No Result
View All Result
ಒಂದು ವರ್ಷ ಪೂರ್ಣಗೊಳಿಸಿದ ಹೆಣ್ಣೂರು ಸ್ಪರ್ಶ್ ಆಸ್ಪತ್ರೆ | ಮಲ್ಟಿಸ್ಪೆಷಾಲಿಟಿ ಆರೈಕೆಯ ಪ್ರತಿಬಿಂಬ
English Articles

Hennur Sparsh Hospital Completes One Year | A Reflection of Multispecialty Care

by ಕಲ್ಪ ನ್ಯೂಸ್
May 25, 2026
0

Kalpa Media House  |  Bengaluru  | SPARSH Hospital, Hennur Road has completed one year of operations, with its first-year clinical...

Read moreDetails
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ

Duniya Vijay, Rachita Ram & Raj B. Shetty’s Landlord Premieres This Saturday on Zee Kannada

May 22, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
  • Advertise With Us
  • Grievances
  • About Us
  • Contact Us
Wednesday, May 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ದಕ್ಷಿಣ ಕನ್ನಡ

ಕಾಸರಗೋಡು ಕನ್ನಡತನವೇ ಮೇಳೈಸಿರುವ ಸಪ್ತ ಭಾಷಾ ಸಂಗಮದ ಕನ್ನಡದ ಬೀಡು: ಕೆ.ವಿ. ಪ್ರಭಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 20, 2023
in ದಕ್ಷಿಣ ಕನ್ನಡ
0
ಕಾಸರಗೋಡು ಕನ್ನಡತನವೇ ಮೇಳೈಸಿರುವ ಸಪ್ತ ಭಾಷಾ ಸಂಗಮದ ಕನ್ನಡದ ಬೀಡು: ಕೆ.ವಿ. ಪ್ರಭಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕಾಸರಗೋಡು  |

ಕಾಸರಗೋಡು ಸಪ್ತಭಾಷಾ ಸಂಗಮದ ಕನ್ನಡದ ಬೀಡಾಗಿದೆ. ನಿತ್ಯ ಕನ್ನಡತನವೇ ಮೇಳೈಸಿರುವ, ಕನ್ನಡತನವನ್ನೇ ಆಚರಿಸುತ್ತಿರುವ ಕನ್ನಡದ ಬೀಡು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅಭಿಪ್ರಾಯಪಟ್ಟರು.

ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಹಮ್ಮಿಕೊಂಡಿದ್ದ ಗಡಿನಾಡ ಕನ್ನಡ ರಾಜ್ಯೋತ್ಸವವನ್ನು ಉದ್ಘಾಟಿಸಿದ ಬಳಿಕ ನಾನಾ ಕ್ಷೇತ್ರಗಳ ಸಾಧಕರಿಗೆ ರಾಜ್ಯೋತ್ಸವ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು.
ಕಾಸರಗೋಡು ಗಡಿ ನಾಡು ಆಗಿದ್ದರೂ ಇಲ್ಲಿ ಕನ್ನಡದ ಮನಸ್ಸುಗಳು ಕನ್ನಡತನದ ವಾತಾವರಣವನ್ನು ನಿತ್ಯ ಆಚರಣೆಯಲ್ಲಿ ಇಟ್ಟಿವೆ. ಇವರೆಲ್ಲರೂ ಅಭಿನಂದನಾರ್ಹರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕೊಂಕಣಿ ಮನೆಮಾತಾಗಿದ್ದ ಮಂಜೇಶ್ವರದ ಗೋವಿಂದ ಪೈಗಳು ಕನ್ನಡದ ಮೊದಲ ರಾಷ್ಟ್ರಕವಿಗಳು.

ಬೆಂಕಿ ಬಿದ್ದಿದೆ ಮನೆಗೆ ಓ ಬೇಗ ಬನ್ನಿ’ ಎಂದು ತಮ್ಮ ಕವನದ ಮೂಲಕ ಇಲ್ಲಿನ ಕನ್ನಡ ಸಮುದಾಯವನ್ನು ಎಚ್ಚರಿಸಿದ ಶತಾಯುಷಿ ಕಯ್ಯಾರ ಕಿಞ್ಣಣ್ಣ ರೈ ಅವರ ಮನೆ ಮಾತು ತುಳು. ಇವರು ಕೊನೆಯ ಉಸಿರಿನವರೆಗೂ ನಾನು ಸಾಯುವುದು “ಕರ್ನಾಟಕದಲ್ಲಿ ಕಾಸರಗೋಡು ವಿಲೀನವಾದ ನಂತರ” ಎನ್ನುತ್ತಲೇ ಇದ್ದರು.
ಕಾಸರಗೋಡಿನ ಕನ್ನಡ ಅಧ್ಯಯನ ಪೀಠದ ಮುಖ್ಯಸ್ಥರಾಗಿರುವ ರತ್ನಾಕರ ಬಳ್ಳಮೂಲೆ ಅವರ ಮನೆ ಮಾತು ಮಲಯಾಳ. ಯಕ್ಷಗಾನದ ಪಿತಾಮಹ ಪಾರ್ತಿಸುಬ್ಬ ಕೂಡ ಇಲ್ಲಿಯವರು. ಹೀಗೆ ಬೇರೆ ಬೇರೆ ಭಾಷೆಗಳ ಮನೆಮಾತಾದವರೆಲ್ಲ ಇಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಬದುಕನ್ನು ರೂಪಿಸಿದ್ದಾರೆ ಎಂದು ಕಾಸರಗೋಡಿನ ಕನ್ನಡ ಸಾಂಸ್ಕೃತಿಕ ಚರಿತ್ರೆಯನ್ನು ಸ್ಮರಿಸಿಕೊಂಡರು.

ಕಾಸರಗೋಡು ಕನ್ನಡದ ಬೀಡು, ಇಲ್ಲಿರುವುದು ಕನ್ನಡದ ನೆಲೆ’ ಎನ್ನುವುದು ಇಲ್ಲಿನ ಕನ್ನಡದ ವಾತಾವರಣ ನೋಡಿ ಮನದಟ್ಟಾಗಿದೆ. ಬೆಂಗಳೂರು ಕೇಂದ್ರಿತ ಕನ್ನಡ ಹೋರಾಟಗಾರರ ಅಭಿಪ್ರಾಯ ಭಿನ್ನವಾಗಿರಬಹುದು. ಆದರೆ ನಾನು ಇಲ್ಲಿಗೆ ಬರುವಾಗ ದಾರಿಯುದ್ದಕ್ಕೂ ಕನ್ನಡದ ಫಲಕ ಮತ್ತು ಬ್ಯಾನರ್ ಗಳನ್ನು ನೋಡಿಕೊಂಡೇ ಬಂದೆ. ಇಲ್ಲಿನ ಕನ್ನಡದ ವಾತಾವರಣ ಗಟ್ಟಿಯಾಗಿದೆ ಎಂದರು.

ಈಗ ಈ ನಾಡನ್ನು ಸಪ್ತಭಾಷಾ ಸಂಗಮ ಭೂಮಿ ಎಂದು ಕರೆಯುವ ಮೂಲಕ ಕೇರಳ ಸರ್ಕಾರ ಹಂತಹಂತವಾಗಿ ಕನ್ನಡ ನುಡಿ, ಸಂಸ್ಕೃತಿಗೆ ಮಾರಕ ಆಗುತ್ತಿದೆ ಎನ್ನುವ ಅಸಮಾಧಾನ ಹಲವರಲ್ಲಿದೆ. ಇದು ಸಪ್ತಭಾಷಾ ಸಂಗಮದ ನಾಡು ಎನ್ನುವುದು ನಿಜವೇ. ಆದರೆ, ಇದು ಸಪ್ತ ಭಾಷಾ ಸಂಗಮದ ಕನ್ನಡದ ಬೀಡು” ಎನ್ನುವುದು ಇಲ್ಲಿನ‌ ಕನ್ನಡದ ವಾತಾವರಣ ಋಜು ಮಾಡುತ್ತಿದೆ ಎಂದರು.
ಭಾಷಾ ಅಲ್ಪಸಂಖ್ಯಾತ ಪ್ರದೇಶವೆಂದು ಗುರುತಿಸಲಾದ ಕಾಸರಗೋಡು ಪ್ರದೇಶದಲ್ಲಿ ಕನ್ನಡ ಕಲೆ, ಸಂಸ್ಕೃತಿ ಮತ್ತು ಭಾಷೆಯನ್ನು ಉಳಿಸುವ ನಿಟ್ಟಿನಲ್ಲಿ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊದಲ ಬಾರಿ ಮುಖ್ಯಮಂತ್ರಿಗಳಾಗಿದ್ದಾಗಲೂ ಸಾಕಷ್ಟು ಆಸಕ್ತಿ ವಹಿಸಿದ್ದರು. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರುಗಳಾಗಿದ್ದ ಎಸ್.ಜಿ.ಸಿದ್ದರಾಮಯ್ಯ ಮತ್ತು ಎಲ್.ಹನುಮಂತಯ್ಯ ಅವರು ನಿರಂತರವಾಗಿ ನಾನಾ ಕಾರ್ಯಕ್ರಮಗಳನ್ನು ಇಲ್ಲಿ ಹಮ್ಮಿಕೊಂಡಿದ್ದರು. ಕನ್ನಡ ಕಾವಲು ಸಮಿತಿಯ ಮೊದಲ ಅಧ್ಯಕ್ಷರಾಗಿದ್ದಾಗಿನಿಂದಲೂ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಡಿನಾಡ ಕನ್ನಡಿಗರ ಹಿತ ಕಾಪಾಡಲು ನಿರಂತರ ಶ್ರಮಿಸಿದ್ದಾರೆ ಎಂದರು.

ನಾನಾ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ, ನಾಡಿಗೆ ಸೇವೆ ಸಲ್ಲಿಸಿದ ಹಲವರಿಗೆ ಗಡಿನಾಡ ರಾಜ್ಯೋತ್ಸವ ಪ್ರಶಸ್ತಿಗಳನ್ನು ಇದೇ ಸಂದರ್ಭದಲ್ಲಿ ನೀಡಿ ಸನ್ಮಾನಿಸಲಾಯಿತು.

ಒಡೆಯೂರು ಸಂಸ್ಥಾನದ ಮಾತೆ ಅಮೃತಾನಂದಮಯಿ ಅವರು ದಿವ್ಯ ಸಾನ್ನಿಧ್ಯ ವಹಿಸಿದ್ದ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಸಂಸದ ರಮೇಶ್ ಜಿಗಜಿಣಗಿ ಸೇರಿ ಅಕಾಡೆಮಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKasaragoduLatest News KannadaNewsinKannadaNewsKannadaಕಾಸರಗೋಡು
Share219Tweet123Send
Previous Post

ಆಸ್ಟ್ರೇಲಿಯಾಗೆ 241 ರನ್’ಗಳ ಸವಾಲು ನೀಡಿದ ಟೀಂ ಇಂಡಿಯಾ

Next Post

ಮನೆ ಹೊರಗೆ ಚಪ್ಪಲಿ ಬಿಡುವ ಮುನ್ನ ಈ ಸುದ್ದಿ ಒಮ್ಮೆ ಓದಿ | ಸ್ಲಿಪ್ಪರ್ ಕಳ್ಳನ ಕರಾಮತ್ತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮನೆ ಹೊರಗೆ ಚಪ್ಪಲಿ ಬಿಡುವ ಮುನ್ನ ಈ ಸುದ್ದಿ ಒಮ್ಮೆ ಓದಿ | ಸ್ಲಿಪ್ಪರ್ ಕಳ್ಳನ ಕರಾಮತ್ತು

ಮನೆ ಹೊರಗೆ ಚಪ್ಪಲಿ ಬಿಡುವ ಮುನ್ನ ಈ ಸುದ್ದಿ ಒಮ್ಮೆ ಓದಿ | ಸ್ಲಿಪ್ಪರ್ ಕಳ್ಳನ ಕರಾಮತ್ತು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

ಸಂಸ್ಕೃತಿ ಚಿಂತಕ ಸುರೇಶ್ ಋಗ್ವೇದಿ ಅವರಿಗೆ ಆರ್ಯಭಟ ಅಂತರಾಷ್ಟ್ರೀಯ ಪ್ರಶಸ್ತಿ ಪ್ರದಾನ

May 27, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

SIR ಪ್ರಕ್ರಿಯೆ ವಿರುದ್ಧ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು: ನ್ಯಾಯಪೀಠದ ಸ್ಪಷ್ಟನೆಯೇನು?

May 27, 2026
ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

ಯಶಸ್ಸಿನ ಗುರಿ ತಲುಪಲು ಕಠಿಣ ಪರಿಶ್ರಮ ಅಗತ್ಯ: ನೂತನ ನ್ಯಾಯಾಧೀಶೆ ಅನನ್ಯ ಶಾಸ್ತ್ರೀ

May 27, 2026
ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

ಯೋಗಾಸನ ವಿಶ್ವ ಚಾಂಪಿಯನ್‌ಶಿಪ್ ಗೆ ಚಾಲನೆ: 60ಕ್ಕೂ ಹೆಚ್ಚು ದೇಶಗಳು ಭಾಗಿ!

May 27, 2026
ಮನೆಯ ಹಿರಿಯರು ಹೇಳಿದ ಮಾತನ್ನು ಕೇಳಬೇಕು: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

ಮನೆಯ ಹಿರಿಯರು ಹೇಳಿದ ಮಾತನ್ನು ಕೇಳಬೇಕು: ಶ್ರೀ ಸತ್ಯಾತ್ಮ ತೀರ್ಥ ಸ್ವಾಮೀಜಿ

May 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL