No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ದೇಶದಲ್ಲೇ ವಿನೂತನ ಯೋಜನೆ: ಬ್ಯಾಗ್’ನಲ್ಲಿ ಸಿಗಲಿದೆ ಮರಳು, ಪ್ರಾಯೋಗಿಕವಾಗಿ 5 ಕಡೆ ಘಟಕ ಆರಂಭ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 1, 2021
in ರಾಷ್ಟ್ರೀಯ
0
ದೇಶದಲ್ಲೇ ವಿನೂತನ ಯೋಜನೆ: ಬ್ಯಾಗ್’ನಲ್ಲಿ ಸಿಗಲಿದೆ ಮರಳು, ಪ್ರಾಯೋಗಿಕವಾಗಿ 5 ಕಡೆ ಘಟಕ ಆರಂಭ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಅನುಕೂಲವಾಗಲು ಇನ್ನು ಮುಂದೆ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ.

ಬ್ಯಾಗ್ ಗಳಲ್ಲಿ ಮಾರಾಟ ಮಾಡುವ ಉದ್ದೇಶವೇನೆಂದರೆ ಸರಕಾರದ ವತಿಯಿಂದಲೇ ಕೈಗೆಟುಕವ ದರದಲ್ಲಿ ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು ಇದರ ಪ್ರಸ್ತಾವನೆಯು ಸಹಾ ಸಿದ್ದವಾಗಿದೆ. ಇದರಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗದಲ್ಲಿ ಮರಳು ಲಭ್ಯವಾಗಲಿದೆ.
ಬುಧವಾರ ವಿಕಾಸಸೌಧದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಕಲ್ಲು ಗಣಿಗಾರಿಕೆ ಮರಳು ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮದ್ಯವನ್ನು ಯಾವ ರೀತಿ ಕರ್ನಾಟಕ ರಾಜ್ಯ ಪಾನೀಯ ನಿಗಮದ ಮೂಲಕ
ಮಾರಾಟ ಮಾಡುತ್ತಿದಿಯೋ ಅದೇ ಮಾದರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ತನ್ನದೇಯಾದ ಸಂಸ್ಥೆಯ ಮೂಲಕ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡಲು ಉದ್ದೇಶಿಸಿದೆ ಎಂದು ಪ್ರಕಟಿಸಿದರು.

ಮರಳು ಸಾಗಾಣಿಕೆ ಮಾಡುವ ವೇಳೆ ಕನಿಷ್ಟ ಶೇ.25 ರಿಂದ 30ರಷ್ಟು ಮರಳು ಅನುಪಯುಕ್ತವಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ 50 ಕೆಜಿಯ ಬ್ಯಾಗ್, 1 ಟನ್ ಹಾಗೂ ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರು ಮರಳನ್ನು ಖರೀದಿಸಬಹುದು ಎಂದು ಹೇಳಿದರು.
ಪ್ರಾಯೋಗಿಕವಾಗಿ ರಾಜ್ಯದ ಐದು ಕಡೆ ಈ ಘಟಕಗಳನ್ನು ಪ್ರಾರಂಭ ಮಾಡಲಾಗುವುದು. ಮರಳು ಮಾರಾಟ ಮಾಡಲು ಬ್ಯಾಗ್‍ಗಳನ್ನು ಸಿದ್ಧಪಡಿಸುವುದು, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ತರಬೇತಿಯನ್ನು ಸಂಬಂಧಪಟ್ಟವರಿಗೆ ನೀಡಲಿದ್ದೇವೆ ಎಂದು ತಿಳಿಸಿದರು.

ಬ್ಯಾಗ್ ಮೂಲಕ ಮಾರಾಟ ಮಾಡುವಾಗ ಎ, ಬಿ ಮತ್ತು ಸಿ ಶ್ರೇಣಿ ಎಂದು ವರ್ಗೀಕರಣ ಮಾಡುತ್ತೇವೆ. ಮೊದಲು ಸ್ಟಾಕ್ ಯಾರ್ಡ್‍ಗಳಲ್ಲಿ ಪ್ರತ್ಯೇಕಗೊಳಿಸಿ ನಂತರ ಅದನ್ನು ಕೈಗೆಟಕುವ ದರದಲ್ಲಿ ವಿತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಮರಳುಗಾರಿಕೆಯನ್ನು ಕೇವಲ ಆರು ತಿಂಗಳು ಮಾತ್ರ ನಡೆಸಬಹುದು. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಅವಕಾಶವಿರುವುದಿಲ್ಲ. ಬ್ಯಾಗ್‍ಗಳಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡರೆ, ವರ್ಷ ಪೂರ್ತಿ ಬಳಕೆ ಮಾಡಬಹುದು ಎಂದು ಸಲಹೆ ಮಾಡಿದರು.

ಬ್ಯಾಗ್ ಗಳಲ್ಲಿ ಮರಳು ಸಂಗ್ರಹಣೆಯಾದರೆ ಸಾರ್ವಜನಿಕರಿಗೆ ಗುಣಮಟ್ಟದ ಮರಳು ಸಿಗಲಿದೆ. ತಮ್ಮ ವಾಹನಗಳಲ್ಲಿ ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು.ಇದರಿಂದ ಸಾಗಾಣಿಕೆ ವೆಚ್ಚವು ಕಡಿಮೆಯಾಗಲಿದೆ ಎಂದರು.
ವರ್ಷಪೂರ್ತಿ ಮರಳು ಸಿಗದ ಕಾರಣ ಮಾರುಕಟ್ಟೆಯಲ್ಲಿ ಮರಳಿನ ದರವು ದುಪ್ಪಟ್ಟಾಗುತ್ತಿತ್ತು. ಈಗ ಇಂತಹುದನ್ನು ತಪ್ಪಿಸಲು ಈ ಮಾರ್ಗೋಪಾಯ ಕಂಡುಕೊಳ್ಳಲಾಗಿದೆ ಎಂದು ಹೇಳಿದರು. ಬ್ಯಾಗ್‍ಗಳಲ್ಲಿ ಮರಳನ್ನು ಸಂಗ್ರಹಿಸಿಟ್ಟರೆ ಯಾವಾಗ ಬೇಕಾದರೂ ವಿತರಣೆ ಮಾಡಬಹುದು. ಇದಕ್ಕೆ ದರ ಕಡಿಮೆ ಇರುತ್ತದೆ. ಇದಕ್ಕೆ 50 ರೂ. ಖರ್ಚಾಗಬಹುದು ಎಂದರು.

5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿಯ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ. ಬಡವರು, ಬಡತನ ರೇಖೆಗಿಂತ ಕೆಳಗಿನವರು ಗ್ರಾಪಂ ಮಟ್ಟದಲ್ಲಿ ಆಶ್ರಯ ಮನೆ ಕಲ್ಪಿಸಿಕೊಳ್ಳುವವರಿಗೆ ಉಚಿತ ಮರಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಉಪಸಂರಕ್ಷಣಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಮುರುಗೇಶ್ ನಿರಾಣಿ ಅವರು ತತ್‍ಕ್ಷಣವೇ ನದಿ ಪಾತ್ರಗಳಲ್ಲಿ ಒಂದು, ಎರಡು, ಮೂರನೆ ಶ್ರೇಣಿಯ ಮರಳು ಬ್ಲಾಕ್‍ಗಳನ್ನು ಗುರುತಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟರು.
ಕೆಎಸ್‍ಎಂಸಿಎಲ್, ಎಚ್‍ಜಿಎಂಎಲ್ ವತಿಯಿಂದ ನಾಲ್ಕು, ಐದು ಮತ್ತು ಆರನೆಯ ಶ್ರೇಣಿಯ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮರಳು ಬ್ಲಾಕ್‍ಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಇದು ಏಕೆ ಸಾಧ್ಯವಾಗಿಲ್ಲ. ಕೂಡಲೇ ಬ್ಲಾಕ್ ಗುರುತಿಸುವ ಕಾರ್ಯ ಮಾಡಿ ಎಂದು ಸೂಚಿಸಿದರು.

ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ಹೊಸದಾಗಿ ಟೆಂಡರ್ ಕರೆಯುವುದು ಅಥವಾ ಮರು ಟೆಂಡರ್ ಕರೆದಾದರೂ ಬ್ಲಾಕ್‍ಗಳನ್ನು ಗುರುತಿಸಬೇಕು. ಇಲ್ಲಸಸಲ್ಲದ ಸಬೂಬು ಹೇಳಬೇಡಿ ಎಂದು ನಿರಾಣಿ ತಾಕೀತು ಮಾಡಿದರು.

ಈಗಾಗಲೇ ನೂತನ ಮರಳು ನೀತಿ ಸಿದ್ದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆಸಿ ಅದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ. ಇದು ದೇಶಕ್ಕೆ ಮಾದರಿಯಾದ ನೀತಿ ಇದಾಗಲಿದೆ ಎಂದು ಅಭಿಪ್ರಾಯಪಟ್ಟರು.
ಗಣಿಬಾಧಿತ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜಿಲ್ಲಾ ಅದಿರು ನಿಧಿಯಿಂದ ದೊಡ್ಡ ದೊಡ್ಡ ಯೋಜನೆಗಳನ್ನು ರೂಪಿಸಲು ವಿಸ್ತೃತ ಯೋಜನ ವರದಿ(ಡಿಪಿಆರ್) ಸಿದ್ದಪಡಿಸಲು ಸಚಿವ ನಿರಾಣಿ ಅವರು ಸೂಚಿಸಿದರು. ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಸೇರಿದಂತೆ ಮತ್ತಿತರ ಜೊತೆ ಪ್ರತ್ಯೇಕವಾಗಿ ವಿಡಿಯೋ ಸಂವಾದ ನಡೆಸಿದ ಅವರು, ಕೂಡಲೇ ಡಿಪಿಆರ್ ಸಿದ್ದಪಡಿಸಲು ನಿದೇರ್ಶನ ನೀಡಿದರು. ಈ ಮೂರು ಜಿಲ್ಲೆಗಳಲ್ಲಿ ಡಿಎಂಎಪ್ ನಿಧಿಯಿಂದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೈರ್ಮಲೀಕರಣ, ಸಮುದಾಯ ಭವನ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ಇದೆ.

ಡಿಎಂಎಪ್ ನಿಧಿ ಬಳಕೆ ಮಾಡಿಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಲಾಗುವುದು. ವಿಶೇಷವಾಗಿ ಚಿತ್ರದುರ್ಗ, ಬಳ್ಳಾರಿ, ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಜಾರಿ ಮಾಡುವ ಕುರಿತಾಗಿ ಡಿಪಿಆರ್ ಸಿದ್ದಪಡಿಸಬೇಕೆಂದು ಹೇಳಿದರು. ಇದಕ್ಕೆ ಸಮ್ಮತಿಸಿದ ಮೂರು ಜಿಲ್ಲೆಗಳ ಅಧಿಕಾರಿಗಳು ಅದಷ್ಟು ಶೀಘ್ರ ಇಲಾಖೆಗೆ ವಿಸ್ತೃತ ಯೋಜನ ವರದಿಯನ್ನು ಸಿದ್ದಪಡಿಸುವುದಾಗಿ ಭರವಸೆ ಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUDepartment of Mines and GeologyKannada News WebsiteLatest News KannadaSandಗಣಿ ಮತ್ತು ಭೂವಿಜ್ಞಾನ ಇಲಾಖೆಬೆಂಗಳೂರುಮರಳು
Share222Tweet123Send
Previous Post

ಶಿವಮೊಗ್ಗ: ಯುವ ಕಾಂಗ್ರೆಸ್ ನಿಂದ ಎಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಣೆ

Next Post

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು...!

Leave a Reply Cancel reply

Your email address will not be published. Required fields are marked *

  • Trending
  • Latest
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

ಉದ್ಯೋಗ ಹುಡುಕುವವರಾಗದೆ, ಉದ್ಯೋಗ ಸೃಷ್ಟಿಕರ್ತರಾಗಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್

May 6, 2026
ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

ಕುವೆಂಪು ವಿವಿ | 10 ಬಂಗಾರದ ಪದಕ ಮುಡಿಗೇರಿಸಿಕೊಂಡ ಅಭಿಷೇಕ್ | ಒಟ್ಟು 155 ವಿದ್ಯಾರ್ಥಿಗಳಿಗೆ ಚಿನ್ನದ ಗರಿ

May 6, 2026
ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

ಭಾರತದ ಗುರು ಪರಂಪರೆ ಇಡೀ ಜಗತ್ತಿಗೇ ಮಾದರಿ: ಸುರೇಶ್ ಋಗ್ವೇದಿ

May 6, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಗಮನಿಸಿ! ಬೆಂಗಳೂರು-ಸಿಂಧನೂರು ಡೈಲಿ ಎಕ್ಸ್’ಪ್ರೆಸ್ ರೈಲಿನ ಸಮಯ ಬದಲಾಗಿದೆ

May 6, 2026
ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

ಮುಂಗಾರು ಆರಂಭ ಸಾಧ್ಯತೆ | ತ್ವರಿತ ರಸ್ತೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಭೋಸರಾಜು

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL