ಕಲ್ಪ ಮೀಡಿಯಾ ಹೌಸ್ | ಕೋಲಾರ |
ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಹುಡುಕಾಟದಲ್ಲಿದ್ದ ಸಿದ್ಧರಾಮಯ್ಯ ಅವರು ಈಗ ಕೋಲಾರದಿಂದ ಸ್ಪರ್ಧಿಸುವುದಾಗಿ ಖಚಿತಪಡಿಸಿದ್ದಾರೆ.
ಕೋಲಾರ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದು, ತಮ್ಮ ನಿವಾಸದಲ್ಲಿ ಮುನಿಯಪ್ಪ ಮತ್ತು ಬೆಂಬಲಿಗರ ಜೊತೆ ಮಾತುಕತೆ ನಡೆಸಿ ಗೊಂದಲ ನಿವಾರಣೆ ಬಳಿಕ ಕೋಲಾರಕ್ಕೆ ಸ್ವಾಗತ ಕೋರಿದ್ದಾರೆ ಎನ್ನಲಾಗಿದೆ,
ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಸಾಧ್ಯತೆ ಇದೆ. ಈ ಮೂಲಕ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡ್ತಾರೆ ಅನ್ನೋ ಗೊಂದಲಕ್ಕೆ ತೆರೆ ಬೀಳಲಿದೆ.
Also read: ಇನ್ನು ಮುಂದೆ ಸೂಚಿತ ಸ್ಥಳಗಳಲ್ಲಿ ಮಾತ್ರ ಸಿಟಿ ಬಸ್ ನಿಲುಗಡೆ: ಡಿಸಿ ಆದೇಶ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















