No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Sunday, August 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೋಲಾರ

ವಕ್ಫ್ ನಲ್ಲಿ ಜಮೀನು ಲೂಟಿಯಾಗಿದ್ದರೆ ಸಿಬಿಐ ತನಿಖೆಗೆ ವಹಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ

kalpa News by kalpa News
November 5, 2024
in ಕೋಲಾರ
0
ರಾಜ್ಯದಲ್ಲಿ ಲವ್ ಜಿಹಾದ್ ಹೆಚ್ಚಳ, ಕೇರಳದಲ್ಲಿ ಯುವಕರಿಗೆ ತರಬೇತಿ: ಆರ್. ಅಶೋಕ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೋಲಾರ  |

ವಕ್ಫ್‌ ಅಧಿಕಾರಿಗಳು ರೈತರ ಬಳಿ ಬಂದರೆ ಜಮೀನಿಗೆ ಕಾಲಿಡಲು ಬಿಡಬಾರದು. ರೈತರಿಗೆ ನೋಟಿಸ್‌ ಬಂದರೆ ಕೂಡಲೇ ಅದನ್ನು ಬಿಜೆಪಿ ಮುಖಂಡರಿಗೆ ತಿಳಿಸಬೇಕು. ರೈತರ ಪರವಾಗಿ ನಾವು ಸದಾ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ವಕ್ಫ್‌ ಮಂಡಳಿ #Waqf Board ಹಾಗೂ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
10 ಸಾವಿರ ಕೋಟಿ ರೂಪಾಯಿಯನ್ನು ಮುಸ್ಲಿಮರಿಗೆ ನೀಡುತ್ತೇನೆ ಎಂದು ಕಾಂಗ್ರೆಸ್‌ ಘೋಷಿಸಿತ್ತು. ಅವರ ಮತ ಗಳಿಸಲು ಕಾಂಗ್ರೆಸ್‌ ಏನು ಬೇಕಾದರೂ ಮಾಡುತ್ತದೆ. ಈಗ ವಕ್ಫ್‌ ಮೂಲಕ ಕಾಂಗ್ರೆಸ್‌ ರೈತರ ಜಮೀನು ಕಬಳಿಸುತ್ತಿದೆ. ಕೆಎಸ್‌ಆರ್‌ಟಿಸಿಯ ಸ್ಲೀಪ್‌ ಲೈಕ್‌ ಎ ಬೇಬಿ ಎಂಬಂತೆ, ಮುಸ್ಲಿಂ ಮೂಲಭೂತವಾದಿಗಳು ಹಾಗೂ ಭಯೋತ್ಪಾದಕರು ಕರ್ನಾಟಕದಲ್ಲಿ ಆರಾಮವಾಗಿ ನಿದ್ರಿಸುವ ವಾತಾವರಣ ಸೃಷ್ಟಿಯಾಗಿದೆ ಎಂದರು.

ಮುಸ್ಲಿಮ್‌ ಗಲಭೆಕೋರರು ಪೊಲೀಸ್‌ ಠಾಣೆಗೆ ನುಗ್ಗಿ ಹಲ್ಲೆ ಮಾಡಿದ್ದರು. ಅವರ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದನ್ನು ಕೂಡ ವಾಪಸ್‌ ಪಡೆದು ಮುಸ್ಲಿಮರನ್ನು ಮೆಚ್ಚಿಸಲು ಸಿಎಂ ಸಿದ್ದರಾಮಯ್ಯ ಯತ್ನಿಸಿದ್ದಾರೆ. ಮುಡಾ ಹಗರಣದ ನಂತರವಂತೂ ಪ್ರತಿ ದಿನ ಹಣೆಗೆ ಕುಂಕುಮ ಇಡುತ್ತಿದ್ದಾರೆ. ಚಾಮುಂಡೇಶ್ವರಿ ಬೆಟ್ಟಕ್ಕೆ ಹೋಗಿ ಅವರೇ ಬೊಟ್ಟು ಇಟ್ಟುಕೊಂಡಿದ್ದಾರೆ. ಮಾಧ್ಯಮದವರು ಮುಡಾ ಹಗರಣದ ಬಗ್ಗೆ ಪ್ರಶ್ನೆ ಮಾಡಿದರೆ, ಅವನು ಬಿಜೆಪಿ ಏಜೆಂಟಾ ಎಂದು ಪ್ರಶ್ನೆ ಮಾಡುತ್ತಾರೆ. ಸಿದ್ದರಾಮಯ್ಯನವರು ನಮ್ಮ ಮುಂದೆ ಟೋಪಿ ಇಡುವುದಿಲ್ಲ. ಆದರೆ ರೈತರ ಮುಂದೆ ಹೋಗಿ ಟೋಪಿ ಹಾಕಿದ್ದಾರೆ ಎಂದು ಟೀಕಿಸಿದರು.

Also read: ಗಮನಿಸಿ! ನ.6ರಂದು ಕುಂಸಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರುವುದಿಲ್ಲ

ಕೋರ್ಟ್‌ನಲ್ಲಿ ಕೇಸ್‌ ನಡೆಯುತ್ತಿರುವಾಗ ನೋಟಿಸ್‌ ವಾಪಸ್‌ ಪಡೆದರೆ, ಕೇಸು ಬಿದ್ದುಹೋಗುವುದಿಲ್ಲ. ಅದೇ ರೀತಿ ವಕ್ಫ್‌ ನೋಟಿಸ್‌ ವಾಪಸ್‌ ಮಾಡಿದರೆ ಸಮಸ್ಯೆ ಮುಗಿಯುವುದಿಲ್ಲ. ರಾಜ್ಯದ ಪ್ರತಿಯೊಬ್ಬರೂ ತಮ್ಮ ಆಸ್ತಿಯ ಪಹಣಿಯನ್ನು ಪರಿಶೀಲಿಸಿಕೊಳ್ಳಬೇಕು. ಕೋಲಾರದ ಗಣೇಶನ ದೇವಸ್ಥಾನವೇ ವಕ್ಫ್‌ ಅಡಿಯಲ್ಲಿ ಬರುತ್ತದೆ. ಮಾರಮ್ಮನ ಗುಡಿ ಹೋಗಿ ಈಗ ವಕ್ಫ್‌ ಗುಡಿ ಆಗುತ್ತದೆ. ಯಾವುದೇ ಕಾರಣಕ್ಕೂ ಹಿಂದೂಗಳ ಜಾಗ ವಕ್ಫ್‌ಗೆ ಹೋಗಲು ಬಿಡುವುದಿಲ್ಲ, ಕಾಲಂ 11 ರಲ್ಲಿ ವಕ್ಫ್‌ ಬೋರ್ಡ್‌ ಎಂಬುದನ್ನು ತೆಗೆದುಹಾಕಬೇಕು. ನಮ್ಮ ಪ್ರಾಣವನ್ನಾದರೂ ಕೊಟ್ಟು ರೈತರ ಜಮೀನು ಉಳಿಸುತ್ತೇವೆ ಎಂದರು.

ಸಿಬಿಐ ತನಿಖೆಗೆ ವಹಿಸಿ

ವಕ್ಫ್ ನಲ್ಲಿ ಭೂಮಿ ಲೂಟಿಯಾಗಿದ್ದರೆ ಅದನ್ನು ಸಿಬಿಐ ತನಿಖೆಗೆ ವಹಿಸಲಿ. ಕಾಂಗ್ರೆಸ್ ಪಕ್ಷದಲ್ಲೇ ನೂರೆಂಟು ಸಮಸ್ಯೆಗಳಿವೆ. ಅದನ್ನು‌ ನೋಡುವುದು ಬಿಟ್ಟು ಇದಕ್ಕೆ ಬಿಜೆಪಿ ಕಾರಣ ಎಂದು ಆರೋಪ ಮಾಡುತ್ತಿದ್ದಾರೆ. ಜಮೀನು ಲೂಟಿಯನ್ನು ಸಿಬಿಐಗೆ ವಹಿಸಿದರೆ ಸತ್ಯಾಂಶ ಹೊರಬರಲಿದೆ ಎಂದರು.

ರೈತರಿಗೆ ಕನ್ನ

ಅನ್ನ ಕೊಡುವ ರೈತನಿಗೆ ಕನ್ನ ಹಾಕುವ ಕೆಲಸವನ್ನು ಸಿಎಂ ಸಿದ್ದರಾಮಯ್ಯ ಮಾಡಿದ್ದಾರೆ. ಸಚಿವ ಜಮೀರ್‌ ಅಹ್ಮದ್‌ ಅವರು ಅಧಿಕಾರಿಗಳ ಮುಂದೆ ಹೋಗಿ, ಎಲ್ಲ ಆಸ್ತಿಗಳನ್ನು ವಕ್ಫ್‌ ಬೋರ್ಡ್‌ಗೆ ಸೇರಿಸಿ ರೈತರನ್ನು ಹೊರಕ್ಕೆ ತಳ್ಳಬೇಕೆಂದು ಸೂಚನೆ ನೀಡಿದ್ದಾರೆ. ವಕ್ಫ್‌ ಬೋರ್ಡ್‌ನ ನಿರ್ದೇಶಕರಾಗಿದ್ದವರು ವಿಧಾನಸೌಧವೇ ನಮ್ಮದು ಎಂದಿದ್ದಾರೆ. ಇನ್ನೂ ಕೆಲ ಮುಖಂಡರು ಸಂಸತ್ತು ನಮ್ಮದು ಎಂದಿದ್ದಾರೆ. ಇಷ್ಟಾದರೂ ಸಚಿವರಾಗಲೀ, ಮುಖ್ಯಮಂತ್ರಿಯಾಗಲೀ ಇದರ ವಿರುದ್ಧ ಧ್ವನಿ ಎತ್ತಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಹಿಂದೆ ಮುಸ್ಲಿಮರಿಗಾಗಿ ಶಾದಿ ಭಾಗ್ಯ ನೀಡಿದ್ದರು. ಅಂದರೆ ಬೇರೆ ಧರ್ಮದಲ್ಲಿ ಬಡವರೇ ಇಲ್ಲ ಎಂದರ್ಥ. ಇದೇ ರೀತಿ ಮಾಡಿ ರಾಜ್ಯವನ್ನು ಮಿನಿ ಪಾಕಿಸ್ತಾನ ಮಾಡಲು ಹೊರಟಿದ್ದಾರೆ. ಇದು ನಾಡಪ್ರಭು ಕೆಂಪೇಗೌಡರು ಕಟ್ಟಿದ ನಾಡು. ಇದನ್ನು ಪಾಕಿಸ್ತಾನವಾಗಲು ಬಿಡಲ್ಲ. ಅಂಬೇಡ್ಕರ್‌ ಸಂವಿಧಾನ ಬೇಕಿದ್ದವರು ಮಾತ್ರ ಈ ರಾಜ್ಯದಲ್ಲಿ ಇರಬೇಕು. ಷರಿಯಾ ಕಾನೂನು ಬೇಕು ಎನ್ನುವವರು ಪಾಕಿಸ್ತಾನಕ್ಕೆ ಹೋಗಬೇಕು. ಕಾಂಗ್ರೆಸ್‌ ಸರ್ಕಾರ ನಗರ ನಕ್ಸಲರನ್ನು ಬಳಸಿಕೊಂಡಿದ್ದು, ಇವರು ಎಲ್ಲದಕ್ಕೂ ಸಂವಿಧಾನ ರಕ್ಷಣೆ ಎಂದು ಹೇಳುತ್ತಾರೆ ಎಂದು ಹೇಳಿದರು.

ವಕ್ಫ್‌ ಬೋರ್ಡ್‌ ಎಂಬ ಬೆಂಕಿ ರಾಕ್ಷಸ ಕರ್ನಾಟಕಕ್ಕೆ ಬಂದಿದೆ. ಅದಕ್ಕೆ ಊಟ, ಬಟ್ಟೆಯನ್ನು ಸಿಎಂ ಸಿದ್ದರಾಮಯ್ಯ ನೀಡಿದ್ದಾರೆ. ಆದರೆ ರೈತರು ಹೆದರಬೇಕಿಲ್ಲ. ಯಾವುದೇ ರೈತರಿಗೆ ನೋಟಿಸ್‌ ಬಂದರೆ ಅದನ್ನು ಬಿಜೆಪಿಗೆ ತಿಳಿಸಿದರೆ ಅವರ ಪರವಾಗಿ ಹೋರಾಟ ಮಾಡುತ್ತೇವೆ. ರೈತರ ಪರವಾಗಿ ಸದಾ ನಾವು ಇದ್ದೇವೆ. ರೈತರು ವಕ್ಫ್‌ ಅಧಿಕಾರಿಗಳನ್ನು ಜಮೀನಿಗೆ ಬಿಡಬಾರದು ಎಂದು ಭರವಸೆ ನೀಡಿದರು.

ರಾಜ್ಯದಲ್ಲಿ ಲವ್‌ ಜಿಹಾದ್‌ ಮುಗಿದು ಲ್ಯಾಂಡ್‌ ಜಿಹಾದ್‌ ಬಂದಿದೆ. ಕರ್ನಾಟಕವೀಗ ಮತಾಂಧರಿಗೆ ಸ್ಲೀಪರ್‌ ಸೆಲ್‌ ಆಗಿದೆ. ನೋಟಿಸ್ ನೀಡಿದ ಅಧಿಕಾರಿಗಳನ್ನು ಸರ್ಕಾರ ಒದ್ದು ಜೈಲಿಗೆ ಹಾಕಲಿ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4
Tags: Kannada News WebsiteKannada_NewsKannada_News_LiveKannada_News_OnlineKannada_WebsiteKolaraLatest News KannadaNews_in_KannadaNews_KannadaWaqf Boardಕೋಲಾರವಕ್ಫ್ ಮಂಡಳಿ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ನ.6ರಂದು ಕುಂಸಿ ಸುತ್ತಮುತ್ತಲಿನ ಈ ಗ್ರಾಮಗಳಲ್ಲಿ ಕರೆಂಟ್ ಇರುವುದಿಲ್ಲ

Next Post

ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣ | ಇವರಿಗೆಲ್ಲಾ ನೋಟೀಸ್ ನೀಡಲು ಸಿದ್ದತೆ

kalpa News

kalpa News

Next Post
ಭರವಸೆಯ ಸಂದೇಶ ಚಿತ್ರಗಳನ್ನು ಕೊಟ್ಟು ತಾವೇ ಅತ್ಮಹತ್ಯೆ ಮಾಡಿಕೊಂಡ ನಿರ್ದೇಶಕ ಗುರುಪ್ರಸಾದ್

ಗುರುಪ್ರಸಾದ್ ಆತ್ಮಹತ್ಯೆ ಪ್ರಕರಣ | ಇವರಿಗೆಲ್ಲಾ ನೋಟೀಸ್ ನೀಡಲು ಸಿದ್ದತೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL