No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಯುವ ಯಕ್ಷ ಪ್ರತಿಭೆ ವಿದ್ಯಾ ಕುಂಟಿಕ್ಕಾನ ಮಠ ಸಾಧನೆಗೆ ಕರುನಾಡು ಫಿದಾ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
May 3, 2019
in Special Articles
0
ಯುವ ಯಕ್ಷ ಪ್ರತಿಭೆ ವಿದ್ಯಾ ಕುಂಟಿಕ್ಕಾನ ಮಠ ಸಾಧನೆಗೆ ಕರುನಾಡು ಫಿದಾ
Share on FacebookShare on TwitterShare on WhatsApp

ಯಕ್ಷರಂಗದಲ್ಲಿ ಅರಳುತ್ತಿರುವ ಪ್ರತಿಭೆ ವಿದ್ಯಾ ಕುಂಟಿಕ್ಕಾನ ಮಠ. 300ಕ್ಕೂ ಹೆಚ್ಚು ವೇದಿಕೆಯಲ್ಲಿ ಜನ ಮೆಚ್ಚುವಂತಹ ಯಕ್ಷಗಾನ ಪ್ರದರ್ಶನವನ್ನು ನೀಡಿ, ನೂರಾರು ಬಹುಮಾನಗಳನ್ನೂ ಗಳಿಸಿಕೊಂಡಿರುವ ಪ್ರತಿಭೆ. ಈಕೆ ಕಲಿಕೆಯಲ್ಲೂ ಅತ್ಯುತ್ತಮ ಸಾಧನೆ ಮಾಡಿದ್ದಾರೆ.

ಕಾಸರಗೋಡಿನ ಪೆರಡಾಲ ಗ್ರಾಮದ ಕುಂಟಿಕ್ಕಾನದಲ್ಲಿ ವಾಸವಾಗಿರುವ ಶಂಕರನಾರಾಯಣ ಭಟ್ ಹಾಗೂ ವಿಜಯಲಕ್ಷ್ಮೀ ದಂಪತಿಗಳ ಮುದ್ದಿನ ಮಗಳಾಗಿರುವ ಈಕೆ ಕಾಸರಗೋಡಿನ ಸರಕಾರಿ ಕಾಲೇಜಿನಲ್ಲಿ ಭೂಗರ್ಭಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ತನ್ನ ಪ್ರಾಥಮಿಕ ಶಿಕ್ಷಣವನ್ನು ಕುಂಟಿಕ್ಕಾನ, ನೀರ್ಚಾಲ್ ಹಾಗೂ ಎಡನೀರು ಎಂಬಲ್ಲಿ ಪಡೆದರು.

ಶಂಕರನಾರಾಯಣ ಭಟ್ ಹಾಗೂ ವಿಜಯಲಕ್ಷ್ಮೀ ದಂಪತಿ

ಯಕ್ಷಗಾನದ ಮುಮ್ಮೇಳ ಹಾಗೂ ಹಿಮ್ಮೇಳ ಶಿಕ್ಷಣವನ್ನು ರಂಗಸಿರಿ ಸಾಂಸ್ಕೃತಿಕ ವೇದಿಕೆ ಬದಿಯಡ್ಕ ಎಂಬ ಸಂಸ್ಥೆಯಲ್ಲಿ ಗುರುಗಳಾದ ಬಾಯಾರು ಸೂರ್ಯನಾರಾಯಣ ಪದಕಣ್ಣಾಯರಿಂದ ಕಲಿಯುತ್ತಿದ್ದಾರೆ. ಕಾಲೇಜಿನ ಕಲೋತ್ಸವದ ಯಕ್ಷಗಾನ ಸ್ಪರ್ಧೆಗಳ ಸಂದರ್ಭದಲ್ಲಿ ದಿವಾಣ ಶಿವಶಂಕರ ಭಟ್ಟರ ಮಾರ್ಗದರ್ಶನನ್ನೂ ಪಡೆದಿದ್ದಾರೆ.


9ನೇ ತರಗತಿಯಲ್ಲಿ ಇದ್ದಾಗ ಯಕ್ಷಗಾನ ರಂಗ ಪ್ರವೇಶ ಮಾಡಿದ ವಿದ್ಯಾ, ಈಗಾಗಲೇ ಮಂಗಳೂರು, ಬೆಂಗಳೂರು, ಕೊಯಂಬತ್ತೂರು ಹಾಗೂ ಉತ್ತರ ಕೇರಳದ ಹಲವಾರು ಕಡೆಗಳನ್ನೂ ಸೇರಿ 300ಕ್ಕೂ ಹೆಚ್ಚು ವೇದಿಕೆಯಲ್ಲಿ ಕಲಾಪ್ರದರ್ಶನ ನೀಡಿದ್ದಾಳೆ. ಅವುಗಳಲ್ಲಿ ಹಲವಾರು ಪ್ರಸಂಗ- ಕಥನಕಗಳಿಂದ ಆರಿಸಿದ ಪಾತ್ರಗಳನ್ನು ಅಭಿನಯಿಸುವುದರ ಮೂಲಕ ಪ್ರದರ್ಶಿಸಿದ ಏಕ ವ್ಯಕ್ತಿ ದ್ವಿವ್ಯಕ್ತಿ ಕಾರ್ಯಕ್ರಮಗಳು ಪ್ರೇಕ್ಷಕರ ಮನಗೆದ್ದಿದೆ. ಜೊತೆಗೆ 2019 ಎಪ್ರಿಲ್ 23 ರಂದು ದುರ್ಗಾಪೂಜೆಯ ದಿನದಂದು ಕುಂಟಿಕ್ಕಾನ ಶಂಕರ ನಾರಾಯಣ ದೇವರ ಸನ್ನಿಧಿಯಲ್ಲಿ ಮೊದಲ ಬಾರಿ ಭಾಗವತಿಕೆಯನ್ನು ಮಾಡುವುದರ ಮೂಲಕ ಯಕ್ಷಗಾನದ ಭಾಗವತಿಕೆ ಕ್ಷೇತ್ರಕ್ಕೆ ಪ್ರವೇಶಿಸಿದ್ದಾರೆ.

ಭೂಗರ್ಭಶಾಸ್ತ್ರ ಪದವಿಯಲ್ಲಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ 2ನೆಯ ರಾಂಕ್’ನ್ನು ಪಡೆದಂತಹ ಇವರು ಹವ್ಯಕ ವಿದ್ಯಾರತ್ನ ಪ್ರಶಸ್ತಿ, ಹನುಮಾನ್ ಫ್ರೆಂಡ್ಸ್‌ ಕ್ಲಬ್ ವಾಂತಿಚಾಲು ಇವರ ವತಿಯಿಂದ ಯಕ್ಷ ಯುವಪ್ರತಿಭೆ, ವರುಣ ಕಲಾ ಸಂಸ್ಥೆ ಸವಣೂರು ಇವರ ವತಿಯಿಂದ ಯುವಸಾಧಕಿ ಪ್ರಶಸ್ತಿ, ಪಡೆದು ಸಾಧನೆಯನ್ನು ಮಾಡಿದ್ದಾರೆ.
ವಿದ್ಯಾರವರು ಯಕ್ಷಗಾನದಲ್ಲಿ ಪ್ರಮುಖವಾಗಿ ಕೃಷ್ಣ, ಸತ್ಯಭಾಮ, ಜಾಂಬವಂತ, ಸುದರ್ಶನ, ಸುಧನ್ವ, ದೇವೆಂದ್ರ, ವಿಷ್ಣು, ಮಾಲಿನಿ, ಶಿವ, ಲಕ್ಷ್ಮಣ, ಹು ಹು ಗಂಧರ್ವ, ಹನೂಮಂತ, ರಾಮ, ಮಾಯಾ ಶೂರ್ಪನಖಿ, ಮಾಯಾ ಪೂತನಿ ಎಂಬೀ ಪಾತ್ರಗಳಿಗೆ ತಮ್ಮದೇ ಆದ ಶೈಲಿಯಲ್ಲಿ ಜೀವವನ್ನು ತುಂಬಿದ್ದಾರೆ. ಇವುಗಳ ಪೈಕಿ ಸುದರ್ಶನನ ಪಾತ್ರವು ತನಗೆ ಅಚ್ಚುಮೆಚ್ಚು ಎನ್ನುತ್ತಾರೆ.


ಪ್ರಸ್ತುತ ಮಂಗಳೂರು ಆಕಾಶವಾಣಿಯ ಮಹಿಳಾ ಯಕ್ಷಗಾನ ತಂಡದ ಬಿ ಗ್ರೇಡ್ ಕಲಾವಿದೆ ಮತ್ತು ಹಾಗೂ ಪೆರ್ಲ ನಲಾಂದ ಕಾಲೇಜನಲ್ಲಿ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರ ಸಾಧನೆಗೆ ಹಲವಾರು ಸಂಘ ಸಂಸ್ಥೆಗಳು ಸನ್ಮಾನ ಪುರಸ್ಕಾರಗಳು ನೀಡಿ ಗೌರವಿಸಿದ ಕ್ಷಣಗಳನ್ನೂ, ಪ್ರಚೋದನೆ ನೀಡುವ ರಂಗಸಿರಿ ಸ್ಥಾಪಕರಾದ ಶ್ರೀಶ ಕುಮಾರ ಪಂಜಿತಡ್ಕ, ನಾಟ್ಯಾಭ್ಯಾಸ ಕಲಿಸಿದ ಗುರುಗಳನ್ನೂ, ಪ್ರೋತ್ಸಾಹಿಸುವ ಗೆಳೆಯರನ್ನೂ ಸದಾ ನೆನಪಿಸಿಕೊಳ್ಳುತ್ತಾರೆ.


ತಮ್ಮನಾದ ಶಂಕರನಾರಾಯಣ ಶರ್ಮಾ, ಅಕ್ಕಂದಿರಾದ ವಸುಧ, ವಂದನ, ಹಾಗೂ ಚಿಕ್ಕಪ್ಪ ವೆಂಕಟೇಶ್ವರ ಭಟ್ ಸದಾ ಬೆಂಬಲಿಗರಾಗಿದ್ದಾರೆ.
ಕಲೀತಾ ಕಲೀತಾ ಯಾವುದೇ ವಿದ್ಯೆಯೂ ಕೂಡಾ ನಮ್ಮ ಕೈ ಸೇರಿ ಬಾಳ ಬೆಳಗಲು ಸಾಧ್ಯ ಎಂಬ ಮಾತೊಂದಿದೆ. ಖಂಡಿತವಾಗಿಯೂ ನಂಬಲೇಬೇಕಾದ್ದು. ಏಕೆಂದರೆ ನಾವು ಆಸಕ್ತಿ ವಹಿಸಿ ಪ್ರಯತ್ನಪಟ್ಟು ಕಲಿತ ವಿದ್ಯೆಗಳೇ ಮುಂದೆ ನಮ್ಮನ್ನೊಂದು ಪಥದಲ್ಲಿ ಚಲಿಸುವಂತೆ ಪ್ರೇರೇಪಿಸುವಂತಹವುಗಳು. ಯಕ್ಷಗಾನ ರಂಗದಲ್ಲಿ ತನ್ನ ಇನ್ನಷ್ಟು ಸಾಧನೆಯನ್ನು ಮಾಡುವುದರ ಜೊತೆ ಜೊತೆಗೆ ಇವರು ಕಟ್ಟಿಕೊಂಡಿರುವ ಎಲ್ಲಾ ಕನಸುಗಳು ಆದಷ್ಟು ಬೇಗ ನನಸಾಗಲಿ ಎಂದು ಶುಭ ಹಾರೈಸುತ್ತಿದ್ದೇವೆ.

ಲೇಖನ: ಅಭಿಷೇಕ್ ನಾಯಕ್ ಮಲೆನಾಡು
ಚಿತ್ರಕೃಪೆ/ವೀಡಿಯೋ/ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ

Tags: BhagavathyKannada ArticleSpecial Articleಕಾಸರಗೋಡುಭಾಗವತಿಕೆಮಂಗಳೂರುಮಹಿಳಾ ಯಕ್ಷಗಾನಯಕ್ಷಗಾನಯಕ್ಷರಂಗವಿದ್ಯಾ ಕುಂಟಿಕ್ಕಾನ ಮಠಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ
Share197Tweet123Send
Previous Post

ಗಮನಿಸಿ! ಶಿವಮೊಗ್ಗ-ಬೆಂಗಳೂರು ಇಂಟರ್’ಸಿಟಿ ರೈಲು ಸಂಚಾರ ವೇಳೆ ಬದಲಾಗಿದೆ

Next Post

ಫನಿ ಅಬ್ಬರಕ್ಕೆ ಒಡಿಶಾ ಅಲ್ಲೋಕಕಲ್ಲೋಲ: 1 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಫನಿ ಅಬ್ಬರಕ್ಕೆ ಒಡಿಶಾ ಅಲ್ಲೋಕಕಲ್ಲೋಲ: 1 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ

ಫನಿ ಅಬ್ಬರಕ್ಕೆ ಒಡಿಶಾ ಅಲ್ಲೋಕಕಲ್ಲೋಲ: 1 ಸಾವಿರ ಕೋಟಿ ರೂ. ಪರಿಹಾರ ಘೋಷಿಸಿದ ಮೋದಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

March 23, 2026
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ | ನಾಲ್ವರು ಸ್ಥಳದಲ್ಲೇ ಸಾವು

March 23, 2026
ಬೆವರು ಸುರಿಸಿದವರು ಬೆಚ್ಚಗೆ ಇರಲಿ | ತಂದೆ-ತಾಯಿಯ ತ್ಯಾಗ ಮತ್ತು ಮಕ್ಕಳ ಹೊಣೆ

ಬೆವರು ಸುರಿಸಿದವರು ಬೆಚ್ಚಗೆ ಇರಲಿ | ತಂದೆ-ತಾಯಿಯ ತ್ಯಾಗ ಮತ್ತು ಮಕ್ಕಳ ಹೊಣೆ

March 23, 2026
ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

ಚಾಮರಾಜನಗರ | ನೀರು ಅಮೂಲ್ಯ ಮಾತ್ರವಲ್ಲ, ತ್ಯಾಗದ ಸಂಕೇತ | ಸುರೇಶ್ ಋಗ್ವೇದಿ ಅಭಿಮತ

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL