲ್ಲಾ ವೈದ್ಯಕೀಯ ಚಿಕಿತ್ಸೆಯ ದಾಖಲೆಗಳೊಂದಿಗೆ ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಚೆನ್ನೈಗೆ ಪ್ರಯಾಣ ಬೆಳೆಸಿದ್ದರು. ಚೆನ್ನೈನ ರೆಲಾ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಮಹಮ್ಮದ್ ರೆಲಾ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದರು.
ಡಾ.ಮಹಮ್ಮದ್ ರೆಲಾ ಅವರ ಸಲಹೆಯಂತೆ ಡಿ.7 ರಂದು ಸಿದ್ಧಗಂಗಾ ಶ್ರೀಗಳನ್ನು ವಿಶೇಷ ಏರ್ ಅಂಬುಲೆನ್ಸ್ ನಲ್ಲಿ ಚೆನ್ನೈನ ರೆಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಡಿ.8 ರಂದು ಡಾ.ಮಹಮ್ಮದ್ ರೆಲಾ ನೇತೃತ್ವದಲ್ಲಿ ಶ್ರೀಗಳಿಗೆ ಯಶಸ್ವಿ ಬೈ ಪಾಸ್ ಸರ್ಜರಿ ಮಾಡಲಾಯಿತು. ಶಸ್ತ್ರಚಿಕಿತ್ಸೆ ಬಳಿಕ ಕೇವಲ ಎರಡ್ಮೂರು ಗಂಟೆಗಳ ಒಳಗಾಗಿ ಶ್ರೀಗಳು ಅನಸ್ತೆಶಿಯಾದಿಂದ ಚೇತರಿಸಿಕೊಂಡಿದ್ದರು. ಇದನ್ನು ವೈದ್ಯಕೀಯ ಲೋಕದ ಪವಾಡ ಎಂದು ವೈದ್ಯರು ಬಣ್ಣಿಸಿದ್ದರು.

ಎರಡ್ಮೂರು ದಿನಗಳಲ್ಲಿ ಶಸ್ತ್ರಚಿಕಿತ್ಸೆಯಿಂದಲೂ ಶ್ರೀಗಳು ಚೇತರಿಸಿಕೊಂಡಿದ್ದರು.

ಶಸ್ತ್ರ ಚಿಕಿತ್ಸೆ ಬಳಿಕ ಆಸ್ಪತ್ರೆಯಲ್ಲಿ ಶ್ರೀಗಳು ಲವಲವಿಕೆಯಿಂದ ಇದ್ದದ್ದರಿಂದ ಅವರ ಇಚ್ಛೆಯಂತೆ ಡಿ.9 ರಂದು ಆಸ್ಪತ್ರೆಯಿಂದ ಮಠಕ್ಕೆ ಕರೆಯಲಾಗಿತ್ತು.
ಕೆಲವೇ ದಿನಗಳಲ್ಲಿ ಪುನಃ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಶ್ರೀಗಳ ಮನವೊಲಿಸಿ ಅವರನ್ನು 2019ರ ಜ.3 ರಂದು ನಗರದ ಸಿದ್ಧಗಂಗಾ ಆಸ್ಪತ್ರೆಗೆ ದಾಖಲಿಸಲಾಯಿತು. ಸೋಂಕು ಕಡಿಮೆಯಾದ ಹಿನ್ನೆಲೆಯಲ್ಲಿ ಹಾಗೂ ಮಠದಲ್ಲೇ ಚಿಕಿತ್ಸೆ ನೀಡುವಂತೆ ಶ್ರೀಗಳು ಇಚ್ಛೆ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ 13 ದಿನಗಳ ಬಳಿಕ ಜ.16ರ ಬೆಳಗ್ಗಿನ ಜಾವ 3.50 ರ ಸಮಯದಲ್ಲಿ ಶ್ರೀಗಳನ್ನು ಮಠಕ್ಕೆ ಕರೆತಂದು, ಮಠದಲ್ಲಿಯೇ ನಿರಂತರವಾಗಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ, ಎಲ್ಲ ಪ್ರಯತ್ನಗಳು ವಿಫಲವಾಗಿದ್ದು, ಕೋಟ್ಯಂತರ ಭಕ್ತರ ಹೋಮ ಹವನ, ಪೂಜೆ, ಪ್ರಾರ್ಥನೆಗಳು ಫಲ ನೀಡದೇ ಶಿವಕುಮಾರ ಸ್ವಾಮಿಗಳು ರಾಜ್ಯದ ಸನಾತನ ಪರಂಪರೆಯನ್ನು ಅನಾಥವನ್ನಾಗಿಸಿ, ಶಿವನಲ್ಲಿ ಐಕ್ಯರಾಗಿದ್ದಾರೆ.

ಶ್ರೀಮಠದಲ್ಲಿ ಬಿಗಿ ಪೊಲೀಸ್ ಭದ್ರತೆ
ಸಿದ್ದಗಂಗಾಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆಯಲ್ಲಿ ಅವರ ಅಂತಿಮ ದರ್ಶನ ಪಡೆಯಲು ರಾಜ್ಯ ಸೇರಿದಂತೆ ಹೊರ ರಾಜ್ಯಗಳಿಂದಲೂ ಸಹ ಭಕ್ತರು ಭಕ್ತರು ಹಾಗೂ ನೂರಾರು ಗಣ್ಯರು ಮಠಕ್ಕೆ ಆಗಮಿಸುವ ಹಿನ್ನೆಲೆಯಲ್ಲಿ ರಾಷ್ಟಿಯ ಹೆದ್ದಾರಿ 4 ಹಾಗೂ ಮಠದ ಸುತ್ತಮುತ್ತಲು ಭಾರೀ ಭದ್ರತೆಯನ್ನು ಒದಗಿಸಲಾಗಿದೆ. ಶಿವಮೊಗ್ಗ, ದಾವಣಗೆರೆ, ಬೆಂಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ ಸೇರಿದಂತೆ ಹಲವು ಕಡೆಗಳಿಂದ ಸಾವಿರಾರು ಪೊಲೀಸ್ನ್ನು ಭದ್ರತೆಗೆ ನಿಯೋಜನೆ ಮಾಡಲಾಗಿದೆ.

ಸ್ವತಃ ಡಿಜಿ, ಐಜಿ ಇಂದು ನಸುಕಿನಿಂದಲೇ ಮಠದಲ್ಲಿ ಮೊಕ್ಕಾಂ ಹೂಡಿ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದು, ಡಿಜಿಪಿಗಳನ್ನು ಹಾಗೂ ಹಲವು ಜಿಲ್ಲೆಗಳ ವರಿಷ್ಠಾಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ವಿವಿಐಪಿಗಳ ಆಗಮನದ ಹಿನ್ನೆಲೆಯಲ್ಲಿ ಮಠದ ಬಳಿಯಲ್ಲಿ ಏಕಕಾಲಕ್ಕೆ ಸುಮಾರು 11 ಹೆಲಿಕಾಪ್ಟರ್ ಗಳನ್ನು ಇಳಿಸುವಷ್ಟು ಹೆಲಿಪ್ಯಾಡ್ ಗಳನ್ನು ನಿರ್ಮಾಣ ಮಾಡಲಾಗಿದೆ.

Tags: DiedDistrict NewsDr. Shivakumar SwamijiPolice SecuritySiddaganga MuttSiddaganga SwamijiSiddaganga Swamiji DeathTumkurಕ್ಯಾತ್ಸಂದ್ರಡಾ. ಶಿವಕುಮಾರ ಶ್ರೀತುಮಕೂರುತ್ರಿವಿಧ ದಾಸೋಹಿಸಿದ್ಧಗಂಗಾ ಮಠ
Share196Tweet123Send
Previous Post

ಸರ್ಕಾರಿ ನೌಕರರು ಕೆಲಸಲ್ಲಿ ಶ್ರೇಷ್ಠತೆ ಹೊಂದಬೇಕು: ಬಿ.ಎಸ್. ಪಾಟೀಲ್

Next Post

ನಾಳೆ ಸರ್ಕಾರಿ ರಜೆ ಘೋಷಣೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ನಾಳೆ ಸರ್ಕಾರಿ ರಜೆ ಘೋಷಣೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

ನಾಳೆ ಸರ್ಕಾರಿ ರಜೆ ಘೋಷಣೆ, ಮೂರು ದಿನ ರಾಜ್ಯದಲ್ಲಿ ಶೋಕಾಚರಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

ಯಶ್ ಫ್ಯಾನ್ಸ್ ಅಸೋಸಿಯೆಷನ್ ಅಧ್ಯಕ್ಷ ಸುನಿಲ್ ಆರೋಗ್ಯ ವಿಚಾರಿಸಿದ ರಾಕಿಂಗ್ ಸ್ಟಾರ್

June 2, 2026
ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

ಶಿವಮೊಗ್ಗ | ನೂತನ ಸಿಎಂ ಪದಗ್ರಹಣ ಸಮಾರಂಭ | ನೇರಪ್ರಸಾರಕ್ಕೆ ಬೃಹತ್ ಎಲ್ಇಡಿ ವ್ಯವಸ್ಥೆ

June 2, 2026
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್‌ನಲ್ಲಿ ಕಾರ್ಮಿಕರ ವಯೋನಿವೃತ್ತಿ ಸಮಾರಂಭ

June 2, 2026
ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

ಭಜನೆಯಿಂದ ಭಾವೈಕ್ಯತೆ | ಕೆಂಗೇರಿ ರಾಯರ ಮಠದಲ್ಲಿ ಭಜನಾ ಕಾರ್ಯಕ್ರಮ ಸಂಪನ್ನ

June 2, 2026
ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

ಸಾಮೂಹಿಕ ಶ್ರೀ ವೆಂಕಟೇಶ್ವರ ಕರಾವಲಂಬ ಸ್ತೋತ್ರ ಪಾರಾಯಣ ಸಂಪನ್ನ

June 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL