No Result
View All Result
Ashwini Vaishnaw Flags Off Bengaluru–Mumbai Express; Announces Vande Bharat Sleeper Soon
English Articles

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru | Union Railway Minister Ashwini Vaishnaw on Monday virtually flagged off the new Train No....

Read moreDetails
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಆದಿವಾಸಿಗಳ ಹಲವು ದಶಕಗಳ ಕನಸು ನನಸು | ಕರೆಂಟು-ಕುಡಿಯುವ ನೀರಿನ ಸಮಸ್ಯೆಗೆ ಸ್ಥಳದಲ್ಲೇ ಸಿಎಂ‌ ಪರಿಹಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 13, 2024
in ಮೈಸೂರು
0
ಕಾಂಗ್ರೆಸ್’ನ 5 ಗ್ಯಾರೆಂಟಿಗಳಿಗೆ ಮೊದಲ ಸಂಪುಟ ಸಭೆಯಲ್ಲಿ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೆರೆಹಾಡಿ (ಹೆಚ್.ಡಿ. ಕೋಟೆ)  |

ಆದಿವಾಸಿ/ಅರಣ್ಯವಾಸಿಗಳ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಾಗಿ ಸದ್ಯದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ವನ್ಯ ಜೀವಿ ಮಂಡಳಿ ಸಭೆ ಕರೆದು ಅರಣ್ಯಾಧಿಕಾರಿಗಳಿಂದ ಅರಣ್ಯವಾಸಿಗಳಿಗೆ ಆಗುತ್ತಿರುವ ಸಮಸ್ಯೆಗಳ ಕುರಿತಾಗಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಅವರು ಭರವಸೆ ನೀಡಿದರು.

ಕೆರೆಹಾಡಿಗೆ ಭೇಟಿ ನೀಡಿ ಅರಣ್ಯವಾಸಿಗಳ ಬಾಯಿಂದಲೇ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲಿದ್ದ ಅಧಿಕಾರಿಗಳಿಂದಲೂ ಮಾಹಿತಿ ಪಡೆದು ಕೆಲವು ಸಮಸ್ಯೆಗೆ ಸ್ಥಳದಲ್ಲೇ ಪರಿಹಾರ ಸೂಚಿಸಿ, ಸಂಕೀರ್ಣವಾಗಿದ್ದ ಸಮಸ್ಯೆಗಳ ಕುರಿತಾಗಿ ವನ್ಯ ಜೀವಿ ಮಂಡಳಿಯಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ತಕ್ಷಣ ಕರೆಂಟು-ನೀರು ಒದಗಿಸಿ

ಹಲವು ದಶಲಗಳಿಂದ ಕೆರೆಹಾಡಿ ಸೇರಿದಂತೆ ಒಂಬತ್ತು ಹಾಡಿಗಳಿಗೆ ಕರೆಂಟಿಲ್ಲ, ಕುಡಿಯುವ ನೀರಿಗೆ ಸಮಸ್ಯೆ ಇದೆ ಎನ್ನುವ ಆದಿವಾಸಿಗಳ ಮಾತು ಕೇಳಿ ಗರಂ‌ ಆದ ಸಿಎಂ, ಯಾವ ಅರಣ್ಯ ಕಾಯ್ದೆ ಕೂಡ ಅರಣ್ಯವಾಸಿಗಳಿಗೆ ಕರೆಂಟು, ನೀರು ಕೊಡಬೇಡಿ ಎಂದು ಹೇಳುವುದಿಲ್ಲ. ಅರಣ್ಯಾಧಿಕಾರಗಳು ಅನಗತ್ಯ ಕಿರುಕುಳ ತೊಂದರೆ ಕೊಡಬೇಡಿ ಎಂದು ಸ್ಪಷ್ಟ ಸೂಚನೆ ನೀಡಿದರು.
ಒಂದು ತಿಂಗಳಲ್ಲಿ ಕರೆಂಟು ನೀರು

ಆದಿವಾಸಿ ಗಣೇಶ, ರಮೇಶ ಎನ್ನುವವರ ಹಟ್ಟಿಯಲ್ಲೇ ನೆಲದ ಮೇಲೆ ಕುಳಿತು ಆದಿವಾಸಿಗಳ ಸಮ್ಮುಖದಲ್ಲೇ ಮುಖ್ಯಮಂತ್ರಿಗಳು ಸಮಸ್ಯೆ ಆಲಿಸಿ, ಅರಣ್ಯಾಧಿಕಾರಿಗಳು ಮತ್ತು ಸಂಬಂಧಪಟ್ಟ ಇತರೆ ಇಲಾಖೆಗಳ ಮುಖ್ಯಸ್ಥರ ಜೊತೆ ಚರ್ಚಿಸಿದರು. ಕೊನೆಗೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿಯವರು, “ಎಲ್ಲಾ ಅಡೆತಡೆಗಳನ್ನು ನಿವಾರಿಸಿ ಒಂದು ತಿಂಗಳಲ್ಲಿ ಕೆರೆಹಾಡಿ ಮತ್ತು ಇತರೆ ಎಂಟು ಹಾಡಿಗಳ ಕುಡಿಯುವ ನೀರು ಮತ್ತು ವಿದ್ಯುತ್ ಸಂಪರ್ಕದ ಸಮಸ್ಯೆ ಬಗೆಹರಿಸುತ್ತೇನೆ ಎಂದು ಮುಖ್ಯಮಂತ್ರಿಗಳಿಗೆ ತಿಳಿಸಿದರು.

ವನ್ಯಜೀವಿ ಮಂಡಳಿ ಸಭೆ ಕರೆದು ಕೂಲಂಕುಷ ಚರ್ಚಿಸಿ ಸೂಕ್ತ ತೀರ್ಮಾನ

ಹಕ್ಕುಪತ್ರ ಇದ್ದರೂ ಅರಣ್ಯಾಧಿಕಾರಿಗಳು ಮನೆ ಕಟ್ಟಲು ಬಿಡುತ್ತಿಲ್ಲ, ಎರಡು-ಮೂರು ಎಕರೆ ಜಾಗದಲ್ಲಿ ಹಲವಾರು ದಶಕಗಳಿಂದ ಉಳುಮೆ ಮಾಡುತ್ತಿದ್ದರೂ ಕೇವಲ 2,3 ಗುಂಟೆಗೆ ಹಕ್ಕು ಪತ್ರ ನೀಡಿದ್ದಾರೆ. ನಮ್ಮ ಜಮೀನಿನಲ್ಲಿ ಟ್ರಾಕ್ಟರ್ ಬಳಸಲು ಅವಕಾಶ ನೀಡುತ್ತಿಲ್ಲ ಎನ್ನುವುದೂ ಸೇರಿದಂತೆ ಸಾಲು ಸಾಲು ಸಮಸ್ಯೆಗಳನ್ನು ಹೇಳಿಕೊಂಡ ಆದಿವಾಸಿ ವೆಂಕಟೇಶ್, ನರಸಿಂಹ, ಭಾಗ್ಯಮ್ಮ ಮುಂತಾದವರ ಮಾತು ಕೇಳಿದ ಸಿಎಂ, ಈ ಬಗ್ಗೆ ಅಧಿಕಾರಿಗಳಿಂದ ಸ್ಪಷ್ಟನೆ ನೀಡಿದರು.
ಸಮಸ್ಯೆ ಜಟಿಲ ಆಗಿದೆ ಎನಗನುವುದನ್ನು ಅರಿತ ಸಿಎಂ, ಆದಿವಾಸಿಗಳು ಅಂದರೆ ಅವರು ಅರಣ್ಯದ ಭಾಗವೇ ಆಗಿದ್ದಾರೆ. ಇವರಿಂದ ಅರಣ್ಯಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಆದ್ದರಿಂದ ಇವರಿಗೆ ಅನಗತ್ಯ ತೊಂದರೆ ಕೊಡಬಾರದು ಎಂದು ತಾಕೀತು ಮಾಡಿದರು.

ಬಳಿಕ, ವನ್ಯ ಜೀವಿ ಮಂಡಳಿಗೆ ನಾನೇ ಅಧ್ಯಕ್ಷ ಆಗಿದ್ದೀನಿ. ಸದ್ಯದಲ್ಲೇ ಮಂಡಳಿ ಸಭೆ ಕರೆದು ನೀವು ಹೇಳಿದ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಪ್ರತ್ಯೇಕ ಆದಿವಾಸಿ ನಿಗಮ

ನಾವು ಅಲೆ ಮಾರಿಗಳಲ್ಲ. ಊರ ನಾಯಕರೂ ಅಲ್ಲ. ನಾವು ಕಾಡಲ್ಲೇ ಒಂದೇ ಕಡೆ ನೆಲೆಸಿರುವ ಆದಿವಾಸಿಗಳು. ಆದ್ದರಿಂದ ಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ನಮ್ಮನ್ನು ಸೇರಿಸಬೇಡಿ. ನಮಗೆ ಪ್ರತ್ಯೇಕವಾದ ಆದಿವಾಸಿ ಅಭಿವೃದ್ಧಿ ನಿಗಮ ಸ್ಥಾಪಿಸಿ ಎನ್ನುವ ಬೇಡಿಕೆಗೆ ಪ್ರತಿಕ್ರಿಯಿಸಿದ ಸಿಎಂ, ಪ್ರತ್ಯೇಕ ಆದಿವಾಸಿ ನಿಗಮ‌ ಸ್ಥಾಪನೆ ಬಗ್ಗೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.

ಮೊದಲ ಮುಖ್ಯಮಂತ್ರಿ ನೀವು

ಆರೇಳು ತಲೆ ಮಾರುಗಳಿಂದ ನಾವಿಲ್ಲೇ ನೆಲೆಸಿದ್ದೇವೆ. ಆದಿವಾಸಿಗಳ ಹಾಡಿಗೆ ಬಂದ ಮೊದಲ ಮುಖ್ಯಮಂತ್ರಿ ನೀವೇ ಎಂದು ಆದಿವಾಸಿಗಳು ಕುಣಿದು ಸಂಭ್ರಮಿಸಿದರು.

ಬಣ್ಣ ಹಚ್ಚಿ ಕುಣ್ಕೊತಾ ಇರ್ಬೇಡಿ. ಚೆನ್ನಾಗಿ ಓದಿ

ಆದಿವಾಸಿ ಮಕ್ಕಳೊಂದಿಗೆ ಸಂವಾದ ನಡೆಸಿದ ಮುಖ್ಯಮಂತ್ರಿಗಳು, ನಮ್ಮಪ್ಪ ಕೂಡ ಜನಪದ ಡ್ಯಾನ್ಸ್ ಕಲಿಯೋಕೆ ನನ್ನನ್ನು ಹಾಕ್ಬಿಟ್ಟಿದ್ರು. ನಾನು ಹಠತೊಟ್ಟು ಕಾನೂನು ಪದವಿ ಮಾಡಿದ್ದಕ್ಕೆ ಇಂದು ಮುಖ್ಯಮಂತ್ರಿ ಆಗುವ ಮಟ್ಟಕ್ಕೆ ಬೆಳೆದೆ. ನೀವೂ ಕೂಡ ಅರ್ಧಕ್ಕೇ ಶಾಲೆ ನಿಲ್ಲಿಸದೆ ಶಿಕ್ಷಣ ಪಡೆಯಬೇಕು. ಆಗ ಮಾತ್ರ ಮುಖ್ಯವಾಹಿನಿಗೆ ಬರಲು ಸಾಧ್ಯವಾಗುತ್ತದೆ ಎಂದರು.

ಪಿಯುಸಿವರೆಗೂ ಆಶ್ರಮ ಶಾಲೆ

ಮೊದಲು ನಾಲ್ಕನೇ ತರಗತಿವರೆಗೂ ಮಾತ್ರ ಆಶ್ರಮ ಶಾಲೆಗಳಿದ್ದವು. ನೀವು ಅದನ್ನು ಎಂಟನೇ ತರಗತಿವರೆಗೂ ವಿಸ್ತರಿಸಿದ್ದೀರಿ. ಇದನ್ನು ಪಿಯುಸಿ ವರೆಗೂ ವಿಸ್ತರಿಸಿ ಎನ್ನುವುದು ಆದಿವಾಸಿಗಳು ಬೇಡಿಕೆ ಮುಂದಿಟ್ಟರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಪರಿಶೀಲನೆ ನಡೆಸುವುದಾಗಿ ತಿಳಿಸಿದರು.

ST ಒಳ‌ಮೀಸಲಾತಿ ಬಗ್ಗೆ ಸುಪ್ರೀಂಕೋರ್ಟ್ ತೀರ್ಪು ಬಂದಿಲ್ಲ

ಪರಿಶಿಷ್ಟ ಜಾತಿಯವರ ಒಳ ಮೀಸಲಾತಿಗೆ ಮುಂದಾಗಿರುವ ರೀತಿಯಲ್ಲೇ , ಪರಿಶಿಷ್ಠ ವರ್ಗದವರ ಒಳ ಮೀಸಲಾತಿಗೆ ಕ್ರಮ ವಹಿಸಿ ಆದಿವಾಸಿಗಳಿಗೆ ಅನುಕೂಲ ಮಾಡಬೇಕು ಎನ್ನುವ ಬೇಡಿಕೆಯೂ ಸಂವಾದದ ಸಂದರ್ಭದಲ್ಲಿ ಆದಿವಾಸಿಗಳು ಮುಂದಿಟ್ಟರು.

ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ, ಎಸ್ ಸಿ ಒಳಮೀಸಲಾತಿ ಕುರಿತಂತೆ ಸುಪ್ರೀಂಕೋರ್ಟ್ ತೀರ್ಪು ನೀಡಿದೆ. ಅದರ ಆಧಾರದಲ್ಲಿ ಮುಂದುವರೆದಿದ್ದೇವೆ. ಎಸ್ ಟಿ ಒಳ ಮೀಸಲಾತಿ ಬಗ್ಗೆ ಏನೂ ತೀರ್ಪು ಬಂದಿಲ್ಲ. ಈ ಬಗ್ಗೆ ಕಾನೂನು ತಜ್ಞರ ಜೊತೆ ಚರ್ಚಿಸಲಾಗುವುದು ಎಂದರು.

ಕಾಡುಗೆಣಸು-ಜೇನುತುಪ್ಪ-ಬೆಟ್ಟದ ನೆಲ್ಲಿ

ಆದಿವಾಸಿ ಗಣೇಶ ಮತ್ತು ರಮೇಶ್ ಕುಟುಂಬದವರು ತಮ್ಮ ಗುಡಿಸಲಿಗೆ ಬಂದ ಮುಖ್ಯಮಂತ್ರಿಗಳಿಗೆ ಕಾಡುಗೆಣಸು, ತಾವೇ ಕಿತ್ತು ತಂದಿದ್ದ ಜೇನುತುಪ್ಪ ಮತ್ತು ಬೆಟ್ಟದ ನೆಲ್ಲಿಕಾಯಿ ನೀಡಿ ಸತ್ಕರಿಸಿದರು.

ಜೇನುತುಪ್ಪದಲ್ಲಿ ಕಾಡುಗೆಣಸು ಅದ್ದಿ ತಿಂದ ಮುಖ್ಯಮಂತ್ರಿಗಳು ಬಳಿಕ‌ 500 ರೂ ನೀಡಿ ಜೇನುತುಪ್ಪ ಖರೀದಿಸಿದರು.

ಸಾಂಪ್ರದಾಯಿಕ ಹಾಡಿಗೆ ಧ್ವನಿಯಾಗಿ, ನೃತ್ಯಕ್ಕೆ ಹೆಜ್ಜೆ ಹಾಕಿದ ಸಿಎಂ

ಹಾಡಿಗೆ ಮುಖ್ಯಮಂತ್ರಿಗಳ ಪ್ರವೇಶ ಆಗುತ್ತಿದ್ದಂತೆ ತಮ್ಮ ಸಾಂಪ್ರದಾಯಿಕ ವೇಷದಲ್ಲಿ , ಸಾಂಪ್ರದಾಯಿಕ ಹಾಡು ನೃತ್ಯಗಳ ಮೂಲಕ ಸ್ವಾಗತಿಸಿದರು. ಉಲ್ಲಾಸಗೊಂಡ ಮುಖ್ಯಮಂತ್ರಿಗಳು ಅವರ ಜೊತೆಗೆ ತಾವೂ ನೃತ್ಯ ಮಾಡಿ, ಅವರ ಹಾಡನ್ನು ಗುನುಗಿ ಖುಷಿಪಟ್ಟರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: CM SiddaramaiahKannada_NewsKannada_News_LiveKannada_News_OnlineKannada_WebsiteKerehadi (H D Kote)Latest News KannadaNews_in_KannadaNews_Kannadaಕೆರೆಹಾಡಿ (ಹೆಚ್.ಡಿ.ಕೋಟೆ)ಮುಖ್ಯಮಂತ್ರಿ ಸಿದ್ದರಾಮಯ್ಯ
Share196Tweet123Send
Previous Post

ಉಡಾಫೆ ಉತ್ತರ ಕೊಡೋದು ಬಿಟ್ಟು ತಕ್ಷಣ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಿ: ಪ್ರಲ್ಹಾದ ಜೋಶಿ ಆಗ್ರಹ

Next Post

ಗೃಹಲಕ್ಷ್ಮೀ ಹಣ ಬಿಡುಗಡೆ | ಸರ್ಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ: ಬಸವರಾಜ ಬೊಮ್ಮಾಯಿ ಆರೋಪ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಯುಪಿಎ ಅವಧಿಯಲ್ಲಿ ಎಷ್ಟು ಎನ್ ಡಿಆರ್ ಎಫ್ ಹಣ ಬಂದಿದೆ, ರಾಜ್ಯ ಸರ್ಕಾರ ಬಹಿರಂಗಪಡಿಸಲಿ

ಗೃಹಲಕ್ಷ್ಮೀ ಹಣ ಬಿಡುಗಡೆ | ಸರ್ಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ: ಬಸವರಾಜ ಬೊಮ್ಮಾಯಿ ಆರೋಪ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

ಶಿವಮೊಗ್ಗ | ಸಿಡಿಲು ಬಡಿದು 50 ಕುರಿಗಳು ಸಾವು

May 18, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

ಬೆಂಗಳೂರು | ಹೂಡಿ ಹಾಲ್ಟ್ ನಿಲ್ದಾಣದಲ್ಲಿ ಮೆಮು ರೈಲುಗಳ ನಿಲುಗಡೆ ತಾತ್ಕಾಲಿಕ ರದ್ದು

May 18, 2026
ಬೆಳಗಾವಿಯಲ್ಲಿ ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ ರೈಲಿಗೆ ಚಾಲನೆ

ಬೆಳಗಾವಿಯಲ್ಲಿ ಬೆಂಗಳೂರು – ಲೋಕಮಾನ್ಯ ತಿಲಕ ಟರ್ಮಿನಸ್ ರೈಲಿಗೆ ಚಾಲನೆ

May 18, 2026
ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

ಮೇ 20ರಿಂದ KSRTC ನೌಕರರ ಮುಷ್ಕರ | ಶಿವಮೊಗ್ಗದಲ್ಲೂ ತಟ್ಟಲಿದೆ ಬಿಸಿ | ಬೇಡಿಕೆಗಳೇನು?

May 18, 2026
ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

ವಿಶ್ವ ಪರಿಸರ ದಿನ | ಬೆಂಗಳೂರು ರೈಲು ನಿಲ್ದಾಣದಲ್ಲಿ ಪ್ಲಾಗಿಂಗ್ ಅಭಿಯಾನ ಯಶಸ್ವಿ

May 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL